Homeಮುಖಪುಟಕೇರಳ: ಫೇಕ್ ನ್ಯೂಸ್‌ ಪತ್ತೆಹಚ್ಚುವ ತರಬೇತಿ ಪಡೆದ 19 ಲಕ್ಷ ವಿದ್ಯಾರ್ಥಿಗಳು

ಕೇರಳ: ಫೇಕ್ ನ್ಯೂಸ್‌ ಪತ್ತೆಹಚ್ಚುವ ತರಬೇತಿ ಪಡೆದ 19 ಲಕ್ಷ ವಿದ್ಯಾರ್ಥಿಗಳು

- Advertisement -
- Advertisement -

ಇಂದಿನ ಸಮಾಜದಲ್ಲಿ ಫೇಕ್‌ ನ್ಯೂಸ್‌ಗಳು ದೊಡ್ಡ ತಲೆನೋವಾಗಿ ಪರಿಣಮಿಸಿವೆ. ಜನರು ಯಾವುದು ನಿಜವಾದ ಸುದ್ದಿ, ಯಾವುದು ಸುಳ್ಳು ಸುದ್ದಿ ಎಂದು ತಿಳಿಯದೇ ಗೊಂದಲ ಮತ್ತು ಮೋಸಕ್ಕೆ ಒಳಗಾಗುತ್ತಿದ್ದಾರೆ. ಇದನ್ನು ತಪ್ಪಿಸುವುದಕ್ಕಾಗಿ ಕೇರಳ ಸರ್ಕಾರವು ಶಿಕ್ಷಣ ಇಲಾಖೆಯ ಮೂಲಕ 19 ಲಕ್ಷ ವಿದ್ಯಾರ್ಥಿಗಳಿಗೆ ಫೇಕ್ ನ್ಯೂಸ್‌ ಪತ್ತೆಹಚ್ಚುವ ತರಬೇತಿ ನೀಡುವ ಮೂಲಕ ಗಮನ ಸೆಳೆದಿದೆ.

ಶಿಕ್ಷಣಕ್ಕಾಗಿ ಕೇರಳ ಮೂಲಸೌಕರ್ಯ ಮತ್ತು ತಂತ್ರಜ್ಞಾನ (KITE) ಎಂಬ ಸಂಸ್ಥೆಯ ಮೂಲಕ 5,920 ತರಬೇತುದಾರರು ಮೂರು ಹಂತಗಳಲ್ಲಿ “ಸತ್ಯಮೇವ ಜಯತೆ ಡಿಜಿಟಲ್ ಮೀಡಿಯಾ ಸಾಕ್ಷರತೆ ಕಾರ್ಯಕ್ರಮ”ವನ್ನು ಪೂರ್ಣಗೊಳಿಸಲಾಗಿದೆ ಎಂದು ಕೇರಳದ ಶಿಕ್ಷಣ ಸಚಿವ ವಿ.ಶಿವನಕುಟ್ಟಿ ತಿಳಿಸಿದ್ದಾರೆ.

ಕೇರಳದಾದ್ಯಂತ 5 ರಿಂದ 10 ನೇ ತರಗತಿ ಒಳಗಿನ 19.72 ಲಕ್ಷ ಶಾಲಾ ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ಸುದ್ದಿಗಳನ್ನು ಹರಡುವುದನ್ನು ತಡೆಯಲು ಮತ್ತು ಆ ಸಂದೇಶಗಳ ಹಿಂದಿನ ಸತ್ಯವನ್ನು ಅರ್ಥಮಾಡಿಕೊಳ್ಳುವ ಮೂಲಭೂತ ಕೌಶಲ್ಯಗಳನ್ನು ಹೊಂದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ (ಫೇಕ್ ನ್ಯೂಸ್) ಪತ್ತೆ ಹಚ್ಚುವುದು ಹೇಗೆ? ಇಲ್ಲಿವೆ ನೊಡಿ ಸರಳ ಮಾರ್ಗಗಳು

ಮೊದಲ ಹಂತದಲ್ಲಿ KITE VICTERS ಎಂಬ ಶೈಕ್ಷಣಿಕ ಚಾನಲ್ ಮೂಲಕ ಜಾಗೃತಿ ಮೂಡಿಸುವತ್ತ ಗಮನಹರಿಸಿತು. ಪ್ರತಿ ವಿದ್ಯಾರ್ಥಿಗೆ ದೈನಂದಿನ ಜೀವನದಲ್ಲಿ ಇಂಟರ್ನೆಟ್ ಬಳಕೆ, ಸಾಮಾಜಿಕ ಮಾಧ್ಯಮದಲ್ಲಿನ ಸರಿ ಮತ್ತು ತಪ್ಪುಗಳು ಮತ್ತು ನಕಲಿ ಸುದ್ದಿ ಹರಡುವುದನ್ನು ತಡೆಯುವುದು ಹೇಗೆ ಎಂಬ ನಾಲ್ಕು ವಿಭಾಗಗಳಲ್ಲಿ 2.5 ಗಂಟೆಗಳ ಅವಧಿಯ ತರಬೇತಿಯನ್ನು ನೀಡಲಾಯಿತು.

ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮದ ಜೊತೆಗೆ ಸಾರ್ವಜನಿಕರಿಗೆ ಮಾಹಿತಿ ಲಭ್ಯವಾಗಲು KITE VICTERS ಚಾನೆಲ್ ಈ ಎಲ್ಲಾ ತರಗತಿಗಳನ್ನು ಅಕ್ಟೋಬರ್ 10 ರಿಂದ 13ರವರೆಗೆ ಸಂಜೆ 7 ಗಂಟೆಗೆ ನಾಲ್ಕು ಕಂತುಗಳಲ್ಲಿ ಪ್ರಸಾರ ಮಾಡಲಿದೆ ಎಂದು KITE ನ ಸಿಇಒ ಕೆ.ಅನ್ವರ್ ಸಾದತ್ ತಿಳಿಸಿದ್ದಾರೆ.

ಇದನ್ನೂ ಓದಿ: ‘ಕೇರಳ ಸವಾರಿ’ – ದೇಶದ ಮೊದಲ ಸರ್ಕಾರಿ ಸ್ವಾಮ್ಯದ ಆನ್‌ಲೈನ್ ಟ್ಯಾಕ್ಸಿ ಸೇವೆ ಉದ್ಘಾಟಿಸಿದ ಸಿಎಂ ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...