Homeಮುಖಪುಟನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

ನಿತೀಶ್‌ ಕುಮಾರ್‌ಗೆ ವಯಸ್ಸಾಯ್ತು: ಪ್ರಶಾಂತ್ ಕಿಶೋರ್‌ ತಿರುಗೇಟು

- Advertisement -
- Advertisement -

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ಭ್ರಾಂತಿಗೊಳಗಾಗಿದ್ದು ರಾಜಕೀಯವಾಗಿ ಪ್ರತ್ಯೇಕಗೊಳ್ಳುತ್ತಿದ್ದಾರೆ. ಅವರು ನಿಜವಾಗಿ ಅರ್ಥ ಮಾಡಿಕೊಳ್ಳಬೇಕಾದ ಸಂಗತಿಗಳಿಗಿಂತ ಬೇರೆ ವಿಷಯಗಳನ್ನು ಮಾತನಾಡುತ್ತಿದ್ದಾರೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ತಿರುಗೇಟು ನೀಡಿದ್ದಾರೆ.

“ನಿತೀಶ್‌ ಕುಮಾರ್ ಅವರಿಗೆ ವಯಸ್ಸಾಗಿರುವುದನ್ನು ಅವರ ಹೇಳಿಕೆ ಪ್ರತಿಫಲಿಸುತ್ತಿದೆ” ಎಂದು ಕುಟುಕಿದ್ದಾರೆ.

“ಬಿಹಾರದಲ್ಲಿ ಜನ್ ಸೂರಜ್ ಯಾತ್ರೆಯನ್ನು ಇತ್ತೀಚೆಗೆ ಆರಂಭಿಸಿರುವ ರಾಜಕೀಯ ತಂತ್ರಗಾರ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಹೇಳಿದ ಬಳಿಕ ಈ ಪ್ರತಿಕ್ರಿಯೆ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಬಿಜೆಪಿಯ ಆಣತಿಯಂತೆ ಕೆಲಸ ಮಾಡುತ್ತಿದ್ದೇನೆ, ಕಾಂಗ್ರೆಸ್‌ನೊಂದಿಗೆ ಜೆಡಿಯು ವಿಲೀನಗೊಳ್ಳಲು ನಾನು ತಿಳಿಸಿದ್ದೇನೆ ಎಂದು ನಿತೀಶ್ ಕುಮಾರ್‌ ಆರೋಪಿಸಿದ್ದಾರೆ. ಅದು ಹೇಗೆ ಸಾಧ್ಯ? ನಾನು ಬಿಜೆಪಿಯನ್ನು ಬೆಂಬಲಿಸುತ್ತಿದ್ದರೆ, ಕಾಂಗ್ರೆಸ್ ಅನ್ನು ಬಲಪಡಿಸಲು ಇವರನ್ನೇಕೆ ಕೇಳುತ್ತಿದ್ದೆ? ಎರಡನೆಯ ಪ್ರತಿಪಾದನೆ ಸರಿಯಾಗಿದ್ದರೆ, ಮೊದಲನೆಯದ್ದು ತಪ್ಪಾಗುತ್ತದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಅವರು (ಕುಮಾರ್) ತಮ್ಮ ವಯೋಸಹಜ ಪರಿಣಾಮ ಹಾಗೂ ಭ್ರಮೆಗೆ ಒಳಗಾಗಿದ್ದಾರೆ. ನಂಬಿಕಸ್ಥರಲ್ಲದ ಜನರಿಂದ ಅವರು ಸುತ್ತುವರೆದಿರುವ ಕಾರಣ ರಾಜಕೀಯವಾಗಿ ಪ್ರತ್ಯೇಕಿಸಲ್ಪಟ್ಟಿದ್ದಾರೆ. ಹೀಗಾಗಿ ಅವರು ಅರ್ಥವಿಲ್ಲದ ಮಾತನಾಡುತ್ತಾರೆ” ಎಂದು ಹೇಳಿದ್ದಾರೆ.

ಶನಿವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಮಾತನಾಡಿ, “ಪ್ರಶಾಂತ್ ಕಿಶೋರ್‌ ಇತ್ತೀಚೆಗೆ ನನ್ನನ್ನು ಭೇಟಿಯಾಗಲು ತಾವಾಗಿಯೇ ಬಂದರು. ನಾನು ಅವರನ್ನು ಆಹ್ವಾನಿಸಲಿಲ್ಲ. ಅವರು ತುಂಬಾ ಮಾತನಾಡುತ್ತಾರೆ. ಒಮ್ಮೆ ಅವರು ನನ್ನ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವಂತೆ ಹೇಳಿದ್ದರು” ಎಂದು ತಿಳಿಸಿದ್ದರು.

“ಅವರು ಏನು ಬೇಕಾದರೂ ಮಾತನಾಡಲಿ. ಅವರು ಏನು ಹೇಳಿದರೂ ಅರ್ಥವಿರುವುದಿಲ್ಲ. ನಾಲ್ಕೈದು ವರ್ಷಗಳ ಹಿಂದೆಯೇ ಕಾಂಗ್ರೆಸ್‌ನಲ್ಲಿ ವಿಲೀನ ಆಗುವಂತೆ ಹೇಳಿದ್ದರು. ಈಗ ಕಿಶೋರ್‌ ಬಿಜೆಪಿಗಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿಯವರ ಜನ್ಮದಿನದಂದು ಭಿತಿಹರ್ವಾ ಗಾಂಧಿ ಆಶ್ರಮದಿಂದ ‘ಜನ್ ಸೂರಜ್’ ಪಾದಯಾತ್ರೆಯನ್ನು ಪ್ರಶಾಂತ್‌ ಕಿಶೋರ್ ಆರಂಭಿಸಿದ್ದಾರೆ.

ಅಂದು ಮಾತನಾಡಿದ ಅವರು, “ಒಬ್ಬ ವ್ಯಕ್ತಿ ಅಥವಾ ಕುಟುಂಬ ಅಥವಾ ನಿರ್ದಿಷ್ಟ ಸಾಮಾಜಿಕ ವ್ಯವಸ್ಥೆಗೆ ಸಂಬಂಧಿಸದೆ ಇಡೀ ಸಮಾಜಕ್ಕಾಗಿ ರಾಜಕೀಯ ವ್ಯವಸ್ಥೆಯನ್ನು ನಿರ್ಮಿಸಲು ನನ್ನ ತಂಡವು ಪ್ರಯತ್ನಿಸುತ್ತಿದೆ” ಎಂದು ಘೋಷಿಸಿದ್ದರು.

ಇದನ್ನೂ ಓದಿರಿ: ಬೆಂಗಳೂರು: ಮಕ್ಕಳ ಕಿಡ್ನಾಪರ್‌‌ ಎಂದು ಶಂಕಿಸಿ ವಲಸೆ ಕಾರ್ಮಿಕನ ಕೊಲೆ; ಪೊಲೀಸರ ಹೇಳಿಕೆ

ಕಿಶೋರ್ ಮತ್ತು ಅವರ ತಂಡವು ಸುಮಾರು 3,500 ಕಿಲೋಮೀಟರ್‌ಗಳನ್ನು ಕ್ರಮಿಸಲಿದೆ. 38 ಜಿಲ್ಲೆಗಳಲ್ಲಿ ಪಾದಯಾತ್ರೆ ಮಾಡಲಿದೆ. ಇದು ಪೂರ್ಣಗೊಳ್ಳಲು ಸುಮಾರು ಒಂದೂವರೆ ವರ್ಷಗಳನ್ನು ತೆಗೆದುಕೊಳ್ಳುತ್ತದೆ. ಪಾದಯಾತ್ರೆಯ ನಂತರ ಅವರು ತಮ್ಮ ರಾಜಕೀಯ ಪಕ್ಷವನ್ನು ಘೋಷಿಸುವ ಸಾಧ್ಯತೆ ಇದೆ.

ಚುನಾವಣೆಗೆ ಸ್ಪರ್ಧಿಸಲು ಸೂಕ್ತ ವ್ಯಕ್ತಿಗಳನ್ನು ಸಮಾಜ ಗುರುತಿಸುವಂತೆ ಮಾಡುವುದೇ ಪಾದಯಾತ್ರೆಯ ಹಿಂದಿನ ಉದ್ದೇಶ ಎಂದು ಕಿಶೋರ್ ಹೇಳಿದ್ದಾರೆ.

“ನಾನು ಪಂಚಾಯತ್ ಮತ್ತು ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆಯನ್ನು ಮುಗಿಸಿದ ತಕ್ಷಣ, ಸಂಭವನೀಯ ಅಭ್ಯರ್ಥಿಗಳ ಬಗ್ಗೆ ನಮಗೆ ಸ್ಪಷ್ಟತೆ ಇರುತ್ತದೆ” ಎಂದಿರುವ ಅವರು, “ಒಬ್ಬ ರಾಜಕಾರಣಿ ಚುನಾಯಿತನಾದ ನಂತರ ಆತನ ಮಗ ಅಧಿಕಾರಕ್ಕೆ ಬರುತ್ತಾನೆ. ಈ ಚಿಂತನೆಯನ್ನು ನಾವು ಬದಲಾಯಿಸಬೇಕಾಗಿದೆ. ಇದು ಇನ್ನು ಮುಂದೆ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮ, ಸಿದ್ಧಾಂತದ ಹೆಸರಲ್ಲಿ ಹೆಚ್ಚಾಗಿ ಮತ ಹಾಕುತ್ತಾರೆ. ಮುಂದಿನ ಬಾರಿ, ನಿಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವವರಿಗೆ ಮತ ​​ಹಾಕಬೇಕು” ಎಂದು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...