Homeಮುಖಪುಟ‘ರಾಜಕೀಯಕ್ಕಾಗಿ ಆಧ್ಯಾತ್ಮಿಕತೆ ಹೆಸರಲ್ಲಿ ದ್ವೇಷ ಹರಡುವವರ ವಿರುದ್ಧ ನಮ್ಮ ಸರ್ಕಾರವಿದೆ’: ಸಿ.ಎಂ. ಸ್ಟಾಲಿನ್‌

‘ರಾಜಕೀಯಕ್ಕಾಗಿ ಆಧ್ಯಾತ್ಮಿಕತೆ ಹೆಸರಲ್ಲಿ ದ್ವೇಷ ಹರಡುವವರ ವಿರುದ್ಧ ನಮ್ಮ ಸರ್ಕಾರವಿದೆ’: ಸಿ.ಎಂ. ಸ್ಟಾಲಿನ್‌

- Advertisement -
- Advertisement -

ದ್ರಾವಿಡ ಮುನ್ನೇಟ್ರ ಕಳಗಂ (ಡಿಎಂಕೆ) ಸರ್ಕಾರವು ಅಧ್ಯಾತ್ಮದ ವಿರೋಧಿಯಲ್ಲ, ಆದರೆ ರಾಜಕೀಯಕ್ಕಾಗಿ ಆಧ್ಯಾತ್ಮಿಕತೆಯ ಲಾಭವನ್ನು ಪಡೆದು ದ್ವೇಷ ಪ್ರಚಾರ ಮಾಡುವವರ ವಿರೋಧಿ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಅವರು ಬುಧವಾರ ಚೆನ್ನೈ ಬಳಿಯ ಮೈಲಾಪುರದಲ್ಲಿರುವ ಕಪಾಲೀಶ್ವರ ದೇವಸ್ಥಾನದಲ್ಲಿ ಮಾತನಾಡುತ್ತಿದ್ದರು.

ತಮಿಳು ಸಂತ ವಲ್ಲಲಾರ್ ಅವರ ಜನ್ಮದಿನವನ್ನು ಆಚರಿಸಲು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ (ಎಚ್‌ಆರ್ ಮತ್ತು ಸಿಇ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಧಾರ್ಮಿಕ ರಾಜಕಾರಣವನ್ನು ತನ್ನ ಉಳಿವಿನ ಮಾರ್ಗವಾಗಿ ಬಳಸಿಕೊಂಡ ರಾಜಕೀಯ ಪಕ್ಷಗಳು ಡಿಎಂಕೆ ಸರ್ಕಾರವು ಆಧ್ಯಾತ್ಮಿಕತೆಗೆ ವಿರುದ್ಧವಾಗಿದೆ ಎಂದು ಬಿಂಬಿಸಲು ಪ್ರಚಾರ ನಡೆಸುತ್ತಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾನು ಮತ್ತು ಡಿಎಂಕೆ ಸರ್ಕಾರವು ಆಧ್ಯಾತ್ಮಿಕತೆಗೆ ವಿರುದ್ಧವಾಗಿದೆ ಎಂಬ ಭಾವನೆ ಮೂಡಿಸಲು ನನ್ನ ಭಾಷಣದ ಭಾಗಗಳನ್ನು ಎಡಿಟ್‌ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ, ಆದರೆ ಅದು ನಿಜವಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಉದ್ಯಮಿಗಳ ಸಾಲ ಮನ್ನಾ ಮಾಡುವುದನ್ನು ಕೂಡಾ ಉಚಿತ ಕೊಡುಗೆ ಎಂದು ಪರಿಗಣಿಸಿ: ಸುಪ್ರೀಂಗೆ ತಮಿಳುನಾಡು ಸಿಎಂ ಸ್ಟಾಲಿನ್ ಅರ್ಜಿ

“ಡಿಎಂಕೆ ಆಧ್ಯಾತ್ಮದ ವಿರುದ್ಧವಲ್ಲ, ಆದರೆ ಅದನ್ನು ತಮ್ಮ ಸ್ವಾರ್ಥ ಕಾರ್ಯಸೂಚಿಯನ್ನು ಪೂರೈಸಲು ಮತ್ತು ಸಾಮಾಜಿಕ ತಾರತಮ್ಯವನ್ನು ಹರಡುವವರ ವಿರುದ್ಧ ಎಂದು ನಾನು ಸ್ಪಷ್ಟವಾಗಿ ಹೇಳುತ್ತೇನೆ. ತಮಿಳುನಾಡಿನ ಧಾರ್ಮಿಕ ಸಂಸ್ಕೃತಿಯನ್ನು ಬಲ್ಲವರು ಅದನ್ನು ಅರ್ಥಮಾಡಿಕೊಳ್ಳುತ್ತಾರೆ” ಎಂದು ಅವರು ಹೇಳಿದ್ದಾರೆ.

“ದೇವರು ಒಬ್ಬನೇ ಮತ್ತು ಅವನು ಬೆಳಕಿನ ರೂಪದಲ್ಲಿರುತ್ತಾನೆ’’ ಎಂಬ ವಲ್ಲಲಾರ್‌ ಅವರ ವಾಕ್ಯವನ್ನು ನೆನಪಿಸಿಕೊಂಡ ಮುಖ್ಯಮಂತ್ರಿ, “ಮಾಜಿ ಮುಖ್ಯಮಂತ್ರಿ ಸಿ.ಎನ್. ಅಣ್ಣಾದೊರೈ ಅವರು ಕವಿಯಿಂದ ‘ಒಬ್ಬ ದೇವರು, ಒಂದು ಜನಾಂಗ’ ಎಂಬ ಕಲ್ಪನೆಯನ್ನು ಅಳವಡಿಸಿಕೊಂಡರು” ಎಂದು ಹೇಳಿದ್ದಾರೆ. ವ್ಯಕ್ತಿಯೊಬ್ಬನ ಜನ್ಮದ ಆಧಾರದಲ್ಲಿ ಸಾಮಾಜಿಕ ಸ್ಥಾನಮಾನವನ್ನು ನಿರಾಕರಿಸುವ ತಿರುಕ್ಕುರಲ್ ಅನ್ನು ಸಹ ಅವರು ಉಲ್ಲೇಖಿಸಿದ್ದಾರೆ.

ಜಾತಿ ಮತ್ತು ಧರ್ಮದ ಆಧಾರದ ಮೇಲಿನ ತಾರತಮ್ಯದ ವಿರುದ್ಧ ಆಂದೋಲನ ನಡೆಸಿದ್ದ ವಲ್ಲಲಾರ್‌‌ ಅವರನ್ನು ‘ಆಚರಿಸುವುದು’ ಡಿಎಂಕೆ ಸರ್ಕಾರದ ಕರ್ತವ್ಯ ಎಂದು ಸಿಎಂ ಸ್ಟಾಲಿನ್ ಹೇಳಿದ್ದಾರೆ.

ಇದನ್ನೂ ಓದಿ: ನಾನೇನು ಮಾಡಬೇಕು ಎಂಬ ಅಧಿಕಾರ ಜನ ನೀಡಿದ್ದಾರೆ, ಮೋದಿ ಮಾತು ಯಾಕೆ ಕೇಳಬೇಕು: ತಮಿಳುನಾಡು ಹಣಕಾಸು ಸಚಿವ

“ಸರ್ಕಾರವು ಸಮಿತಿಯನ್ನು ರಚಿಸಿದ್ದು, ವಡಲೂರಿನಲ್ಲಿ ಅಂತರರಾಷ್ಟ್ರೀಯ ಕೇಂದ್ರವನ್ನು ಸ್ಥಾಪಿಸಲು 100 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ವಲ್ಲಲಾರ್‌‌ ತಮ್ಮ ಕಾಲದಲ್ಲಿ ಸಮುದಾಯ ಅಡುಗೆಮನೆ ಸ್ಥಾಪಿಸಿದ್ದರು. ಈ ಕೇಂದ್ರದಲ್ಲಿ ಅನ್ನದಾನ ನೀಡಲು 3.25 ಕೋಟಿ ರೂಪಾಯಿಗಳನ್ನು ನಿಗದಿಪಡಿಸಲಾಗಿದೆ” ಎಂದು ಸಿಎಂ ಸ್ಟಾಲಿನ್ ಘೋಷಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...