Homeಮುಖಪುಟಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

ಅಂತರ್ಜಾತಿ ವಿವಾಹವಾಗಿದ್ದ ಶಾಸಕನ ಪುತ್ರಿಯ ಗಂಡನ ಮೇಲೆ ಕೋರ್ಟ್ ಹಾಲ್ ನಲ್ಲಿ ಹಲ್ಲೆ

- Advertisement -
- Advertisement -

ದಲಿತ ಯುವಕನನ್ನು ತಾನು ವಿವಾಹವಾಗಿದ್ದೇನೆಂಬ ಕಾರಣಕ್ಕೆ ತಮ್ಮ ತಂದೆ ತಮ್ಮ ಹಿಂದೆ ಗೂಂಡಾಗಳನ್ನು ಛೂ ಬಿಟ್ಟಿದ್ದಾರೆಂದು ಆರೋಪಿಸಿ ಪೊಲೀಸ್ ರಕ್ಷಣೆ ಕೋರಿ ಬರೇಲಿಯ ಬಿಜೆಪಿ ಶಾಸಕ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ ಈ ಹಿಂದೆ ವಿಡಿಯೋವೊಂದನ್ನು ಹರಿಯಬಿಟ್ಟಿದ್ದು ನಿಮಗೆಲ್ಲಾ ಗೊತ್ತಿದೆ. ಆ ಆರೋಪವನ್ನು ನಿಜಮಾಡುವಂತೆ ಇಂದು ವಿಚಾರಣಗೆ ಕೋರ್ಟಿಗೆ ಹಾಜರಾದ ವೇಳೆ ಸಾಕ್ಷಿ ಮಿಶ್ರಾರವರ ಪತಿ ಅಜಿತೇಶ್ ಕುಮಾರ್ ಮೇಲೆ ಕೋರ್ಟ್ ಆವರಣದಲ್ಲಿಯೇ ಅಪರಿಚಿತ ವ್ಯಕ್ತಿಯಿಂದ ಹಲ್ಲೆ ಮಾಡಲಾಗಿದೆ.

ಈ ವಿಚಾರವಾಗಿ ಆ ದಂಪತಿಗಳನ್ನು ಭದ್ರತೆಯ ಕಾರಣಕ್ಕಾಗಿ ರಹಸ್ಯ ಸ್ಥಳದಲ್ಲಿ ಇರಿಸಲಾಗಿತ್ತು. ಇಂದು ನೋಯ್ಡಾದಿಂದ ವಿಚಾರಣೆಗಾಗಿ ಪ್ರಯಾಗ್ ರಾಜ್ ಕೋರ್ಟಿಗೆ ಹಾಜರಾದಾಗ ಪೊಲೀಸರ ರಕ್ಷಣೆಯನ್ನು ಸಹ ಮೀರಿ ಒಬ್ಬ ವ್ಯಕ್ತಿ ಅಜಿತೇಶ್ ಕುಮಾರ್ ಕಪಾಳಕ್ಕೆ ಹೊಡೆದಿರುವುದಾಗಿ ಎನ್.ಡಿ.ಟಿ.ವಿ ವರದಿ ಮಾಡಿದೆ. ಹಲ್ಲೆ ಮಾಡಿದ ವ್ಯಕ್ತಿ ಯಾರೆಂದು ತಿಳಿದುಬಂದಿಲ್ಲ, ಆದರೆ ಈ ದಂಪತಿಗಳ ಜೀವಕ್ಕೆ ಅಪಾಯವಿದೆ ಅನ್ನುವುದು ಮಾತ್ರ ಇದರಿಂದ ಖಾತ್ರಿಯಾಗಿದೆ ಎಂದು ದಂಪತಿಗಳ ಪರ ವಕೀಲರು ಕೋರ್ಟಿನಲ್ಲಿ ನುಡಿದಿದ್ದಾರೆ.

ಹಲ್ಲೆಯ ನಂತರದ ವಿಚಾರಣೆಯಲ್ಲಿ, ದಂಪತಿಗಳ ವಿವಾಹದ ಸಿಂಧುತ್ವವನ್ನು ಹೈಕೋರ್ಟ್ ಎತ್ತಿಹಿಡಿದಿದ್ದು ನ್ಯಾಯಾಲಯವು ವಧುವಿನ ತಂದೆ ಶಾಸಕರಾದ ರಾಜೇಶ್ ಮಿಶ್ರಾ ಅವರ ಮೇಲೆ ಕೋಪ ವ್ಯಕ್ತಪಡಿಸಿದೆ. ಜೊತೆಗೆ ದಂಪತಿಗಳಿಗೆ ಅಗತ್ಯವಾದ ರಕ್ಷಣೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿತು.

ಉತ್ತರ ಪ್ರದೇಶದ ಬರೇಲಿಯ ಶಾಸಕರಾದ ರಾಜೇಶ್ ಮಿಶ್ರಾ ಅವರ ಪುತ್ರಿ ಸಾಕ್ಷಿ ಮಿಶ್ರಾ (23) ಜುಲೈ 4 ರಂದು ಪ್ರಯಾಗರಾಜ್‌ನ ದೇವಸ್ಥಾನವೊಂದರಲ್ಲಿ 29 ವರ್ಷದ ಅಜಿತೇಶ್ ಕುಮಾರ್ ಅವರನ್ನು ವಿವಾಹವಾಗಿದ್ದರು. ನಂತರ ಅವರು ಜಾತಿಯ ಹೊರಗೆ ಮದುವೆಯಾಗಿದ್ದಕ್ಕಾಗಿ ತನಗೆ ಮತ್ತು ತನ್ನ ಗಂಡನಿಗೆ ಜೀವ ಭಯವಿದ್ದು, ನ್ಯಾಯಾಲಯದಿಂದ ರಕ್ಷಣೆ ಕೋರಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು.

ಆ ವಿಡಿಯೋದಲ್ಲಿ ತಮ್ಮ ತಂದೆ ಹಾಗೂ ಸೋದರನ ಅಡ್ಡ ಹೆಸರುಗಳಾದ ಪಪ್ಪು ಭರ್ತೌಲ್ ಹಾಗೂ ವಿಕ್ಕಿ ಭರ್ತೌಲ್ ಇವುಗಳನ್ನು ಸಾಕ್ಷಿ ಉಲ್ಲೇಖಿಸಿದ್ದಾರೆ. ‘ಮಾನ್ಯ ಶಾಸಕ ಪಪ್ಪು ಭರ್ತೌಲ್ ಜಿ ಹಾಗೂ ವಿಕ್ಕಿ ಭರ್ತೌಲ್ ಜಿ, ದಯವಿಟ್ಟು ನೀವೂ ಬದುಕಿ ನಮ್ಮನ್ನು ಶಾಂತಿಯಿಂದ ಬದುಕಲು ಬಿಡಿ. ನನಗೆ ನಿಜವಾಗಿಯೂ ಮದುವೆಯಾಗಿದೆ, ನಾನು ಫ್ಯಾಶನ್‍ಗಾಗಿ ಸಿಂಧೂರ ಧರಿಸಿಲ್ಲ’ ಎಂದು ಹೇಳಿದ್ದರು.

‘ಪಾಪಾ, ನೀವು ರಾಜೀವ್ ರಾಣಾ ಅವರಂತೆಯೇ ನಮ್ಮ ಹಿಂದೆ ಗೂಂಡಾಗಳನ್ನು ಕಳುಹಿಸಿದ್ದೀರಿ. ನನಗೆ ಸಾಕಾಗಿ ಹೋಗಿದೆ…. ಅಡಗಿ ಕುಳಿತು ಸಾಕಾಗಿ ಹೋಗಿದೆ, ನಮ್ಮ ಜೀವ ಅಪಾಯದಲ್ಲಿದೆ ಅಭಿ ಮತ್ತಾತನ ಸಂಬಂಧಿಗಳಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ ನನಗೆ ಸಂತೋಷದಿಂದ ಸ್ವತಂತ್ರವಾಗಿರಬೇಕಿದೆ. ಭವಿಷ್ಯದಲ್ಲಿ ನನಗೆ, ಅಭಿ ಅಥವಾ ಆತನ ಕುಟುಂಬಕ್ಕೇನಾದರೂ ಅಪಾಯವಾದರೆ ಅದಕ್ಕೆ ವಿಕ್ಕಿ ಭರ್ತೌಲ್ ಹಾಗೂ ರಾಜೀವ್ ರಾಣಾ ಜವಾಬ್ದಾರರಾಗುತ್ತಾರೆ. ನನ್ನ ತಂದೆಗೆ ಸಹಾಯ ಮಾಡುತ್ತಿರುವವರು ಅವರಿಗೆ ಸಹಾಯ ಮಾಡುವುದನ್ನು ನಿಲ್ಲಿಸಿ, ನಮ್ಮ ಜೀವಗಳು ಅಪಾಯದಲ್ಲಿವೆ,” ಎಂದು ವೀಡಿಯೋದಲ್ಲಿ ಸಾಕ್ಷಿ ಮನವಿ ಮಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...