Homeಅಂತರಾಷ್ಟ್ರೀಯಜೈಲಿನಲ್ಲಿರುವ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ

ಜೈಲಿನಲ್ಲಿರುವ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ

- Advertisement -
- Advertisement -

ಜೈಲಿನಲ್ಲಿರುವ ಬೆಲರೂಸಿಯನ್ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ ಸಂದಿದೆ. ಬೆಲಾರಸ್‌ನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳಲ್ಲಿ ಅಲೆಸ್ ಒಬ್ಬರಾಗಿದ್ದಾರೆ ಎಂದು ಬೆಲರೂಸಿಯನ್ ವಿರೋಧ ಪಕ್ಷದ ರಾಜಕಾರಣಿ ಪಾವೆಲ್ ಲತುಷ್ಕೊ ಶುಕ್ರವಾರ ಹೇಳಿದ್ದಾರೆ.

ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಮೆಮೋರಿಯಲ್ ಮತ್ತು ಉಕ್ರೇನಿಯನ್ ಮಾನವ ಹಕ್ಕುಗಳ ಸಂಸ್ಥೆ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್ ಜೊತೆಗೆ ಶುಕ್ರವಾರ ಬೈಲ್ಯಾಟ್ಸ್ಕಿ ಅವರಿಗೂ ಪ್ರಶಸ್ತಿ ನೀಡಲಾಗಿದೆ.

“ಇದು ಅವರಿಗೆ ಮಾತ್ರವಲ್ಲ, ಈಗ ಬೆಲಾರಸ್‌ನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳಿಗೆ ಸಂದ ಪ್ರಶಸ್ತಿ” ಎಂದು ಲತುಷ್ಕೊ ಅಭಿಪ್ರಾಯಪಟ್ಟಿದ್ದಾರೆ. “ಇದು ನಮ್ಮೆಲ್ಲರನ್ನು ಹೋರಾಟಕ್ಕೆ ಪ್ರೇರೇಪಿಸುತ್ತದೆ. ನಾವು (ಅಲೆಕ್ಸಾಂಡರ್) ಲುಕಾಶೆಂಕೊ ಅವರ ಸರ್ವಾಧಿಕಾರವನ್ನು ಸೋಲಿಸುತ್ತೇವೆ ಎಂಬುದು ಖಚಿತವಾಗಿದೆ” ಎಂದು ತಿಳಿಸಿದ್ದಾರೆ.

ಫ್ರೆಂಚ್‌ ಲೇಖಕಿ ಅನ್ನಿ ಎರ್ನಾಕ್ಸ್‌ಗೆ ಪ್ರಶಸ್ತಿ

ಖ್ಯಾತ ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್ ಅವರು 2022ರ ನೋಬೆಲ್ ಸಾಹಿತ್ಯ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು ತೀರ್ಪುಗಾರರು ಗುರುವಾರ ಹೇಳಿದ್ದಾರೆ. ಲೇಖಕಿಯು ವರ್ಗ ಮತ್ತು ಲಿಂಗ ತಾರತಮ್ಯದ ಬಗೆಗಿನ ಕಾದಂಬರಿಗಳಿಗೆ ಹೆಸರುವಾಸಿಯಾಗಿದ್ದಾರೆ.

82 ವರ್ಷದ ಎರ್ನಾಕ್ಸ್ ಅವರ ಧೈರ್ಯ ಮತ್ತು ಅವರ ಚಿಕಿತ್ಸಕ ದೃಷ್ಟಿಕೋನದ ಚುರುಕುತನಕ್ಕಾಗಿ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ತೀರ್ಪುಗಾರರು ಹೇಳಿದ್ದಾರೆ. ವಿಜೇತ ನೊಬೆಲ್ ಪ್ರಶಸ್ತಿಯು ಪದಕ ಮತ್ತು 10 ಮಿಲಿಯನ್ ಸ್ವೀಡಿಷ್ ಕ್ರೋನರ್ (ಸುಮಾರು 7.5 ಕೋಟಿ) ಮೊತ್ತವನ್ನು ಹೊಂದಿದೆ.

ಕಳೆದ ವರ್ಷ ಈ ಪ್ರಶಸ್ತಿಯು ಟಾಂಜೇನಿಯಾ ಮೂಲದ ಕಾದಂಬರಿಕಾರ ಅಬ್ದುಲ್‌ ರಜ್ಝಾಕ್‌ ಗುರ್ನಾ ಅವರಿಗೆ ನೀಡಲಾಗಿತ್ತು. ಅವರ ಸಾಹಿತ್ಯವು ನಿರಾಶ್ರಿತರು ಮತ್ತು ಗಡಿಪಾರು ಆಗಿರುವವರು, ವಸಾಹತುಶಾಹಿ ಮತ್ತು ವರ್ಣಭೇದ ನೀತಿಯ ಮೇಲೆ ಕೇಂದ್ರೀಕರಿಸಿತ್ತು.

ಹಲವಾರು ವರ್ಷಗಳಿಂದ ನೊಬೆಲ್ ಸ್ಪರ್ಧೆಯಲ್ಲಿ ಎರ್ನಾಕ್ಸ್ ಅವರ ಹೆಸರು ಕೇಳುತ್ತಲೆ ಬಂದಿದೆ. 1901 ರಲ್ಲಿ ಪ್ರಾರಂಭವಾದ ನೊಬೆಲ್ ಪ್ರಶಸ್ತಿಗಳಲ್ಲಿ 119 ಜನರಿಗೆ ಸಾಹಿತ್ಯ ನೋಬೆಲ್‌ ಪ್ರಶಸ್ತಿಗಳನ್ನು ನೀಡಲಾಗಿದೆ. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಮಹಿಳೆಯರಲ್ಲಿ ಅನ್ನಿ ಎರ್ನಾಕ್ಸ್‌ 17 ನೇ ಮಹಿಳೆಯಾಗಿದ್ದಾರೆ.

ಆಲ್ಟ್‌ನ್ಯೂಸ್‌ನ ಪ್ರತೀಕ್‌, ಜುಬೇರ್‌ ನಾಮನಿರ್ದೇಶನ

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕರು ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಪತ್ರಕರ್ತರಾದ ಮೊಹಮ್ಮದ್‌ ಝುಬೇರ್‌ ಹಾಗೂ ಪ್ರತೀಕ್‌ ಸಿನ್ಹಾ ಅವರು 2022ರ ನೊಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ನೊಬೆಲ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವವರನ್ನು ಸಮಿತಿಯು ಬಹಿರಂಗಪಡಿಸಿಲ್ಲ. ಮೂಲಗಳ ಪ್ರಕಾರ, ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಪೋಪ್ ಫ್ರಾನ್ಸಿಸ್, ಟುವಾಲು ವಿದೇಶಾಂಗ ಸಚಿವ ಸೈಮನ್ ಕೋಫೆ ಸೇರಿ ಹಲವರು ನಾಮನಿರ್ದೇಶನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

2022ರ ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧೆ ಪಟ್ಟಿಯಲ್ಲಿ ಸುಮಾರು 343 ಅಭ್ಯರ್ಥಿಗಳಿದ್ದಾರೆ. ಈ ಪೈಕಿ 251 ವ್ಯಕ್ತಿಗಳು ಮತ್ತು 92 ಸಂಸ್ಥೆಗಳನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಪಟ್ಟಿಯಲ್ಲಿ ಝುಬೇರ್‌ ಮತ್ತು ಪ್ರತೀಕ್ ಸಿನ್ಹಾ ಹೆಸರು ಸೇರಿರುವುದು ವಿಶೇಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...