Homeಮುಖಪುಟಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚ ಭರಿಸಲು ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಕಂಪನಿ ನಿರ್ಧರಿಸಿದೆ.

- Advertisement -
- Advertisement -

“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ?” ಎಂದು ದಿಟ್ಟ ಪ್ರಶ್ನೆ ಎತ್ತಿದ್ದ ಬಿಹಾರದ ವಿದ್ಯಾರ್ಥಿನಿ ರಿಯಾ ಕುಮಾರಿಯವರ ಬೆಂಬಲಕ್ಕೆ ಹಲವರು ಮುಂದೆ ಬಂದಿದ್ದಾರೆ.

ಸೆಪ್ಟಂಬರ್ ಕೊನೆಯ ವಾರದಲ್ಲಿ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ್ದ ‘ಸಶಕ್ತ ಬೇಟಿ, ಸಮ್ರದ್ದ ಬಿಹಾರ’ ಎಂಬ ಕಾರ್ಯಗಾರದಲ್ಲಿ ರಿಯಾ ಕುಮಾರಿ ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಮುಂದೆ ನೀವು ಕಾಂಡೋಮ್ ಸಹ ಕೇಳುತ್ತೀರಿ ಎಂದು ಉದ್ಧಟತನದಿಂದ ಉತ್ತರಿಸಿದ್ದರು.

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ, “ಮತ ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿ ಆ ಹುಡುಗಿಯ ಬಾಯಿ ಮುಚ್ಚಿಸಿ ವ್ಯಾಪಕ ಟೀಕೆಗೆ ಒಳಗಾಗಿದ್ದರು. ತದ ನಂತರ ತನ್ನ ತಪ್ಪಿಗೆ ಕ್ಷಮೆಯಾಚಿಸಿದ್ದರು.

ಸದ್ಯ ಸಾರ್ವಜನಿಕ ವೇದಿಕೆಯಲ್ಲಿ ಮುಜುಗರ ಎಂದು ಭಾವಿಸಿರುವ ವಿಷಯಗಳ ಕುರಿತು ದಿಟ್ಟವಾಗಿ ಪ್ರಶ್ನಿಸಿದ್ದಕ್ಕೆ ರಿಯಾ ಕುಮಾರಿಗೆ ಹಲವು ಎನ್‌ಜಿಓಗಳು ನೆರವು ನೀಡಲು ಮುಂದಾಗಿವೆ.

20 ವರ್ಷದ ರಿಯಾ ಕುಮಾರಿ ಪಾಟ್ನಾದ ಕಮಲ ನೆಹರು ನಗರ ಕಾಲೋನಿಯ ಸ್ಲಮ್ ನಿವಾಸಿಯಾಗಿದ್ದಾರೆ. ರಘುಪುರ್‌ನ ರಾಮ್ ವಿಲಾಸ್ ರಾಯ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ನಾಲ್ವರು ಸಹೋದರಿಯರು ಮತ್ತು ಮೂವರು ಸಹೋದರರ ದೊಡ್ಡ ಕುಟುಂಬ ಅವರದು. ಅಣ್ಣಂದಿರು ರೈಲುಗಳಲ್ಲಿ ಕೂಲಿಗಳಾಗಿ ಕೆಲಸ ಮಾಡುತ್ತಿದ್ದಾರೆ.

ಭಾರತೀಯ ಸ್ಯಾನಿಟರಿ ನ್ಯಾಪ್ಕಿನ್ ತಯಾರಕ ಪ್ಯಾನ್ ಹೆಲ್ತ್‌ಕೇರ್ ಪ್ರೈ.ಲಿ ಸಂಸ್ಥೆಯು ರಿಯಾಗೆ ಒಂದು ವರ್ಷದ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಒದಗಿಸುವುದಾಗಿ ಹೇಳಿಕೊಂಡಿದೆ.

ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಎಂಬ ದೆಹಲಿ ಮೂಲದ ಹೆಣ್ಣು ಮಕ್ಕಳ ನೈರ್ಮಲ್ಯ ಕಾಪಾಡುವ ಕಂಪನಿಯ ಸಿಇಒ ಹರಿಓಂ ತ್ಯಾಗಿಯವರು, “ಸಾರ್ವಜನಿಕ ವೇದಿಕೆಯಲ್ಲಿ ಬಡ ಹುಡುಗಿಯರು ಮತ್ತು ಸ್ಲಂಗಳಲ್ಲಿ ವಾಸಿಸುವ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ವಿಧಾನಗಳ ಸಮಸ್ಯೆಯನ್ನು ದಿಟ್ಟವಾಗಿ ಪ್ರಶ್ನಿಸಿದಕ್ಕಾಗಿ” ಆ ಹುಡುಗಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

“ಸದ್ಯಕ್ಕೆ ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚವನ್ನು ಕಂಪನಿಯೇ ಭರಿಸಲು ನಿರ್ಧರಿಸಿದೆ. ಭವಿಷ್ಯದಲ್ಲಿ ಅವರು ಯಾವುದೇ ಹೆಚ್ಚಿನ ಸಹಾಯ ಅಥವಾ ಬೆಂಬಲವನ್ನು ಬಯಸಿದರೆ ಅದು ನಿಮ್ಮ ಜೀವನದ ಗುಣಮಟ್ಟವನ್ನು ಸುಧಾರಿಸಲು ನಾವು ನೀಡುವ ಕೊಡುಗೆ ಎಂದು ಭಾವಿಸಿ ಸಹಾಯ ಮಾಡುತ್ತೇವೆ” ಎಂದು ತ್ಯಾಗಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಿಯಾ, “ಸ್ಯಾನಿಟರಿ ನ್ಯಾಪ್‌ಕಿನ್ ಬಗೆಗಿನ ನನ್ನ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ. ಈ ಪ್ರಶ್ನೆ ಎತ್ತಿದ್ದು ಕೂಡ ಕೇವಲ ನನಗಾಗಿ ಮಾತ್ರವಲ್ಲ. ನಾನು ಬೇಕಾದರೆ ಹಣ ಕೊಟ್ಟು ಖರೀದಿಸಬಲ್ಲೆ. ಆದರೆ ನಮ್ಮ ಸ್ಲಮ್‌ನಲ್ಲಿನ ಬಹುತೇಕ ಹೆಣ್ಣುಮಕ್ಕಳಿಗೆ ಕೊಳ್ಳುವ ಶಕ್ತಿಯಿಲ್ಲ. ಈ ಬಗ್ಗೆ ದನಿ ಎತ್ತಿದೆ. ನನಗೆ ಸಿಗುವ ಸ್ಯಾನಿಟರಿ ಪ್ಯಾಡ್‌ಗಳನ್ನು ಬೇರೆ ಹೆಣ್ಣು ಮಕ್ಕಳೊಂದಿಗೆ ಹಂಚಿಕೊಳ್ಳುತ್ತೇನೆ. ನನಗೆ ಸಿಗುವ ಶಿಕ್ಷಣವನ್ನು ಉಳಿದವರಿಗೆ ಅರಿವು ಮೂಡಿಸಲು ಬಳುಸತ್ತೇನೆ” ಎಂದಿದ್ದಾರೆ.

ಕ್ವಿಂಟ್ ಜೊತೆ ಮಾತನಾಡಿರುವ ರಿಯಾ, “ನಾನು ಮಕ್ಕಳನ್ನು ಉಳಿಸಿ ಎಂಬ ಎನ್‌ಜಿಓಗೆ ಸ್ವಯಂ ಸೇವಕಿಯಾಗಿ ಕೆಲಸ ಮಾಡುತ್ತಿದ್ದೆ. ಆಗ ಹಲವು ಸ್ಲಂಗಳಿಗೆ ಭೇಟಿ ನೀಡಿ ಮುಟ್ಟಿನ ಬಗ್ಗೆ ಅರಿವು ಮೂಡಿಸುವ ಕೆಲಸ ನನ್ನದಾಗಿತ್ತು. ಕೆಲವು ಸ್ಲಂಗಳಿಗೆ ಹೋದಾಗ ಅಲ್ಲಿನ ಹೆಣ್ಣು ಮಕ್ಕಳ ಸ್ಥಿತಿ ನೋಡಿ ಬೇಸರವಾಯಿತು. ಬಹುತೇಕರು ಸ್ಯಾನಿಟರಿ ನ್ಯಾಪ್‌ಕಿನ್ ಖರೀದಿಸಲು ಸಾಧ್ಯವಾಗದೆ ಇಂದಿಗೂ ಬಟ್ಟೆಗಳನ್ನೆ ಬಳಸುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಕಣ್ಣಾರೆ ಕಂಡ ಕಷ್ಟಗಳನ್ನು ಪ್ರಶ್ನೆಯಾಗಿಸಿದೆ” ಎಂದಿದ್ದಾರೆ.

ಬಹಳಷ್ಟು ಹೆಣ್ಣು ಮಕ್ಕಳು ಮುಟ್ಟಿನ ಸಮಯದಲ್ಲಿ ವಾರಗಟ್ಟಲೆ ಶಾಲೆಗಳಿಗೆ ಹೋಗದೆ ರಜೆ ಹಾಕುತ್ತಾರೆ. ಇದರಿಂದ ಅವರ ಕಲಿಕೆಯು ಕುಂಠಿತಗೊಳ್ಳುತ್ತದೆ. ಅಂತವರಿಗೆ ಅರಿವು ಮತ್ತು ಧೈರ್ಯ ತುಂಬುತ್ತೇನೆ. ಮುಟ್ಟು ಎಂಬುದು ನಾಚಿಕೆಯ ವಿಷಯವಲ್ಲ ಎಂದು ಅವರಿಗೆ ಕಲಿಸಬೇಕಾಗಿದೆ ಎನ್ನುತ್ತಾರೆ ರಿಯಾ.

ಇದನ್ನೂ ಓದಿ: ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...