Homeಕರ್ನಾಟಕಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಕಸ್ಟಡಿಯಲ್ಲಿ ಸಾವಾಗಿದೆ ಎಂಬುದನ್ನು ಬೆಂಗಳೂರು ಪೊಲೀಸರು ನಿರಾಕರಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿದ್ದಾರೆ.

- Advertisement -
- Advertisement -

ಸೆಪ್ಟೆಂಬರ್ 24ರಂದು ಶವವಾಗಿ ಪತ್ತೆಯಾದ ವಲಸೆ ಕಾರ್ಮಿಕ, ಹಿಂದಿನ ರಾತ್ರಿ ನಡೆದಿದ್ದ ಗುಂಪು ದಾಳಿಯಿಂದಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಬೆಂಗಳೂರು ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಸೆಪ್ಟೆಂಬರ್ 23ರ ರಾತ್ರಿ ಕೆ.ಆರ್.ಪುರಂನ ರಸ್ತೆಬದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು. ಮಕ್ಕಳನ್ನು ಅಪರಿಸುವ ವ್ಯಕ್ತಿ ಈತನೆಂದು ಶಂಕಿಸಿದ ಜನರ ಗುಂಪು ಹಲ್ಲೆ ನಡೆಸಿದೆ ಎಂದು ವರದಿಯಾಗಿದೆ.

ಡಿಸಿಪಿ (ವೈಟ್‌ಫೀಲ್ಡ್) ಎಸ್ ಗಿರೀಶ್ ಈ ಕುರಿತು ಮಾಹಿತಿ ನೀಡಿದ್ದು, “ಅಪರಿಚಿತ ವ್ಯಕ್ತಿಯ ದೇಹದ ಮೇಲೆ ಯಾವುದೇ ದೊಡ್ಡ ಗಾಯಗಳಿಲ್ಲದ ಕಾರಣ ಆರಂಭದಲ್ಲಿ ಸಿಆರ್‌ಪಿಸಿ 174 (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪತ್ತೆಹಚ್ಚಿದ್ದರು. ಆರು ಜನರ ಗುಂಪು ವಲಸೆ ಕಾರ್ಮಿಕ ಮೇಲೆ ಹಲ್ಲೆ ನಡೆಸಿರುವುದು ಕಂಡು ಬಂದಿತು. ಹಲ್ಲೆಯಿಂದ ಉಂಟಾದ ಗಾಯಗಳಿಂದಾಗಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಮರಣೋತ್ತರ ವರದಿ ಬಂದಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಶ್ರೀನಿ ಮತ್ತು ಯಾಸೀನ್ ಸೇರಿದಂತೆ ಆರು ಜನರ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ಜಾರ್ಖಂಡ್‌ನ ವಲಸೆ ಕಾರ್ಮಿಕ ಸಂಜಯ್ ತುಡು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದರು” ಎಂದು ವಿವರಿಸಿದ್ದಾರೆ.

ಸಂಜಯ್ ಮದ್ಯದ ಅಮಲಿನಲ್ಲಿ ಆ ಪ್ರದೇಶದಲ್ಲಿ ತಿರುಗಾಡುತ್ತಿದ್ದರು. ಮನೆಯೊಂದಕ್ಕೆ ನುಗ್ಗಿ ಮಗುವನ್ನು ಮನೆಯಿಂದ ಎಳೆದೊಯ್ಯಲು ಯತ್ನಿಸಿದ್ದರು ಎಂಬುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಮಗುವಿನ ತಂದೆ ಸಂಜಯ್‌ನನ್ನು ಹಿಡಿದು ಹೊಡೆಯಲಾರಂಭಿಸಿದರು. ತಕ್ಷಣ ಆರರಿಂದ ಏಳು ಜನರ ಗುಂಪು ಅವರನ್ನು ಸುತ್ತುವರಿಯಿತು. ಮಕ್ಕಳ ಕಿಡ್ನಾಪರ್‌ ಎಂದು ಶಂಕಿಸಿ ತೀವ್ರವಾಗಿ ಹಲ್ಲೆ ನಡೆಸಿದರು. ಇದನ್ನು ಇತರರು ನೋಡುತ್ತಿದ್ದರು. ನಂತರ ರಾಮಮೂರ್ತಿನಗರ ಪೊಲೀಸರು ಸ್ಥಳಕ್ಕೆ ಬಂದು ಸಂಜಯ್‌ ಅವರನ್ನು ಠಾಣೆಗೆ ಕರೆದೊಯ್ದರೂ ಅವರು ದೂರು ನೀಡಲು ನಿರಾಕರಿಸಿ ನಂತರ ಠಾಣೆಯಿಂದ ಹೊರಹೋಗಿದ್ದಾರೆ ಎಂದು ಪೊಲೀಸರು ಹೇಳುತ್ತಿದ್ದಾರೆ.

ವಲಸೆ ಕಾರ್ಮಿಕ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾನೆ ಎಂಬ ಆರೋಪ ಬಂದಿದ್ದು, ಆನಂತದಲ್ಲಿ ಪೊಲೀಸರ ಹೇಳಿಕೆ ಹೊರಬಿದ್ದಿದೆ. ಬೆಂಗಳೂರು ಮೂಲದ ಹೋರಾಟಗಾರ ಪರಮೇಶ್ ವಿ ಅವರು ಕರ್ನಾಟಕ ಹೈಕೋರ್ಟ್‌ಗೆ ಪತ್ರ ಬರೆದಿದ್ದು, “ಇದು ಕಸ್ಟಡಿ ಸಾವಿನ ಪ್ರಕರಣ. ಸಂಜಯ್ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡು ಬಂದಿದೆ” ಎಂದು ದೂರಿದ್ದಾರೆ.

ತಮ್ಮ ಮೇಲೆ ಬಂದಿರುವ ಆರೋಪವನ್ನು ಪೊಲೀಸ್ ಅಧಿಕಾರಿಗಳು ನಿರಾಕರಿಸಿದ್ದಾರೆ. ವಲಸೆ ಕಾರ್ಮಿಕನು ಕೇವಲ ನಾಲ್ಕು ನಿಮಿಷಗಳ ಕಾಲ ಪೊಲೀಸ್ ಠಾಣೆಯಲ್ಲಿದ್ದರು. ತನ್ನ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ದೂರು ನೀಡಲು ಅವರು ನಿರಾಕರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸಿಪಿ (ಪೂರ್ವ) ಭೀಮಾಶಂಕರ್ ಎಸ್ ಗುಳೇದ್ ಮಾತನಾಡಿ, “ಸಾವಿಗೀಡಾದ ವ್ಯಕ್ತಿಯು ಕುಡಿದಿದ್ದರು. ಪೊಲೀಸ್ ಠಾಣೆಗೆ ಕರೆತಂದಾಗ ಪ್ರಜ್ಞಾ ಸ್ಥಿತಿಯಲ್ಲಿದ್ದು, ಎಚ್ಚರದಿಂದಿದ್ದರು. ತಮ್ಮ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ದೂರು ನೀಡಲು ನಿರಾಕರಿಸಿದರು. ಆನಂತರ ಹೊರಟುಹೋದರು” ಎಂದಿದ್ದಾರೆ.

“ನಾವು ಈಗಾಗಲೇ ಪೊಲೀಸ್ ಠಾಣೆಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದೇವೆ. ಪೊಲೀಸ್ ಠಾಣೆಯಲ್ಲಿ ಅವರು ನಾಲ್ಕು ನಿಮಿಷಗಳು ಇದ್ದದ್ದು ದಾಖಲಾಗಿದೆ. ಪೊಲೀಸರು ಹಲ್ಲೆ ನಡೆಸಿರುವ ಪ್ರಶ್ನೆಯೇ ಇಲ್ಲ. ದರ್ಗಾ ಮೊಹಲ್ಲಾದಲ್ಲಿ ಗುಂಪೊಂದು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದೆ ಎಂದು ಕರೆ ಬಂದಿರುವುದು ಕಾಲ್‌ ರೆಕಾರ್ಡ್‌ನಲ್ಲಿ ದಾಖಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಗುಜರಾತ್‌: ಕಾಂಗ್ರೆಸ್ ಶಾಸಕ ಅನಂತ್‌ ಪಟೇಲ್‌ ಮೇಲೆ ಹಲ್ಲೆ; ಕೃತ್ಯದ ಹಿಂದೆ ಬಿಜೆಪಿ ಕೈವಾಡ?

ಮೃತದೇಹದ ವಿಳಾಸ ಪತ್ತೆ ಹಚ್ಚಲು ಸುಮಾರು ಎಂಟು ದಿನಗಳನ್ನು ತೆಗೆದುಕೊಳ್ಳಲಾಯಿತು. ನಂತರ ಜಾರ್ಖಂಡ್‌ನಲ್ಲಿರುವ ಅವರ ಕುಟುಂಬವನ್ನು ಸಂಪರ್ಕಿಸಲಾಯಿತು. ಅಕ್ಟೋಬರ್ 3ರಂದು ಮರಣೋತ್ತರ ಪರೀಕ್ಷೆ ನಡೆಸಿ, ಅವರ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಗುರುವಾರ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಅವರ ಮೇಲೆ ಹಲ್ಲೆ ನಡೆಸಿರುವುದು ಕಂಡು ಬಂದಿದೆ. ಅವರ ದೇಹದ ಮೇಲೆ ಹಲವಾರು ಗಾಯಗಳಾಗಿರುವುದು ದಾಖಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

“ಮಕ್ಕಳ ಅಪಹರಣಕಾರರು ಇದ್ದಾರೆ” ಎಂಬ ವದಂತಿಯನ್ನು ವಾಟ್ಸಾಪ್‌ನಲ್ಲಿ ಹರಡಿದ ಕಾರಣ 2018ರ ಮೇ ತಿಂಗಳಲ್ಲಿ ನಗರದ ಚಾಮರಾಜಪೇಟೆಯಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಅದೇ ರೀತಿ, ಜುಲೈ 2018 ರಲ್ಲಿ ಕರ್ನಾಟಕದ ಬೀದರ್‌ನಲ್ಲಿ ಹೈದರಾಬಾದ್‌ನ ಟೆಕ್ಕಿಯೊಬ್ಬರನ್ನು ಕೊಲ್ಲಲಾಗಿತ್ತು. ಮಕ್ಕಳ ಕಿಡ್ನಾಪರ್‌ ಬಂದಿದ್ದಾರೆಂದು ಈಗಲೂ ವಾಟ್ಸ್‌ಅಪ್‌ನಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರು ಇದ್ದಾರೆ. ಈ ಸುಳ್ಳು ಸುದ್ದಿಗಳ ಕುರಿತು ಕನ್ನಡದ ‘ಎನ್‌ಸುದ್ದಿ.ಕಾಂ’ ನಿರಂತರ ವರದಿ ಮಾಡುತ್ತಲೇ ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...