Homeಮುಖಪುಟಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ಶೀಘ್ರದಲ್ಲೇ ಗೃಹಬಳಕೆ ಸಿಲಿಂಡರ್ ಮಾಯವಾಗಿ ಕೇವಲ ವಾಣಿಜ್ಯ ಸಿಲಿಂಡರ್ ಮಾತ್ರ ಮಾರುಕಟ್ಟೆಯಲ್ಲಿ ಉಳಿದುಕೊಳ್ಳುತ್ತದೆ ಎಂಬುದರಲ್ಲಿ ಸಂದೇಹವಿಲ್ಲ...

- Advertisement -
- Advertisement -

ಇತ್ತೀಚೆಗೆ “ಪ್ರಾಕೃತಿಕ ಗ್ಯಾಸ್ ಬೆಲೆಯಲ್ಲಿ 40% ಹೆಚ್ಚಳ” ಎಂಬ ಸುದ್ದಿ ನೀವೆಲ್ಲರೂ ದೃಶ್ಯಮಾಧ್ಯಮದಲ್ಲಿ ಕೇಳಿರುತ್ತೀರಿ ಅಥವಾ ವೃತ್ತಪತ್ರಿಕೆಗಳಲ್ಲಿ ಓದಿರುತ್ತೀರಿ. ಗ್ಯಾಸ್ ಬೆಲೆ ಯೂನಿಟ್ಟಿಗೆ 6.10 ಡಾಲರ್ ನಿಂದ 8.57 ಡಾಲರ್ ಆಗಲಿದೆ ಅಂದರೆ ಸುಮಾರು 40% ಹೆಚ್ಚಳ ಆಗಲಿದೆ ಮತ್ತು ಅದರಿಂದ ಸಿ.ಎನ್.ಜಿ. ಮತ್ತು ಪಿ.ಎನ್.ಜಿ. ಗ್ರಾಹಕರಿಗೆ ಅದರ ಬಿಸಿ ತಟ್ಟಲಿದೆ ಎಂಬ ವಿವರ ಸುದ್ದಿಯಲ್ಲಿತ್ತು. ಇದರಲ್ಲಿ ಗಮನಿಸಬೇಕಾದ ವಿಷಯ ಅಥವಾ ಕೇಳಬೇಕಾದ ಪ್ರಶ್ನೆ: ಮೊದಲನೆಯದು, ಭಾರತದಲ್ಲಿ ಇರುವ ತೈಲನಿಕ್ಷೇಪದಿಂದ ಭಾರತದ ಕಂಪನಿಗಳೇ ಉತ್ಪಾದಿಸುತ್ತಿರುವ ಗ್ಯಾಸ್ ಬೆಲೆ “ಡಾಲರ್”ನಲ್ಲಿ ಏಕಿದೆ ಮತ್ತು  ಎರಡನೆಯದು, ಉತ್ಪಾದನಾ ವೆಚ್ಚಕ್ಕಿಂತ ನಾಲ್ಕೈದು ಪಟ್ಟು ಹೆಚ್ಚು ಬೆಲೆಗೆ ಖಾಸಗಿ ಕಂಪನಿಗಳು ಭಾರತದ ಗ್ರಾಹಕರಿಗೆ ಗ್ಯಾಸ್ ಮಾರಾಟ ಮಾಡಲು ಸರಕಾರ ಏಕೆ ಅನುವು ಮಾಡಿಕೊಟ್ಟಿದೆ ಎಂಬುದು. ಗ್ಯಾಸ್ ಉತ್ಪಾದನೆ ಮತ್ತು ಮಾರಾಟವನ್ನು  ಅಂಬಾನಿ ಮತ್ತು ಅದಾನಿ ಅವರಿಗೆ ಗುತ್ತಿಗೆ ನೀಡಿರುವುದರಿಂದ ಎರಡನೆಯ ಪ್ರಶ್ನೆಗೆ ಉತ್ತರ ಸಿಕ್ಕಿದೆ ಎಂದುಕೊಂಡಿದ್ದೇನೆ. ಮೊದಲನೆಯ ಪ್ರಶ್ನೆಯ ಉತ್ತರಕ್ಕೆ ನಂತರ ಬರೋಣ.

ಗೃಹಬಳಕೆಯ 14.2 ಕೆಜಿ ಎಲ್.ಪಿ.ಜಿ. ಸಿಲಿಂಡರ್ ಬೆಲೆ ರೂ.1050 ದಾಟಿದೆ ಮತ್ತು 19ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ಸುಮಾರು ರೂ.1900 ಇದೆ. ಅಂದರೆ ಗೃಹಬಳಕೆ ಗ್ಯಾಸ್ ರೂ.75/ಕೆಜಿ ಮತ್ತು ವಾಣಿಜ್ಯ ಗ್ಯಾಸ್ ರೂ.100/ಕೆಜಿ ಎಂದಾಯಿತು. ಗೃಹಬಳಕೆಯ ಸಿಲಿಂಡರ್ ಮೇಲೆ ಸರಕಾರ ಈಗಲೂ ಸಬ್ಸಿಡಿ ನೀಡುತ್ತಿದೆ ಎಂದು ಅವರ ವಾದ. ಆದರೆ ನಿಮ್ಮ ಖಾತೆಗೆ ಯಾವುದೇ ಹಣ ಬರುತ್ತಿಲ್ಲ ಎಂಬುದೂ ಸಹ  ಸತ್ಯ. ಸಿ.ಎನ್.ಜಿ. ಬೆಲೆ ರೂ.86/ಕೆಜಿ ಇದೆ. ಸರಕಾರ ಎಲ್ಲ ರೀತಿಯ ಸಬ್ಸಿಡಿ ನಿಲ್ಲಿಸಬೇಕೆಂದು ಪ್ರಯತ್ನ ಮಾಡುತ್ತಿರುವುದು ಎಲ್ಲರಿಗೂ ತಿಳಿದ ವಿಷಯ. ಶೀಘ್ರದಲ್ಲೇ ಗೃಹಬಳಕೆ ಸಿಲಿಂಡರ್ ಮಾಯವಾಗಿ ಕೇವಲ ವಾಣಿಜ್ಯ ಸಿಲಿಂಡರ್ ಮಾತ್ರ ಮಾರುಕಟ್ಟೆಯಲ್ಲಿ ಉಳಿದುಕೊಳ್ಳುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಭಾರತದ ಮಹಾನಗರಗಳಲ್ಲಿ ಈಗಾಗಲೇ ಹೆಚ್ಚಿನ ಮನೆಗಳಿಗೆ ಪೈಪ್-ಗ್ಯಾಸ್ (ಪಿ.ಎನ್.ಜಿ.) ಸಂಪರ್ಕ ಬಂದಾಗಿದೆ. ಕರ್ನಾಟಕದಲ್ಲೂ ತುಮಕೂರು, ಮೈಸೂರು ನಗರಗಲ್ಲಿ ಪೈಪ್ ಜೋಡಣೆ ಕಾರ್ಯ ಪ್ರಾರಂಭವಾಗಿದೆ. ಈ ಪೈಪ್ ಡ್ರೀಂ ಮಾರಾಟಗಾರರ ವಾದ ಏನೆಂದರೆ ನಿಮ್ಮ ಗೃಹಬಳಕೆಯ ಸಿಲಿಂಡರ್ ಬೆಲೆಗಿಂತ ಪೈಪ್ ಗ್ಯಾಸ್ ಬೆಲೆ ಸುಮಾರು 20-30% ಕಡಿಮೆ ಆಗುತ್ತದೆ, ನಿಮಗೆ 24 ಗಂಟೆ ಗ್ಯಾಸ್ ಬರುತ್ತದೆ, ಮೀಟರ್ ಪಾರದರ್ಶಕವಾಗಿ ನಿಮ್ಮ ಮುಂದೆ ಕಾಣುವಂತೆ ಇರುತ್ತದೆ ಮತ್ತು ನಿಮ್ಮ ಶಕ್ತ್ಯಾನುಸಾರ ಗ್ಯಾಸ್ ಬಳಕೆ ಮಾಡಬಹುದು ಹಾಗೂ ಮುಖ್ಯವಾಗಿ ಸಿಲಿಂಡರ್ ನಂತೆ ಪೈಪ್ ಬ್ಲಾಸ್ಟ್ ಆಗುವ ಸಂಭವ ತೀರ ಕಡಿಮೆ, ಇತ್ಯಾದಿ ಇತ್ಯಾದಿ.. ಪಿ.ಎನ್.ಜಿ. ಬೆಲೆ ಯೂನಿಟ್ಟಿಗೆ ರೂ.55 ಇದೆ ಅಂದರೆ ಗೃಹಬಳಕೆ ಸಿಲಿಂಡರ್ ಬೆಲೆಗೆ (ರೂ. 75/ಕೆಜಿ) ಹೋಲಿಸಿದರೆ ನಿಮಗೆ 20-30% ಉಳಿತಾಯ ಎಂದು ನಿಮ್ಮನ್ನು ನಂಬಿಸಲು ಮುಂದಾಗಿದ್ದಾರೆ.

ಈಗ ಇತ್ತೀಚಿನ ಪಿ.ಎನ್.ಜಿ. ಬೆಲೆ 40% ಏರಿಕೆ ಬಗ್ಗೆ ಬರೋಣ ಅಂದರೆ. ಈಗಿರುವ ರೂ.55/ಕೆಜಿ ಏನಾಗುತ್ತದೆ? ಅದು ರೂ.77/ಕೆಜಿ ಆಗುತ್ತದೆ. ಅಂದರೆ ಈಗಿರುವ ಗೃಹಬಳಕೆ ಸಿಲಿಂಡರ್ ಸಮಸಮಕ್ಕೆ ಬರುತ್ತದೆ ಅಥವಾ ಇನ್ನೂ ಸ್ವಲ್ಪ ಹೆಚ್ಚು ಅನ್ನಬಹುದು. ಮೇಲೆ ಹೇಳಿದಂತೆ ಗೃಹ ಬಳಕೆ ಸಿಲಿಂಡರ್ ಮಾಯವಾದರೆ ನೀವು ಯಾವುದಕ್ಕೆ ಬೆಲೆ ಹೋಲಿಸುತ್ತೀರಿ, ವಾಣಿಜ್ಯ ಸಿಲಿಂಡರ್ (ರೂ.100/ಕೆಜಿ) ತಾನೇ? ಇನ್ನು ಹೊಸ ಪೈಪ್ ಗ್ಯಾಸ್ ಕನೆಕ್ಷನ್ ತೆಗೆದುಕೊಳ್ಳಲು, ಅದಕ್ಕೆ ನೀಡಬೇಕಾದ ಮುಂಗಡ, ಇನ್ಸ್ಟಲೇಷನ್ ವೆಚ್ಚ, ಸೆಕ್ಯುರಿಟಿ ಡಿಪಾಸಿಟ್, ಎಲ್ಲಾ ಸೇರಿ ಸುಮಾರು ರೂ.6000/-ದಷ್ಟು ಎಲ್ಲಾ ನಿಮ್ಮ ಜೇಬಿನಿಂದ ಹೋಗುತ್ತದೆ. ಗ್ಯಾಸ್ ಸಂಪರ್ಕ ಖಾಸಗಿ ಕಂಪನಿಯಾಗಿರುವುದರಿಂದ ನಿಮಗೆ ಯಾವುದೇ ರೀತಿಯ ಸಬ್ಸಿಡಿ ಇರುವುದಿಲ್ಲ. ಮುಂದೆ ಅವರು ಆಡಿದ್ದೇ ಆಟ. ಈಗಲಾದರೂ ಅರ್ಥವಾಯಿತೇ ಸರಕಾರ ಹೇಗೆ ನಿಮ್ಮ ಕಿವಿಗೆ ಹೂವು ಮುಡಿಸುತ್ತಿದೆ ಎಂದು.

ಇನ್ನು ನಮ್ಮ ಮೊದಲನೆಯ ಪ್ರಶ್ನೆಗೆ ಬರೋಣ. ಗ್ಯಾಸ್ ಉತ್ಪಾದನೆ ದೇಶದ ಕೆ.ಜಿ.ಬೇಸಿನ್ ಹಳೆಯ ಬಾವಿಗಳಿಂದ ಆಗುತ್ತಿದೆ. ಇದರಲ್ಲಿ ಸಿಗುವ ಗ್ಯಾಸ್ ನಮ್ಮ ದೇಶದ ಸೊತ್ತು, ಯಾವುದೇ ವಿದೇಶದಿಂದ ಆಮದು ಮಾಡಿಕೊಂಡಂತಹ ಅನಿಲವಲ್ಲ. ಕೆಜಿ ಬೇಸಿನ್ ಗ್ಯಾಸ್ ಅನ್ವೇಷಣೆಗೆ ಭಾರತ ಸರಕಾರ ರಿಲಯನ್ಸ್ ಕಂಪನಿಗೆ ಗುತ್ತಿಗೆ ನೀಡಿತ್ತು ಅದರ ಖರ್ಚನ್ನು ಭಾರತ ಸರಕಾರ ಭರಿಸಿತ್ತು. ರಿಲಯನ್ಸ್ ಕಂಪನಿ ಈ ಖರ್ಚನ್ನು ಎರಡು ಬಿಲಿಯನ್ ಡಾಲರ್ ಎಂದು ಹೇಳಿತ್ತು. ಆದರೆ ವೆಚ್ಚ ಒಂದು ಬಿಲಿಯನ್ ಡಾಲರ್ ಸಹ ಆಗಲಿಲ್ಲ ಎಂಬುದು ಹಲವು ತೈಲ-ತಜ್ಞರ ವಾದ. ಭಾರತ ಸರಕಾರವಾಗಲೀ, ರಿಲಯನ್ಸ್ ಕಂಪನಿಯಾಗಲೀ ವೆಚ್ಚದ ಸಿ.ಎ.ಜಿ. ಆಡಿಟ್ಟಿಗೆ ಒಪ್ಪಲೇ ಇಲ್ಲ. ಇನ್ನು ತೈಲವನ್ನು ಹೊರಗೆ ಎಳೆಯುವ ವೆಚ್ಚ ಒಂದು ಮಿಲಿಯನ್ ಬ್ರಿಟಿಷ್ ಥರ್ಮಲ್ ಯೂನಿಟ್ಟಿಗೆ ಎರಡು ಡಾಲರ್ ಸಹ ಆಗುವುದಿಲ್ಲ ಎಂಬುದು ತೈಲ-ತಜ್ಞರ ವಾದ. ಆದರೆ ಭಾರತ ಸರಕಾರ ಇದಕ್ಕೆ 6.10 ಡಾಲರ್ ನಿಗದಿ ಮಾಡಿತ್ತು ಮತ್ತು ಇದನ್ನು ಈಗ 8.57 ಡಾಲರ್ ಪ್ರತಿ ಎಂಬಿಟಿಯುಗೆ ಏರಿಸಲಾಗಿದೆ. ಏಕೆಂದರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅನಿಲದ ಬೆಲೆ, ಯುಕ್ರೇನ್ ಯುದ್ಧ ಪ್ರಾರಂಭವಾದಾಗ ಇದಕ್ಕಿಂತ ಹೆಚ್ಚಾಗಿತ್ತು. (9.34ಡಾಲರ್/ಪ್ರತಿ ಯೂನಿಟ್ ವರೆಗೂ ಹೋಗಿತ್ತು) ಆದರೆ ಇಂದು ಬೆಲೆ 6.67ಡಾಲರ್/ಪ್ರತಿ ಯೂನಿಟ್ ಇದೆ. ಇಷ್ಟೇ ಅಲ್ಲ ಹಳೆಯ ಬಾವಿಗಳನ್ನು ಬಿಟ್ಟು, ಉತ್ಪಾದನೆ ಸ್ವಲ್ಪ ಕಷ್ಟಕರವಾದ ಸಮುದ್ರ ಮಧ್ಯದಲ್ಲಿರುವ ಡಿ6 ಬಾವಿಗಳಿಂದ ತೆಗೆಯುವ ಅನಿಲಕ್ಕೆ ಬೆಲೆಯನ್ನು 9.92ಡಾಲರ್/ಪ್ರತಿ ಎಂಬಿಟಿಯುಗೆ ನಿಂದ 12.6ಡಾಲರ್/ಪ್ರತಿ ಎಂಬಿಟಿಯುಗೆ ಹೆಚ್ಚಿಸಿದೆ. ಅನಿಲ ಬೆಲೆ ಏರಿಕೆ 2019ರಿಂದ ಇದು ಮೂರನೆಯದಾಗಿರುತ್ತದೆ. ರುಪಾಯಿ ಬೆಲೆ ಡಾಲರ್ ವಿರುದ್ಧ ಕುಸಿದಂತೆ ಡಾಲರ್ ಪಡೆಯುತ್ತಿರುವ ಕಂಪನಿಯ ಮಾಲೀಕರ ನಗು ಬಾಯಿ ತುಂಬಿ ಹೊರಸೂಸುತ್ತಿದೆ. ಮೋದಿಯವರು ತಮ್ಮ ಆಪ್ತಮಿತ್ರರಿಗೆ ಸಹಾಯ ಮಾಡಲು ಹೇಗೆ ಸರಕಾರದಿಂದ ಅನುವು ಮಾಡಿಕೊಡುತ್ತಿದ್ದಾರೆ ಎಂಬುದು ಬಹುಶಃ ಈಗಲಾದರೂ ತಮಗೆ ಅರ್ಥವಾಗಿರಬಹುದು.

ಜಿ.ಆರ್. ವಿದ್ಯಾರಣ್ಯ

(ಜಿ.ಆರ್ ವಿದ್ಯಾರಣ್ಯರವರು ಸುಮಾರು ಇಪ್ಪತ್ತೈದು ವರ್ಷ ವಾಣಿಜ್ಯ ಹಡಗುಗಳಲ್ಲಿ ಕಮ್ಯುನಿಕೇಷನ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದವರು. ಇದಲ್ಲದೆ ಕಂಪ್ಯೂಟರ್ ನೆಟವರ್ಕ್ ರೇಡಿಯೋ ಸುಪರಿಂಟೆಂಡೆಂಟ್ ಆಗಿ ಅಮೇರಿಕಾ, ಸಿಂಗಾಪುರ್, ಚೈನಾ, ಜಪಾನ್, ದೇಶಗಳಲ್ಲಿ ಕೆಲಸ ಮಾಡಿದ್ದಾರೆ. ನೂರಕ್ಕೂ ಹೆಚ್ಚು ದೇಶಗಳನ್ನು ಸುತ್ತಿ ಬಂದಿರುತ್ತಾರೆ. ಸಾಮಾಜಿಕ ಕಳಕಳಿಯುಳ್ಳ ಅವರು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಹಂಬಲದಿಂದ 2001 ರಲ್ಲಿ ಮುಂಬಯಿ ಬಿಟ್ಟು, ಮೈಸೂರಿನಲ್ಲಿ ನೆಲೆಸಿ ಹಲವು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ)

ಇದನ್ನೂ ಓದಿ; ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ನಿಂತಿಲ್ಲ: ಏಕೆ ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬರೀ ರೈಲು ಬಿಟ್ಟಿದ್ದಾರೆ… ಜನಪರ ಕಾಳಜಿ ಅನ್ನೋ ಪದದಡಿ ಜನರನ್ನು ಹಾದಿತಾಪ್ಪಿಸುವ ಪ್ರಯತ್ನ…

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...