HomeಮುಖಪುಟPFI ನಿಷೇಧದ ಬೆನ್ನಲ್ಲೆ ಅದರ ನಾಲ್ವರು ಸದಸ್ಯರನ್ನು UAPA ಅಡಿಯಲ್ಲಿ ಬಂಧಿಸಿದ ದೆಹಲಿ ಪೊಲೀಸರು

PFI ನಿಷೇಧದ ಬೆನ್ನಲ್ಲೆ ಅದರ ನಾಲ್ವರು ಸದಸ್ಯರನ್ನು UAPA ಅಡಿಯಲ್ಲಿ ಬಂಧಿಸಿದ ದೆಹಲಿ ಪೊಲೀಸರು

- Advertisement -
- Advertisement -

ಪಾಪ್ಯುಲರ್‌‌ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವನ್ನು ಭಾರತ ಸರ್ಕಾರವು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿ ನಿಷೇಧಿಸಿದ ಕೆಲವು ದಿನಗಳ ನಂತರ, ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ-ತಡೆಗಟ್ಟುವಿಕೆ-ಕಾಯ್ದೆ (ಯುಎಪಿಎ) ಅಡಿಯಲ್ಲಿ ಅದರ ನಾಲ್ವರು ಸದಸ್ಯರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎನ್‌ಐಎ ದೇಶದ ಹಲವು ಭಾಗಗಳಲ್ಲಿ ದಾಳಿ ನಡೆಸಿ ಪಿಎಫ್‌ಐನ ಪ್ರಮುಖ ನಾಯಕರು ಮತ್ತು ಸದಸ್ಯರನ್ನು ಬಂಧಿಸಿದ ನಂತರ ದೆಹಲಿ ಪೊಲೀಸರು ನಡೆಸಿದ ಮೊದಲ ಬಂಧನ ಇದಾಗಿದೆ. ಭಾನುವಾರ ಈ ಬಂಧನ ನಡೆದಿದೆ ಎಂದು ಮೂಲಗಳು ತಿಳಿಸಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ಹೇಳಿದೆ. ದೆಹಲಿ ಪೊಲೀಸರು ಈ ಹಿಂದೆ ಪಿಎಫ್‌ಐ ಜೊತೆಗಿನ ಆರೋಪದ ಮೇಲೆ 32 ಜನರನ್ನು ಬಂಧಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಿಎಫ್‌ಐ ಮತ್ತು ಅವರ ಸಹ ಸಂಸ್ಥೆಗಳಾದ ರೆಹಬ್ ಇಂಡಿಯಾ ಫೌಂಡೇಶನ್ (RIF), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (AllC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO) ಸೇರಿದಂತೆ ಒಟ್ಟು ಒಂಬತ್ತು ಸಂಘಟನೆಗಳನ್ನು ನಿಷೇಧಿಸಲಾಗಿತ್ತು.

ಶಾಹೀನ್ ಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದ್ದು, ದೆಹಲಿಯಲ್ಲಿರುವ ಪಿಎಫ್‌ಐನ ಮೂರು ಕಚೇರಿಗಳನ್ನು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಸೀಲ್ ಮಾಡಲಾಗಿದೆ. ಪಿಎಫ್‌ಐ ಮತ್ತು ಇತರ ಸಂಘಟನೆಗಳ ಸದಸ್ಯರು “ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರಲು ಪಿತೂರಿ ನಡೆಸುತ್ತಿದ್ದಾರೆ” ಎಂದು ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳಿಗೆ ಐದು ವರ್ಷಗಳ ನಿಷೇಧ

“ನಿಷೇಧಿತ ಕಾನೂನುಬಾಹಿರ ಸಂಘಟನೆಗಳ ನಾಯಕರು, ಸದಸ್ಯರು ಮತ್ತು ಸಹವರ್ತಿಗಳು ತಮ್ಮ ಕಾನೂನುಬಾಹಿರ ಚಟುವಟಿಕೆಗಳ ಮುಂದುವರಿಸಿದ್ದು, ಕೋಮು ದ್ವೇಷವನ್ನು ಉತ್ತೇಜಿಸುವ ಮೂಲಕ ಸಾರ್ವಜನಿಕ ಸುವ್ಯವಸ್ಥೆಗೆ ಭಾರಿ ಭಂಗವನ್ನು ಉಂಟುಮಾಡಲು ಮತ್ತಷ್ಟು ಪಿತೂರಿ ಮಾಡುತ್ತಿದ್ದಾರೆ. ಈ ಉದ್ದೇಶಕ್ಕಾಗಿ ವಿವಿಧ ಸ್ಥಳಗಳಲ್ಲಿ ಪ್ರಚೋದನೆಯನ್ನು ಹರಡಲು ಬೆಂಬಲಿಗರನ್ನು ಸಜ್ಜುಗೊಳಿಸುತ್ತಿದ್ದಾರೆ” ಎಂದು ಎಫ್‌ಐಆರ್‌ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....