Homeಅಂತರಾಷ್ಟ್ರೀಯಜೈಲಿನಲ್ಲಿರುವ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ

ಜೈಲಿನಲ್ಲಿರುವ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ

- Advertisement -
- Advertisement -

ಜೈಲಿನಲ್ಲಿರುವ ಬೆಲರೂಸಿಯನ್ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ ಸಂದಿದೆ. ಬೆಲಾರಸ್‌ನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳಲ್ಲಿ ಅಲೆಸ್ ಒಬ್ಬರಾಗಿದ್ದಾರೆ ಎಂದು ಬೆಲರೂಸಿಯನ್ ವಿರೋಧ ಪಕ್ಷದ ರಾಜಕಾರಣಿ ಪಾವೆಲ್ ಲತುಷ್ಕೊ ಶುಕ್ರವಾರ ಹೇಳಿದ್ದಾರೆ.

ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಮೆಮೋರಿಯಲ್ ಮತ್ತು ಉಕ್ರೇನಿಯನ್ ಮಾನವ ಹಕ್ಕುಗಳ ಸಂಸ್ಥೆ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್ ಜೊತೆಗೆ ಶುಕ್ರವಾರ ಬೈಲ್ಯಾಟ್ಸ್ಕಿ ಅವರಿಗೂ ಪ್ರಶಸ್ತಿ ನೀಡಲಾಗಿದೆ.

“ಇದು ಅವರಿಗೆ ಮಾತ್ರವಲ್ಲ, ಈಗ ಬೆಲಾರಸ್‌ನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳಿಗೆ ಸಂದ ಪ್ರಶಸ್ತಿ” ಎಂದು ಲತುಷ್ಕೊ ಅಭಿಪ್ರಾಯಪಟ್ಟಿದ್ದಾರೆ. “ಇದು ನಮ್ಮೆಲ್ಲರನ್ನು ಹೋರಾಟಕ್ಕೆ ಪ್ರೇರೇಪಿಸುತ್ತದೆ. ನಾವು (ಅಲೆಕ್ಸಾಂಡರ್) ಲುಕಾಶೆಂಕೊ ಅವರ ಸರ್ವಾಧಿಕಾರವನ್ನು ಸೋಲಿಸುತ್ತೇವೆ ಎಂಬುದು ಖಚಿತವಾಗಿದೆ” ಎಂದು ತಿಳಿಸಿದ್ದಾರೆ.

ಫ್ರೆಂಚ್‌ ಲೇಖಕಿ ಅನ್ನಿ ಎರ್ನಾಕ್ಸ್‌ಗೆ ಪ್ರಶಸ್ತಿ

ಖ್ಯಾತ ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್ ಅವರು 2022ರ ನೋಬೆಲ್ ಸಾಹಿತ್ಯ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು ತೀರ್ಪುಗಾರರು ಗುರುವಾರ ಹೇಳಿದ್ದಾರೆ. ಲೇಖಕಿಯು ವರ್ಗ ಮತ್ತು ಲಿಂಗ ತಾರತಮ್ಯದ ಬಗೆಗಿನ ಕಾದಂಬರಿಗಳಿಗೆ ಹೆಸರುವಾಸಿಯಾಗಿದ್ದಾರೆ.

82 ವರ್ಷದ ಎರ್ನಾಕ್ಸ್ ಅವರ ಧೈರ್ಯ ಮತ್ತು ಅವರ ಚಿಕಿತ್ಸಕ ದೃಷ್ಟಿಕೋನದ ಚುರುಕುತನಕ್ಕಾಗಿ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ತೀರ್ಪುಗಾರರು ಹೇಳಿದ್ದಾರೆ. ವಿಜೇತ ನೊಬೆಲ್ ಪ್ರಶಸ್ತಿಯು ಪದಕ ಮತ್ತು 10 ಮಿಲಿಯನ್ ಸ್ವೀಡಿಷ್ ಕ್ರೋನರ್ (ಸುಮಾರು 7.5 ಕೋಟಿ) ಮೊತ್ತವನ್ನು ಹೊಂದಿದೆ.

ಕಳೆದ ವರ್ಷ ಈ ಪ್ರಶಸ್ತಿಯು ಟಾಂಜೇನಿಯಾ ಮೂಲದ ಕಾದಂಬರಿಕಾರ ಅಬ್ದುಲ್‌ ರಜ್ಝಾಕ್‌ ಗುರ್ನಾ ಅವರಿಗೆ ನೀಡಲಾಗಿತ್ತು. ಅವರ ಸಾಹಿತ್ಯವು ನಿರಾಶ್ರಿತರು ಮತ್ತು ಗಡಿಪಾರು ಆಗಿರುವವರು, ವಸಾಹತುಶಾಹಿ ಮತ್ತು ವರ್ಣಭೇದ ನೀತಿಯ ಮೇಲೆ ಕೇಂದ್ರೀಕರಿಸಿತ್ತು.

ಹಲವಾರು ವರ್ಷಗಳಿಂದ ನೊಬೆಲ್ ಸ್ಪರ್ಧೆಯಲ್ಲಿ ಎರ್ನಾಕ್ಸ್ ಅವರ ಹೆಸರು ಕೇಳುತ್ತಲೆ ಬಂದಿದೆ. 1901 ರಲ್ಲಿ ಪ್ರಾರಂಭವಾದ ನೊಬೆಲ್ ಪ್ರಶಸ್ತಿಗಳಲ್ಲಿ 119 ಜನರಿಗೆ ಸಾಹಿತ್ಯ ನೋಬೆಲ್‌ ಪ್ರಶಸ್ತಿಗಳನ್ನು ನೀಡಲಾಗಿದೆ. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಮಹಿಳೆಯರಲ್ಲಿ ಅನ್ನಿ ಎರ್ನಾಕ್ಸ್‌ 17 ನೇ ಮಹಿಳೆಯಾಗಿದ್ದಾರೆ.

ಆಲ್ಟ್‌ನ್ಯೂಸ್‌ನ ಪ್ರತೀಕ್‌, ಜುಬೇರ್‌ ನಾಮನಿರ್ದೇಶನ

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕರು ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಪತ್ರಕರ್ತರಾದ ಮೊಹಮ್ಮದ್‌ ಝುಬೇರ್‌ ಹಾಗೂ ಪ್ರತೀಕ್‌ ಸಿನ್ಹಾ ಅವರು 2022ರ ನೊಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ನೊಬೆಲ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವವರನ್ನು ಸಮಿತಿಯು ಬಹಿರಂಗಪಡಿಸಿಲ್ಲ. ಮೂಲಗಳ ಪ್ರಕಾರ, ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಪೋಪ್ ಫ್ರಾನ್ಸಿಸ್, ಟುವಾಲು ವಿದೇಶಾಂಗ ಸಚಿವ ಸೈಮನ್ ಕೋಫೆ ಸೇರಿ ಹಲವರು ನಾಮನಿರ್ದೇಶನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

2022ರ ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧೆ ಪಟ್ಟಿಯಲ್ಲಿ ಸುಮಾರು 343 ಅಭ್ಯರ್ಥಿಗಳಿದ್ದಾರೆ. ಈ ಪೈಕಿ 251 ವ್ಯಕ್ತಿಗಳು ಮತ್ತು 92 ಸಂಸ್ಥೆಗಳನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಪಟ್ಟಿಯಲ್ಲಿ ಝುಬೇರ್‌ ಮತ್ತು ಪ್ರತೀಕ್ ಸಿನ್ಹಾ ಹೆಸರು ಸೇರಿರುವುದು ವಿಶೇಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....