Homeಮುಖಪುಟಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

ಪತ್ರಕರ್ತ ವಿಶ್ವೇಶ್ವರ ಭಟ್ಟರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ವಿರುದ್ಧ ಜನಾಂಗೀಯ ನಿಂದನೆ

- Advertisement -
- Advertisement -

ವಿಶ್ವವಾಣಿ ಪತ್ರಿಕೆಯ ಸಂಪಾದಕರಾದ ವಿಶ್ವೇಶ್ವರ್ ಭಟ್ ತಮ್ಮ ಅಂಕಣ ಬರಹದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ಬಣ್ಣವನ್ನು ಅವಮಾನಕರ ರೀತಿಯಲ್ಲಿ ಚಿತ್ರಿಸಿ ಜನಾಂಗೀಯ ನಿಂದನೆಗೈದಿದ್ದಾರೆ.

ವಿಶ್ವವಾಣಿ ಪತ್ರಿಕೆಯ ಅಕ್ಟೋಬರ್ 06ರ ನೂರೆಂಟು ವಿಶ್ವ ಎಂಬ ಅಂಕಣದಲ್ಲಿ ನದಿಯ ಹೆಸರಿಟ್ಟುಕೊಂಡು ನೀರಿಗಾಗಿ ನರಳುವ ಜೋರ್ಡಾನ್! ಎಂಬ ಬರಹದಲ್ಲಿ “ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ!” ಎಂದು ಬರೆಯುವ ಮೂಲಕ ರಾಷ್ಟ್ರಪತಿಯವರ ಮೈಬಣ್ಣವನ್ನು ಅವಹೇಳನ ಮಾಡಿದ್ದಾರೆ ಎಂದು ಪೀಪಲ್ ಮೀಡಿಯಾ ವರದಿ ಮಾಡಿದೆ.

ವಿಶ್ವೇಶ್ವರ ಭಟ್ ತಮ್ಮ ಅಂಕಣದಲ್ಲಿ ಜೋರ್ಡಾನ್ ದೇಶದ ಬಿಸಿಲಿನ ಝಳವನ್ನು ವರ್ಣಿಸುವಾಗ “ಅಪ್ಪಟ ಬೀನ್ಕಿ ಕೆಂಡ! ಅರ್ಧಗಂಟೆ ಆ ಮರುಭೂಮಿಯಲ್ಲಿ ನಿಂತರೆ ಇಡೀ ಶರೀರವೆಲ್ಲ ಸುಟ್ಟು ಕರಕಲಾದ ಕಾಗೆ! ಥೇಟು ‘ಮುರ್ಮು’ ಅವತಾರ! ಕಣ್ಮುಚ್ಚಿದರೂ ಜೋಗದ ಜಲಪಾತದಂತೆ ಸುರಿಯುವ ನಿಗಿನಿಗಿ ಬಿಸಿಲ ಧಾರೆ” ಎಂದು ಬರೆದಿದ್ದಾರೆ. ಆ ಮೂಲಕ ನಮ್ಮ ರಾಷ್ಟ್ರಪತಿಯವರ ಬಣ್ಣವನ್ನು ಅಪಹಾಸ್ಯ ಮಾಡಿದ್ದಾರೆ.

ರಾಷ್ಟ್ರಪತಿ ಸ್ಥಾನಕ್ಕೆ ಮುರ್ಮುರವರ ಹೆಸರು ಘೋಷಣೆಗೊಂಡ ದಿನದಿಂದಲೂ ಅವರ ಹೆಸರಿನ ಕಾರಣಕ್ಕೆ ಹಲವರು ಅವಹೇಳನ ಮಾಡಿ ಟೀಕೆಗೆ ಗುರಿಯಾಗಿದ್ದರು. ದ್ರೌಪದಿ ಹೆಸರಿದ್ದ ಕಾರಣಕ್ಕೆ ಗೇಲಿ ಮಾಡಲಾಗಿತ್ತು. ಕನ್ನಡ ಪ್ರಭ ಪತ್ರಿಕೆ ‘ದ್ರೌಪದಿ ಮಹಾಭಾರತದ ರಾಷ್ಟ್ರಪತಿ’ ಎಂದು ಕರೆದಿತ್ತು. ಅಲ್ಲದೆ ಪ್ರತಿಭಾ ಪಾಟೀಲ್ ನಂತರ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬರೆದಿತ್ತು. ಇತ್ತೀಚೆಗೆ ಬಿಜೆಪಿ ಶಾಸಕ ಕೂಡ ಮೊದಲ ಮಹಿಳಾ ರಾಷ್ಟ್ರಪತಿ ಎಂದು ಬ್ಯಾನರ್‌ನಲ್ಲಿ ಬರೆಸಿದ್ದರು.

ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಮಾತಿನ ನಡುವೆ ರಾಷ್ಟ್ರಪತ್ನಿ ಎಂದು ಹೇಳಿದ್ದಕ್ಕಾಗಿ ಬಿಜೆಪಿ ಸಂಸತ್ತಿನ ಕಲಾಪ ನಡೆಯದಂತೆ 2-3 ದಿನ ಭಾರೀ ಪ್ರತಿಭಟನೆ ನಡೆಸಿತ್ತು. ಚೌಧರಿ ಬಾಯ್ತಪ್ಪಿನಿಂದ ಆದ ಪ್ರಮಾದ ಎಂದು ಕ್ಷಮೆ ಕೇಳಿದರೂ ಸಹ ಬಿಜೆಪಿ ಪ್ರತಿಭಟನೆ ನಿಂತಿರಲಿಲ್ಲ. ಈಗ ಪತ್ರಕರ್ತ ವಿಶ್ವೇಶ್ವರ ಭಟ್ ರಾಷ್ಟ್ರಪತಿ ದ್ರೌಪದಿ ಮುರ್ಮುರವರ ವಿರುದ್ಧ ಜನಾಂಗೀಯ ನಿಂದನೆ ನಡೆಸಿದ್ದಾರೆ. ಇದಕ್ಕೆ ಬಿಜೆಪಿ ಹೇಗೆ ಪ್ರತಿಕ್ರಿಯಿಸುತ್ತದೆ ಕಾದು ನೋಡಬೇಕಿದೆ.

ಇದನ್ನೂ ಓದಿ; ಬುಡಕಟ್ಟು ಮಹಿಳೆ ಅತ್ಯುನ್ನತ ಸ್ಥಾನಕ್ಕೇರಿರುವುದು ಪ್ರಜಾಪ್ರಭುತ್ವದ ಶಕ್ತಿ: ನೂತನ ರಾಷ್ಟ್ರಪತಿ ಮುರ್ಮು ಮೊದಲ ಭಾಷಣ ಹೀಗಿತ್ತು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮನುವಾದಿ ವಿಶ್ವೇಶ್ವರಬಟ್ಟನಿಗೆ ಆದಿವಾಸಿ ಮಹಿಳೆಯೊಬ್ಬರು ಈ ದೇಶದ ರಾಷ್ಟ್ರಪತಿ ಆಗಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಇಂತಹ ಮಾತುಗಳು ಬರುತ್ತಿವೆ.

  2. ಭಾರತ ದೇಶದ ಪ್ರಪ್ರಥಮ ಪ್ರಜೆ…
    ಭಾರತ ದೇಶದ ಸೇನೆಯ ಮುಖ್ಯಸ್ಥರು…
    ಭಾರತ ದೇಶದ ಸಂವಿಧಾನಿಕ ಮುಖ್ಯಸ್ಥರು
    ಭಾರತ ದೇಶದ ಅತ್ಯುನ್ನತ ಹುದ್ದೆ..
    ಅಲಂಕರಿಸಿದ ಗೌರವಾನ್ವಿತ ರಾಷ್ಟ್ರಪತಿಗಳು ಆದ
    ದ್ರೌಪದಿ ಮುರ್ಮುರವರು ನಮ್ಮ ಭಾರತೀಯರ ಹೆಮ್ಮೆ. ಮಾನ್ಯರ ಬಗ್ಗೆ ಈ ರೀತಿಯ ಕ್ಷುಲ್ಲಕ; ಕೀಳು ಮನಸ್ಥಿತಿ ಹೊಂದಿರುವ ಭಟ್ ರವರಿಗೆ ದಿಕ್ಕಾರ…

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...