Homeಮುಖಪುಟಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

ಪ್ರಧಾನಿ ಮೋದಿ ಕಾರ್ಯಕ್ರಮದ ವರದಿಗೆ ಬರುವ ಪತ್ರಕರ್ತರಿಗೆ ‘ನಡತೆ ಪ್ರಮಾಣಪತ್ರ’ ಕೇಳಿದ ಸರ್ಕಾರ

- Advertisement -
- Advertisement -

ಪ್ರಧಾನಿ ಮೋದಿ ಬುಧವಾರದಂದು ಹಿಮಾಚಲ ಪ್ರದೇಶಕ್ಕೆ ಪ್ರವಾಸ ಮಾಡುತ್ತಿದ್ದು, ಅವರ ಭೇಟಿಯನ್ನು ವರದಿ ಮಾಡಲು ಬರುವ ಪತ್ರಕರ್ತರ ಪಾಸ್‌ಗಳಿಗಾಗಿ “ನಡತೆ ಪ್ರಮಾಣಪತ್ರ”ವನ್ನು ಹಾಜರುಪಡಿಸುವಂತೆ ಎಲ್ಲಾ ಪತ್ರಕರ್ತರಿಗೆ ತಿಳಿಸಲಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ. ಕಳೆದ ತಿಂಗಳ 24ರಂದು ಹವಾಮಾನ ವೈಪರೀತ್ಯದ ಕಾರಣಕ್ಕೆ ಹಿಮಾಚಲ ಪ್ರದೇಶದ ಅವರ ಪ್ರವಾಸ ರದ್ದುಗೊಂಡಿತ್ತು.

ಖಾಸಗಿ ಒಡೆತನದ ಮುದ್ರಣ, ಡಿಜಿಟಲ್ ಮತ್ತು ಸುದ್ದಿ ದೂರದರ್ಶನ ಪತ್ರಕರ್ತರು ಮಾತ್ರವಲ್ಲದೆ, ಆಲ್ ಇಂಡಿಯಾ ರೇಡಿಯೋ (AIR) ಮತ್ತು ದೂರದರ್ಶನ ಸೇರಿದಂತೆ ಸರ್ಕಾರಿ ಮಾಧ್ಯಮದ ಪ್ರತಿನಿಧಿಗಳು ಕೂಡಾ “ನಡತೆ ಪ್ರಮಾಣಪತ್ರ”ಗಳನ್ನು ತರಲು ಕೇಳಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ವಿಷಯದ ಕುರಿತು ಸೆಪ್ಟೆಂಬರ್ 29, 2022 ರಂದು ಪೊಲೀಸರು ಅಧಿಕೃತ ಅಧಿಸೂಚನೆಯನ್ನು ಸಹ ಹೊರಡಿಸಿದ್ದಾರೆ.  ಪತ್ರಕರ್ತರಿಗೆ ನೀಡಲಾಗಿರುವ ವಿಚಿತ್ರ ಆದೇಶವು ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಎಲ್ಲಾ ಪತ್ರಿಕಾ ವರದಿಗಾರರು, ಛಾಯಾಗ್ರಾಹಕರು, ವೀಡಿಯೋಗ್ರಾಫರ್‌ಗಳು ಮತ್ತು ದೂರದರ್ಶನ ಮತ್ತು AIR ತಂಡಗಳ ಪಟ್ಟಿಯನ್ನು “ಅವರ ನಡತೆ ಪರಿಶೀಲನೆಯ ಪ್ರಮಾಣಪತ್ರ” ದೊಂದಿಗೆ ಪೂರೈಸಲು ಅಧಿಸೂಚನೆಯು ಜಿಲ್ಲಾ ಸಾರ್ವಜನಿಕ ಸಂಪರ್ಕ ಅಧಿಕಾರಿ (DPRO) ಅವರನ್ನು ಕೇಳಿದೆ.

ಇದನ್ನೂ ಓದಿ: 2019ರಲ್ಲಿ ಉದ್ಘಾಟಿಸಿದ್ದ ‘ಅಹಮದಾಬಾದ್ ಮೆಟ್ರೋ ರೈಲು ಮೊದಲ ಹಂತ’ವನ್ನೇ ಮತ್ತೆ ಉದ್ಘಾಟಿಸಿದ ಮೋದಿ! ವಾಸ್ತವವೇನು?

“ನಡತೆ ಪರಿಶೀಲನೆಯ ಪ್ರಮಾಣಪತ್ರವನ್ನು ಅಕ್ಟೋಬರ್ 1, 2022 ರೊಳಗೆ ಉಪ ಪೊಲೀಸ್ ವರಿಷ್ಠಾಧಿಕಾರಿ, ಸಿಐಡಿ, ಬಿಲಾಸ್‌ಪುರ ಕಚೇರಿಗೆ ನೀಡಬೇಕು. ರ್‍ಯಾಲಿ ಅಥವಾ ಸಭೆಯೊಳಗೆ ಅವರ ಪ್ರವೇಶದ ಕಚೇರಿಯು ನಿರ್ಧರಿಸುತ್ತದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪೊಲೀಸ್‌‌‌‌‌‌ ಅಧಿಸೂಚನೆಗೆ ಪ್ರತಿಕ್ರಿಯಿಸಿದ ಆಮ್ ಆದ್ಮಿ ಪಾರ್ಟಿ ವಕ್ತಾರ ಪಂಕಜ್ ಪಂಡಿತ್, “ಪತ್ರಿಕೋದ್ಯಮದಲ್ಲಿ ತನ್ನ 22 ವರ್ಷಗಳ ವೃತ್ತಿಜೀವನದಲ್ಲಿ, ಇದೀಗ ಮೊದಲ ಬಾರಿಗೆ ಇಂತಹ ವಿಲಕ್ಷಣ ಬೇಡಿಕೆಗೆ ಸಾಕ್ಷಿಯಾಗಿದ್ದೇನೆ” ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

“ಮೋದಿ ಅವರು ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡುತ್ತಿಲ್ಲ. ನಡತೆ ಪ್ರಮಾಣಪತ್ರವನ್ನು ನೀಡುವ ಬೇಡಿಕೆಯು ಅವಮಾನಕರ ಮತ್ತು ಮಾಧ್ಯಮದ ಚಟುವಟಿಕೆಗಳನ್ನು ತಡೆಯುವ ಪ್ರಯತ್ನವಾಗಿದೆ” ಎಂದು ಪಂಕಜ್‌ ಪಂಡಿತ್ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: 3 ಗಂಟೆಗಳ ಮೋದಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ 37 ಲಕ್ಷ ರೂ.ಗಳನ್ನು ಖರ್ಚು ಮಾಡಿದ್ದ ರಾಜ್ಯದ ಬೊಮ್ಮಾಯಿ ಸರ್ಕಾರ!

ಹಿಮಾಚಲ ಕಾಂಗ್ರೆಸ್ ಸಮಿತಿಯ ಮುಖ್ಯ ವಕ್ತಾರ ನರೇಶ್ ಚೌಹಾಣ್ ಕೂಡ ಸರ್ಕಾರದ ಬೇಡಿಕೆಯನ್ನು ಖಂಡಿಸಿದ್ದು, ಈ ನಡೆಯು ಮಾಧ್ಯಮ ಸ್ವಾತಂತ್ರ್ಯದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

“ಭದ್ರತಾ ಪಾಸ್‌ ಬೇಕೆಂದರೆ ನಡತೆ ಪ್ರಮಾಣಪತ್ರವು ಕಡ್ಡಾಯವಾಗಿದೆ. ಪತ್ರಕರ್ತರ ಡಿಜಿಟಲ್ ಐಡಿ ಕಾರ್ಡ್‌ಗಳ ಮೇಲೆ ಅಧಿಕೃತ ಮುದ್ರೆ ಹಾಕಬೇಕಿದೆ. ಈ ಔಪಚಾರಿಕತೆಯು ಎಲ್ಲರಿಗೂ ಕಡ್ಡಾಯವಾಗಿದೆ. ಎಸ್ಪಿ ಮತ್ತು ಸಿಐಡಿ ಇಲಾಖೆಗಳು ನಡತೆ ಪರಿಶೀಲನೆಯ ಪ್ರಮಾಣಪತ್ರಗಳನ್ನು ಕೇಳುತ್ತಿವೆ” ಎಂದು ಬಿಲಾಸ್‌‌ಪುರ್‌ ಡಿಪಿಆರ್‌‌ಒ ಕುಲದೀಪ್ ಗುಲೇರಿಯಾ ಹೇಳಿದ್ದಾರೆ.

ಪತ್ರಕರ್ತರಿಗೆ ನಡತೆ ದೃಢೀಕರಣದ ಪ್ರಮಾಣಪತ್ರಗಳನ್ನು ನೀಡುವಂತೆ ಕೇಳಿರುವ ಸರ್ಕಾರವು, ರ್‍ಯಾಲಿಯಲ್ಲಿ ಭಾಗವಹಿಸಲು ಬರುವ ಸಾವಿರಾರು ಜನರಿಗೆ ಯಾವುದೇ ಗುರುತಿನ ಪುರಾವೆಗಳನ್ನು ಕೇಳುತ್ತಿಲ್ಲ ಎಂದು ಪರ್ತಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸರ್ಕಾರದ ಪ್ರಕಾರ, ನಡತೆ ಪ್ರಮಾಣಪತ್ರ ಎಂದರೆ, ಆಡಳಿತ ಸರ್ಕಾರದ ಬೂಟು ನೆಕ್ಕುವುದಾಗಿದೆ’’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವನ್ಯಜೀವಿ ರಕ್ಷಣೆ ವಿಚಾರದಲ್ಲಿ ಮೋದಿ ಮಾಡುತ್ತಿರುವುದೇನು?- ಇದು ಚೀತಾ ಕಥೆಯಷ್ಟೇ ಅಲ್ಲ!

ಬುಧವಾರ ಪ್ರಧಾನಿ ಮೋದಿ ಇಡೀ ದಿನ ಹಿಮಾಚಲ ಪ್ರದೇಶದಲ್ಲಿ ಇರಲಿದ್ದಾರೆ. ಅವರು ರಾಜ್ಯದ ಬಿಲಾಸ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ, ಜೊತೆಗೆ ಏಮ್ಸ್‌ನ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ ಹಾಗೂ ಕುಲು ದಸರಾ ಆಚರಣೆಯಲ್ಲೂ ಭಾಗವಹಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...