Homeಮುಖಪುಟಕನ್ಯಾಕುಮಾರಿ ಚರ್ಚ್ ದಾಳಿ: ಐದು ದಿನಗಳ ನಂತರ ಒಬ್ಬ ದುಷ್ಕರ್ಮಿಯ ಬಂಧನ

ಕನ್ಯಾಕುಮಾರಿ ಚರ್ಚ್ ದಾಳಿ: ಐದು ದಿನಗಳ ನಂತರ ಒಬ್ಬ ದುಷ್ಕರ್ಮಿಯ ಬಂಧನ

- Advertisement -
- Advertisement -

ಭಾನುವಾರ ಗಾಂಧಿ ಜಯಂತಿಯಂದು ಹಿಂದೂ ಮುನ್ನನಿ ಪಕ್ಷದ 8 ಕಾರ್ಯಕರ್ತರು ಕನ್ಯಾಕುಮಾರಿಯ ಚರ್ಚೊಂದಕ್ಕೆ ಅಕ್ರಮ ಪ್ರವೇಶ ಮಾಡಿ ಪ್ರಾರ್ಥನೆಗೆ ಅಡ್ಡಿಪಡಿಸಿದ್ದರು. ಘಟನೆ ನಡೆದು ಐದು ದಿನಗಳ ನಂತರ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇದುವರೆಗೆ ಒಬ್ಬರನ್ನು ಮಾತ್ರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದ ದುಷ್ಕರ್ಮಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ.

ಅಕ್ಟೋಬರ್ 2ರ ಭಾನುವಾರ ಹಿಂದೂ ಮುನ್ನನಿ ಕಾರ್ಯಕರ್ತರ ಗುಂಪು ತಮ್ಮ ಧ್ವಜವನ್ನು ಹಿಡಿದು ಕನ್ಯಾಕುಮಾರಿ ಜಿಲ್ಲೆಯ ಸುಚಿಂದ್ರಂನಲ್ಲಿರುವ ವೀರಬಾಗುಪತಿಯಲ್ಲಿರುವ ಲಂಡನ್ ಮಿಷನ್ ಚರ್ಚ್‌ಗೆ ಪ್ರವೇಶಿಸಿ ಭಾನುವಾರದ ಪ್ರಾರ್ಥನೆಗೆ ಅಡ್ಡಿಪಡಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚರ್ಚ್‌ನಲ್ಲಿ ಪ್ರಾರ್ಥನೆ ನಡೆಸುತ್ತಿದ್ದ ಜೇಬಾಸಿಂಗ್‌ ಅವರಿಗೆ ದುಷ್ಕರ್ಮಿಗಳ ಗುಂಪು ಕೊಲೆ ಬೆದರಿಕೆ ಹಾಕಿದೆ ಎನ್ನಲಾಗಿದೆ. ಈ ದುಷ್ಕರ್ಮಿಗಳ ಗುಂಪು ಪುತ್ಥಳಂ ಗ್ರಾಮದ ಬಳಿ ವೀರಬಾಗುಪತಿಯಲ್ಲಿ ನಿರ್ಮಾಣ ಮಾಡಲಾಗುವ ಪ್ರಾರ್ಥನಾ ಮಂದಿರ ವಿರೋಧ ವ್ಯಕ್ತಪಡಿಸಿದೆ.

ಇದನ್ನೂ ಓದಿ: ‘ಬಿಲ್ಕಿಸ್ ಬಾನೊ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೇರಿಸಿ’ – ಗುಜರಾತ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ ವಾಗ್ದಾಳಿ

ಹಿಂದೂ ಮುನ್ನನಿ ಕಾರ್ಯಕರ್ತರು ಚರ್ಚ್‌ಗೆ ನುಗ್ಗಿ ಭಕ್ತರಿಗೆ ಬೆದರಿಕೆ ಹಾಕಿ ದಾಳಿ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗ್ರಾಮದ ವೀರಬಾಗುಪತಿಯ ಸ್ಥಳೀಯರು ಲಂಡನ್ ಮಿಷನ್ ಚರ್ಚ್‌ನಲ್ಲಿ ಪ್ರಾರ್ಥನಾ ಸಭೆಗಳನ್ನು ನಡೆಸುವುದನ್ನು ಸ್ವಲ್ಪ ಸಮಯದಿಂದ ವಿರೋಧಿಸುತ್ತಿದ್ದಾರೆ ಎಂದು ದೂರುದಾರ ಜೇಬಸಿಂಗ್ ಅವರು ದಾಖಲಿಸಿದ ಎಫ್‌ಐಆರ್‌‌ನಲ್ಲಿ ಆರೋಪಿಸಿದ್ದಾರೆ.

“ಪ್ರತಿ ವಾರ, ನಾವು ನಮ್ಮ ಚರ್ಚ್‌ನಲ್ಲಿ ಬೆಳಿಗ್ಗೆ 8.30 ರಿಂದ 11 ರವರೆಗೆ ಪ್ರಾರ್ಥನಾ ಸಭೆಗಳನ್ನು ನಡೆಸುತ್ತೇವೆ. ಅಕ್ಟೋಬರ್ 2 ರಂದು, ಬೆಳಿಗ್ಗೆ 9 ಗಂಟೆಯ ಸುಮಾರಿಗೆ, ಗ್ರಾಮ ಮತ್ತು ಗ್ರಾಮದ ಹೊರಗಿನ ವ್ಯಕ್ತಿಗಳು ಮತ್ತು ಮಹಿಳೆಯರ ಗುಂಪು ಚರ್ಚ್ ಬಳಿ ಘೋಷಣೆಗಳನ್ನು ಕೂಗುತ್ತಾ ಜಮಾಯಿಸಿದರು. ಪ್ರಾರ್ಥನೆಗಳನ್ನು ಅಡ್ಡಿಪಡಿಸುವ ಸಲುವಾಗಿ ಬಲವಂತವಾಗಿ ಚರ್ಚ್‌ಗೆ ಪ್ರವೇಶಿಸಿದ್ದಾರೆ” ಎಂದು ಅವರು ದೂರಿನಲ್ಲಿ ಹೇಳಿದ್ದಾರೆ.

“ಉದ್ರಿಕ್ತರ ಗುಂಪು ಭಕ್ತರನ್ನು ನಿಂದಿಸಲು ಮತ್ತು ಕೊಲೆ ಬೆದರಿಕೆ ಹಾಕಿದೆ. ನಾವು ಚರ್ಚ್‌ನಲ್ಲಿ ನಮ್ಮ ಪ್ರಾರ್ಥನಾ ಸಭೆಗಳನ್ನು ನಡೆಸುವುದನ್ನು ಮುಂದುವರಿಸಿದರೆ ಎಲ್ಲರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲಾಗಿದೆ” ಎಂದು ದೂರಿನಲ್ಲಿ ಜೆಬಾಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ದಾಳಿ ಮಾಡಿದ ಬಿಜೆಪಿ ಕಾರ್ಯಕರ್ತರು

ದೂರಿನ ಆಧಾರದ ಮೇಲೆ, ಅಕ್ಟೋಬರ್ 2 ರಂದು ಸುಚೀಂದ್ರಂ ಪೊಲೀಸರು ಎಂಟು ಹಿಂದೂ ಮುನ್ನನಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ಯಾಕುಮಾರಿ ಪೊಲೀಸರು ಸೋಮವಾರ 38 ವರ್ಷದ ಸುರೇಶ್ ಎಂಬಾತನನ್ನು ಬಂಧಿಸಿದ್ದಾರೆ. ಆದರೆ, ಎಫ್‌ಐಆರ್‌ನಲ್ಲಿ ಹೆಸರಿಸಲಾದ ಇತರ ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....