Homeಕರ್ನಾಟಕಬೆಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; ಓರ್ವ ಬಂಧನ

ಬೆಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; ಓರ್ವ ಬಂಧನ

- Advertisement -
- Advertisement -

ಪಶ್ಚಿಮ ಬೆಂಗಳೂರಿನಲ್ಲಿ 17 ವರ್ಷದ ಯುವತಿಯ ಮೇಲೆ ಅತ್ಯಾಚಾರ ಮತ್ತು ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ 24 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

“ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ” ಎಂದು ಬಾಲಕಿಯ ಪೋಷಕರು ನೀಡಿದ ಪೊಲೀಸ್ ದೂರಿನಲ್ಲಿ ತಿಳಿಸಿದ್ದರೆ, “ಒಬ್ಬ ವ್ಯಕ್ತಿ ಮಾತ್ರ ಅತ್ಯಾಚಾರದಲ್ಲಿ ಭಾಗಿಯಾಗಿರುವುದು ಆರಂಭಿಕ ತನಿಖೆಯಲ್ಲಿ ಕಂಡುಬಂದಿದೆ” ಎಂದು ಪೊಲೀಸರು ಹೇಳುತ್ತಿದ್ದಾರೆ.

ಪ್ಲೈವುಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ದೇವರಾಜ್ (24) ಎಂಬಾತನನ್ನು ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ)’ ಕಾಯ್ದೆಯಡಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ದೇವರಾಜ್ ಮತ್ತು ಬಾಲಕಿ ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಆರು ತಿಂಗಳ ಹಿಂದೆ ಬಾಲಕಿಯು ಅವನೊಂದಿಗೆ ದೂರವಾಗಲು ನಿರ್ಧರಿಸಿದಾಗ ಇಬ್ಬರ ನಡುವೆ ವಿವಾದಗಳು ಉಂಟಾದವು ಎನ್ನಲಾಗಿದೆ.

ಸೆಪ್ಟೆಂಬರ್‌ನಲ್ಲಿ ಮತ್ತೊಮ್ಮೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆತ ಕೃತ್ಯದ ಒಂದು ಗಂಟೆ ಅವಧಿಯ ವಿಡಿಯೋ ಮಾಡಿಕೊಂಡಿದ್ದ. “ಸಂಬಂಧವನ್ನು ಕೊನೆಗಾಣಿಸಿದರೆ ವಿಡಿಯೊವನ್ನು ವೈರಲ್‌ ಮಾಡುತ್ತೇನೆ” ಎಂದು ಆಕೆಗೆ ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿದ್ದಾನೆ.

ಬೇರೆಯವರನ್ನು ಮದುವೆಯಾದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ತನ್ನ ಪೋಷಕರಿಗೆ ವಿಷಯವನ್ನು ತಿಳಿಸಿದ್ದಾಳೆ.

ಶುಕ್ರವಾರ ಪೋಷಕರು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೇವರಾಜ್ ಮತ್ತು ಆತನ ಮೂವರು ಗೆಳೆಯರಾದ ಶೇಖರ್, ಬಸವ ಮತ್ತು ಭೈರವ ಸೇರಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿದ್ದಾರೆ. ಪ್ರಾಥಮಿಕ ತನಿಖೆಯ ನಂತರ, “ದೇವರಾಜ್ ಮಾತ್ರ ಕೃತ್ಯದಲ್ಲಿ ಭಾಗಿಯಾಗಿದ್ದಾನೆ” ಎಂದು ಪೊಲೀಸರು ಹೇಳುತ್ತಿದ್ದಾರೆ.

“ಪೋಷಕರ ದೂರಿನ ಆಧಾರದ ಮೇಲೆ ನಾವು ಪೋಕ್ಸೋ ಕಾಯ್ದೆಯಡಿ ಸಾಮೂಹಿಕ ಅತ್ಯಾಚಾರದ ಪ್ರಕರಣವನ್ನು ಕೈಗೆತ್ತಿಕೊಂಡಿದ್ದೇವೆ. ಆದರೆ ಇದುವರೆಗಿನ ತನಿಖೆಯಲ್ಲಿ ಇತರ ಮೂವರು ಯುವಕರು ಕೃತ್ಯದಲ್ಲಿ ಭಾಗಿಯಾಗಿಲ್ಲ ಎಂದು ತೋರಿಸುತ್ತದೆ. ನಂತರದಲ್ಲಿ ಏನಾದರೂ ಅವರ ವಿರುದ್ಧ ಸಾಕ್ಷ್ಯಾಧಾರಗಳು ದೊರೆತರೆ ನಾವು ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ಹೇಳಿರುವುದಾಗಿ ‘ಡೆಕ್ಕನ್ ಹೆರಾಲ್ಡ್‌’ ವರದಿ ಮಾಡಿದೆ.

ಇತರ ಶಂಕಿತರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಇನ್ನೊಂದು ಪೊಲೀಸ್ ಮೂಲವು ಪ್ರತಿಕ್ರಿಯಿಸಿದ್ದು, “ಬಾಲಕಿಯ ಮೇಲೆ ನಾಲ್ವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಾವು ಪ್ರಕರಣವನ್ನು ಕೈಗೆತ್ತಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದೇವೆ” ಎಂದಿದೆ.

ಉತ್ತರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ

ಗಾಜಿಯಾಬಾದ್‌ನ 12 ವರ್ಷದ ಅತ್ಯಾಚಾರ ಸಂತ್ರಸ್ತೆ ವೈದ್ಯಕೀಯ ಕಾಲೇಜಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಗಾಜಿಯಾಬಾದ್‌ನ ಖೋಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿಯನ್ನು ಅಕ್ಟೋಬರ್ 1 ರಂದು ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು ಎಂದು ವೈದ್ಯಕೀಯ ಕಾಲೇಜು ಪ್ರಾಂಶುಪಾಲ ಡಾ.ಆರ್.ಕೆ.ಗುಪ್ತಾ ತಿಳಿಸಿದ್ದಾರೆ.

ಬಾಲಕಿ 7ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ. ಅವರ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ 19 ವರ್ಷದ ಯುವಕನೊಬ್ಬನು ಬಾಲಕಿಯನ್ನು ಬೆದರಿಸಿ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ ಎಂದು ಆಕೆಯ ಕುಟುಂಬ ಸದಸ್ಯರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...