Homeಕರ್ನಾಟಕಸೋನಿಯಾ ಗಾಂಧಿ ಅರ್ಧ ಕಿಮೀ ನಡೆದು, ವಾಪಸ್ಸಾಗಿದ್ದಾರೆ: ಸಿಎಂ ಬೊಮ್ಮಾಯಿ

ಸೋನಿಯಾ ಗಾಂಧಿ ಅರ್ಧ ಕಿಮೀ ನಡೆದು, ವಾಪಸ್ಸಾಗಿದ್ದಾರೆ: ಸಿಎಂ ಬೊಮ್ಮಾಯಿ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗವಹಿಸಿರುವುದು ಯಾವುದೆ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.

ಭಾರತ ಐಕ್ಯತಾ ಯಾತ್ರೆಯು ಮಂಡ್ಯ ಜಿಲ್ಲೆಯ ನಾಗಮಂಗಲಲ್ಲಿ ಇದ್ದು, ಇದರಲ್ಲಿ ಭಾಗವಹಿಸಲು ಸೋನಿಯಾ ಗಾಂಧಿ ಆಗಮಿಸಿದ್ದರು. ತನ್ನ ಜೊತೆಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ ಅವರನ್ನು ಸ್ವಲ್ಪ ಹೊತ್ತಿನಲ್ಲೆ ತಡೆದ ರಾಹುಲ್ ಗಾಂಧಿ ಅವರನ್ನು ವಾಪಾಸು ಕಳುಹಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಅವರು ಅರ್ಧ ಕಿಮೀ ನಡೆದು, ವಾಪಸ್ಸಾಗಿದ್ದಾರೆ ಎಂದು ಹೇಳಿದ್ದು, ಇದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ‘ಭಾರತ ಐಕ್ಯತಾ ಯಾತ್ರೆ’ ನಡುವೆ ಡಿ.ಕೆ. ಶಿವಕುಮಾರ್‌‌ಗೆ ಇಡಿ ಸಮನ್ಸ್

“ಸಹಜವಾಗಿ ಎಲ್ಲಾ ಪಕ್ಷದ ಮುಖ್ಯಸ್ಥರು ತಮ್ಮ ಪಕ್ಷಕ್ಕೆ ಕೆಲಸ ಮಾಡುತ್ತಾರೆ. ಸೋನಿಯಾ ಗಾಂಧಿ ಅರ್ಧ ಕಿ.ಮೀ ನಡೆದು ವಾಪಸ್ಸಾಗಿದ್ದಾರೆ. ಇದ್ಯಾವುದೂ ಪರಿಣಾಮವನ್ನು ಬೀರುವುದಿಲ್ಲ. ಪ್ರಿಯಾಂಕಾ ಗಾಂಧಿ ಅಭಿಯಾನದಲ್ಲಿ ಪಾಲ್ಗೊಳ್ಳುವುದಕ್ಕೂ ನಮಗೂ ಸಂಬಂಧ ಇಲ್ಲ, ಇದರಿಂದ ಯಾವ ಪರಿಣಾಮವೂ ಆಗುವುದಿಲ್ಲ” ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ನಡೆಯುತ್ತಿರುವ ಕಾಂಗ್ರೆಸ್‌ನ ಯಾತ್ರೆಯನ್ನು ಎದುರಿಸಲು ಬಿಜೆಪಿ ಕೂಡಾ ರ್‍ಯಾಲಿಗಳನ್ನು ಯೋಜಿಸುತ್ತಿದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, “ನಮ್ಮ ರ್‍ಯಾಲಿಗಳನ್ನು ಬಹಳ ಮೊದಲೆ ಯೋಜಿಸಲಾಗಿತ್ತು” ಎಂದು ಹೇಳಿದ್ದಾರೆ.

“ನಾನು ಮೊದಲೇ ಹೇಳಿದಂತೆ ಆರು ರ್‍ಯಾಲಿಗಳು ಇರುತ್ತವೆ. ನಾವು ಅದನ್ನು ಮೊದಲೇ ಯೋಜಿಸಿದ್ದೆವು, ಆದರೆ ವಿಧಾನಸಭೆ ಅಧಿವೇಶನ ಇರುವುದರಿಂದ ಅದನ್ನು ದಸರಾ ನಂತರ ಮಾಡಲು ನಿರ್ಧರಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 5ನೇ ದಿನದ ಭಾರತ ಐಕ್ಯತಾ ಯಾತ್ರೆ ಆರಂಭ: ಜೊತೆಗೂಡಿದ ಸೋನಿಯಾ ಗಾಂಧಿ

“ನಾವು ಅನೇಕ ಚಂಡಮಾರುತಗಳನ್ನು ಎದುರಿಸಿದ್ದೇವೆ ಮತ್ತು ಎಲ್ಲಾ ಸವಾಲುಗಳನ್ನು ಜಯಿಸುತ್ತೇವೆ. ಒಟ್ಟಾಗಿ ನಾವು ಭಾರತವನ್ನು ಒಗ್ಗೂಡಿಸುತ್ತೇವೆ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್‌ ಮಾಡಿ, ತಮ್ಮ ತಾಯಿಯ ತೋಳು ಹಿಡಿದುಕೊಂಡು ನಡೆಯುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ.

ಯಾತ್ರೆಯ ನಡುವೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರ ಮತ್ತೊಂದು ಚಿತ್ರ ಕೂಡಾ ವೈರಲ್ ಆಗಿದೆ. ಅದರಲ್ಲಿ ರಾಹುಲ್ ಗಾಂಧಿ ತನ್ನ ತಾಯಿಯ ಶೂಲೇಸ್‌ಗಳನ್ನು ಕಟ್ಟುತ್ತಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್ ನಾಯಕರು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಭಾರತ ಐಕ್ಯತಾ ಯಾತ್ರೆ ವಿರುದ್ಧ ಆಕ್ಷೇಪಾರ್ಹ ಸುದ್ದಿ ರೂಪದ ಜಾಹೀರಾತು ನೀಡಿದ ಬಿಜೆಪಿ: ತೀವ್ರ ಖಂಡನೆ

ಈ ಚಿತ್ರವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವೀಟ್ ಮಾಡಿದ್ದು, “ಅವಳು ಉಸಿರಾಡಿದರೂ, ಆ ಉಸಿರಿನಲ್ಲೂ ಪ್ರಾರ್ಥನೆ ಇರುತ್ತದೆ. ತಾಯಂದಿರು ಒಡೆಯುವುದಿಲ್ಲ, ತಾಯಂದಿರು ತಾಯಂದಿರಾಗಿರುತ್ತಾರೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...