Homeಅಂಕಣಗಳುಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ನಡುಗಿದೆಯಂತಲ್ಲಾ

- Advertisement -
- Advertisement -

ಮುಂದೆ ಎದುರಿಸಲಿರುವ ಚುನಾವಣೆಯ ವಿಷಯವಾಗಿ, ಜನರ ಬಳಿಗೆ ತೆಗೆದುಕೊಂಡು ಹೋಗಲು ಗುರುತರದಾದ ಯಾವುದೇ ಸಾಧನೆಯಿಲ್ಲದಿರುವುದನ್ನು ಮನಗಂಡ ಬಿಜೆಪಿಗಳು ರಾಷ್ಟ್ರದಾದ್ಯಂತ ಮುಸ್ಲಿಂ ಸಂಘಟನೆಯ ಮೇಲೆ ದಾಳಿ ಮಾಡಿ ಬೀಗ ಜಡಿದದ್ದೂ ಅಲ್ಲದೆ ಕೆಲವು ಸಂಘಟನೆಗಳ ಮೇಲೆ ನಿಷೇಧವನ್ನು ಹೇರಿಬಿಟ್ಟಿತಲ್ಲಾ. ನಿಷೇಧದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಹಾಗಾದರೆ ಆರೆಸ್ಸೆಸ್ಸನ್ನು ನಿಷೇಧಿಸಿ ಎಂದು ಕರೆಕೊಟ್ಟ ಕೂಡಲೇ ಬಿಜೆಪಿಯ ತಲೆಕೆಟ್ಟ ಲೀಡರುಗಳು ಸಿದ್ದು ಮೇಲೆ ಬಿದ್ದಿವೆಯಂತಲ್ಲಾ. ಈ ಆರೆಸ್ಸೆಸ್ಸಿಗರು ಮತ್ತು ಲೀಡರುಗಳು ಗಾಂಧಿ ಹತ್ಯೆಯ ನಂತರ ಹುಟ್ಟಿದವರು; ಇವರಿಗೆ ಇತಿಹಾಸ ಗೊತ್ತಿರಲಾರದು. ಗಾಂಧಿ ಕೊಲೆಯಲ್ಲಿ ಆರೆಸ್ಸೆಸ್ ಕೈವಾಡ ಇದೆಯೆಂದು ಆರೋಪಿಸಿ ಅಂದಿನ ಕೇಂದ್ರ ಗೃಹಮಂತ್ರಿ ಸರ್ದಾರ್ ವಲ್ಲಬಾಯಿ ಪಟೇಲರೇ ಆರೆಸ್ಸೆಸ್ಸನ್ನು ಬ್ಯಾನ್ ಮಾಡಿದ್ದರೆಂದು ಸಿದ್ದು ಇನ್ನೂ ತಮ್ಮ ವಿರೋಧಿಗಳ ಮುಸುಡಿಗೆ ಹೇಳಿಲ್ಲವಂತಲ್ಲಾ, ಥೂತ್ತೇರಿ.

*****

ಸಂಘ ಪರಿವಾರಿಗಳು ಗಾಂಧಿಯನ್ನು ಕೊಂದ ಗೋಡ್ಸೆ ಪ್ರತಿಮೆಯನ್ನು ಸ್ಥಾಪಿಸುತ್ತಿವೆ, ಇದಷ್ಟೇ ಅಲ್ಲ, ಮುಂದೆ ಮಾಡಬಹುದಾದ ಧ್ವಂಸದ ಕಾರ್ಯಗಳ ಪಟ್ಟಿಯನ್ನು ಮಾಡುತ್ತಿವೆ. ಬಾಬರಿ ಮಸೀದಿ ವಿಷಯದಲ್ಲಿ ತೀರ್ಪು ನೀಡಿದ ಸಮಯದಲ್ಲಿ ಸುಪ್ರೀಂಕೋರ್ಟು ’ಆಯ್ತು ಸಾಕು ಮಾಡಿ, ಮುಂದೆ ದೇಶದ ಶಾಂತಿ ಬಹಳ ಮುಖ್ಯ’ ಎಂದು ಹೇಳಿದ ಮಾತಿಗೆ ಕಿವುಡಾಗಿ ಕುಂತಿವೆಯೆಲ್ಲಾ. ಹೊಸದಾಗಿ ಹುಟ್ಟಿಕೊಂಡ ಗಾದೆ ಮಾತಿನಂತೆ ’ನಳ್ಳಿ ಹೆಚ್ಚಿದ ಕೆರೆ ಹಾಳು, ಆರೆಸ್ಸೆಸ್ ಹೆಚ್ಚಿದ ಊರ್ ಹಾಳು’ ಎಂಬ ಗಾದೆಯಂತೆ ಈಗ ಬ್ರಾಹ್ಮಣ ವಠಾರದಲ್ಲಿದ್ದ ಆರೆಸ್ಸೆಸ್ ಕವಾಯತು ಊರನ್ನೆಲ್ಲಾ ವ್ಯಾಪಿಸುತ್ತಿದೆ. ಅವುಗಳ ದೀರ್ಘಕಾಲದ ಅಜೆಂಡಾ ಪ್ರಕಾರ ಮುಸ್ಲಿಮರನ್ನ ಬಗ್ಗು ಬಡಿಯುವುದು, ನಂತರ ದಲಿತರ ಮೇಲೆ ಶೂದ್ರರ ಕೈಲಿ ದಾಳಿ ಮಾಡಿಸುವುದು, ಆ ನಂತರ ಸಿಖ್ಖರು, ಯಾದವರು ಹೀಗೆ ನಡೆಯಲಿಚ್ಛಿಸಿರುವ ದೊಡ್ಡ ದೊಂಬಿಯನ್ನೇ ಊಹಿಸಬಹುದು. ತಲೆಕೆಟ್ಟವರಿಗೆ ಮತ್ತು ಬರುವ ಔಷಧಿ ಕೊಡಿಸಿ ಜಗಲಿಯ ಮೇಲೆ ಕೂರಿಸುವ ತನಕ ಇವೆಲ್ಲಾ ನಿರಂತರವಾಗಿ ನಡೆಯುವ ಚೇಷ್ಟೆಗಳೆಂದು ಉಗ್ರ ಗಾಂಧಿವಾದಿಗಳು ಗೊಣಗುತ್ತಿದ್ದಾರಲ್ಲಾ, ಥೂತ್ತೇರಿ.

*****

ಭಾರತ್ ಜೋಡೋ ಯಾತ್ರೆ ಕೇರಳದಿಂದ ಕರ್ನಾಟಕ ತಲುಪಾಯ್ತು. ಮಂಡ್ಯದ ಹತ್ತಿರ ಹೋಗುತ್ತಿದೆ. ಕಳೆದ ಎಂಟು ವರ್ಷಗಳಿಂದ ಬಾಲಿಶ ಹುಡುಗ, ಲಾಲಿಪಾಪು ಮತ್ತು ಅಪ್ರಬುದ್ಧ ಬಾಲ ಭಾಷೆಯ ಹುಡುಗ ಎಂದೆಲ್ಲಾ ಚೆಡ್ಡಿಗಳು ತಮ್ಮ ಜಾಲತಾಣದಲ್ಲಿ ಯಾರ ವಿರುದ್ಧ ಅಪಪ್ರಚಾರ ಮಾಡಿದ್ದವೊ ಅಂತಹ ರಾಹುಲಗಾಂಧಿ, ತಂದೆ ತಾಯಿ ಅಜ್ಜಿ ಮುತ್ತಾತರ ಮಾರ್ಗ ಹುಡುಕುತ್ತ ಹೊರಟವನಂತೆ ಬರುತ್ತಿದ್ದಾನಂತಲ್ಲಾ. ಅವನನ್ನು ನೋಡಲು ರಸ್ತೆ ಬದಿಯಲ್ಲಿ ನಿಂತ ಜನ ಮತ್ತು ಆತನ ಹಿಂದೆ ಕಿಲೋಮಿಟರುಗಟ್ಟಲೆ ಹರಿದು ಬರುತ್ತಿರುವ ಜನಸಾಗರ ನೋಡಿದ ಬಿಜೆಪಿಗಳು ಬೆಚ್ಚಿ ಏನು ಮಾಡಲೂ ತೋಚದೆ ಜಾಥಾದಲ್ಲಿ ಪೇಸಿಎಂ ಟಿಶರ್ಟ್ ಧರಿಸಿದ್ದ ಹುಡುಗರನ್ನ ಹಿಡಿದು ಶರ್ಟ್ ಬಿಚ್ಚಿಕೊಂಡು ಬರಲು ಹೇಳಿವೆಯಂತಲ್ಲಾ. ಒಂದು ಟೀಶರ್ಟ್ ಬಿಚ್ಚಿದರೇನು ಹತ್ತು ಟೀಶರ್ಟ್ ಕೊಡಿಸುತ್ತೇನೆ ಎಂದು ಡಿಕೆಶಿ ಹೇಳಿದ ಕೂಡಲೇ ಮಾಧ್ಯಮದೊಳಗಿರುವ ಶಾನುಭೋಗರ ಹುಡುಗರು ತಮ್ಮ ಕ್ಯಾಮರಾ ಚುರುಕುಗೊಳಿಸಿ ಹೆಜ್ಜೆ ಹಾಕುವಲ್ಲಿ ಹಿಂದೆ ಬಿದ್ದ ಡಿಕೆಶಿ, ಸಿದ್ದರಾಮಯ್ಯನಿಗೆ ಎಡಗೈ ತಾಕಿಸಿದ ಡಿಕೆಶಿ, ರಾಹುಲ್ ಕಾರಿನಲ್ಲಿ ಜಾಗವಿಲ್ಲದೆ ಹಿಂದಿನ ಕಾರಿನಲ್ಲಿ ಹೊರಟ ಡಿಕೆಶಿ ಎಂದು ಅರಚುತ್ತಲೇ ತಮ್ಮ ಚೇಷ್ಟೆಗಳನ್ನು ಮೆರೆಯುತ್ತಿವೆಯಂತಲ್ಲಾ. ನಗು ಕಳೆದುಕೊಂಡ ಜನಕ್ಕೆ ಇನ್ನು ಏನೇನು ಹಾಸ್ಯ ಪ್ರಸಂಗವನ್ನು ಈ ದಸರಾ ಸಮಯದಲ್ಲಿ ಮಾಧ್ಯಮಗಳು ತೋರುತ್ತವೊ ಎಂಬುದು ಮನರಂಜನೆಗೆ ಹಾತೊರೆಯುವ ಜನರ ಮನದಾಳದ ಮಾತಾಗಿದೆಯಂತಲ್ಲಾ, ಥೂತ್ತೇರಿ.


ಇದನ್ನೂ ಓದಿ: ಪೇಸಿಎಮ್ಮಲ್ಲೂ ಜಾತಿ ಬಂತಲ್ಲಾ, ನೋಡಿದಿರಾ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸತ್ಯ ಮತ್ತು ಸತ್ವದ ಹುಡುಕಾಟ ಗೌರಿ. ಕಾಂ ಧ್ಯೇಯೋದ್ದೇಶ.ಹೆಮ್ಮೆಯಾಗುತ್ತದೆ…ಪತ್ರಿಕಾ ಧರ್ಮವನ್ನೇ ಮರೆತ ಮೈಮನ ಮಾರಿಕೊಂಡ ಅದೆಷ್ಟೋ ಮಾಧ್ಯಮಗಳ ನಡುವೆ ಕೆಸರಲ್ಲಿ ಕಮಲ ಅರಳಿದಂತೆ ಅರಳಿ ಮಾಧ್ಯಮ ಅಂದರೆ ಇದಲ್ಲಾ ಇದು ಎಂದು ಅರಹುತ್ತಿರುವ ನಿಷ್ಕಲ್ಮಷ ನಿಷ್ಕಪಟ ಈ ಮಾಧ್ಯಮ ಕಂಡು.ಹೃದಯಾಂತರಾಳದ ಸಲಾಂ ಬಸವ ಶರಣು.
    ಗುಡಿಬಂಡೆ ಫಯಾಜ್ ಅಹಮದ್ ಖಾನ್
    ರಾಜ್ಯಾಧ್ಯಕ್ಷರು. ಕಸಾಪ
    ಕರುನಾಡು ಸಾಹಿತ್ಯ ಪರಿಷತ್ತು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...