Homeಕರ್ನಾಟಕಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

ಬಿಜೆಪಿಯೇ ದುರ್ಬಲವಾಗಿ ಕಾಣುತ್ತಿರುವುದಕ್ಕೆ ನಾಲ್ಕು ಸಾಕ್ಷಿಗಳು

- Advertisement -
- Advertisement -

ದೇಶದೆಲ್ಲೆಡೆ ಪಕ್ಷಗಳನ್ನೇ ಗುಡಿಸಿ ಗುಂಡಾಂತರ ಮಾಡುತ್ತಿರುವ ಬಿಜೆಪಿಯು, ಕರ್ನಾಟಕದಲ್ಲಿ 28ರಲ್ಲಿ 25+1 ಕ್ಷೇತ್ರಗಳನ್ನು ಗೆದ್ದ ಮೇಲೂ ಪ್ರಬಲವಾಗಿ ಕಾಣುತ್ತಿಲ್ಲ ಏಕೆ? ಲೋಕಸಭಾ ಚುನಾವಣೆಯನ್ನೇ ಆಧಾರವಾಗಿಟ್ಟುಕೊಳ್ಳುವುದಾದರೆ ಬಿಜೆಪಿಯು ಈಗ ಚುನಾವಣೆ ನಡೆದರೂ, 150ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಸುಲಭದಲ್ಲಿ ಗೆಲ್ಲಬೇಕು. ಆದರೆ, ವಿಧಾನಸಭಾ ಚುನಾವಣೆ ಕಡೆಗೆ ಹೋಗುವ ಬದಲು, ಈಗಲೇ ಸರ್ಕಾರ ರಚನೆ ಮಾಡುವ ಆತುರಕ್ಕೆ ಬಿದ್ದಿದೆ. ಅಷ್ಟೇ ಅಲ್ಲದೇ, ಸುಮಾರು 16 ಜನ ಶಾಸಕರು ರಾಜೀನಾಮೆ ಕೊಟ್ಟ ನಂತರವೂ ದುರ್ಬಲವಾಗಿಯೇ ಕಾಣುತ್ತಿದೆ. ಆ ದೌರ್ಬಲ್ಯದ ಲಕ್ಷಣಗಳನ್ನು ನೋಡಿದರೆ ಯಾರಿಗಾದರೂ ಅದು ಮನವರಿಕೆಯಾಗುತ್ತದೆ.

1. ಮೊದಲನೆಯದಾಗಿ ರಾಜೀನಾಮೆ ಕೊಟ್ಟವರನ್ನು ಸ್ವತಂತ್ರವಾಗಿ ಬಿಟ್ಟರೆ ಅವರು ವಾಪಸ್ಸು ಹೋಗುತ್ತಾರೆ ಎಂದೆನಿಸಿ ಅವರನ್ನು ಕೂಡಲೇ ಬಿಜೆಪಿಯೇ ಅಧಿಕಾರದಲ್ಲಿರುವ ಮಹಾರಾಷ್ಟ್ರಕ್ಕೆ ರವಾನೆ ಮಾಡಲಾಯಿತು. ರಾಜೀನಾಮೆ ಕೊಟ್ಟವರು ವೀರಾವೇಶದಿಂದ ಸಮ್ಮಿಶ್ರ ಸರ್ಕಾರದ ವಿರುದ್ಧ ಹೇಳಿಕೆ ನೀಡಿದ್ದರು ಮತ್ತು 2-3 ಜನರನ್ನು ಬಿಟ್ಟರೆ ಮಿಕ್ಕವರೆಲ್ಲರೂ ಘಟಾನುಘಟಿ ಶಾಸಕರೇ. ಹಾಗಿದ್ದೂ ಮುಂಬೈಗೆ ಬಿಜೆಪಿಯೇ ವ್ಯವಸ್ಥೆ ಮಾಡಿದ ವಿಮಾನದಲ್ಲಿ ಹೊರಟು, ಬಿಜೆಪಿಗೆ ಆಪ್ತವಾದ ಉದ್ಯಮಿಯ ಹೋಟೆಲ್‍ನಲ್ಲೇ ಇರುವಂತೆ ನೋಡಿಕೊಳ್ಳಲಾಯಿತು.


2. ಅಲ್ಲಿಗೆ ಹೋದ ಮರುದಿನ ಡಿ.ಕೆ.ಶಿವಕುಮಾರ್ ‘ಮುಂಬೈಗೆ ಹೋಗಿ ಅವರ ಮನವೊಲಿಸಿ ಕರೆತರುತ್ತೇನೆ’ ಎಂದು ಘೋಷಿಸಿದ್ದರು. ಯಾರೇ ಬಂದರೂ, ಈ ಶಾಸಕರು ಜಗ್ಗಲ್ಲ ಎಂಬ ವಿಶ್ವಾಸ ಇರುವುದು ಹೋಗಲಿ, ತಾವೂ ಇದ್ದು (ಅದೇ ಹೋಟೆಲ್‍ನಲ್ಲಿ ಬಿಜೆಪಿ ನಾಯಕರೂ ಇದ್ದರು) ನಿಭಾಯಿಸಬಹುದು ಎಂಬ ಧೈರ್ಯವೂ ಬಿಜೆಪಿಗಿರಲಿಲ್ಲ. ಬದಲಿಗೆ ಡಿ.ಕೆ.ಶಿ ಅಥವಾ ಮುಖ್ಯಮಂತ್ರಿ ಕುಮಾರಸ್ವಾಮಿ ಬಂದರೆ, ಇವರೆಲ್ಲರೂ ಓಡಿ ಹೋಗುತ್ತಾರೆಂದು ಬಿಜೆಪಿಯು ಭಾವಿಸಿತು. ಹಾಗಾಗಿ ಮಧ್ಯರಾತ್ರಿ 10 ಜನ ಶಾಸಕರಿಂದ ಪತ್ರ ಬರೆಸಿಕೊಂಡು ಮುಂಬೈನ ಪೊಲೀಸ್ ಕಮೀಷನರ್, ಸ್ಥಳೀಯ ಡಿಸಿಪಿ ಮತ್ತು ಪೊಲೀಸ್ ಠಾಣೆಗೆ ನೀಡಿದರು. ಆ ಪತ್ರವು ಡಿ.ಕೆ.ಶಿ ಮತ್ತು ಎಚ್.ಡಿ.ಕೆ ತಮ್ಮನ್ನು ಮಾತಾಡಿಸದಂತೆ ತಡೆಯಬೇಕು ಎಂಬಂತೆ ಧ್ವನಿಸಿತು. ತಾವು ಮರಳಿ ಹೋಗುವುದಿಲ್ಲ ಎಂದು ಖಚಿತವಿದ್ದು ಪೊಲೀಸರಿಗೇ ದೂರು ಸಲ್ಲಿಸುವವರು, ಎದುರಿಗೆ ಇವರಿಬ್ಬರು ಬಂದರೆ ಯಾಕೆ ಹೆದರಬೇಕು? ಹಾಗಾಗಿ ಈ ಪತ್ರವನ್ನು ಬಿಜೆಪಿಯೇ ಬರೆಸಿಕೊಂಡಿತ್ತು ಎಂದು ನಂಬಲು ಕಾರಣಗಳಿವೆ.


3. ಅಧಿವೇಶನ ಶುರುವಾದ ದಿನ ‘ವಿಶ್ವಾಸಮತ ಯಾಚನೆ ಮಾಡಲು ಸಿದ್ಧ’ ಎಂದು ಕುಮಾರಸ್ವಾಮಿ ಘೋಷಿಸಿದ ತಕ್ಷಣ ಬೆಚ್ಚಿಬಿದ್ದಿದ್ದು ಬಿಜೆಪಿ. ತೃಪ್ತರಲ್ಲದ ಜೆಡಿಎಸ್, ಕಾಂಗ್ರೆಸ್ ಶಾಸಕರ ಕುರಿತಲ್ಲ, ತನ್ನ ಶಾಸಕರ ಕುರಿತಂತೆ. ಕೂಡಲೇ ತನ್ನೆಲ್ಲಾ ಶಾಸಕರನ್ನು ರೆಸಾರ್ಟ್‍ಗೆ ಸ್ಥಳಾಂತರಿಸಿತು. ಸದ್ಯ, ಇನ್ನೂ ಮಹಾರಾಷ್ಟ್ರಕ್ಕೆ ಸ್ಥಳಾಂತರಿಸಿಲ್ಲ ಅಷ್ಟೇ.


4. ನಾಲ್ಕನೆಯದಾಗಿ, ಮುಂಬೈನಲ್ಲಿದ್ದ 12 ಜನ ತೃಪ್ತರಲ್ಲದ ಶಾಸಕರು ಇಂದು ಶಿರಡಿಗೆ ಹೋಗಿ ಬಂದರು. ಸುದ್ದಿಯೇನೆಂದರೆ ಅಲ್ಲಿ ಈ ಶಾಸಕರಿಂದ ಆಣೆ ಪ್ರಮಾಣ ಮಾಡಿಸಿ ನಾವು ಮರಳಿ ನಮ್ಮ ಪಕ್ಷಗಳಿಗೆ ಹೋಗುವುದಿಲ್ಲ, ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಹೇಳಿಸಲಾಗಿದೆ!!

ಹಾಗೆ ನೋಡಿದರೆ, ಬೆಂಗಳೂರಿನಲ್ಲೇ ಇರುವ ರಾಮಲಿಂಗಾರೆಡ್ಡಿ ತನ್ನ ನಿರ್ಧಾರಗಳನ್ನು ತಾನು ತೆಗೆದುಕೊಳ್ಳುತ್ತಿದ್ದಾರೆ. ಅವರ ಮನೆಗೆ ಪದೇ ಪದೇ ಕಾಂಗ್ರೆಸ್ ನಾಯಕರೂ ಹೋಗುತ್ತಿಲ್ಲ. ಆದರೆ, ಡಿ.ಕೆ.ಶಿವಕುಮಾರ್ ತನ್ನ ಮನೆಯಲ್ಲಿ ಕೂತಿದ್ದರೆಂದು ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಬಂದವರು ಅಜ್ಞಾತ ಸ್ಥಳಕ್ಕೆ ಹೋದರೆಂದು ಹೇಳಲಾಗಿದೆ.
ಅಂದರೆ ವಿಚಾರ ಸ್ಪಷ್ಟವಿದೆ. ಬಿಜೆಪಿ ಆತ್ಮವಿಶ್ವಾಸದಿಂದಿಲ್ಲ. ಈ ಎಲ್ಲಾ ಅಂಶಗಳೂ ಅದರ ದೌರ್ಬಲ್ಯವನ್ನಷ್ಟೇ ತೋರಿಸುತ್ತಿವೆ. ಈಗಾಗಲೇ ತನ್ನ 13 ಶಾಸಕರು ರಾಜೀನಾಮೆ ನೀಡಿದ್ದರೂ ಕಾಂಗ್ರೆಸ್ ತನ್ನ ಇತರ ಶಾಸಕರನ್ನು ರೆಸಾರ್ಟ್‍ಗೆ ಒಯ್ದಿಲ್ಲ. ಇದರ ಅರ್ಥವೇನು?
ಬಿಜೆಪಿಯು ಈ ಸಾರಿಯೂ ಅಧಿಕಾರ ಪಡೆದುಕೊಳ್ಳುವುದಿಲ್ಲವಾ? ಮತ್ತೊಂದು ಠುಸ್ ಪಟಾಕಿಯಾ? ಮುಂದಿನ ಮೂರ್ನಾಲ್ಕು ದಿನಗಳು ಈ ಕುರಿತು ಸ್ಪಷ್ಟ ಚಿತ್ರಣ ನೀಡುತ್ತವಾದರೂ, ಈ ಸದ್ಯ ಬಿಜೆಪಿ ದುರ್ಬಲವಾಗಿದೆ ಎಂಬುದು ಎದ್ದು ಕಾಣುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...