Homeಮುಖಪುಟ‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

‘ಅಂದ ಹಾಗೆ ನಡ್ಡಾ ಯಾವಾಗ ನಾಮಪತ್ರ ಸಲ್ಲಿಸಿದರು’: ಬಿಜೆಪಿಯ ಚುನಾವಣಾ ಪ್ರಕ್ರಿಯೆಯ ಬಗ್ಗೆ ಚಿದಂಬರಂ ಪ್ರಶ್ನೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ಬಿಜೆಪಿಯ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಒಕ್ಕೂಟ ಸರ್ಕಾರದ ಮಾಜಿ ಸಚಿವ ಪಿ. ಚಿದಂಬರಂ ಅವರು, ‘ಜೆ.ಪಿ.ನಡ್ಡಾ ಅವರು ಯಾವಾಗ ತಮ್ಮ ನಾಮಪತ್ರ ಸಲ್ಲಿಸಿದರು” ಎಂದು ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣಾ ಪ್ರಕ್ರಿಯೆಯನ್ನು ವ್ಯಂಗ್ಯವಾಡಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರ ಅವಧಿ 2023 ರಲ್ಲಿ ಕೊನೆಗೊಳ್ಳಬೇಕಿದೆ, ಆದರೆ ಅವರ ಅಧಿಕಾರಾವಧಿಯನ್ನು 2024ರ ವರೆಗೆ ಮುಂದುವರೆಸಲಾಗಿದೆ.

ಚಿದಂಬರಂ ಅವರು ಮಂಗಳವಾರ ಟ್ವೀಟ್ ಮಾಡಿದ್ದು,“ಅಂದಹಾಗೆ ಶ್ರೀ ನಡ್ಡಾ ಅವರು, ಯಾವ ‘ಚುನಾವಣಾ ಪ್ರಾಧಿಕಾರದ ಮುಂದೆ, ಯಾವಾಗ ತಮ್ಮ ‘ನಾಮಪತ್ರಗಳನ್ನು’ ಸಲ್ಲಿಸಿದರು ಎಂಬುವುದನ್ನು ಕಂಡುಹಿಡಿಯಲು ನಾನು ಪ್ರಯತ್ನಿಸುತ್ತಿದ್ದೇನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯು ಅಪಾರ ಸಾರ್ವಜನಿಕ ಮತ್ತು ಮಾಧ್ಯಮದ ಆಸಕ್ತಿಯನ್ನು ಹುಟ್ಟುಹಾಕಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ಮುಹೂರ್ತವಾಗಿದೆ. 2020 ರ ಜನವರಿಯಲ್ಲಿ ಬಿಜೆಪಿ ಅಧ್ಯಕ್ಷರಾಗಿ ಶ್ರೀ ಜೆ ಪಿ ನಡ್ಡಾ ಅವರ ‘ಜನಸಾಮಾನ್ಯರ ಮತದಿಂದ ಅವಿರೋಧ ಆಯ್ಕೆ’ ನಂತರ ಇದಾಗಿದೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾಗಿ ದಲಿತ ನಾಯಕ ನೇಮಕ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಅಕ್ಟೋಬರ್ 17 ರಂದು ಮತ್ತು ಮತ ಎಣಿಕೆ ಅಕ್ಟೋಬರ್ 19 ರಂದು ನಡೆಯಲಿದೆ.

ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುತ್ತಿರುವ ಶಶಿ ತರೂರ್ ಮತ್ತು ಮಲ್ಲಿಕಾರ್ಜುನ ಖರ್ಗೆ ಇಬ್ಬರಿಗೂ ಗೌರವ ಸಲ್ಲಿಸುವಂತೆ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರ (ಸಿಇಎ) ಎಲ್ಲಾ ರಾಜ್ಯ ಅಧ್ಯಕ್ಷರಿಗೆ ಮಾರ್ಗಸೂಚಿಗಳನ್ನು ನೀಡಿದೆ.

ಪ್ರದೇಶ ಚುನಾವಣಾ ಅಧಿಕಾರಿಗಳು (PRO) ಆಯಾ ರಾಜ್ಯ ಕಾಂಗ್ರೆಸ್ ಸಮಿತಿಗಳ ಮತಗಟ್ಟೆ ಅಧಿಕಾರಿಗಳಾಗಿರುತ್ತಾರೆ. ಮತದಾನ ಕೇಂದ್ರಗಳಲ್ಲಿ ಕ್ರಮವನ್ನು ಇಟ್ಟುಕೊಳ್ಳುವ ಮತ್ತು ಚುನಾವಣೆಯು ನ್ಯಾಯಯುತವಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಎಂದು ಮಾರ್ಗಸೂಚಿಗಳು ಹೇಳುತ್ತವೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ; ರಾಜ್ಯಸಭೆ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ

ಈ ನಡುವೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ. ನಡ್ಡಾ ಅವರನ್ನು ಪಕ್ಷದ ಮುಖ್ಯಸ್ಥರನ್ನಾಗಿ ವಿಸ್ತರಿಸಲು ನಿರ್ಧರಿಸಲಾಗಿದೆ. 2024ರಲ್ಲಿ ಲೋಕಸಭೆ ಚುನಾವಣೆ ಮುಗಿಯುವವರೆಗೆ ವಿಸ್ತರಣೆ ನಡೆಯಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯಾ ಟುಡೆ ವರದಿ ಹೇಳಿದೆ.

ನಡ್ಡಾ ಅವರು ಮೂರು ವರ್ಷಗಳ ಅಧಿಕಾರಾವಧಿಯು ಜನವರಿ 20, 2023 ರಂದು ಕೊನೆಗೊಳ್ಳಲಿದೆ. ನಡ್ಡಾ ಅವರನ್ನು 2019 ರ ಜುಲೈನಲ್ಲಿ ಕಾರ್ಯಾಧ್ಯಕ್ಷರನ್ನಾಗಿ ಮಾಡಲಾಯಿತು ಮತ್ತು 2020ರ ಜನವರಿ 20 ರಂದು ಪೂರ್ಣ ಸಮಯದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಅವರ ಆಯ್ಕೆಯು ಸರ್ವಾನುಮತದಿಂದ ನಡೆಯಿತು.

ಬಿಜೆಪಿಯ ಸಂವಿಧಾನದ ಪ್ರಕಾರ, ಪಕ್ಷದ ಅಧ್ಯಕ್ಷರು ತಲಾ ಮೂರು ವರ್ಷಗಳಂತೆ ಸತತ ಎರಡು ಅವಧಿಗೆ ಅಧ್ಯಕ್ಷರಾಗಿ ಇರಬಹುದಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

ಬಿಜೆಪಿ ನಾಯಕರ ಪ್ರಕಾರ, ನಡ್ಡಾ ಅವರು ಪ್ರಧಾನಿ ಮೋದಿಯವರ ವಿಶ್ವಾಸನೀಯ ವ್ಯಕ್ತಿಯಾಗಿದ್ದು, ಅವರ ಅಧಿಕಾರದ ನಂತರ ಪಕ್ಷವೂ ನಿರಂತರ ಉತ್ತಮ ಪ್ರದರ್ಶನ ನೀಡುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...