Homeಮುಖಪುಟಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

ಗೋವಾ ಗ್ಯಾಂಬ್ಲಿಂಗ್: ಬಿಜೆಪಿಯಲ್ಲಿ ಕಾಂಗ್ರೆಸ್ಸೋ, ಕಾಂಗೆಸ್ಸಲ್ಲಿ ಬಿಜೆಪಿಯೋ?

- Advertisement -
- Advertisement -

ಮಾಹಿತಿ: ಅನಿಲ್ ಅಲ್ಬುಕರ್ಕ್, ಮಡಗಾಂವ್

ಗೋವಾದಲ್ಲಿ 2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ 13 ಸ್ಥಾನ ಗಳಿಸಿದ್ದ ಬಿಜೆಪಿ ಆಪರೇಷನ್ ಕಮಲ ನಡೆಸಿ ಅಧಿಕಾರ ಕಬಳಿಸಿತ್ತು. ಆಗ ಸರ್ಕಾರ ಸ್ಥಾಪಿಸಲು ನೆರವಾಗಿದ್ದ ಗೋವಾ ಫಾರ್ವರ್ಡ್ ಪಾರ್ಟಿಯನ್ನು ಈಗ ದೂರ ತಳ್ಳಿರುವ ಬಿಜೆಪಿ ಹತ್ತು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಡೆಮಾಕ್ರಸಿಯನ್ನು ಗ್ಯಾಂಬ್ಲಿಂಗ್ ಮಟ್ಟಕ್ಕೆ ಇಳಿಸಿದೆ. ಈ ಎಲ್ಲದರ ತೆರೆಮರೆ ಸೂತ್ರದಾರ ಅಮಿತ್ ಶಾ!

ಈಗ ಗೋವಾದಲ್ಲಿ ಯಾವ ಪಕ್ಷದ ಆಡಳಿವಿದೆ? ನೌ ಡೌಟ್ ಬಿಜೆಪಿ. ಆದರೆ ಈಗ ಆ ಪಾರ್ಟಿಯಲ್ಲಿ ಬೇರೆ ಚಿಹ್ನೆಗಳಿಂದ ಗೆದ್ದು ಬಂದವರ ಸಂಖ್ಯೆಯೇ ಜಾಸ್ತಿ! ಗೋವಾ ಬಿಜೆಪಿ ಶಾಸಕರ ಸಂಖ್ಯೆ ಈಗ 27, ಅದರಲ್ಲಿ 15 ಜನ ಹೊರಗಿಂದ ಬಂದವರು! ನಾಲ್ಕು ದಿನಗಳ ಹಿಂದಷ್ಟೇ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಕ್ಯಾಬಿನೆಟ್ ಪುನರ್ ರಚನೆಯಾಗಿದ್ದು, ಮೊನ್ನೆ ಬಂದ 10ರಲ್ಲಿ ಮೂವರಿಗೆ ಕ್ಯಾಬಿನೆಟ್ ಸಚಿವ ಸ್ಥಾನ ನೀಡಲಾಗಿದೆ. ಜೊತೆಗೆ ಉಪಸಭಾಪತಿಯಾಗಿದ್ದ ಕಾಂಗ್ರೆಸ್ ಶಾಸಕನಿಗೂ ಸಚಿವಗಿರಿ ಲಭಿಸಿದೆ.

ಶನಿವಾರ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕಾಂಗ್ರೆಸ್‍ನಿಂದ ಬಂದವರಿಗೆ ಸ್ಥಾನ ಕಲ್ಪಿಸಲು ಮಿತ್ರ ಪಕ್ಷವಾದ ಗೋವಾ ಫಾರ್ವರ್ಡ್ ಪಾರ್ಟಿಯ ಮೂವರು ಹಾಗೂ ಒಬ್ಬ ಪಕ್ಷೇತರ ಸಚಿವರನ್ನು ಕೈಬಿಟ್ಟಿದ್ದಾರೆ. ಅತೃಪ್ತ ಕಾಂಗ್ರೆಸ್ ಬಣದ ನಾಯಕ ಮತ್ತು ಈವರೆಗೆ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಕಾಂತ್ ಕವಳೇಕರ್‍ಗೆ ಡಿಸಿಎಂ ಸ್ಥಾನವೂ ಪ್ರಾಪ್ತಿಯಾಗಿದೆ.

2017ರ ವಿಧಾನಸಭಾ ಚುನಾವಣಾ ಫಲಿತಾಂಶ ಬಂದಾಗ ಬಿಜೆಪಿಗೆ 13, ಕಾಂಗ್ರೆಸ್‍ಗೆ 17 ಸ್ಥಾನ ಸಿಕ್ಕಿದ್ದವು. ಕಾಂಗ್ರೆಸ್‍ನ ಸೋಮಾರಿತನ ಬಳಸಿಕೊಂಡ ಬಿಜೆಪಿ ಆಪರೇಷನ್ ಕಮಲ ನಡೆಸಿ ಸರ್ಕಾರ ಮಾಡಿತ್ತು. ಈಗ ಮತ್ತೆ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಈಗ ಅಲ್ಲಿ ಕಾಂಗ್ರೆಸ್ ಶಾಸಕರ ಸಂಖ್ಯೆ ಕೇವಲ ಐದು. ಇದರಲ್ಲಿ ನಾಲ್ವರು ಮಾಜಿ ಮುಖ್ಯಮಂತ್ರಿಗಳಿದ್ದಾರೆ! ಈ ಐದು ಶಾಸಕರ ತಂಡ ತಮ್ಮಲ್ಲಿ ಒಬ್ಬರನ್ನು ಈಗ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದೆ!

ಸದ್ಯ ಗೋವಾದಲ್ಲಿ ಬಿಜೆಪಿ ಸರ್ಕಾರವಿದೆಯಾದರೂ, ಅದನ್ನು ಭಾರತೀಯ ಕಾಂಗ್ರೆಸ್ ಪಾರ್ಟಿ ಸರ್ಕಾರ ಎನ್ನುವುದೇ ಸೂಕ್ತವೇನೋ? ಈಗ ಬಿಜೆಪಿಯ 27 ಶಾಸಕರಲ್ಲಿ 15 ಶಾಸಕರು ಬೇರೆ ಚಿಹ್ನೆಯಿಂದ ಗೆದ್ದು ಬಂದವರೇ! ಇನ್ನೂ ಆಳಕ್ಕೆ ಇಳಿದು ನೋಡಿದರೆ 27 ಶಾಸಕರಲ್ಲಿ ಮೂಲ ಬಿಜೆಪಿಗರು ಕೇವಲ ಆರು ಜನ ಮಾತ್ರ!
ಈಗ ಕಾಂಗ್ರೆಸ್‍ನಿಂದ ಹತ್ತು ಶಾಸಕರನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಕಾಂಗ್ರೆಸ್ ಶಾಸಕ ಮೊನ್ಸೆರಾಟ್.

ಈತನ ಪತ್ನಿಗೆ ಈಗ ಕ್ಯಾಬಿನೆಟ್ ಸಚಿವ ಸ್ಥಾನ ಸಿಕ್ಕಿದೆ. ಬಾಬುಶ್ ಮೊನ್ಸೆರಾಟ್ ಎಂತಲೇ ಫೇಮಸ್ ಇರುವ ಈತ ಡ್ರಗ್ಸ್ ಮಾಫಿಯಾದ ಕಿಂಗ್‍ಪಿನ್ ಎಂಬ ಆರೋಪವೂ ಇದೆ. ಅಪ್ರಾಪ್ತ ಬಾಲಕಿಯೊಬ್ಬಳನ್ನು ರೇಪ್ ಮಾಡಿದ ಆರೋಪವನ್ನೂ ಈತ ಎದುರಿಸುತ್ತಿದ್ದಾನೆ. ಎರಡು ತಿಂಗಳ ಹಿಂದಷ್ಟೇ ನಡೆದ ಉಪ ಚುನಾವಣೆಯಲ್ಲಿ ಈತ, ಗೋವಾ ಮಾಜಿ ಸಿಎಂ ಮನೋಹರ ಪರಿಕ್ಕರ್ ನಿಧನದಿಂದ ತೆರವಾದ ಪಣಜಿ ಕ್ಷೇತ್ರದಲ್ಲಿ ಕಾಂಗ್ರೆಸ್‍ನಿಂದ ಗೆದ್ದಿದ್ದಾನೆ. ಮುಖ್ಯಮಂತ್ರಿ ಸೇರಿ ಗೋವಾ ಬಿಜೆಪಿಯ ನಾಯಕರೆಲ್ಲ ಈತನ ವಿರುದ್ಧ ಪ್ರಚಾರ ಮಾಡಿ, ರೇಪಿಸ್ಟ್ ಅಭ್ಯರ್ಥಿಗೆ ಮತ ಹಾಕಬೇಡಿ ಎಂದಿದ್ದರು. ಆದರೆ ಕೇವಲ ಎರಡೇ ತಿಂಗಳಲ್ಲಿ ಈ ಬಾಬುಶ್ ಮೊನ್ಸೆರಾಟ್‍ನನ್ನು ಈಗ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅಪ್ಪಿಕೊಂಡಿದ್ದಾರೆ.

ಅಸ್ಥಿರ ಸರ್ಕಾರಕ್ಕೆ ಗೋವಾ ಸದಾ ಹೆಸರುವಾಸಿ. ಪರಿಕ್ಕರ್ ಇದ್ದಾಗ ಒಂದಿಷ್ಟು ಕಾಲ ಸ್ಥಿರ ಸರ್ಕಾರವಿತ್ತು. ಈಗ ಮತ್ತೆ ಸ್ಥಿರ ಸರ್ಕಾರ ಎಂದು ಬಿಜೆಪಿ ಹೇಳುತ್ತಿದೆ. ಆದರೆ 2017ರಲ್ಲಿ ಸರ್ಕಾರ ರಚನಗೆ ಸಹಾಯ ಮಾಡಿದ ಗೋವಾ ಫಾರ್ವರ್ಡ್ ಪಾರ್ಟಿಗೆ ವಂಚಿಸುವ ಮೂಲಕ ಅದು ಈಗ ಕಾಂಗ್ರೆಸ್ ಅನ್ನು ಅಪ್ಪಿಕೊಂಡಿದೆ.
ಈಗ ಅಲ್ಲಿ ಹೆಸರಿಗಷ್ಟೇ ಬಿಜೆಪಿ ಸರ್ಕಾರವೇನೋ? ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿಯ ಬೋರ್ಡು ತಗುಲಿ ಹಾಕಿದಂತೆ ಆಗಿದೆಯಷ್ಟೇ. ಹೀಗಾಗಿ ಇದನ್ನು ‘ಭಾರತೀಯ ಕಾಂಗ್ರೆಸ್ ಪಾರ್ಟಿ ಆಫ್ ಗೋವಾ’ದ ಸರ್ಕಾರ ಎನ್ನಬಹುದು. ಸದ್ಯಕ್ಕೆ ಅಲ್ಲಿ ಡೆಮಾಕ್ರಸಿ ಅಸಹಾಯಕ ಸ್ಥಿತಿಯಲ್ಲಿ ಕಣ್ ಕಣ್ ಬಿಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...