Homeಕರ್ನಾಟಕಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

ಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

- Advertisement -
- Advertisement -

ಕರ್ನಾಟಕದ ಬೀದರ್‌ನಲ್ಲಿ ದಸರಾ ಮೆರವಣಿಗೆಯ ಭಾಗವಾಗಿದ್ದ ಕಿಡಿಗೇಡಿಗಳ ಗುಂಪೊಂದು ಬುಧವಾರ ರಾತ್ರಿ ಪಾರಂಪರಿಕ ಮದರಸಾವೊಂದಕ್ಕೆ ನುಗ್ಗಿ ‘ಜೈಶ್ರೀರಾಮ್‌’ ಘೋಷಣೆಗಳನ್ನು ಕೂಗಿದೆ. ಕೋಮುಗಲಭೆಯನ್ನು ಹುಟ್ಟಿಹಾಕುವ ಉದ್ದೇಶದಿಂದ ಮದರಸಾದ ಮೂಲೆಯಲ್ಲಿ ಪೂಜೆಯನ್ನೂ ಮಾಡಿದೆ ಎಂದು ವರದಿಯಾಗಿದೆ.

ಒಂಬತ್ತು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಸಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಶುಕ್ರವಾರದೊಳಗೆ ಎಲ್ಲಾ ಕಿಡಿಗೇಡಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಮುಸ್ಲಿಂ ಸಂಘಟನೆಗಳು ಪ್ರತಿಕ್ರಿಯೆ ನೀಡಿವೆ.

1460ರ ಕಾಲಘಟ್ಟದಲ್ಲಿ ಬೀದರ್‌ನಲ್ಲಿ ಕಟ್ಟಲಾದ ಮಹ್ಮದ್ ಗವಾನ್ ಮದರಸಾವು ಭಾರತೀಯ ಪುರಾತತ್ವ ಸಮೀಕ್ಷೆಯ ಅಡಿಯಲ್ಲಿ ಗೊತ್ತುಪಡಿಸಿದ ಪಾರಂಪರಿಕ ತಾಣವಾಗಿದೆ. ಈ ಕಟ್ಟಡವನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕಗಳ ಪಟ್ಟಿಯಲ್ಲಿ ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಿಡಿಗೇಡಿಗಳ ಗುಂಪು ಮದರಸಾದ ಬೀಗ ಒಡೆದು ಒಳಗೆ ನುಗ್ಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೂಜೆ ಮಾಡಲು ಒಂದು ಮೂಲೆಗೆ ತೆರಳುವ ಮೊದಲು ಮದರಸಾದ ಮೆಟ್ಟಿಲುಗಳ ಮೇಲೆ ನಿಂತು ‘ಜೈ ಶ್ರೀ ರಾಮ್’ ಮತ್ತು ‘ಹಿಂದೂ ಧರ್ಮ ಜೈ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆಗಿದ್ದು, ಕಟ್ಟಡದ ಒಳಗೆ ಹೋಗಲು ಪ್ರಯತ್ನಿಸುತ್ತಿರುವ ಕಿಡಿಗೇಡಿಗಳ ಗುಂಪನ್ನು ವಿಡಿಯೊದಲ್ಲಿ ನೋಡಬಹುದು.

ಬೀದರ್‌ನ ಹಲವಾರು ಮುಸ್ಲಿಂ ಸಂಘಟನೆಗಳು ಘಟನೆಯನ್ನು ಖಂಡಿಸಿ ಪ್ರತಿಭಟನೆಗಳನ್ನು ನಡೆಸಿವೆ. ಎಲ್ಲಾ ಆರೋಪಿಗಳನ್ನು ಬಂಧಿಸದಿದ್ದರೆ ಶುಕ್ರವಾರದ ಪ್ರಾರ್ಥನೆಯ ನಂತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿವೆ.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದು ರಾಜ್ಯದ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಮುಸ್ಲಿಮರನ್ನು ಕೀಳಾಗಿಸುವುದಕ್ಕಾಗಿ ಇಂತಹ ಘಟನೆಗಳು ನಡೆಯುತ್ತಿವೆ” ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರವು ಕೋಮುವಾದಿ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಕೋಮುದ್ವೇಷಿಗಳ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ಜರುಗಿಸದೆ ಇರುವುದು ಟೀಕೆಗೆ ಒಳಗಾಗಿದೆ.

ಆಗಸ್ಟ್‌ನಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗಿತ್ತು. ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಕೆಲವರು ಮುಂದಾಗಿದ್ದರು. ಹೈಕೋರ್ಟ್ ಅನುಮತಿಯೂ ಸಿಕ್ಕಿತ್ತು. ಆದರೆ ಸುಪ್ರೀಂ ಕೋರ್ಟ್ ಇದಕ್ಕೆ ತಡೆ ನೀಡಿತ್ತು.

ಬೊಮ್ಮಾಯಿಯವರ ಆಡಳಿತವನ್ನು ನೋಡುತ್ತಿದ್ದರೆ, ಕರ್ನಾಟಕ ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿರುವುದು ಸ್ಪಷ್ಟವಾಗುತ್ತಿದೆ. ಮುಖ್ಯಮಂತ್ರಿಯವರೇ ‘ಉತ್ತರ ಪ್ರದೇಶ’ದ ಮಾದರಿ ಬಗ್ಗೆ ಮಾತನಾಡುತ್ತಿದ್ದಾರೆ.

ಕರಾವಳಿ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮತೀಯ ಗೂಂಡಾಗಿರಿ (ಮಾರಲ್ ಪೊಲೀಸಿಂಗ್) ಹೆಚ್ಚಾಗುತ್ತಿದ್ದಾಗ ರಾಜ್ಯದ ಸಿಎಂ ಅವುಗಳಿಗೆ ಕಡಿವಾಣ ಹಾಕಲು‌ ಯತ್ನಿಸಬೇಕಿತ್ತು.‌ ಆದರೆ ಅವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಆತಂಕ ಮೂಡಿಸಿದರು.‌ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದಿದ್ದರು.

ಇದರ ನಡುವೆ ಮತಾಂತರ ನಿಷೇಧ ಮಸೂದೆಯನ್ನು ಜಾರಿಗೊಳಿಸಿ, ಶ್ರೇಣೀಕೃತ ಸಮಾಜದ‌ ಯಥಾಸ್ಥಿತಿಗೆ‌ ಸರ್ಕಾರ ಪ್ರಯತ್ನಿಸಿದೆ.‌ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು‌ ಧರಿಸಬಾರದು, ಏಕರೂಪತೆ ಪಾಲಿಸಬೇಕೆಂದು‌ ಆರಂಭವಾದ ಪ್ರಕರಣ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು, ಹೈಕೋರ್ಟ್ ಮೆಟ್ಟಿಲೇರಿ ಈಗ ಸುಪ್ರೀಂಕೋರ್ಟ್ ವರೆಗೆ ಹೋಗಿದೆ.‌ ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಕಡ್ಡಾಯ‌‌ ಆಚರಣೆಯಲ್ಲ ಎಂದಿರುವ ಕರ್ನಾಟಕ ಹೈಕೋರ್ಟ್ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ತಲೆಯ ಮೇಲೆ ಧರಿಸುವ ಬಟ್ಟೆಯೊಂದನ್ನು ವಿರೋಧಿಸಿ, ಅದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸುತ್ತೇವೆಂದು ಉಡುಪಿಯ ಕಾಲೇಜೊಂದರಲ್ಲಿ ಆರಂಭವಾದ ವಿವಾದ ಇಡೀ ರಾಜ್ಯವನ್ನು ವ್ಯಾಪಿಸಿತು.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೆಲವು ಮುಸ್ಲಿಂ ಯುವಕರಿಂದ ಕೊಲೆಯಾದ ಬಳಿಕ ಹೆಣದ ರಾಜಕಾರಣಕ್ಕೆ ರಾಜ್ಯ ಸಾಕ್ಷಿಯಾಯಿತು.‌ ಕೊಲೆಗೆ ಕಾರಣ ಬಹಿರಂಗವಾಗುವ ಮುನ್ನವೇ ಹೆಣವನ್ನು ಇಟ್ಟುಕೊಂಡು ಮಾಡಿದ ರಾಜಕಾರಣವನ್ನು ಮಾತ್ರ ಮರೆಯಲಾಗದು.‌ ಕೋಮುಸೂಕ್ಷ್ಮತೆ ಬಲ್ಲವರು ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದರು.

ಹಿಜಾಬ್ ನಿಷೇಧ ವಿರೋಧಿಸಿ ಮುಸ್ಲಿಂ ವರ್ತಕರು ಪ್ರತಿಭಟನೆ ಮಾಡಿದರೆಂಬ ಒಂದೇ ಕಾರಣಕ್ಕೆ ಹಿಂದೂಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಂ ವರ್ತಕರು ಭಾಗವಹಿಸುವಂತಿಲ್ಲ‌ ಎಂದು ನಿರ್ಬಂಧ ಹೇರುವ ಪ್ರವೃತ್ತಿಗಳು ಕಂಡು ಬಂದವು. ಇದನ್ನೂ ಬಿಜೆಪಿ ಸರ್ಕಾರ ಸಮರ್ಥನೆ ಮಾಡಿಕೊಂಡಿತು.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪವನ್ನು ಎದುರಿಸುತ್ತಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳಿಗೆ ಹೆಸರಾದ ರೋಹಿತ್‌ ಚಕ್ರತೀರ್ಥ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ರಚಿಸಿತು. ಆದರೆ ಯಾವುದೇ ಆದೇಶವಿಲ್ಲದೆ ಈ ಸಮಿತಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿತ್ತು. ಬಹುತೇಕ ಒಂದೇ ಸಮುದಾಯದ ಜನರಿದ್ದ ಈ ಸಮಿತಿಯು ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳಲ್ಲಿ ಮಾಡಿದ್ದ ಪರಿಷ್ಕರಣೆಗಳು ಆತಂಕಕಾರಿಯಾಗಿದ್ದವು. ಯಾವುದೇ ಆದೇಶವಿಲ್ಲದೆ ಆಗಿದ್ದ ಪರಿಷ್ಕರಣೆಯನ್ನು ಘಟನೋತ್ತರ ಆದೇಶದ ಮೂಲಕ ಸರ್ಕಾರ ಒಪ್ಪಿಕೊಂಡಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಇತ್ತೀಚೆಗೆ ಮಸೂದ್ ಎಂಬ ಮುಸ್ಲಿಂ ಯುವಕನನ್ನು ಕೊಲೆ ಮಾಡಲಾಯಿತು. ಕ್ಷುಲ್ಲಕ ಕಾರಣಕ್ಕೆ ಮಸೂದ್ (18) ಮೇಲೆ ಕೆಲವರು ಹಲ್ಲೆ ನಡೆಸಿ ಕೊಂದಿದ್ದರು. ನಂತರದಲ್ಲಿ ಅದೇ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದರು. ಇಷ್ಟಕ್ಕೆ ನಿಲ್ಲದೆ ಒಂದು ದಿನದ ನಂತರದಲ್ಲಿ ಮಂಗಳೂರಿನ ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ಅಮಾಯಕನನ್ನು ಕೊಲ್ಲಲಾಯಿತು. ಆದರೆ ಪರಿಹಾರ ನೀಡುವಾಗ ಸರ್ಕಾರ ತಾರತಮ್ಯ ನೀತಿ ಅನುಸರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...