Homeಮುಖಪುಟಬೌದ್ಧಧಮ್ಮದ ಅನುಯಾಯಿ ರಾಜೇಂದ್ರ ಪಾಲ್ ರಾಜೀನಾಮೆ; ಎಎಪಿಯ ಮೃದು ಹಿಂದುತ್ವ ಮುನ್ನೆಲೆಗೆ

ಬೌದ್ಧಧಮ್ಮದ ಅನುಯಾಯಿ ರಾಜೇಂದ್ರ ಪಾಲ್ ರಾಜೀನಾಮೆ; ಎಎಪಿಯ ಮೃದು ಹಿಂದುತ್ವ ಮುನ್ನೆಲೆಗೆ

ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಸ್ವೀಕರಿಸಿದ ಪ್ರತಿಜ್ಞೆಗಳನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ.

- Advertisement -
- Advertisement -

ದೆಹಲಿ ಕ್ಯಾಬಿನೆಟ್ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರು ‘ಧಾರ್ಮಿಕ ಮತಾಂತರ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಉಂಟಾದ ವಿವಾದದ ನಡುವೆ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಗುಜರಾತ್‌ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಆದರೆ ಕಾರ್ಯಕ್ರಮಕ್ಕೆ ಒಂದು ದಿನ ಮುಂಚಿತವಾಗಿ ಕೇಜ್ರಿವಾಲ್ ಅವರನ್ನು ‘ಹಿಂದೂ ವಿರೋಧಿ’ ಎಂದು ಪ್ರಚಾರ ಮಾಡಲಾಯಿತು. ಸ್ಕಲ್ ಕ್ಯಾಪ್ ಧರಿಸಿರುವ ಬ್ಯಾನರ್‌ಗಳನ್ನು ರಾಜ್ಯದ ಹಲವಾರು ನಗರಗಳಲ್ಲಿ ಹಾಕಲಾಗಿತ್ತು. ಕೇಜ್ರಿವಾಲ್ ಅವರ ಚಿತ್ರಗಳೊಂದಿಗೆ, “ನಾನು ಹಿಂದೂ ಧರ್ಮವನ್ನು ಹುಚ್ಚುತನವೆಂದು ಪರಿಗಣಿಸುತ್ತೇನೆ”, “ಹಿಂದೂ ವಿರೋಧಿ ಕೇಜ್ರಿವಾಲ್ ಗೋ ಬ್ಯಾಕ್” ಎಂಬ ಸಾಲುಗಳನ್ನು ಬರೆಯಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪೋಸ್ಟರ್‌ಗಳಲ್ಲಿ ತನ್ನ ಪಾತ್ರವಿಲ್ಲ” ಎಂದು ಬಿಜೆಪಿ ಹೇಳಿದೆ. ಆದರೆ ಬಿಜೆಪಿಯ ಕೆಲವು ನಾಯಕರು ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಕ್ಟೋಬರ್ 5ರಂದು ಸುಮಾರು 10,000 ಹಿಂದೂಗಳು ಬೌದ್ಧ ಧರ್ಮವನ್ನು ಸ್ವೀಕರಿಸಿದ್ದರು. ಅದರಲ್ಲಿ ರಾಜೇಂದ್ರ ಪಾಲ್‌ ಪಾಲ್ಗೊಂಡಿದ್ದರು. ವಿಷ್ಣು, ಶಿವ, ಬ್ರಹ್ಮ, ರಾಮ, ಕೃಷ್ಣ, ಗೌರಿ ಮತ್ತು ಗಣಪತಿಯಂತಹ ಹಿಂದೂ ದೇವತೆಗಳನ್ನು ಪ್ರಾರ್ಥಿಸುವುದಿಲ್ಲ ಎಂದು ಕಾರ್ಯಕ್ರಮದಲ್ಲಿದ್ದವರು ಪ್ರತಿಜ್ಞೆ ಮಾಡಿದ್ದರು. ರಾಜೇಂದ್ರ ಅವರು ಆ ವೇಳೆ ಹಾಜರಿದ್ದರು.

ಕಾರ್ಯಕ್ರಮದ 39 ಸೆಕೆಂಡುಗಳ ವೀಡಿಯೊವನ್ನು ಟ್ವೀಟ್ ಮಾಡಿದ ದೆಹಲಿ ಬಿಜೆಪಿ ಸಂಸದ ಮನೋಜ್ ತಿವಾರಿ, “ಎಎಪಿ ಏಕೆ ಹಿಂದೂ ವಿರೋಧಿ? ಈ ಎಎಪಿ ಸಚಿವರು ಹಿಂದೂ ಧರ್ಮದ ವಿರುದ್ಧ ಪ್ರತಿಜ್ಞೆ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದರು.

ಇದನ್ನೂ ಓದಿರಿ: ನಿಮ್ಮ ಗುಲಾಮರಾಗಿ ಇರ್ತೇವೆ: ಬೊಮ್ಮಾಯಿ ಮೆಚ್ಚಿಸುವ ಭರದಲ್ಲಿ ರಾಜುಗೌಡ ಎಡವಟ್ಟು

ಅಂಬೇಡ್ಕರ್ ಅವರು 1956ರಲ್ಲಿ ಹಿಂದೂ ಧರ್ಮವನ್ನು ತ್ಯಜಿಸಿ ತಮ್ಮ ಅನುಯಾಯಿಗಳೊಂದಿಗೆ ಬೌದ್ಧ ಧರ್ಮಕ್ಕೆ ಮರಳಿದ ಬಳಿಕ 22 ಪ್ರತಿಜ್ಞೆಯನ್ನು ಸ್ವೀಕರಿಸಿದ್ದರು. ಅಂದಿನಿಂದಲೂ ಇಂತಹ ಕಾರ್ಯಕ್ರಮಗಳನ್ನು ಅಂಬೇಡ್ಕರ್‌ ಅನುಯಾಯಿಗಳು ನಿಯಮಿತವಾಗಿ ಮಾಡಿಕೊಂಡು ಬರುತ್ತಿದ್ದಾರೆ. ಮುಖ್ಯವಾಗಿ ದಮನಿತ ಜಾತಿಗಳ ಜನರು 22 ಪ್ರತಿಜ್ಞೆಗಳನ್ನು ಪಠಿಸಿ ಬೌದ್ಧ ಧರ್ಮವನ್ನು ಸ್ವೀಕರಿಸುವುದು ನಡೆದುಬಂದಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ದಮನಿತ ಸಮುದಾಯಕ್ಕೆ ತೋರಿದ ವಿಮೋಚನೆಯ ಮಾರ್ಗವೂ ಇದಾಗಿದೆ.

22 ಪ್ರತಿಜ್ಞೆಗಳು

ಅಕ್ಟೋಬರ್ 15, 1956ರಂದು ನಾಗ್ಪುರದ ದೀಕ್ಷಾ ಭೂಮಿಯಲ್ಲಿ ಡಾ.ಅಂಬೇಡ್ಕರ್ ಅವರು ತಮ್ಮ 3,65,000 ಅನುಯಾಯಿಗಳೊಂದಿಗೆ ಹಿಂದೂ ಧರ್ಮವನ್ನು ತೊರೆದರು. ಈ ಸಂದರ್ಭದಲ್ಲಿ ಅವರು 22 ಪ್ರತಿಜ್ಞೆಗಳನ್ನು ಸ್ವೀಕರಿಸಿದ್ದರು. ಅವುಗಳು ಹೀಗಿವೆ.

  1. ನನಗೆ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  2. ದೇವರ ಅವತಾರವೆಂದು ನಂಬಲಾದ ರಾಮ ಮತ್ತು ಕೃಷ್ಣರಲ್ಲಿ ನನಗೆ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  3. ಗೌರಿ, ಗಣಪತಿ ಮತ್ತು ಇತರ ಹಿಂದೂಗಳ ದೇವರುಗಳಲ್ಲಿ ನನಗೆ ನಂಬಿಕೆ ಇಲ್ಲ ಅಥವಾ ನಾನು ಅವರನ್ನು ಪೂಜಿಸುವುದಿಲ್ಲ.
  4. ನನಗೆ ದೇವರ ಅವತಾರದಲ್ಲಿ ನಂಬಿಕೆ ಇಲ್ಲ.
  5. ಭಗವಾನ್ ಬುದ್ಧ ವಿಷ್ಣುವಿನ ಅವತಾರ ಎಂದು ನಾನು ನಂಬುವುದಿಲ್ಲ. ಇದು ಸಂಪೂರ್ಣ ಹುಚ್ಚುತನ ಮತ್ತು ಸುಳ್ಳಿನ ಪ್ರಚಾರವೆಂದು ನಂಬುತ್ತೇನೆ.
  6. ನಾನು ‘ಶ್ರಾದ್ಧ’ವನ್ನು ಮಾಡುವುದಿಲ್ಲ ಅಥವಾ ‘ಪಿಂಡ-ದಾನ’ ನೀಡುವುದಿಲ್ಲ.
  7. ನಾನು ಬುದ್ಧನ ತತ್ವಗಳು ಮತ್ತು ಬೋಧನೆಗಳನ್ನು ಉಲ್ಲಂಘಿಸುವ ರೀತಿಯಲ್ಲಿ ವರ್ತಿಸುವುದಿಲ್ಲ.
  8. ನಾನು ಬ್ರಾಹ್ಮಣರಿಂದ ಯಾವುದೇ ಸಮಾರಂಭಗಳನ್ನು ಮಾಡಿಸುವುದಿಲ್ಲ.
  9. ನಾನು ಮನುಷ್ಯ ಸಮಾನತೆಯನ್ನು ನಂಬುತ್ತೇನೆ.
  10. ನಾನು ಸಮಾನತೆಯನ್ನು ತರಲು ಪ್ರಯತ್ನಿಸುತ್ತೇನೆ.
  11. ನಾನು ಬುದ್ಧನ ‘ಉದಾತ್ತವಾದ ಎಂಟು ಮಾರ್ಗಗಳನ್ನು’ ಅನುಸರಿಸುತ್ತೇನೆ.
  12. ನಾನು ಬುದ್ಧನು ಸೂಚಿಸಿದ ‘ಪರಮಿತಗಳನ್ನು’ ಅನುಸರಿಸುತ್ತೇನೆ.
  13. ನಾನು ಎಲ್ಲಾ ಜೀವಿಗಳ ಬಗ್ಗೆ ಸಹಾನುಭೂತಿ, ಪ್ರೀತಿ ಮತ್ತು ದಯೆಯನ್ನು ಹೊಂದಿದ್ದೇನೆ, ಅವುಗಳನ್ನು ರಕ್ಷಿಸುತ್ತೇನೆ.
  14. ನಾನು ಕದಿಯುವುದಿಲ್ಲ.
  15. ನಾನು ಸುಳ್ಳು ಹೇಳುವುದಿಲ್ಲ.
  16. ನಾನು ವಿಷಯಲೋಲುಪತೆಯ ಪಾಪಗಳನ್ನು ಮಾಡುವುದಿಲ್ಲ.
  17. ನಾನು ಮದ್ಯ, ಡ್ರಗ್ಸ್ ಮುಂತಾದ ಅಮಲು ಪದಾರ್ಥಗಳನ್ನು ತೆಗೆದುಕೊಳ್ಳುವುದಿಲ್ಲ.
  18. ನಾನು ಉದಾತ್ತವಾದ ಎಂಟು ಮಾರ್ಗಗಳನ್ನು ಅನುಸರಿಸಲು ಪ್ರಯತ್ನಿಸುತ್ತೇನೆ. ದೈನಂದಿನ ಜೀವನದಲ್ಲಿ ಸಹಾನುಭೂತಿ ಮತ್ತು ಪ್ರೀತಿಯ ದಯೆಯನ್ನು ಅಭ್ಯಾಸ ಮಾಡುತ್ತೇನೆ.
  19. ಮಾನವೀಯತೆಗೆ ಹಾನಿಕಾರಕವಾದ ಮತ್ತು ಮಾನವೀಯತೆಯ ಪ್ರಗತಿ ಮತ್ತು ಅಭಿವೃದ್ಧಿಗೆ ಅಡ್ಡಿಯುಂಟುಮಾಡುವ ಹಿಂದೂ ಧರ್ಮವನ್ನು ನಾನು ತ್ಯಜಿಸುತ್ತೇನೆ. ಏಕೆಂದರೆ ಅದು ಅಸಮಾನತೆಯನ್ನು ಆಧರಿಸಿದೆ. ಬೌದ್ಧ ಧರ್ಮವನ್ನು ನನ್ನ ಧರ್ಮವಾಗಿ ಸ್ವೀಕರಿಸುತ್ತೇನೆ.
  20. ಬುದ್ಧನ ಧಮ್ಮ ಒಂದೇ ನಿಜವಾದ ಧರ್ಮ ಎಂದು ನಾನು ದೃಢವಾಗಿ ನಂಬುತ್ತೇನೆ.
  21. ನನಗೆ ಪುನರ್ಜನ್ಮವಿದೆ ಎಂದು ನಾನು ನಂಬುತ್ತೇನೆ.
  22. ನಾನು ಇನ್ನು ಮುಂದೆ ಬುದ್ಧನ ತತ್ವಗಳು, ಬೋಧನೆಗಳ ಪ್ರಕಾರ ಮತ್ತು ಅವನ ಧಮ್ಮದ ಪ್ರಕಾರ ನನ್ನ ಜೀವನವನ್ನು ನಡೆಸುತ್ತೇನೆ ಎಂದು ನಾನು ಗಂಭೀರವಾಗಿ ಘೋಷಿಸುತ್ತೇನೆ ಮತ್ತು ದೃಢೀಕರಿಸುತ್ತೇನೆ.

ಈ ಪ್ರತಿಜ್ಞೆ ಸ್ವೀಕರಿಸಿ 66 ವರ್ಷಗಳು ಕಳೆದ ಬಳಿಕ ಬಿಜೆಪಿ ನಾಯಕರು ಟೀಕೆಗಳನ್ನು ಮಾಡಲಾರಂಭಿಸಿದ್ದಾರೆ. ಬಾಬಾ ಸಾಹೇಬರು ಸ್ವೀಕರಿಸಿದ ಪ್ರತಿಜ್ಞೆಯನ್ನು ‘ಹಿಂದೂ ವಿರೋಧಿ’ ಎಂದು ಬಿಂಬಿಸಲು ಆರಂಭಿಸಿದ್ದಾರೆ. ಪ್ರತಿಜ್ಞೆಯಲ್ಲಿ ಹಿಂದೂ ದೇವರು ಮತ್ತು ದೇವತೆಗಳ ಅವಹೇಳನಕಾರಿ ಪದಗಳಿಲ್ಲ ಎಂದು ಇನ್ನು ಕೆಲವರು ಗಮನ ಸೆಳೆದಿದ್ದಾರೆ.

ಅಂಬೇಡ್ಕರರು ನಂಬಿದ್ದ ವಿಚಾರಗಳನ್ನೇ ಈ ಪ್ರತಿಜ್ಞೆಗಳು ಹೇಳುತ್ತಿವೆ. ಹಿಂದೂ ಧರ್ಮದಲ್ಲಿ ಜಾತಿ ವ್ಯವಸ್ಥೆಯು ಆಳವಾಗಿ ಬೇರು ಬಿಟ್ಟಿದೆ. ದಲಿತರು ಎಂದಿಗೂ ಹಿಂದೂ ಧರ್ಮದೊಳಗೆ ಸಮಾನತೆ ಮತ್ತು ಗೌರವವನ್ನು ಕಾಣಲು ಸಾಧ್ಯವಿಲ್ಲ ಎಂಬುದು ಅಂಬೇಡ್ಕರ್‌ ತೋರಿದ ಮಾರ್ಗವಾಗಿದೆ.

ಇದನ್ನೂ ಓದಿರಿ: ಇದು ಹಿಂದೂ ದೇವರಲ್ಲ, ಬೌದ್ಧ ವಿಗ್ರಹ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಮತ್ತು ಬಿಹಾರದ ವಿಧಾನ ಪರಿಷತ್ ಸದಸ್ಯ (ಎಂಎಲ್‌ಸಿ) ಡಾ.ಸಂಜಯ್ ಪಾಸ್ವಾನ್ ಪ್ರತಿಕ್ರಿಯಿಸಿ, “ಡಾ.ಅಂಬೇಡ್ಕರ್ ತಮ್ಮ ವಚನಗಳ ಮೂಲಕ ಹಿಂದೂ ಧರ್ಮವನ್ನು ಅವಮಾನಿಸಲು ಪ್ರಯತ್ನಿಸುತ್ತಿಲ್ಲ. ಆದರೆ ‘ಮೇಲ್ಜಾತಿ’ ಹಿಂದೂಗಳನ್ನು ಕೆರಳಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ತಮ್ಮ ಜೀವನದುದ್ದಕ್ಕೂ ಜಾತಿ ತಾರತಮ್ಯ ಮತ್ತು ಅವಮಾನಗಳ ವಿರುದ್ಧ ಹೋರಾಡಿದರು. ದಲಿತರು ಅನುಭವಿಸುತ್ತಿರುವ ನೋವುಗಳನ್ನು ಮನವರಿಕೆ ಮಾಡಿಸಲು ಬಯಸಿದ್ದರು” ಎಂದಿದ್ದಾರೆ.

ರಾಜೇಂದ್ರ ಅವರು ಪ್ರತಿಜ್ಞೆ ಸ್ವೀಕರಿಸಿದ ಬಳಿಕ ಬಿಜೆಪಿ ಸಂಸದ ಮನೋಜ್‌ ತಿವಾರಿ ಪ್ರತಿಕ್ರಿಯಿಸಿ, “ಎಎಪಿ ಸಚಿವರು ಗಲಭೆ ಎಬ್ಬಿಸಲು ಪ್ರಯತ್ನಿಸುತ್ತಿದ್ದಾರೆ. ಕೂಡಲೇ ಸಚಿವರನ್ನು ಪಕ್ಷದಿಂದ ಉಚ್ಛಾಟಿಸಬೇಕು. ನಾವು ಅವರ ವಿರುದ್ಧ ದೂರು ಸಲ್ಲಿಸುತ್ತಿದ್ದೇವೆ” ಎಂದು ಹೇಳಿಕೆ ನೀಡಿದರು.

“ಕೇಜ್ರಿವಾಲ್ ಮಂತ್ರಿ ಹಿಂದೂಗಳ ವಿರುದ್ಧ ಹೇಗೆ ವಿಷ ಉಗುಳುತ್ತಿದ್ದಾರೆ ನೋಡಿ. ಚುನಾವಣಾ ಹಿಂದೂ ಕೇಜ್ರಿವಾಲ್ ಮತ್ತು ಎಎಪಿಯ ಹಿಂದೂ ವಿರೋಧಿ ಮುಖ ಎಲ್ಲರ ಮುಂದೆ ಬಂದಿದೆ. ಹಿಂದೂ ವಿರೋಧಿ ಎಎಪಿಗೆ ಸಾರ್ವಜನಿಕರು ಶೀಘ್ರದಲ್ಲೇ ತಕ್ಕ ಉತ್ತರ ನೀಡಲಿದ್ದಾರೆ. ನಾಚಿಕೆ ಆಗುತ್ತಿದೆ ಕೇಜ್ರಿವಾಲ್” ಎಂದು ಅವರು ಟ್ವೀಟ್ ಮಾಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ರಾಜೇಂದ್ರ ಪಾಲ್ ಗೌತಮ್, “ನನಗೆ ಬೌದ್ಧ ಧರ್ಮದಲ್ಲಿ ನಂಬಿಕೆಯಿದೆ. ಭಾರತದ ಸಂವಿಧಾನವು ನನಗಿಷ್ಟವಾದ ಧರ್ಮವನ್ನು ಅನುಸರಿಸುವ ಹಕ್ಕು ನೀಡಿದೆ. ಇದರಿಂದ ಯಾರಿಗೆ ತೊಂದರೆಯಾಗುತ್ತಿದೆ? ಬಿಜೆಪಿಯವರು ನಿಜವಾದ ದೇಶ ವಿರೋಧಿಗಳು. ಆಪ್ ಕಂಡರೆ ಅವರಿಗೆ ಭಯ, ಅದಕ್ಕಾಗಿ ಸುಳ್ಳು ದೂರು ನೀಡುತ್ತಿದ್ದಾರೆ” ಎಂದು ತಿರುಗೇಟು ನೀಡಿದ್ದರು.

“ಜಾತಿ ಆಧಾರಿತ ರಾಜಕೀಯ ಮಾಡುವವರು ದ್ರೋಹಿಗಳು. ಅವರಿಗೆ ಬೇರೆ ಯಾವುದೇ ಅಜೆಂಡಾಗಳಿಲ್ಲ. ಧರ್ಮ ಧರ್ಮದ ನಡುವೆ ಎತ್ತಿಕಟ್ಟುವುದು ಅವರ ಚಾಳಿ. ಅವರು ಆಪ್ ಕಾರ್ಯಕರ್ತರು ಏಕೆ ದೇವಸ್ಥಾನಕ್ಕೆ ಹೋಗುತ್ತಾರೆ ಎಂದು ಪ್ರಶ್ನಿಸುತ್ತಾರೆ. ನನ್ನ ಪ್ರಕಾರ ಯಾರಿಗೆ ಯಾವ ಧರ್ಮದ ಮೇಲೆ ನಂಬಿಕೆಯಿದೆಯೊ ಅವರು ಆಯಾಯ ಧರ್ಮದ ಪೂಜಾಸ್ಥಳಿಗೆ ಹೋಗುವ ಹಕ್ಕು ಹೊಂದಿದ್ದಾರೆ. ನನಗೆ ಬೌದ್ಧ ಧರ್ಮದ ಮೇಲೆ ನಂಬಿಕೆಯಿದೆ. ಹಾಗಾಗಿ ನಾನು ಅಲ್ಲಿಗೆ ಹೋಗುತ್ತೇನೆ. ಯಾರಿಗೂ ಇನ್ನೊಂದು ಧರ್ಮವನ್ನು ಹೇರುವ ಅಧಿಕಾರವಿಲ್ಲ” ಎಂದು ಸ್ಪಷ್ಟಪಡಿಸಿದ್ದರು. ಆದರೆ ಎಎಪಿ ಮತ್ತು ಕೇಜ್ರೀವಾಲ್ ಮೇಲೆ ತೀವ್ರ ಟೀಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ.

ಎಎಪಿ ಮೊದಲಿನಿಂದಲೂ ಮೃದು ಹಿಂದುತ್ವವನ್ನು ಪಾಲನೆ ಮಾಡುತ್ತಾ ಬಂದಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ. ಅಯೋಧ್ಯೆ ಹಾಗೂ ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ‘ತಿರಂಗಯಾತ್ರೆ’ಯನ್ನು ಎಎಪಿ ಹಮ್ಮಿಕೊಂಡಿತ್ತು. ಚುನಾವಣೆ ವೇಳೆ ಉತ್ತರಖಾಂಡ್‌ ರಾಜ್ಯದಲ್ಲಿ ಕೇಜ್ರಿವಾಲ್ ಮಾತನಾಡುತ್ತಾ, ”ನಮ್ಮ ಪಕ್ಷಕ್ಕೆ ಮತ ಚಲಾಯಿಸಿದರೆ, ಉತ್ತರಖಾಂಡ್ ರಾಜ್ಯವನ್ನು ಹಿಂದೂಗಳ ಜಾಗತಿಕ ರಾಜಧಾನಿಯನ್ನಾಗಿ ಮಾಡುತ್ತೇವೆ” ಎಂದಿದ್ದರು. ಎರಡು ವರ್ಷಗಳ ಕಾಲ ದೇವಾಲಯಗಳ ಪುರೋಹಿತರು ನಡೆಸಿದ, ಚಾರ್‌ ಧಮ್‌ ಟ್ರಸ್ಟ್‌ ವಿಸರ್ಜನಾ ಹೋರಾಟಕ್ಕೂ ಎಎಪಿ ಬೆಂಬಲಿಸಿತ್ತು. ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ‘ದೇಶಭಕ್ತಿ ಪಠ್ಯಕ್ರಮ’ಕ್ಕೂ ಚಾಲನೆ ನೀಡಲಾಗಿತ್ತು. ಈ ಕುರಿತು ‘ದಿ ವೈರ್‌’ ವರದಿ ಮಾಡಿತ್ತು.

ಇದನ್ನೂ ಓದಿರಿ: ಬೌದ್ಧಧರ್ಮ ಅಪಾಯಕಾರಿಯೆ?

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ದೇಶಭಕ್ತಿ ಪಠ್ಯದ ಕುರಿತು ಮಾತನಾಡುತ್ತಾ, “ನರ್ಸರಿಯಿಂದ 12ನೇ ತರಗತಿವರೆಗೆ ವಿದ್ಯಾರ್ಥಿಗಳು ಕನಿಷ್ಠ 700-800 ಕಥೆಗಳನ್ನು ತಿಳಿಯುವರು, ಕನಿಷ್ಠ 500-600 ದೇಶಭಕ್ತಿ ಗೀತೆಗಳನ್ನು ಕಲಿಯುವರು. ಪ್ರತಿಯೊಂದು ತರಗತಿಯೂ ‘ದೇಶಭಕ್ತಿ ಧ್ಯಾನ’ (ಏಕಗ್ರತಾ ವ್ಯಾಯಾಮ) ಮಾಡುವ ಮೂಲಕ ಆರಂಭವಾಗಲಿವೆ. ಇದು ಐದು ನಿಮಿಷ ಇರಲಿದೆ. ಐವರು ದೇಶಪ್ರೇಮಿಗಳನ್ನು ನೆನೆಯುವುದು ಈ ಧ್ಯಾನದ ಉದ್ದೇಶ” ಎಂದಿದ್ದರು.

“ಹಲವು ಯೋಜನೆಗಳ ಮೂಲಕ ಬಹುಸಂಖ್ಯಾತರನ್ನು ಓಲೈಕೆ ಮಾಡಲು ಎಎಪಿ ಮುಂದಾಗಿದೆ. ಆಮ್‌ ಆದ್ಮಿ ಪಕ್ಷವು ದಲಿತರು ಮತ್ತು ಮುಸ್ಲಿಮರ ಮತಗಳಿಂದ ಗೆದ್ದಿದೆ. ಜೊತೆಗೆ ಇತರ ವರ್ಗಗಳನ್ನು ಸೆಳೆಯಲು ಮೃದು ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ. ಚುನಾವಣಾ ವೇಳೆ ಕೇಜ್ರಿವಾಲ್‌ ಹನುಮಾನ್ ಚಾಲೀಸ್‌ ಪಠಿಸಿದ್ದರು. ದೇವಾಲಯಗಳಿಗೆ ಭೇಟಿ ನೀಡುವ ಮೂಲಕ ಬಹುಸಂಖ್ಯಾತ ಹಿಂದೂಗಳ ಮತಗಳನ್ನು ಸೆಳೆದಿದ್ದರು” ಎಂದು ‘ದಿ ವೈರ್‌’ ವರದಿ ಉಲ್ಲೇಖಿಸಿತ್ತು. ಈಗ ಬೌದ್ಧಧರ್ಮವನ್ನು ಸ್ವೀಕರಿಸಿದ ರಾಜೇಂದ್ರ ಅವರನ್ನು ಸಚಿವ ಸ್ಥಾನದಿಂದ ಕೆಳಗೆ ಇಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...