Homeಅಂತರಾಷ್ಟ್ರೀಯಥಾಯ್ಲೆಂಡ್: ಗುಂಡಿನ ದಾಳಿಯಲ್ಲಿ 34 ಜನರ ಹತ್ಯೆ, ತನಗೂ ಗುಂಡು ಹಾರಿಸಿಕೊಂಡ ಮಾಜಿ ಪೊಲೀಸ್

ಥಾಯ್ಲೆಂಡ್: ಗುಂಡಿನ ದಾಳಿಯಲ್ಲಿ 34 ಜನರ ಹತ್ಯೆ, ತನಗೂ ಗುಂಡು ಹಾರಿಸಿಕೊಂಡ ಮಾಜಿ ಪೊಲೀಸ್

- Advertisement -
- Advertisement -

ಥಾಯ್ಲೆಂಡ್ ನ ಈಶಾನ್ಯ ಪ್ರಾಂತ್ಯದಲ್ಲಿನ ಮಕ್ಕಳ ಆರೈಕೆ ಕೇಂದ್ರಕ್ಕೆ ನುಗ್ಗಿದ ಮಾಜಿ ಪೊಲೀಸ್ ಮನಬಂದಂತೆ ಗುಂಡು ಹಾರಿಸಿ 22 ಮಕ್ಕಳು ಸೇರಿದಂತೆ 34 ಜನರನ್ನು ಹತ್ಯೆಗೈದಿದ್ದಾನೆ. ಅಲ್ಲದೆ ತನ್ನ ಹೆಂಡಂತಿ ಮಕ್ಕಳನ್ನು ಕೊಂದು, ತನಗೂ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ವರ್ಷ ಪೊಲೀಸ್ ಕೆಲಸದಿಂದ ಹೊರಬಂದಿದ್ದ ವ್ಯಕ್ತಿಯು ಇಂದು ಮಧ್ಯಾಹ್ನ ಊಟದ ಸಮಯದಲ್ಲಿ ಬಂದೂಕು ಧರಿಸಿ ಮಕ್ಕಳ ಹಾರೈಕೆ ಕೇಂದ್ರಕ್ಕೆ ನುಗ್ಗಿದ್ದಾನೆ. ಮೊದಲು 8 ತಿಂಗಳ ಗರ್ಭಿಣಿ ಶಿಕ್ಷಕಿ ಸೇರಿ 5-6 ಸಿಬ್ಬಂದಿಗೆ ಗುಂಡು ಹಾರಿಸಿ ಕೊಂದಿದ್ದಾನೆ. ಆನಂತರ 2 ವರ್ಷದ ಮಕ್ಕಳ ಮೇಲೂ ಗುಂಡಿನ ಮಳೆಗೆರೆಯಲಾಗಿದೆ ಎನ್ನಲಾಗಿದೆ.

ಉತೈ ಸಾವನ್ ಈಶಾನ್ಯ ಪ್ರಾಂತ್ಯದ ನಾಂಗ್ ಬುವಾ ಲ್ಯಾಂಫುದಲ್ಲಿನ ಮಕ್ಕಳ ಹಾರೈಕೆ ಕೇಂದ್ರದಲ್ಲಿ ಈ ಅಮಾನುಷ ಘಟನೆ ನಡೆದಿದೆ. ಘಟನೆ ಕುರಿತು ಥಾಯ್ಲೆಂಡ್ ಪ್ರಧಾನಿ ಪ್ರಯುತ್ ಚಾನ್ ಒಚಾ ಕಳವಳ ವ್ಯಕ್ತಪಡಿಸಿದ್ದಾರೆ.

ಮೊದಲು ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನ ರಚಿಸಲಾಗಿತ್ತು. ಆದರೆ ಆರೋಪಿ ಪಾನ್ಯಾ ಕಾಮ್ರಾಬ್ ಎಂಬಾತ ತನಗೆ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ನಂತರ ತಿಳಿದುಬಂದಿದೆ.

ಮೆಕ್ಸಿಕೊದಲ್ಲಿ ಗುಂಡಿನ ದಾಳಿ: ಮೇಯರ್ ಸೇರಿ 18 ಸಾವು

ಮೆಕ್ಸಿಕೊದ ಗೆರೆರೊ ಪ್ರಾಂತ್ಯದಲ್ಲಿ ಅಪರಿಚಿತ ಮುಸುಕುಧಾರಿ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಅಲ್ಲಿನ ಮೇಯರ್, ಅವರ ತಂದೆ ಸೇರಿ 18ರನ್ನು ಹತ್ಯೆಗೈಯ್ಯಲಾಗಿದೆ.

ಸ್ಯಾನ್ ಮಿಗುಲ್ ಟೊಟೊಲ್ಯಾಪನ್ ನಗರದ ಮೇಯರ್ ಕೊನ್ರಾಡೊ ಮೆಂಡೊಜಾ ಮತ್ತು ಅವರ ತಂದೆ ಹಾಗೂ ಮಾಜಿ ಮೇಯರ್ ಅವರನ್ನು ಸಹ ಕೊಲೆಗೈಯಲಾಗಿದೆ. ಕೊಲೆ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ: ಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿಯ ಘಟನೆಗಳನ್ನು ಓದಿದ ಮೇಲೆ ಭಯ, ಆತಂಕವಾಗುತ್ತಿದೆ. ಸತ್ತವರಿಗಾಗಿ ಮನಸು ಮಿಡಿಯುತ್ತಿದೆ. ಯಾಕೆ ಈ ತರದ ಪೈಶಾಚಿಕ ಕೃತ್ಯಗಳು ನಡೆಯುತ್ತಿವೆ ಎಂಬುದು ಸಹ ತಿಳಿಯುತ್ತಿಲ್ಲ. ಇಂತಹ ಕೃತ್ಯವೆಸಗಲು ವ್ಯಕ್ತಿಯ ಮಾನಸಿಕ ಸ್ಥಿತಿ ಏನಾದರೂ ಕಾರಣವಿರಬಹುದೆ? ಯಾಕೆ, ಆತ ಈ ತರ ಹಸುಗೂಸುಗಳನ್ನು ಕೊಂದನು? ದೇವರಲ್ಲಿ ನಂಬಿಕೆ ಕುಸಿದರೆ ಪರವಾಗಿಲ್ಲ. ಸಂಬಂಧಗಳಲ್ಲಿ, ಮಾನವೀಯತೆಯಲ್ಲಿ ನಂಬಿಕೆಗಳು ಕುಸಿದಾಗ ಇಂತಹ ಕೃತ್ಯಗಳು ನಡೆಯುತ್ತವೇನೋ ಅನಿಸುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾರೊಬ್ಬರ ಬಗ್ಗೆಯೂ ಕಾಳಜಿ ತೆಗೆದುಕೊಳ್ಳಲಾಗದಷ್ಟು ಪ್ರಪಂಚದ ಶಿಕ್ಷಣ ವ್ಯವಸ್ಥೆ ನಿರ್ಮಾಣವಾಗಿಬಿಟ್ಟಿದೆ. ಹಾಗಾಗಿ ತಾವುಗಳು ಈ ಸುದ್ಧಿಯನ್ನು ಪ್ರಕಟಿಸಿದ ಮೇಲೆ ಆತನ ಮಾನಸಿಕ ಸ್ಥಿತಿ ಕೌಟಂಬಿಕ ಸ್ಥಿತಿ ಬಗ್ಗೆ ವರದಿ ನೀಡಿದರೆ, ನಮ್ಮ ಶಿಕ್ಷಣದ ಗುಣ ಮಟ್ಟದ ಬಗ್ಗೆ ಚಿಂತನೆ ನಡೆಸಿ ಆರೋಗ್ಯಯುಕ್ತ ಸಮಾಜದ ನಿರ್ಮಾಣಕ್ಕೆ ದಾರಿಯಾಗಬಹುದು.

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...