Homeಮುಖಪುಟಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಐಎಎಸ್ ಅಧಿಕಾರಿ ಎದುರು ಸ್ಯಾನಿಟರಿ ಪ್ಯಾಡ್ ಕುರಿತ ದಿಟ್ಟ ಪ್ರಶ್ನೆ ಎತ್ತಿದ ಯುವತಿಗೆ ಬೆಂಬಲ

ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚ ಭರಿಸಲು ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಕಂಪನಿ ನಿರ್ಧರಿಸಿದೆ.

- Advertisement -
- Advertisement -

“ಸರ್ಕಾರವು ನಮಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನವನ್ನು ನೀಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಮಾಡುತ್ತಿದೆ. ಹೀಗಿರುವಾಗ, ಕೇವಲ 20-30ರೂಗಳ ಸ್ಯಾನಿಟರಿ ಪ್ಯಾಡ್‌ಗಳನ್ನು ಏಕೆ ನೀಡಲು ಸಾಧ್ಯವಿಲ್ಲ?” ಎಂದು ದಿಟ್ಟ ಪ್ರಶ್ನೆ ಎತ್ತಿದ್ದ ಬಿಹಾರದ ವಿದ್ಯಾರ್ಥಿನಿ ರಿಯಾ ಕುಮಾರಿಯವರ ಬೆಂಬಲಕ್ಕೆ ಹಲವರು ಮುಂದೆ ಬಂದಿದ್ದಾರೆ.

ಸೆಪ್ಟಂಬರ್ ಕೊನೆಯ ವಾರದಲ್ಲಿ ಪಾಟ್ನಾದಲ್ಲಿ ನಡೆದ ಯುನಿಸೆಫ್ ಮತ್ತು ರಾಜ್ಯ ಸರ್ಕಾರವು ಜಂಟಿಯಾಗಿ ಆಯೋಜಿಸಿದ್ದ ‘ಸಶಕ್ತ ಬೇಟಿ, ಸಮ್ರದ್ದ ಬಿಹಾರ’ ಎಂಬ ಕಾರ್ಯಗಾರದಲ್ಲಿ ರಿಯಾ ಕುಮಾರಿ ಕೇಳಿದ ಪ್ರಶ್ನೆಗೆ ಬಿಹಾರದ ಮಹಿಳಾ ಅಭಿವೃದ್ಧಿ ನಿಗಮ (ಡಬ್ಲ್ಯುಡಿಸಿ) ವ್ಯವಸ್ಥಾಪಕ ನಿರ್ದೇಶಕಿ ಹರ್ಜೋತ್‌ ಕೌರ್ ಬಾಮ್ಹ್ರಾ ಮುಂದೆ ನೀವು ಕಾಂಡೋಮ್ ಸಹ ಕೇಳುತ್ತೀರಿ ಎಂದು ಉದ್ಧಟತನದಿಂದ ಉತ್ತರಿಸಿದ್ದರು.

ರಾಜಕಾರಣಿಗಳು ಮತಗಳನ್ನು ಕೇಳುತ್ತಾರೆ, ಹೀಗಿರುವಾಗ ಕೆಲವು ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ವಿದ್ಯಾರ್ಥಿನಿ ವಾದಿಸಿದಾಗ, “ಮತ ಹಾಕಬೇಡಿ, ಪಾಕಿಸ್ತಾನ ಮಾಡಿ ಈ ದೇಶವನ್ನು. ಹಣ ಅಥವಾ ಸೌಕರ್ಯಗಳಿಗಾಗಿ ನೀವು ಮತ ​​ಚಲಾಯಿಸುತ್ತೀರಾ?” ಎಂದು ಐಎಎಸ್ ಅಧಿಕಾರಿ ಹೇಳಿ ಆ ಹುಡುಗಿಯ ಬಾಯಿ ಮುಚ್ಚಿಸಿ ವ್ಯಾಪಕ ಟೀಕೆಗೆ ಒಳಗಾಗಿದ್ದರು. ತದ ನಂತರ ತನ್ನ ತಪ್ಪಿಗೆ ಕ್ಷಮೆಯಾಚಿಸಿದ್ದರು.

ಸದ್ಯ ಸಾರ್ವಜನಿಕ ವೇದಿಕೆಯಲ್ಲಿ ಮುಜುಗರ ಎಂದು ಭಾವಿಸಿರುವ ವಿಷಯಗಳ ಕುರಿತು ದಿಟ್ಟವಾಗಿ ಪ್ರಶ್ನಿಸಿದ್ದಕ್ಕೆ ರಿಯಾ ಕುಮಾರಿಗೆ ಹಲವು ಎನ್‌ಜಿಓಗಳು ನೆರವು ನೀಡಲು ಮುಂದಾಗಿವೆ.

20 ವರ್ಷದ ರಿಯಾ ಕುಮಾರಿ ಪಾಟ್ನಾದ ಕಮಲ ನೆಹರು ನಗರ ಕಾಲೋನಿಯ ಸ್ಲಮ್ ನಿವಾಸಿಯಾಗಿದ್ದಾರೆ. ರಘುಪುರ್‌ನ ರಾಮ್ ವಿಲಾಸ್ ರಾಯ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ನಾಲ್ವರು ಸಹೋದರಿಯರು ಮತ್ತು ಮೂವರು ಸಹೋದರರ ದೊಡ್ಡ ಕುಟುಂಬ ಅವರದು. ಅಣ್ಣಂದಿರು ರೈಲುಗಳಲ್ಲಿ ಕೂಲಿಗಳಾಗಿ ಕೆಲಸ ಮಾಡುತ್ತಿದ್ದಾರೆ.

ಭಾರತೀಯ ಸ್ಯಾನಿಟರಿ ನ್ಯಾಪ್ಕಿನ್ ತಯಾರಕ ಪ್ಯಾನ್ ಹೆಲ್ತ್‌ಕೇರ್ ಪ್ರೈ.ಲಿ ಸಂಸ್ಥೆಯು ರಿಯಾಗೆ ಒಂದು ವರ್ಷದ ಸ್ಯಾನಿಟರಿ ನ್ಯಾಪ್ಕಿನ್‌ಗಳನ್ನು ಒದಗಿಸುವುದಾಗಿ ಹೇಳಿಕೊಂಡಿದೆ.

ವೆಟ್ ಅಂಡ್ ಡ್ರೈ ಪರ್ಸನಲ್ ಕೇರ್ ಎಂಬ ದೆಹಲಿ ಮೂಲದ ಹೆಣ್ಣು ಮಕ್ಕಳ ನೈರ್ಮಲ್ಯ ಕಾಪಾಡುವ ಕಂಪನಿಯ ಸಿಇಒ ಹರಿಓಂ ತ್ಯಾಗಿಯವರು, “ಸಾರ್ವಜನಿಕ ವೇದಿಕೆಯಲ್ಲಿ ಬಡ ಹುಡುಗಿಯರು ಮತ್ತು ಸ್ಲಂಗಳಲ್ಲಿ ವಾಸಿಸುವ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ವಿಧಾನಗಳ ಸಮಸ್ಯೆಯನ್ನು ದಿಟ್ಟವಾಗಿ ಪ್ರಶ್ನಿಸಿದಕ್ಕಾಗಿ” ಆ ಹುಡುಗಿಗೆ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

“ಸದ್ಯಕ್ಕೆ ಪದವಿ ಮುಗಿಯುವವರೆಗೆ ರಿಯಾ ಕುಮಾರಿಯ ಶಿಕ್ಷಣದ ವೆಚ್ಚವನ್ನು ಕಂಪನಿಯೇ ಭರಿಸಲು ನಿರ್ಧರಿಸಿದೆ. ಭವಿಷ್ಯದಲ್ಲಿ ಅವರು ಯಾವುದೇ ಹೆಚ್ಚಿನ ಸಹಾಯ ಅಥವಾ ಬೆಂಬಲವನ್ನು ಬಯಸಿದರೆ ಅದು ನಿಮ್ಮ ಜೀವನದ ಗುಣಮಟ್ಟವನ್ನು ಸುಧಾರಿಸಲು ನಾವು ನೀಡುವ ಕೊಡುಗೆ ಎಂದು ಭಾವಿಸಿ ಸಹಾಯ ಮಾಡುತ್ತೇವೆ” ಎಂದು ತ್ಯಾಗಿ ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಿಯಾ, “ಸ್ಯಾನಿಟರಿ ನ್ಯಾಪ್‌ಕಿನ್ ಬಗೆಗಿನ ನನ್ನ ಪ್ರಶ್ನೆಯಲ್ಲಿ ಯಾವುದೇ ತಪ್ಪಿಲ್ಲ. ಈ ಪ್ರಶ್ನೆ ಎತ್ತಿದ್ದು ಕೂಡ ಕೇವಲ ನನಗಾಗಿ ಮಾತ್ರವಲ್ಲ. ನಾನು ಬೇಕಾದರೆ ಹಣ ಕೊಟ್ಟು ಖರೀದಿಸಬಲ್ಲೆ. ಆದರೆ ನಮ್ಮ ಸ್ಲಮ್‌ನಲ್ಲಿನ ಬಹುತೇಕ ಹೆಣ್ಣುಮಕ್ಕಳಿಗೆ ಕೊಳ್ಳುವ ಶಕ್ತಿಯಿಲ್ಲ. ಈ ಬಗ್ಗೆ ದನಿ ಎತ್ತಿದೆ. ನನಗೆ ಸಿಗುವ ಸ್ಯಾನಿಟರಿ ಪ್ಯಾಡ್‌ಗಳನ್ನು ಬೇರೆ ಹೆಣ್ಣು ಮಕ್ಕಳೊಂದಿಗೆ ಹಂಚಿಕೊಳ್ಳುತ್ತೇನೆ. ನನಗೆ ಸಿಗುವ ಶಿಕ್ಷಣವನ್ನು ಉಳಿದವರಿಗೆ ಅರಿವು ಮೂಡಿಸಲು ಬಳುಸತ್ತೇನೆ” ಎಂದಿದ್ದಾರೆ.

ಕ್ವಿಂಟ್ ಜೊತೆ ಮಾತನಾಡಿರುವ ರಿಯಾ, “ನಾನು ಮಕ್ಕಳನ್ನು ಉಳಿಸಿ ಎಂಬ ಎನ್‌ಜಿಓಗೆ ಸ್ವಯಂ ಸೇವಕಿಯಾಗಿ ಕೆಲಸ ಮಾಡುತ್ತಿದ್ದೆ. ಆಗ ಹಲವು ಸ್ಲಂಗಳಿಗೆ ಭೇಟಿ ನೀಡಿ ಮುಟ್ಟಿನ ಬಗ್ಗೆ ಅರಿವು ಮೂಡಿಸುವ ಕೆಲಸ ನನ್ನದಾಗಿತ್ತು. ಕೆಲವು ಸ್ಲಂಗಳಿಗೆ ಹೋದಾಗ ಅಲ್ಲಿನ ಹೆಣ್ಣು ಮಕ್ಕಳ ಸ್ಥಿತಿ ನೋಡಿ ಬೇಸರವಾಯಿತು. ಬಹುತೇಕರು ಸ್ಯಾನಿಟರಿ ನ್ಯಾಪ್‌ಕಿನ್ ಖರೀದಿಸಲು ಸಾಧ್ಯವಾಗದೆ ಇಂದಿಗೂ ಬಟ್ಟೆಗಳನ್ನೆ ಬಳಸುತ್ತಿದ್ದಾರೆ. ಇದು ಅವರ ಆರೋಗ್ಯದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಕಣ್ಣಾರೆ ಕಂಡ ಕಷ್ಟಗಳನ್ನು ಪ್ರಶ್ನೆಯಾಗಿಸಿದೆ” ಎಂದಿದ್ದಾರೆ.

ಬಹಳಷ್ಟು ಹೆಣ್ಣು ಮಕ್ಕಳು ಮುಟ್ಟಿನ ಸಮಯದಲ್ಲಿ ವಾರಗಟ್ಟಲೆ ಶಾಲೆಗಳಿಗೆ ಹೋಗದೆ ರಜೆ ಹಾಕುತ್ತಾರೆ. ಇದರಿಂದ ಅವರ ಕಲಿಕೆಯು ಕುಂಠಿತಗೊಳ್ಳುತ್ತದೆ. ಅಂತವರಿಗೆ ಅರಿವು ಮತ್ತು ಧೈರ್ಯ ತುಂಬುತ್ತೇನೆ. ಮುಟ್ಟು ಎಂಬುದು ನಾಚಿಕೆಯ ವಿಷಯವಲ್ಲ ಎಂದು ಅವರಿಗೆ ಕಲಿಸಬೇಕಾಗಿದೆ ಎನ್ನುತ್ತಾರೆ ರಿಯಾ.

ಇದನ್ನೂ ಓದಿ: ಗ್ಯಾಸ್ ಪುರಾಣ: ಗೃಹ ಬಳಕೆಯ ಗ್ಯಾಸ್ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಕಾರಣಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...