Homeಕರ್ನಾಟಕಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

ಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

- Advertisement -
- Advertisement -

ದೇಶದೆಲ್ಲೆಡೆ ಪಕ್ಷಗಳನ್ನೇ ಗುಡಿಸಿ ಗುಂಡಾಂತರ ಮಾಡುತ್ತಿರುವ ಬಿಜೆಪಿಯು, ಕರ್ನಾಟಕದಲ್ಲಿ 28ರಲ್ಲಿ 25+1 ಕ್ಷೇತ್ರಗಳನ್ನು ಗೆದ್ದ ಮೇಲೂ ಪ್ರಬಲವಾಗಿ ಕಾಣುತ್ತಿಲ್ಲ ಏಕೆ? ಲೋಕಸಭಾ ಚುನಾವಣೆಯನ್ನೇ ಆಧಾರವಾಗಿಟ್ಟುಕೊಳ್ಳುವುದಾದರೆ ಬಿಜೆಪಿಯು ಈಗ ಚುನಾವಣೆ ನಡೆದರೂ, 150ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಸುಲಭದಲ್ಲಿ ಗೆಲ್ಲಬೇಕು. ಆದರೆ, ವಿಧಾನಸಭಾ ಚುನಾವಣೆ ಕಡೆಗೆ ಹೋಗುವ ಬದಲು, ಈಗಲೇ ಸರ್ಕಾರ ರಚನೆ ಮಾಡುವ ಆತುರಕ್ಕೆ ಬಿದ್ದಿದೆ. ಅಷ್ಟೇ ಅಲ್ಲದೇ, ಸುಮಾರು 16 ಜನ ಶಾಸಕರು ರಾಜೀನಾಮೆ ಕೊಟ್ಟ ನಂತರವೂ ದುರ್ಬಲವಾಗಿಯೇ ಕಾಣುತ್ತಿದೆ. ಆ ದೌರ್ಬಲ್ಯದ ಲಕ್ಷಣಗಳನ್ನು ನೋಡಿದರೆ ಯಾರಿಗಾದರೂ ಅದು ಮನವರಿಕೆಯಾಗುತ್ತದೆ.

1. ಮೊದಲನೆಯದಾಗಿ ರಾಜೀನಾಮೆ ಕೊಟ್ಟವರನ್ನು ಸ್ವತಂತ್ರವಾಗಿ ಬಿಟ್ಟರೆ ಅವರು ವಾಪಸ್ಸು ಹೋಗುತ್ತಾರೆ ಎಂದೆನಿಸಿ ಅವರನ್ನು ಕೂಡಲೇ ಬಿಜೆಪಿಯೇ ಅಧಿಕಾರದಲ್ಲಿರುವ ಮಹಾರಾಷ್ಟ್ರಕ್ಕೆ ರವಾನೆ ಮಾಡಲಾಯಿತು. ರಾಜೀನಾಮೆ ಕೊಟ್ಟವರು ವೀರಾವೇಶದಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದರು ಮತ್ತು 2-3 ಜನರನ್ನು ಬಿಟ್ಟರೆ ಮಿಕ್ಕವರೆಲ್ಲರೂ ಘಟಾನುಘಟಿ ಶಾಸಕರೇ. ಹಾಗಿದ್ದೂ ಮುಂಬೈಗೆ ಬಿಜೆಪಿಯೇ ವ್ಯವಸ್ಥೆ ಮಾಡಿದ ವಿಮಾನದಲ್ಲಿ ಹೊರಟು, ಬಿಜೆಪಿಗೆ ಆಪ್ತವಾದ ಉದ್ಯಮಿಯ ಹೋಟೆಲ್‍ನಲ್ಲೇ ಇರುವಂತೆ ನೋಡಿಕೊಳ್ಳಲಾಯಿತು.


2. ಅಲ್ಲಿಗೆ ಹೋದ ಮರುದಿನ ಡಿ.ಕೆ.ಶಿವಕುಮಾರ್ ‘ಮುಂಬೈಗೆ ಹೋಗಿ ಅವರ ಮನವೊಲಿಸಿ ಕರೆತರುತ್ತೇನೆ’ ಎಂದು ಘೋಷಿಸಿದ್ದರು. ಯಾರೇ ಬಂದರೂ, ಈ ಶಾಸಕರು ಜಗ್ಗಲ್ಲ ಎಂಬ ವಿಶ್ವಾಸ ಇರುವುದು ಹೋಗಲಿ, ತಾವೂ ಇದ್ದು (ಅದೇ ಹೋಟೆಲ್‍ನಲ್ಲಿ ಬಿಜೆಪಿ ನಾಯಕರೂ ಇದ್ದರು) ನಿಭಾಯಿಸಬಹುದು ಎಂಬ ಧೈರ್ಯವೂ ಬಿಜೆಪಿಗಿರಲಿಲ್ಲ. ಬದಲಿಗೆ ಡಿ.ಕೆ.ಶಿ ಅಥವಾ ಮುಖ್ಯಮಂತ್ರಿ ಕುಮಾರಸ್ವಾಮಿ ಬಂದರೆ, ಇವರೆಲ್ಲರೂ ಓಡಿ ಹೋಗುತ್ತಾರೆಂದು ಬಿಜೆಪಿಯು ಭಾವಿಸಿತು. ಹಾಗಾಗಿ ಮಧ್ಯರಾತ್ರಿ 10 ಜನ ಶಾಸಕರಿಂದ ಪತ್ರ ಬರೆಸಿಕೊಂಡು ಮುಂಬೈನ ಪೊಲೀಸ್ ಕಮೀಷನರ್, ಸ್ಥಳೀಯ ಡಿಸಿಪಿ ಮತ್ತು ಪೊಲೀಸ್ ಠಾಣೆಗೆ ನೀಡಿದರು. ಆ ಪತ್ರವು ಡಿ.ಕೆ.ಶಿ ಮತ್ತು ಎಚ್.ಡಿ.ಕೆ ತಮ್ಮನ್ನು ಮಾತಾಡಿಸದಂತೆ ತಡೆಯಬೇಕು ಎಂಬಂತೆ ಧ್ವನಿಸಿತು. ತಾವು ಮರಳಿ ಹೋಗುವುದಿಲ್ಲ ಎಂದು ಖಚಿತವಿದ್ದು ಪೊಲೀಸರಿಗೇ ದೂರು ಸಲ್ಲಿಸುವವರು, ಎದುರಿಗೆ ಇವರಿಬ್ಬರು ಬಂದರೆ ಯಾಕೆ ಹೆದರಬೇಕು? ಹಾಗಾಗಿ ಈ ಪತ್ರವನ್ನು ಬಿಜೆಪಿಯೇ ಬರೆಸಿಕೊಂಡಿತ್ತು ಎಂದು ನಂಬಲು ಕಾರಣಗಳಿವೆ.


3. ಅಧಿವೇಶನ ಶುರುವಾದ ದಿನ ‘ವಿಶ್ವಾಸಮತ ಯಾಚನೆ ಮಾಡಲು ಸಿದ್ಧ’ ಎಂದು ಕುಮಾರಸ್ವಾಮಿ ಘೋಷಿಸಿದ ತಕ್ಷಣ ಬೆಚ್ಚಿಬಿದ್ದಿದ್ದು ಬಿಜೆಪಿ. ತೃಪ್ತರಲ್ಲದ ಜೆಡಿಎಸ್, ಕಾಂಗ್ರೆಸ್ ಶಾಸಕರ ಕುರಿತಲ್ಲ, ತನ್ನ ಶಾಸಕರ ಕುರಿತಂತೆ. ಕೂಡಲೇ ತನ್ನೆಲ್ಲಾ ಶಾಸಕರನ್ನು ರೆಸಾರ್ಟ್‍ಗೆ ಸ್ಥಳಾಂತರಿಸಿತು. ಸದ್ಯ, ಇನ್ನೂ ಮಹಾರಾಷ್ಟ್ರಕ್ಕೆ ಸ್ಥಳಾಂತರಿಸಿಲ್ಲ ಅಷ್ಟೇ.


4. ನಾಲ್ಕನೆಯದಾಗಿ, ಮುಂಬೈನಲ್ಲಿದ್ದ 12 ಜನ ತೃಪ್ತರಲ್ಲದ ಶಾಸಕರು ಇಂದು ಶಿರಡಿಗೆ ಹೋಗಿ ಬಂದರು. ಸುದ್ದಿಯೇನೆಂದರೆ ಅಲ್ಲಿ ಈ ಶಾಸಕರಿಂದ ಆಣೆ ಪ್ರಮಾಣ ಮಾಡಿಸಿ ನಾವು ಮರಳಿ ನಮ್ಮ ಪಕ್ಷಗಳಿಗೆ ಹೋಗುವುದಿಲ್ಲ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿಸಲಾಗಿದೆ!!

ಹಾಗೆ ನೋಡಿದರೆ, ಬೆಂಗಳೂರಿನಲ್ಲೇ ಇರುವ ರಾಮಲಿಂಗಾರೆಡ್ಡಿ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳುತ್ತಿದ್ದಾರೆ. ಅವರ ಮನೆಗೆ ಪದೇ ಪದೇ ಕಾಂಗ್ರೆಸ್ ನಾಯಕರೂ ಹೋಗುತ್ತಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ತನ್ನ ಮನೆಯಲ್ಲಿ ಕೂತಿದ್ದರೆಂದು ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಬಂದವರು ಅಜ್ಞಾತ ಸ್ಥಳಕ್ಕೆ ಹೋದರೆಂದು ಹೇಳಲಾಗಿದೆ.
ಅಂದರೆ ವಿಚಾರ ಸ್ಪಷ್ಟವಿದೆ. ಬಿಜೆಪಿ ಆತ್ಮವಿಶ್ವಾಸದಿಂದಿಲ್ಲ. ಈ ಎಲ್ಲಾ ಅಂಶಗಳೂ ಅದರ ದೌರ್ಬಲ್ಯವನ್ನಷ್ಟೇ ತೋರಿಸುತ್ತಿವೆ. ಈಗಾಗಲೇ ತನ್ನ 13 ಶಾಸಕರು ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ತನ್ನ ಇತರ ಶಾಸಕರನ್ನು ರೆಸಾರ್ಟ್‍ಗೆ ಒಯ್ದಿಲ್ಲ. ಇದರ ಅರ್ಥವೇನು?
ಬಿಜೆಪಿಯು ಈ ಸಾರಿಯೂ ಅಧಿಕಾರ ಪಡೆದುಕೊಳ್ಳುವುದಿಲ್ಲವಾ? ಮತ್ತೊಂದು ಠುಸ್ ಪಟಾಕಿಯಾ? ಮುಂದಿನ ಮೂರ್ನಾಲ್ಕು ದಿನಗಳು ಈ ಕುರಿತು ಸ್ಪಷ್ಟ ಚಿತ್ರಣ ನೀಡುತ್ತವಾದರೂ, ಈ ಸದ್ಯ ಬಿಜೆಪಿ ದುರ್ಬಲವಾಗಿದೆ ಎಂಬುದು ಎದ್ದು ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...