Homeಕರ್ನಾಟಕಬೆಂಗಳೂರು | ಶಿಕ್ಷಕನಿಂದ ಥಳಿತ, ಕಿರುಕುಳ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು | ಶಿಕ್ಷಕನಿಂದ ಥಳಿತ, ಕಿರುಕುಳ; ದಲಿತ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಬೆಂಗಳೂರಿನ ಶಾಲೆಯೊಂದರಲ್ಲಿ ಶಿಕ್ಷಕರಿಂದ ಕಿರುಕುಳಕ್ಕೊಳಗಾದ 17 ವರ್ಷದ ದಲಿತ ಬಾಲಕ ಸೆಪ್ಟೆಂಬರ್ 27 ರಂದು ಉಳ್ಳಾಲ ಉಪನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಬಾಲಕನನ್ನು ಶ್ರೇಯಸ್‌ ಎಂದು ಗುರುತಿಸಲಾಗಿದ್ದು 10ನೇ ತರಗತಿಯಲ್ಲಿ ಕಲಿಯುತ್ತಿದ್ದರು. ಬಾಲಕ ಮನೆಯಲ್ಲಿ ಪೋಷಕರು ಇರದ ಸಮಯದಲ್ಲಿ ಕೃತ್ಯ ಎಸಗಿದ್ದಾರೆ. ನೆರೆಹೊರೆಯವರು ಅವರ ಶವವನ್ನು ಪತ್ತೆ ಹಚ್ಚಿದ್ದರು. ಮರುದಿನವೇ ಪೋಷಕರಿಗೆ ವಿದ್ಯಾರ್ಥಿ ಬರೆದಿರುವ ಆತ್ಮಹತ್ಯೆ ಪತ್ರ ಪತ್ತೆಯಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಕ್ಷಕರು ಬಾಲಕನಿಗೆ ಥಳಿಸಿ, ಜಾತಿ ನಿಂದನೆ ಮಾಡಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿದ್ದಾರೆ ಎಂಬ ಕುಟುಂಬದ ಆರೋಪದ ಮೇಲೆ ಶಾಲೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರು ಪಶ್ಚಿಮದಲ್ಲಿರುವ ಜ್ಞಾನಭಾರತಿ ಪೊಲೀಸ್ ಠಾಣೆ ಎಫ್‌ಐಆರ್ ದಾಖಲಿಸಿದೆ.

ಇದನ್ನೂ ಓದಿ: ಮಾತು ಮರೆತ ಭಾರತ-21; ಹತ್ರಾಸ್ ಫೈಲ್: ಬಿಜೆಪಿ ಆಡಳಿತದ ’ಬೇಟಿ ಬಚಾವೋ’ಗೊಂದು ಉದಾಹರಣೆ

ಸೇಂಟ್ ಪ್ಯಾಟ್ರಿಕ್ ಮೆಮೋರಿಯಲ್ ಹೈಸ್ಕೂಲ್ ವಿರುದ್ಧ ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ-2015 ರ ಸೆಕ್ಷನ್ 75 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಿರುಕುಳದ ಬಗ್ಗೆ ಮಾತನಾಡಿದ ಶ್ರೇಯಸ್ ತಂದೆ ಮಾರ ಹನುಮಯ್ಯ,“ಒಂದು ದಿನ ಶಾಲೆಗೆ ಬರುವಂತೆ ಶಿಕ್ಷಕರು ನನ್ನನ್ನು ಕೇಳಿದರು. ನಾನು ಅಲ್ಲಿಗೆ ಹೋದಾಗ ನನ್ನ ಮಗ ಸರಿಯಾಗಿ ಓದುತ್ತಿಲ್ಲ ಎಂದು ಅವರು ದೂರಿದ್ದರು. ಇದರ ಎರಡು ದಿನಗಳ ನಂತರ, ಅವರು ನನ್ನ ಮಗನನ್ನು ಹೊಡೆದಿರುವುದನ್ನು ನಾನು ನೋಡಿದ್ದೇನೆ” ಎಂದು ಅವರು ಹೇಳಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

“ಮಗನ ಬಾಯಿ ಮತ್ತು ಮೂಗಿನಲ್ಲಿ ರಕ್ತ ಸುರಿಯುತ್ತಿತ್ತು. ನನ್ನ ಮಗ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ ಎಂದು ಶಾಲೆಯವರು ಹೇಳಿದ್ದರು. ಆದರೆ ದಿಲೀಪ್ ಎಂಬ ಗಣಿತ ಶಿಕ್ಷಕ ಅವನನ್ನು ನಿಂದಿಸಿದ್ದಾನೆ ಎಂದು ನನಗೆ ತಿಳಿಯಿತು. ನನ್ನ ಮಗ 10 ನೇ ತರಗತಿಯಲ್ಲಿದ್ದು, ಅವನು ಶಾಲೆ ತೊರೆಯಲು ಇದು ಕಾರಣ ಆಗಬಾರದು ಎಂದು ನಾನು ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

ದೌರ್ಜನ್ಯ ನಡೆದ ನಂತರ ಹನುಮಯ್ಯ ಶಾಲೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ವಿಷಯ ತಿಳಿಸಿದ್ದರು. ಇನ್ನು ಮುಂದೆ ಇಂತಹ ಘಟನೆ ನಡೆಯುವುದಿಲ್ಲ ಎಂದು ಶಾಲಾ ಮಂಡಳಿ ಭರವಸೆ ಕೂಡಾ ನೀಡಿತ್ತು. ಆದರೆ ಗಣಿತ ಶಿಕ್ಷಕ ಮಾತ್ರ ಶಾಲೆಗೆ ದೂರು ನೀಡಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ವಿದ್ಯಾರ್ಥಿಯನ್ನು ನಿಂದಿಸಿದ್ದನು ಎಂದು ಹನುಮಯ್ಯ ಆರೋಪಿಸಿದ್ದಾರೆ.

“ಶ್ರೇಯಸ್ ಈಗ ಸ್ವಲ್ಪ ಸಮಯದಿಂದ ಒತ್ತಡ ಮತ್ತು ಅಸಮಾಧಾನದಿಂದ ಕಾಣುತ್ತಿದ್ದನು. ಆದರೆ ಅವನು 10 ನೇ ತರಗತಿಯಲ್ಲಿದ್ದಾಗಿನಿಂದ ಅವನು ತನ್ನ ಅಧ್ಯಯನ ಮತ್ತು ಪರೀಕ್ಷೆಗಳ ಬಗ್ಗೆ ಚಿಂತೆ ಮಾಡುತ್ತಿದ್ದಾನೆ ಎಂದು ನಾವು ಭಾವಿಸಿದ್ದೆವು. ಅವನು ಶಾಲೆಯಲ್ಲಿ ಇಷ್ಟು ಕಷ್ಟ ಅನುಭವಿಸುತ್ತಿದ್ದಾರೆ ಎಂದು ನಮಗೆ ತಿಳಿದಿರಲಿಲ್ಲ” ಎಂದು ಹನುಮಯ್ಯ ನೆನಪಿಸಿಕೊಂಡಿದ್ದಾರೆ.

ಹನುಮಯ್ಯ ಅವರು ತಮ್ಮ ದೂರಿನಲ್ಲಿ ಆರಂಭಿಕ ದೌರ್ಜನ್ಯವನ್ನು ಸೆರೆಹಿಡಿದಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುವಂತೆ  ಪೊಲೀಸ್ ಅಧಿಕಾರಿಗಳಿಗೆ ಕೋರಿದ್ದಾರೆ. ಆದರೆ ದೃಶ್ಯಾವಳಿಗಳನ್ನು ಪರಿಶೀಲಿಸಲು ಪೊಲೀಸರು ನಿರಾಕರಿಸಿದ್ದು, ಅದು ಎರಡು ತಿಂಗಳ ಹಿಂದಿನದ್ದಾಗಿರುವುದರಿಂದ ಅದು ಡಿಲೀಟ್ ಆಗಿದೆ ಎಂದು ಹೇಳಿದ್ದಾಗಿ ಹನುಮಯ್ಯ ಆರೋಪಿಸಿದ್ದಾರೆ.

ಇದನ್ನೂ ಓದಿ: ಯಾದಗಿರಿ | ‘ತನ್ನ ಸಾವಿಗೆ ಶಿಕ್ಷಕರೇ ಕಾರಣ’; ಪತ್ರ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಲಿತ ವಿದ್ಯಾರ್ಥಿ

ತಮ್ಮ ಮಗನ ಮೇಲೆ ಶಿಕ್ಷಕ ಮೊದಲ ಬಾರಿಗೆ ದೌರ್ಜನ್ಯ ಎಸಗಿದಾಗಲೆ ತಾನು ತಮ್ಮನ್ನು ಸಂಪರ್ಕಿಸಬೇಕಿತ್ತು ಎಂದೂ ಪೊಲೀಸರು ಹೇಳಿದ್ದಾರೆ ಎಂದು ಹನುಮಯ್ಯ ಹೇಳಿದ್ದಾರೆ.

ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...