Homeಅಂಕಣಗಳುಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

- Advertisement -
- Advertisement -

ಮುಂದೆ ಎದುರಿಸಲಿರುವ ಚುನಾವಣೆಯ ವಿಷಯವಾಗಿ, ಜನರ ಬಳಿಗೆ ತೆಗೆದುಕೊಂಡು ಹೋಗಲು ಗುರುತರದಾದ ಯಾವುದೇ ಸಾಧನೆಯಿಲ್ಲದಿರುವುದನ್ನು ಮನಗಂಡ ಬಿಜೆಪಿಗಳು ರಾಷ್ಟ್ರದಾದ್ಯಂತ ಮುಸ್ಲಿಂ ಸಂಘಟನೆಯ ಮೇಲೆ ದಾಳಿ ಮಾಡಿ ಬೀಗ ಜಡಿದದ್ದೂ ಅಲ್ಲದೆ ಕೆಲವು ಸಂಘಟನೆಗಳ ಮೇಲೆ ನಿಷೇಧವನ್ನು ಹೇರಿಬಿಟ್ಟಿತಲ್ಲಾ. ನಿಷೇಧದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಹಾಗಾದರೆ ಆರೆಸ್ಸೆಸ್ಸನ್ನು ನಿಷೇಧಿಸಿ ಎಂದು ಕರೆಕೊಟ್ಟ ಕೂಡಲೇ ಬಿಜೆಪಿಯ ತಲೆಕೆಟ್ಟ ಲೀಡರುಗಳು ಸಿದ್ದು ಮೇಲೆ ಬಿದ್ದಿವೆಯಂತಲ್ಲಾ. ಈ ಆರೆಸ್ಸೆಸ್ಸಿಗರು ಮತ್ತು ಲೀಡರುಗಳು ಗಾಂಧಿ ಹತ್ಯೆಯ ನಂತರ ಹುಟ್ಟಿದವರು; ಇವರಿಗೆ ಇತಿಹಾಸ ಗೊತ್ತಿರಲಾರದು. ಗಾಂಧಿ ಕೊಲೆಯಲ್ಲಿ ಆರೆಸ್ಸೆಸ್ ಕೈವಾಡ ಇದೆಯೆಂದು ಆರೋಪಿಸಿ ಅಂದಿನ ಕೇಂದ್ರ ಗೃಹಮಂತ್ರಿ ಸರ್ದಾರ್ ವಲ್ಲಬಾಯಿ ಪಟೇಲರೇ ಆರೆಸ್ಸೆಸ್ಸನ್ನು ಬ್ಯಾನ್ ಮಾಡಿದ್ದರೆಂದು ಸಿದ್ದು ಇನ್ನೂ ತಮ್ಮ ವಿರೋಧಿಗಳ ಮುಸುಡಿಗೆ ಹೇಳಿಲ್ಲವಂತಲ್ಲಾ, ಥೂತ್ತೇರಿ.

*****

ಸಂಘ ಪರಿವಾರಿಗಳು ಗಾಂಧಿಯನ್ನು ಕೊಂದ ಗೋಡ್ಸೆ ಪ್ರತಿಮೆಯನ್ನು ಸ್ಥಾಪಿಸುತ್ತಿವೆ, ಇದಷ್ಟೇ ಅಲ್ಲ, ಮುಂದೆ ಮಾಡಬಹುದಾದ ಧ್ವಂಸದ ಕಾರ್ಯಗಳ ಪಟ್ಟಿಯನ್ನು ಮಾಡುತ್ತಿವೆ. ಬಾಬರಿ ಮಸೀದಿ ವಿಷಯದಲ್ಲಿ ತೀರ್ಪು ನೀಡಿದ ಸಮಯದಲ್ಲಿ ಸುಪ್ರೀಂಕೋರ್ಟು ’ಆಯ್ತು ಸಾಕು ಮಾಡಿ, ಮುಂದೆ ದೇಶದ ಶಾಂತಿ ಬಹಳ ಮುಖ್ಯ’ ಎಂದು ಹೇಳಿದ ಮಾತಿಗೆ ಕಿವುಡಾಗಿ ಕುಂತಿವೆಯೆಲ್ಲಾ. ಹೊಸದಾಗಿ ಹುಟ್ಟಿಕೊಂಡ ಗಾದೆ ಮಾತಿನಂತೆ ’ನಳ್ಳಿ ಹೆಚ್ಚಿದ ಕೆರೆ ಹಾಳು, ಆರೆಸ್ಸೆಸ್ ಹೆಚ್ಚಿದ ಊರ್ ಹಾಳು’ ಎಂಬ ಗಾದೆಯಂತೆ ಈಗ ಬ್ರಾಹ್ಮಣ ವಠಾರದಲ್ಲಿದ್ದ ಆರೆಸ್ಸೆಸ್ ಕವಾಯತು ಊರನ್ನೆಲ್ಲಾ ವ್ಯಾಪಿಸುತ್ತಿದೆ. ಅವುಗಳ ದೀರ್ಘಕಾಲದ ಅಜೆಂಡಾ ಪ್ರಕಾರ ಮುಸ್ಲಿಮರನ್ನ ಬಗ್ಗು ಬಡಿಯುವುದು, ನಂತರ ದಲಿತರ ಮೇಲೆ ಶೂದ್ರರ ಕೈಲಿ ದಾಳಿ ಮಾಡಿಸುವುದು, ಆ ನಂತರ ಸಿಖ್ಖರು, ಯಾದವರು ಹೀಗೆ ನಡೆಯಲಿಚ್ಛಿಸಿರುವ ದೊಡ್ಡ ದೊಂಬಿಯನ್ನೇ ಊಹಿಸಬಹುದು. ತಲೆಕೆಟ್ಟವರಿಗೆ ಮತ್ತು ಬರುವ ಔಷಧಿ ಕೊಡಿಸಿ ಜಗಲಿಯ ಮೇಲೆ ಕೂರಿಸುವ ತನಕ ಇವೆಲ್ಲಾ ನಿರಂತರವಾಗಿ ನಡೆಯುವ ಚೇಷ್ಟೆಗಳೆಂದು ಉಗ್ರ ಗಾಂಧಿವಾದಿಗಳು ಗೊಣಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಭಾರತ್ ಜೋಡೋ ಯಾತ್ರೆ ಕೇರಳದಿಂದ ಕರ್ನಾಟಕ ತಲುಪಾಯ್ತು. ಮಂಡ್ಯದ ಹತ್ತಿರ ಹೋಗುತ್ತಿದೆ. ಕಳೆದ ಎಂಟು ವರ್ಷಗಳಿಂದ ಬಾಲಿಶ ಹುಡುಗ, ಲಾಲಿಪಾಪು ಮತ್ತು ಅಪ್ರಬುದ್ಧ ಬಾಲ ಭಾಷೆಯ ಹುಡುಗ ಎಂದೆಲ್ಲಾ ಚೆಡ್ಡಿಗಳು ತಮ್ಮ ಜಾಲತಾಣದಲ್ಲಿ ಯಾರ ವಿರುದ್ಧ ಅಪಪ್ರಚಾರ ಮಾಡಿದ್ದವೊ ಅಂತಹ ರಾಹುಲಗಾಂಧಿ, ತಂದೆ ತಾಯಿ ಅಜ್ಜಿ ಮುತ್ತಾತರ ಮಾರ್ಗ ಹುಡುಕುತ್ತ ಹೊರಟವನಂತೆ ಬರುತ್ತಿದ್ದಾನಂತಲ್ಲಾ. ಅವನನ್ನು ನೋಡಲು ರಸ್ತೆ ಬದಿಯಲ್ಲಿ ನಿಂತ ಜನ ಮತ್ತು ಆತನ ಹಿಂದೆ ಕಿಲೋಮಿಟರುಗಟ್ಟಲೆ ಹರಿದು ಬರುತ್ತಿರುವ ಜನಸಾಗರ ನೋಡಿದ ಬಿಜೆಪಿಗಳು ಬೆಚ್ಚಿ ಏನು ಮಾಡಲೂ ತೋಚದೆ ಜಾಥಾದಲ್ಲಿ ಪೇಸಿಎಂ ಟಿಶರ್ಟ್ ಧರಿಸಿದ್ದ ಹುಡುಗರನ್ನ ಹಿಡಿದು ಶರ್ಟ್ ಬಿಚ್ಚಿಕೊಂಡು ಬರಲು ಹೇಳಿವೆಯಂತಲ್ಲಾ. ಒಂದು ಟೀಶರ್ಟ್ ಬಿಚ್ಚಿದರೇನು ಹತ್ತು ಟೀಶರ್ಟ್ ಕೊಡಿಸುತ್ತೇನೆ ಎಂದು ಡಿಕೆಶಿ ಹೇಳಿದ ಕೂಡಲೇ ಮಾಧ್ಯಮದೊಳಗಿರುವ ಶಾನುಭೋಗರ ಹುಡುಗರು ತಮ್ಮ ಕ್ಯಾಮರಾ ಚುರುಕುಗೊಳಿಸಿ ಹೆಜ್ಜೆ ಹಾಕುವಲ್ಲಿ ಹಿಂದೆ ಬಿದ್ದ ಡಿಕೆಶಿ, ಸಿದ್ದರಾಮಯ್ಯನಿಗೆ ಎಡಗೈ ತಾಕಿಸಿದ ಡಿಕೆಶಿ, ರಾಹುಲ್ ಕಾರಿನಲ್ಲಿ ಜಾಗವಿಲ್ಲದೆ ಹಿಂದಿನ ಕಾರಿನಲ್ಲಿ ಹೊರಟ ಡಿಕೆಶಿ ಎಂದು ಅರಚುತ್ತಲೇ ತಮ್ಮ ಚೇಷ್ಟೆಗಳನ್ನು ಮೆರೆಯುತ್ತಿವೆಯಂತಲ್ಲಾ. ನಗು ಕಳೆದುಕೊಂಡ ಜನಕ್ಕೆ ಇನ್ನು ಏನೇನು ಹಾಸ್ಯ ಪ್ರಸಂಗವನ್ನು ಈ ದಸರಾ ಸಮಯದಲ್ಲಿ ಮಾಧ್ಯಮಗಳು ತೋರುತ್ತವೊ ಎಂಬುದು ಮನರಂಜನೆಗೆ ಹಾತೊರೆಯುವ ಜನರ ಮನದಾಳದ ಮಾತಾಗಿದೆಯಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯ ಮತ್ತು ಸತ್ವದ ಹುಡುಕಾಟ ಗೌರಿ. ಕಾಂ ಧ್ಯೇಯೋದ್ದೇಶ.ಹೆಮ್ಮೆಯಾಗುತ್ತದೆ…ಪತ್ರಿಕಾ ಧರ್ಮವನ್ನೇ ಮರೆತ ಮೈಮನ ಮಾರಿಕೊಂಡ ಅದೆಷ್ಟೋ ಮಾಧ್ಯಮಗಳ ನಡುವೆ ಕೆಸರಲ್ಲಿ ಕಮಲ ಅರಳಿದಂತೆ ಅರಳಿ ಮಾಧ್ಯಮ ಅಂದರೆ ಇದಲ್ಲಾ ಇದು ಎಂದು ಅರಹುತ್ತಿರುವ ನಿಷ್ಕಲ್ಮಷ ನಿಷ್ಕಪಟ ಈ ಮಾಧ್ಯಮ ಕಂಡು.ಹೃದಯಾಂತರಾಳದ ಸಲಾಂ ಬಸವ ಶರಣು.
    ಗುಡಿಬಂಡೆ ಫಯಾಜ್ ಅಹಮದ್ ಖಾನ್
    ರಾಜ್ಯಾಧ್ಯಕ್ಷರು. ಕಸಾಪ
    ಕರುನಾಡು ಸಾಹಿತ್ಯ ಪರಿಷತ್ತು.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...