Homeಅಂತರಾಷ್ಟ್ರೀಯಜೈಲಿನಲ್ಲಿರುವ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ

ಜೈಲಿನಲ್ಲಿರುವ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ

- Advertisement -
- Advertisement -

ಜೈಲಿನಲ್ಲಿರುವ ಬೆಲರೂಸಿಯನ್ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ ಸಂದಿದೆ. ಬೆಲಾರಸ್‌ನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳಲ್ಲಿ ಅಲೆಸ್ ಒಬ್ಬರಾಗಿದ್ದಾರೆ ಎಂದು ಬೆಲರೂಸಿಯನ್ ವಿರೋಧ ಪಕ್ಷದ ರಾಜಕಾರಣಿ ಪಾವೆಲ್ ಲತುಷ್ಕೊ ಶುಕ್ರವಾರ ಹೇಳಿದ್ದಾರೆ.

ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಮೆಮೋರಿಯಲ್ ಮತ್ತು ಉಕ್ರೇನಿಯನ್ ಮಾನವ ಹಕ್ಕುಗಳ ಸಂಸ್ಥೆ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್ ಜೊತೆಗೆ ಶುಕ್ರವಾರ ಬೈಲ್ಯಾಟ್ಸ್ಕಿ ಅವರಿಗೂ ಪ್ರಶಸ್ತಿ ನೀಡಲಾಗಿದೆ.

“ಇದು ಅವರಿಗೆ ಮಾತ್ರವಲ್ಲ, ಈಗ ಬೆಲಾರಸ್‌ನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳಿಗೆ ಸಂದ ಪ್ರಶಸ್ತಿ” ಎಂದು ಲತುಷ್ಕೊ ಅಭಿಪ್ರಾಯಪಟ್ಟಿದ್ದಾರೆ. “ಇದು ನಮ್ಮೆಲ್ಲರನ್ನು ಹೋರಾಟಕ್ಕೆ ಪ್ರೇರೇಪಿಸುತ್ತದೆ. ನಾವು (ಅಲೆಕ್ಸಾಂಡರ್) ಲುಕಾಶೆಂಕೊ ಅವರ ಸರ್ವಾಧಿಕಾರವನ್ನು ಸೋಲಿಸುತ್ತೇವೆ ಎಂಬುದು ಖಚಿತವಾಗಿದೆ” ಎಂದು ತಿಳಿಸಿದ್ದಾರೆ.

ಫ್ರೆಂಚ್‌ ಲೇಖಕಿ ಅನ್ನಿ ಎರ್ನಾಕ್ಸ್‌ಗೆ ಪ್ರಶಸ್ತಿ

ಖ್ಯಾತ ಫ್ರೆಂಚ್ ಲೇಖಕಿ ಅನ್ನಿ ಎರ್ನಾಕ್ಸ್ ಅವರು 2022ರ ನೋಬೆಲ್ ಸಾಹಿತ್ಯ ಪ್ರಶಸ್ತಿಯನ್ನು ಗೆದ್ದಿದ್ದಾರೆ ಎಂದು ತೀರ್ಪುಗಾರರು ಗುರುವಾರ ಹೇಳಿದ್ದಾರೆ. ಲೇಖಕಿಯು ವರ್ಗ ಮತ್ತು ಲಿಂಗ ತಾರತಮ್ಯದ ಬಗೆಗಿನ ಕಾದಂಬರಿಗಳಿಗೆ ಹೆಸರುವಾಸಿಯಾಗಿದ್ದಾರೆ.

82 ವರ್ಷದ ಎರ್ನಾಕ್ಸ್ ಅವರ ಧೈರ್ಯ ಮತ್ತು ಅವರ ಚಿಕಿತ್ಸಕ ದೃಷ್ಟಿಕೋನದ ಚುರುಕುತನಕ್ಕಾಗಿ ಅವರು ಈ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ತೀರ್ಪುಗಾರರು ಹೇಳಿದ್ದಾರೆ. ವಿಜೇತ ನೊಬೆಲ್ ಪ್ರಶಸ್ತಿಯು ಪದಕ ಮತ್ತು 10 ಮಿಲಿಯನ್ ಸ್ವೀಡಿಷ್ ಕ್ರೋನರ್ (ಸುಮಾರು 7.5 ಕೋಟಿ) ಮೊತ್ತವನ್ನು ಹೊಂದಿದೆ.

ಕಳೆದ ವರ್ಷ ಈ ಪ್ರಶಸ್ತಿಯು ಟಾಂಜೇನಿಯಾ ಮೂಲದ ಕಾದಂಬರಿಕಾರ ಅಬ್ದುಲ್‌ ರಜ್ಝಾಕ್‌ ಗುರ್ನಾ ಅವರಿಗೆ ನೀಡಲಾಗಿತ್ತು. ಅವರ ಸಾಹಿತ್ಯವು ನಿರಾಶ್ರಿತರು ಮತ್ತು ಗಡಿಪಾರು ಆಗಿರುವವರು, ವಸಾಹತುಶಾಹಿ ಮತ್ತು ವರ್ಣಭೇದ ನೀತಿಯ ಮೇಲೆ ಕೇಂದ್ರೀಕರಿಸಿತ್ತು.

ಹಲವಾರು ವರ್ಷಗಳಿಂದ ನೊಬೆಲ್ ಸ್ಪರ್ಧೆಯಲ್ಲಿ ಎರ್ನಾಕ್ಸ್ ಅವರ ಹೆಸರು ಕೇಳುತ್ತಲೆ ಬಂದಿದೆ. 1901 ರಲ್ಲಿ ಪ್ರಾರಂಭವಾದ ನೊಬೆಲ್ ಪ್ರಶಸ್ತಿಗಳಲ್ಲಿ 119 ಜನರಿಗೆ ಸಾಹಿತ್ಯ ನೋಬೆಲ್‌ ಪ್ರಶಸ್ತಿಗಳನ್ನು ನೀಡಲಾಗಿದೆ. ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದ ಮಹಿಳೆಯರಲ್ಲಿ ಅನ್ನಿ ಎರ್ನಾಕ್ಸ್‌ 17 ನೇ ಮಹಿಳೆಯಾಗಿದ್ದಾರೆ.

ಆಲ್ಟ್‌ನ್ಯೂಸ್‌ನ ಪ್ರತೀಕ್‌, ಜುಬೇರ್‌ ನಾಮನಿರ್ದೇಶನ

ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕರು ಮತ್ತು ಅಂತಾರಾಷ್ಟ್ರೀಯ ಖ್ಯಾತಿಯ ಪತ್ರಕರ್ತರಾದ ಮೊಹಮ್ಮದ್‌ ಝುಬೇರ್‌ ಹಾಗೂ ಪ್ರತೀಕ್‌ ಸಿನ್ಹಾ ಅವರು 2022ರ ನೊಬೆಲ್‌ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

ನೊಬೆಲ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವವರನ್ನು ಸಮಿತಿಯು ಬಹಿರಂಗಪಡಿಸಿಲ್ಲ. ಮೂಲಗಳ ಪ್ರಕಾರ, ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್, ಪೋಪ್ ಫ್ರಾನ್ಸಿಸ್, ಟುವಾಲು ವಿದೇಶಾಂಗ ಸಚಿವ ಸೈಮನ್ ಕೋಫೆ ಸೇರಿ ಹಲವರು ನಾಮನಿರ್ದೇಶನಗೊಂಡಿದ್ದಾರೆ ಎಂದು ತಿಳಿದುಬಂದಿದೆ.

2022ರ ನೊಬೆಲ್ ಶಾಂತಿ ಪ್ರಶಸ್ತಿ ಸ್ಪರ್ಧೆ ಪಟ್ಟಿಯಲ್ಲಿ ಸುಮಾರು 343 ಅಭ್ಯರ್ಥಿಗಳಿದ್ದಾರೆ. ಈ ಪೈಕಿ 251 ವ್ಯಕ್ತಿಗಳು ಮತ್ತು 92 ಸಂಸ್ಥೆಗಳನ್ನು ನಾಮನಿರ್ದೇಶನ ಮಾಡಲಾಗಿದೆ. ಈ ಪಟ್ಟಿಯಲ್ಲಿ ಝುಬೇರ್‌ ಮತ್ತು ಪ್ರತೀಕ್ ಸಿನ್ಹಾ ಹೆಸರು ಸೇರಿರುವುದು ವಿಶೇಷ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...