Homeಕರ್ನಾಟಕಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

ಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

- Advertisement -
- Advertisement -

ಕರ್ನಾಟಕದ ಬೀದರ್‌ನಲ್ಲಿ ದಸರಾ ಮೆರವಣಿಗೆಯ ಭಾಗವಾಗಿದ್ದ ಕಿಡಿಗೇಡಿಗಳ ಗುಂಪೊಂದು ಬುಧವಾರ ರಾತ್ರಿ ಪಾರಂಪರಿಕ ಮದರಸಾವೊಂದಕ್ಕೆ ನುಗ್ಗಿ ‘ಜೈಶ್ರೀರಾಮ್‌’ ಘೋಷಣೆಗಳನ್ನು ಕೂಗಿದೆ. ಕೋಮುಗಲಭೆಯನ್ನು ಹುಟ್ಟಿಹಾಕುವ ಉದ್ದೇಶದಿಂದ ಮದರಸಾದ ಮೂಲೆಯಲ್ಲಿ ಪೂಜೆಯನ್ನೂ ಮಾಡಿದೆ ಎಂದು ವರದಿಯಾಗಿದೆ.

ಒಂಬತ್ತು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಸಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಶುಕ್ರವಾರದೊಳಗೆ ಎಲ್ಲಾ ಕಿಡಿಗೇಡಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಮುಸ್ಲಿಂ ಸಂಘಟನೆಗಳು ಪ್ರತಿಕ್ರಿಯೆ ನೀಡಿವೆ.

1460ರ ಕಾಲಘಟ್ಟದಲ್ಲಿ ಬೀದರ್‌ನಲ್ಲಿ ಕಟ್ಟಲಾದ ಮಹ್ಮದ್ ಗವಾನ್ ಮದರಸಾವು ಭಾರತೀಯ ಪುರಾತತ್ವ ಸಮೀಕ್ಷೆಯ ಅಡಿಯಲ್ಲಿ ಗೊತ್ತುಪಡಿಸಿದ ಪಾರಂಪರಿಕ ತಾಣವಾಗಿದೆ. ಈ ಕಟ್ಟಡವನ್ನು ರಾಷ್ಟ್ರೀಯ ಪ್ರಾಮುಖ್ಯತೆಯ ಸ್ಮಾರಕಗಳ ಪಟ್ಟಿಯಲ್ಲಿ ಗುರುತಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಿಡಿಗೇಡಿಗಳ ಗುಂಪು ಮದರಸಾದ ಬೀಗ ಒಡೆದು ಒಳಗೆ ನುಗ್ಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೂಜೆ ಮಾಡಲು ಒಂದು ಮೂಲೆಗೆ ತೆರಳುವ ಮೊದಲು ಮದರಸಾದ ಮೆಟ್ಟಿಲುಗಳ ಮೇಲೆ ನಿಂತು ‘ಜೈ ಶ್ರೀ ರಾಮ್’ ಮತ್ತು ‘ಹಿಂದೂ ಧರ್ಮ ಜೈ’ ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ ವೈರಲ್‌ ಆಗಿದ್ದು, ಕಟ್ಟಡದ ಒಳಗೆ ಹೋಗಲು ಪ್ರಯತ್ನಿಸುತ್ತಿರುವ ಕಿಡಿಗೇಡಿಗಳ ಗುಂಪನ್ನು ವಿಡಿಯೊದಲ್ಲಿ ನೋಡಬಹುದು.

ಬೀದರ್‌ನ ಹಲವಾರು ಮುಸ್ಲಿಂ ಸಂಘಟನೆಗಳು ಘಟನೆಯನ್ನು ಖಂಡಿಸಿ ಪ್ರತಿಭಟನೆಗಳನ್ನು ನಡೆಸಿವೆ. ಎಲ್ಲಾ ಆರೋಪಿಗಳನ್ನು ಬಂಧಿಸದಿದ್ದರೆ ಶುಕ್ರವಾರದ ಪ್ರಾರ್ಥನೆಯ ನಂತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿವೆ.

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದು ರಾಜ್ಯದ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಮುಸ್ಲಿಮರನ್ನು ಕೀಳಾಗಿಸುವುದಕ್ಕಾಗಿ ಇಂತಹ ಘಟನೆಗಳು ನಡೆಯುತ್ತಿವೆ” ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸರ್ಕಾರವು ಕೋಮುವಾದಿ ಕೃತ್ಯಗಳಿಗೆ ಬೆಂಬಲ ನೀಡುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಕೋಮುದ್ವೇಷಿಗಳ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರಮ ಜರುಗಿಸದೆ ಇರುವುದು ಟೀಕೆಗೆ ಒಳಗಾಗಿದೆ.

ಆಗಸ್ಟ್‌ನಲ್ಲಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗಿತ್ತು. ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಕೆಲವರು ಮುಂದಾಗಿದ್ದರು. ಹೈಕೋರ್ಟ್ ಅನುಮತಿಯೂ ಸಿಕ್ಕಿತ್ತು. ಆದರೆ ಸುಪ್ರೀಂ ಕೋರ್ಟ್ ಇದಕ್ಕೆ ತಡೆ ನೀಡಿತ್ತು.

ಬೊಮ್ಮಾಯಿಯವರ ಆಡಳಿತವನ್ನು ನೋಡುತ್ತಿದ್ದರೆ, ಕರ್ನಾಟಕ ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿರುವುದು ಸ್ಪಷ್ಟವಾಗುತ್ತಿದೆ. ಮುಖ್ಯಮಂತ್ರಿಯವರೇ ‘ಉತ್ತರ ಪ್ರದೇಶ’ದ ಮಾದರಿ ಬಗ್ಗೆ ಮಾತನಾಡುತ್ತಿದ್ದಾರೆ.

ಕರಾವಳಿ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಮತೀಯ ಗೂಂಡಾಗಿರಿ (ಮಾರಲ್ ಪೊಲೀಸಿಂಗ್) ಹೆಚ್ಚಾಗುತ್ತಿದ್ದಾಗ ರಾಜ್ಯದ ಸಿಎಂ ಅವುಗಳಿಗೆ ಕಡಿವಾಣ ಹಾಕಲು‌ ಯತ್ನಿಸಬೇಕಿತ್ತು.‌ ಆದರೆ ಅವರು ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿ ಆತಂಕ ಮೂಡಿಸಿದರು.‌ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದಿದ್ದರು.

ಇದರ ನಡುವೆ ಮತಾಂತರ ನಿಷೇಧ ಮಸೂದೆಯನ್ನು ಜಾರಿಗೊಳಿಸಿ, ಶ್ರೇಣೀಕೃತ ಸಮಾಜದ‌ ಯಥಾಸ್ಥಿತಿಗೆ‌ ಸರ್ಕಾರ ಪ್ರಯತ್ನಿಸಿದೆ.‌ ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ಸಂಕೇತಗಳನ್ನು‌ ಧರಿಸಬಾರದು, ಏಕರೂಪತೆ ಪಾಲಿಸಬೇಕೆಂದು‌ ಆರಂಭವಾದ ಪ್ರಕರಣ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದು, ಹೈಕೋರ್ಟ್ ಮೆಟ್ಟಿಲೇರಿ ಈಗ ಸುಪ್ರೀಂಕೋರ್ಟ್ ವರೆಗೆ ಹೋಗಿದೆ.‌ ಹಿಜಾಬ್ ಧರಿಸುವುದು ಇಸ್ಲಾಂನಲ್ಲಿ ಕಡ್ಡಾಯ‌‌ ಆಚರಣೆಯಲ್ಲ ಎಂದಿರುವ ಕರ್ನಾಟಕ ಹೈಕೋರ್ಟ್ ಸರ್ಕಾರದ ನಿರ್ಧಾರವನ್ನು ಎತ್ತಿ ಹಿಡಿದಿದೆ. ತಲೆಯ ಮೇಲೆ ಧರಿಸುವ ಬಟ್ಟೆಯೊಂದನ್ನು ವಿರೋಧಿಸಿ, ಅದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸುತ್ತೇವೆಂದು ಉಡುಪಿಯ ಕಾಲೇಜೊಂದರಲ್ಲಿ ಆರಂಭವಾದ ವಿವಾದ ಇಡೀ ರಾಜ್ಯವನ್ನು ವ್ಯಾಪಿಸಿತು.

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಕೆಲವು ಮುಸ್ಲಿಂ ಯುವಕರಿಂದ ಕೊಲೆಯಾದ ಬಳಿಕ ಹೆಣದ ರಾಜಕಾರಣಕ್ಕೆ ರಾಜ್ಯ ಸಾಕ್ಷಿಯಾಯಿತು.‌ ಕೊಲೆಗೆ ಕಾರಣ ಬಹಿರಂಗವಾಗುವ ಮುನ್ನವೇ ಹೆಣವನ್ನು ಇಟ್ಟುಕೊಂಡು ಮಾಡಿದ ರಾಜಕಾರಣವನ್ನು ಮಾತ್ರ ಮರೆಯಲಾಗದು.‌ ಕೋಮುಸೂಕ್ಷ್ಮತೆ ಬಲ್ಲವರು ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದರು.

ಹಿಜಾಬ್ ನಿಷೇಧ ವಿರೋಧಿಸಿ ಮುಸ್ಲಿಂ ವರ್ತಕರು ಪ್ರತಿಭಟನೆ ಮಾಡಿದರೆಂಬ ಒಂದೇ ಕಾರಣಕ್ಕೆ ಹಿಂದೂಗಳ ಜಾತ್ರೆ, ಉತ್ಸವಗಳಲ್ಲಿ ಮುಸ್ಲಿಂ ವರ್ತಕರು ಭಾಗವಹಿಸುವಂತಿಲ್ಲ‌ ಎಂದು ನಿರ್ಬಂಧ ಹೇರುವ ಪ್ರವೃತ್ತಿಗಳು ಕಂಡು ಬಂದವು. ಇದನ್ನೂ ಬಿಜೆಪಿ ಸರ್ಕಾರ ಸಮರ್ಥನೆ ಮಾಡಿಕೊಂಡಿತು.

ಇದನ್ನೂ ಓದಿರಿ: ಬೊಮ್ಮಾಯಿ ಆಡಳಿತದ ಒಂದು ವರ್ಷದಲ್ಲಿ ರಾಜ್ಯ ಕಂಡ ಕೋಮುದ್ವೇಷ ಪ್ರಕರಣಗಳಿವು

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪವನ್ನು ಎದುರಿಸುತ್ತಿರುವ, ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್‌ಗಳಿಗೆ ಹೆಸರಾದ ರೋಹಿತ್‌ ಚಕ್ರತೀರ್ಥ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನು ರಚಿಸಿತು. ಆದರೆ ಯಾವುದೇ ಆದೇಶವಿಲ್ಲದೆ ಈ ಸಮಿತಿಯು ಪಠ್ಯಪುಸ್ತಕಗಳನ್ನು ಪರಿಷ್ಕರಣೆ ಮಾಡಿತ್ತು. ಬಹುತೇಕ ಒಂದೇ ಸಮುದಾಯದ ಜನರಿದ್ದ ಈ ಸಮಿತಿಯು ಒಂದರಿಂದ ಹತ್ತನೇ ತರಗತಿವರೆಗಿನ ಪಠ್ಯಪುಸ್ತಕಗಳಲ್ಲಿ ಮಾಡಿದ್ದ ಪರಿಷ್ಕರಣೆಗಳು ಆತಂಕಕಾರಿಯಾಗಿದ್ದವು. ಯಾವುದೇ ಆದೇಶವಿಲ್ಲದೆ ಆಗಿದ್ದ ಪರಿಷ್ಕರಣೆಯನ್ನು ಘಟನೋತ್ತರ ಆದೇಶದ ಮೂಲಕ ಸರ್ಕಾರ ಒಪ್ಪಿಕೊಂಡಿತ್ತು.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಇತ್ತೀಚೆಗೆ ಮಸೂದ್ ಎಂಬ ಮುಸ್ಲಿಂ ಯುವಕನನ್ನು ಕೊಲೆ ಮಾಡಲಾಯಿತು. ಕ್ಷುಲ್ಲಕ ಕಾರಣಕ್ಕೆ ಮಸೂದ್ (18) ಮೇಲೆ ಕೆಲವರು ಹಲ್ಲೆ ನಡೆಸಿ ಕೊಂದಿದ್ದರು. ನಂತರದಲ್ಲಿ ಅದೇ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದರು. ಇಷ್ಟಕ್ಕೆ ನಿಲ್ಲದೆ ಒಂದು ದಿನದ ನಂತರದಲ್ಲಿ ಮಂಗಳೂರಿನ ಸುರತ್ಕಲ್‌ನಲ್ಲಿ ಫಾಝಿಲ್‌ ಎಂಬ ಅಮಾಯಕನನ್ನು ಕೊಲ್ಲಲಾಯಿತು. ಆದರೆ ಪರಿಹಾರ ನೀಡುವಾಗ ಸರ್ಕಾರ ತಾರತಮ್ಯ ನೀತಿ ಅನುಸರಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...