Homeಮುಖಪುಟಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

ಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

- Advertisement -
- Advertisement -

ಗುಜರಾತ್‌ನ ನವಸಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕ, ಬುಡಕಟ್ಟು ನಾಯಕ ಅನಂತ್ ಪಟೇಲ್ ಮೇಲೆ ಕೆಲವು ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರು ಬಿಜೆಪಿಯ ಮುಖಂಡರೆಂದು ಆರೋಪಿಸಲಾಗಿದೆ.

“ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರದ ಆಡಳಿತದಲ್ಲಿ ಯಾರೇ ಧ್ವನಿ ಎತ್ತಿದರೂ ಅವರನ್ನು ಹೊಡೆದು ಜೈಲಿಗೆ ಕಳುಹಿಸಲಾಗುತ್ತದೆ” ಎಂದು ಅನಂತ್ ಪಟೇಲ್ ತಿಳಿಸಿದ್ದಾರೆ.

“ಸಭೆಯೊಂದರಲ್ಲಿ ಪಾಲ್ಗೊಳ್ಳಲು ನವಸಾರಿಯ ಖೇರ್ಗಾಮ್ ತಲುಪುತ್ತಿದ್ದಾಗ ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳು ನನ್ನ ಕಾರನ್ನು ಧ್ವಂಸಗೊಳಿಸಿ ಥಳಿಸಿದ್ದಾರೆ” ಎಂದು ಬುಡಕಟ್ಟು ನಾಯಕ ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಗೂಂಡಾಗಳು ತಮ್ಮ ಮೇಲೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿರುವ ಅವರು, “ನೀವು ಆದಿವಾಸಿಯಾಗಿ ನಾಯಕರಾಗುತ್ತಿದ್ದೀರಿ. ಆದಿವಾಸಿಯನ್ನು ಇಲ್ಲಿ ಕಾಲಿಡಲು ಬಿಡುವುದಿಲ್ಲ” ಎಂದಿರುವುದಾಗಿ ತಿಳಿಸಿದ್ದಾರೆ.

ಬುಡಕಟ್ಟು ನಾಯಕನನ್ನು ಥಳಿಸಿರುವ ಸುದ್ದಿ ತಿಳಿದ ತಕ್ಷಣ, ಕಾಂಗ್ರೆಸ್ ಶಾಸಕರ ಬೆಂಬಲಕ್ಕೆ ಜನರು ದೌಡಾಯಿಸಿದ್ದಾರೆ. ಶನಿವಾರ ರಾತ್ರಿ ಪ್ರತಿಭಟನಾಕಾರರ ಭಾರೀ ಗುಂಪು ಜಮಾಯಿಸಿತು. ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳನ್ನು ಹಿಡಿಯುವವರೆಗೆ 14 ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಪಟೇಲ್, “ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳು ನನ್ನ ಕಾರನ್ನು ಧ್ವಂಸಗೊಳಿಸಿದರು. ನಾನು ಸಭೆಯಲ್ಲಿ ಪಾಲ್ಗೊಳ್ಳಲು ನವಸಾರಿಯ ಖೇರ್ಗಾಮ್‌ಗೆ ತಲುಪುತ್ತಿದ್ದಾಗ ನನ್ನನ್ನು ಹೊಡೆಯಲಾಯಿತು. ಆದಿವಾಸಿಗಳಾಗಿರುವ ನೀನು ನಾಯಕನಾಗುತ್ತಿದ್ದೀಯ, ನಿನ್ನನ್ನು ಬಿಡುವುದಿಲ್ಲ. ಒಬ್ಬ ಆದಿವಾಸಿ ಇಲ್ಲಿ ನಡೆಯಲು ಬಿಡುವುದಿಲ್ಲ ಎಂದು ನಿಂದಿಸಿದರು” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಬೀದರ್‌: ಮದರಸಾಕ್ಕೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ, ಪೂಜೆ; ಪ್ರಕರಣ ದಾಖಲು

“ಜಿಲ್ಲಾ ಪಂಚಾಯತ್ ಮುಖ್ಯಸ್ಥರು ಮತ್ತು ಅವರ ಗೂಂಡಾಗಳನ್ನು ಹಿಡಿಯುವವರೆಗೂ ನಾವು ಇಲ್ಲಿ ಪ್ರತಿಭಟನೆ ನಡೆಸುತ್ತೇವೆ. ಅಲ್ಲಿಯವರೆಗೆ 14 ಜಿಲ್ಲೆಗಳ ಹೆದ್ದಾರಿಗಳನ್ನು ಆದಿವಾಸಿಗಳು ನಿರ್ಬಂಧಿಸಲಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಯಾರೇ ಧ್ವನಿ ಎತ್ತಿದರೂ ಅವರನ್ನು ಹೊಡೆದು ಜೈಲಿಗೆ ಕಳುಹಿಸಲಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ನಿನ್ನೆ ನಾಲ್ಕೈದು ಮಂದಿ ಅನಂತ್ ಪಟೇಲ್ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಪಟೇಲ್‌ ತಮ್ಮ ಆದಿವಾಸಿ ಬೆಂಬಲಿಗರೊಂದಿಗೆ ಪ್ರತಿಭಟನೆಗೆ ಕುಳಿತರು. ಮೂರು ದಿನಗಳಲ್ಲಿ ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರಿಗೆ ಭರವಸೆ ನೀಡಲಾಗಿದೆ. ಪೊಲೀಸರನ್ನು ನಿಯೋಜಿಸಲಾಗಿದೆ. ಆದರೆ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ನಿಯಮಗಳ ಪ್ರಕಾರ ದೂರು ದಾಖಲಿಸಲಾಗಿದೆ” ಎಂದು ನವಸಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...