Homeಮುಖಪುಟ‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ - ಕಮಲ್ ಹಾಸನ್

‘ಚೋಳರ ಕಾಲದಲ್ಲಿ ಹಿಂದೂ ಧರ್ಮವಿರಲಿಲ್ಲ’ – ಕಮಲ್ ಹಾಸನ್

- Advertisement -
- Advertisement -

ಐತಿಹಾಸಿಕ ಚೋಳ ಸಾಮ್ರಾಜ್ಯದ ಖ್ಯಾತ ಸಾಮ್ರಾಟ ‘ರಾಜ ರಾಜ ಚೋಳ’ ಹಿಂದೂ ರಾಜನೇ ಎಂಬ ಚರ್ಚೆಗೆ ಹಿರಿಯ ನಟ ಕಮಲ್ ಹಾಸನ್ ಅವರು ಕೂಡಾ ಸೇರಿಕೊಂಡಿದ್ದು, “ಅವನು ಹಿಂದೂ ರಾಜ ಅಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ. ಈ ಮೂಲಕ ತಮಿಳು ಚಲನಚಿತ್ರ ನಿರ್ದೇಶಕ ವೆಟ್ರಿಮಾರನ್ ಅವರ ವಾದವನ್ನು ಕಮಲ್ ಹಾಸನ್ ಬೆಂಬಲಿಸಿದ್ದಾರೆ.

“ರಾಜ ರಾಜ ಚೋಳ ಹಿಂದೂ ರಾಜನಲ್ಲ ಮತ್ತು ಹಿಂದೂ ಧರ್ಮ”ದ ಬಗ್ಗೆ ಹಲವು ದಿನಗಳಿಂದ ತಮಿಳುನಾಡಿನದಲ್ಲಿ ಚರ್ಚೆ ನಡೆಯುತ್ತಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೊನ್ನಿಯಿನ್ ಸೆಲ್ವನ್” ಚಲನಚಿತ್ರ ಬಿಡುಗಡೆಯಾದ ಒಂದು ದಿನದ ನಂತರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಿರ್ದೇಶಕ ವೆಟ್ರಿಮಾರನ್,“ರಾಜ ರಾಜ ಚೋಜ್ಲಾನ್ ಹಿಂದೂ ಅಲ್ಲ. ತಿರುವಳ್ಳುವರ್ ಅವರನ್ನು ಕೇಸರಿಕರಣ ಮಾಡಲು ಪ್ರಯತ್ನಿಸಿದ ಬಿಜೆಪಿ ‘ನಮ್ಮ ಅಸ್ಮಿತೆ’ಯನ್ನು ಕದಿಯಲು ಪ್ರಯತ್ನಿಸುತ್ತಿದೆ” ಎಂದು ಪ್ರತಿಪಾದಿಸಿದ್ದರು. ‘ನಾವು ಅದನ್ನು ಎಂದಿಗೂ ಅನುಮತಿಸಬಾರದು’ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಸಿನಿಮಾಗಳಲ್ಲಿ ನಮ್ಮ ಅಸ್ಮಿತೆಗಳನ್ನು ಅಳಿಸಲಾಗುತ್ತಿದೆ: ವೆಟ್ರಿಮಾರನ್‌ ಆತಂಕ

ವೆಟ್ರಿಮಾರನ್ ಅವರ ಹೇಳಿಕೆಯನ್ನು ಬೆಂಬಲಿಸಿದ ಕಮಲ್ ಹಾಸನ್‌, ರಾಜ ರಾಜ ಚೋಳನ ಕಾಲದಲ್ಲಿ ‘ಹಿಂದೂ ಧರ್ಮ’ ಇರಲಿಲ್ಲ, ಆದರೆ ವೈನವಂ, ಶಿವಂ ಮತ್ತು ಸಮಾನಂ ಇತ್ತು ಎಂದು  ಹೇಳಿದ್ದಾರೆ.

ಬ್ರಿಟಿಷರು ತುತ್ತುಕುಡಿಯನ್ನು ಟುಟಿಕೋರಿನ್ ಆಗಿ ಹೇಗೆ ಬದಲಾಯಿಸಿದರೋ ಅದೇ ರೀತಿ ಒಂದು ಸಾಮೂಹಿಕ ಪದವನ್ನು ಉಲ್ಲೇಖಿಸಲು ‘ಹಿಂದೂ’ ಪದವನ್ನು ಸೃಷ್ಟಿಸಿದರು ಎಂದು ಅವರು ಹೇಳಿದ್ದಾರೆ.

ವೆಟ್ರಿಮಾರನ್‌ ಅವರ ಹೇಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಹೆಚ್.ರಾಜಾ, ‘ರಾಜ ರಾಜ ಚೋಳ ನಿಜವಾಗಿಯೂ ಹಿಂದೂ ರಾಜ” ಎಂದು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

ರಾಜ ರಾಜ ಚೋಳನು ನಿರ್ಮಿಸಿದ ಎರಡು ಚರ್ಚ್ ಮತ್ತು ಮಸೀದಿಗಳನ್ನು ತೋರಿಸುವಂತೆ ಎಚ್ ರಾಜಾ ಅವರು ವೆಟ್ರಿಮಾರನ್‌ ಅವರಿಗೆ ಕೇಳಿದ್ದಾರೆ. ರಾಜ ರಾಜ ಚೋಳನನ್ನು ಶಿವಪಾದ ಶೇಖರನ್ ಎಂದು ಕರೆದ ಅವರು, ‘ಹಾಗಾದರೆ, ಆತ ಹಿಂದೂ ಅಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿಗಳು ಯಾವತ್ತೂ ಸತ್ಯವನ್ನು ಒಪ್ಪಿಕೊಳ್ಳುವುದಿಲ್ಲ. ಅವರು ಹೇಳುವ ಸುಳ್ಳುಗಳನ್ನು ನಾವು ನಿಜ ಎಂದು ನಂಬಿದ್ದೇವೆ. ಇನ್ನು ಮುಂದಾದರೂ ನಾವು ಜಾಗೃತರಾಗಿ, ಸತ್ಯವನ್ನು ಪ್ರತಿಪಾದಿಸಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...