Homeಅಂತರಾಷ್ಟ್ರೀಯಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

ಇರಾನ್: ವಸ್ತ್ರಸಂಹಿತೆ ವಿರುದ್ಧ ಮುಂದುವರಿದ ಹೋರಾಟ; 19 ಮಕ್ಕಳು ಸೇರಿ 185 ಮಂದಿ ಸಾವು- ವರದಿ

- Advertisement -
- Advertisement -

ಪೊಲೀಸ್‌‌ ಕಸ್ಟಡಿಯಲ್ಲಿದ್ದ ಯುವತಿಯ ಸಾವಿನಿಂದ ಆರಂಭವಾದ ಪ್ರತಿಭಟನೆಗಳು ಇರಾನ್‌ನಲ್ಲಿ ತೀವ್ರ ಸ್ವರೂಪ ಪಡೆದಿವೆ. ಅಧಿಕಾರಿಗಳ ಶಿಸ್ತುಕ್ರಮವನ್ನು ಧಿಕ್ಕರಿಸಿ ಭಾನುವಾರ ಇರಾನ್‌ನಾದ್ಯಂತ ಪ್ರತಿಭಟನೆಗಳು ನಡೆದಿವೆ. ಮಕ್ಕಳು ಸೇರಿದಂತೆ ಕನಿಷ್ಠ 185 ಜನರು ಪ್ರತಿಭಟನೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾನವ ಹಕ್ಕುಗಳ ಹೋರಾಟಗಾರರು ತಿಳಿಸಿರುವುದಾಗಿ ‘ರಾಯಿಟರ್ಸ್’ ವರದಿ ಮಾಡಿದೆ.

ಸೆಪ್ಟೆಂಬರ್ 17ರಂದು ಕುರ್ದಿಶ್ ಪಟ್ಟಣವಾದ ಸಾಕೆಜ್‌ನಲ್ಲಿ 22 ವರ್ಷದ ಮಹ್ಸಾ ಅಮಿನಿಯ ಅಂತ್ಯಕ್ರಿಯೆಯ ನಂತರ ವಿವಾದ ಭುಗಿಲೆದ್ದಿದೆ. ಇರಾನಿನ ಕುಖ್ಯಾತ ‘ಮೊರಾಲಿಟಿ ಪೊಲೀಸರು’ ಟೆಹ್ರಾನ್‌ನಲ್ಲಿ ಬಂಧಿಸಿದ ನಂತರ ಕೋಮಾಕ್ಕೆ ಹೋದ ಯುವತಿ ಕೊನೆಯುಸಿರೆಳೆದಿದ್ದಳು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

22 ವರ್ಷದ ಮಹ್ಸಾ ಅಮಿನಿ ತನ್ನ ಕುಟುಂಬದೊಂದಿಗೆ ಇರಾನ್ ರಾಜಧಾನಿಗೆ ಭೇಟಿ ನೀಡುತ್ತಿದ್ದರು. ಇಸ್ಲಾಮಿಕ್ ಗಣರಾಜ್ಯದಲ್ಲಿ ಮಹಿಳೆಯರಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೊಳಿಸುವ ಹೊಣೆಗಾರಿಕೆಯನ್ನು ಹೊತ್ತಿರುವ ಪೊಲೀಸ್ ಘಟಕವು ಅಮಿನಿ ಅವರನ್ನು ಬಂಧಿಸಿತು. ಸಾರ್ವಜನಿಕವಾಗಿ ಹೆಡ್‌ಸ್ಕ್ರಾಪ್‌ (ಹಿಜಾಬ್‌) ಧರಿಸಬೇಕೆಂದು ಕಡ್ಡಾಯ ಮಾಡಲಾಗಿದ್ದು, ಯುವತಿ ಧರಿಸಿರಲಿಲ್ಲ ಎಂದು ದಾಳಿ ಮಾಡಲಾಗಿತ್ತು. ಅಂದಿನಿಂದಲೂ ಪ್ರತಿಭಟನೆಗಳು ನಡೆಯುತ್ತಿವೆ.

“ಇರಾನ್‌ನಾದ್ಯಂತ ನಡೆಯುತ್ತಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಯಲ್ಲಿ ಕನಿಷ್ಠ 19 ಮಕ್ಕಳು ಸೇರಿದಂತೆ ಕನಿಷ್ಠ 185 ಜನರು ಸಾವನ್ನಪ್ಪಿದ್ದಾರೆ. ಈಗ ವರದಿಯಾಗಿರುವ ಸಾವುಗಳಲ್ಲಿ ಅರ್ಧದಷ್ಟು ಸಿಸ್ತಾನ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿವೆ” ಎಂದು ನಾರ್ವೆ ಮೂಲದ ಇರಾನ್ ಮಾನವ ಹಕ್ಕುಗಳ ಹೋರಾಟಗಾರರು ತಿಳಿಸಿದ್ದಾರೆ.

“ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಇರಾನ್‌ ವೈರಿಗಳ ಸಂಚಿನ ಭಾಗವಾಗಿ ಪ್ರತಿಭಟನೆಗಳು ನಡೆಯುತ್ತಿವೆ” ಎಂದು ಅಧಿಕಾರಿಗಳು ವಾದಿಸಿದ್ದಾರೆ. ಹಿಂಸಾಚಾರದಲ್ಲಿ ಶಸ್ತ್ರಸಜ್ಜಿತ ಭಿನ್ನಮತೀಯರೂ ಇದ್ದಾರೆಂದು ಆರೋಪಿಸಲಾಗಿದೆ. ಭದ್ರತಾ ಪಡೆಗಳ ಕನಿಷ್ಠ 20 ಸದಸ್ಯರೂ ಸಾವಿಗೀಡಾಗಿದ್ದಾರೆಂದು ಹೇಳಲಾಗುತ್ತಿದೆ.

ಪ್ರತಿಭಟನೆಯ ವೇಳೆ ಭದ್ರತಾ ಪಡೆಗಳು ಮದ್ದುಗುಂಡುಗಳನ್ನು ಬಳಸಿವೆ. ಇದರ ನಡುವೆ ನೂರಾರು ಹೈಸ್ಕೂಲ್ ಹುಡುಗಿಯರು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಭಾನುವಾರ ಮುಂಜಾನೆ ಇರಾನ್‌ನ ಹಲವು ನಗರಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದರು. ಹೋರಾಟ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಸಜೀವ ಗುಂಡುಗಳನ್ನು ಬಳಸಲಾಗಿದೆ ಎಂಬ ಆರೋಪವನ್ನು ಇರಾನ್ ಅಧಿಕಾರಿಗಳು ನಿರಾಕರಿಸಿದ್ದಾರೆ.

‘ನನ್ನ ಹೆಂಡತಿಗೆ ಹೊಡೆಯಬೇಡ, ಆಕೆ ಗರ್ಭಿಣಿ’

ಸಾಮಾಜಿಕ ಕಾರ್ಯಕರ್ತ ತಸ್ವಿರ್ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊಗಳು ಪ್ರತಿಭಟನೆಯ ತೀವ್ರತೆಯನ್ನು ತೆರೆದಿಟ್ಟಿದೆ. ಟೆಹ್ರಾನ್‌ನ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಶಸ್ತ್ರಸಜ್ಜಿತವಾದ ಭದ್ರತಾ ಪಡೆಗಳು ದಾಳಿ ಮಾಡುವುದನ್ನು ಒಂದು ವಿಡಿಯೊ ತೋರಿಸಿದೆ.

ಮತ್ತೊಂದು ವೀಡಿಯೊದಲ್ಲಿ ವ್ಯಕ್ತಿಯೊಬ್ಬರು, “ನನ್ನ ಹೆಂಡತಿಯನ್ನು ಹೊಡೆಯಬೇಡಿ, ಆಕೆ ಗರ್ಭಿಣಿ” ಎಂದು ಪೊಲೀಸರಿಗೆ ಮನವಿ ಮಾಡುತ್ತಿರುವುದು ದಾಖಲಾಗಿದೆ.

ಇದನ್ನೂ ಓದಿರಿ: ಬೌದ್ಧಧಮ್ಮದ ಅನುಯಾಯಿ ರಾಜೇಂದ್ರ ಪಾಲ್ ರಾಜೀನಾಮೆ; ಎಎಪಿಯ ಮೃದು ಹಿಂದುತ್ವ ಮುನ್ನೆಲೆಗೆ

150,000ಕ್ಕೂ ಹೆಚ್ಚು ಫಾಲೋಯರ್ಸ್‌ಗಳನ್ನು ಹೊಂದಿರುವ ಟ್ವಿಟರ್ ಖಾತೆ ಮಾಮ್ಲೆಕೇಟ್‌ನಲ್ಲಿ ಹಂಚಿಕೊಂಡ ವೀಡಿಯೊವೊಂದರಲ್ಲಿ ಹುಡುಗಿಯರ ಪರಿಸ್ಥಿತಿಯನ್ನು ತೋರಿಸಲಾಗಿದೆ. ಬಂದರ್ ಅಬ್ಬಾಸ್ ನಗರದಲ್ಲಿ ಭದ್ರತಾ ಪಡೆಗಳು ಶಾಲಾ ಹುಡುಗಿಯರನ್ನು ಬೆನ್ನಟ್ಟುತ್ತಿರುವುದು ಸೆರೆಯಾಗಿದೆ. ಹೋರಾಟಗಾರರು ಸಾಮೂಹಿಕ ಮುಷ್ಕರಕ್ಕೆ ಕರೆ ನೀಡಿದ ನಂತರ ಹಲವಾರು ನಗರಗಳಲ್ಲಿ ಅಂಗಡಿಗಳನ್ನು ಮುಚ್ಚಲಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಮಾಡಲಾದ ಪೋಸ್ಟ್‌ಗಳು ತಿಳಿಸಿವೆ.

ವೀಡಿಯೊಗಳು ಮತ್ತು ಪೋಸ್ಟ್‌ಗಳನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ರಾಯಿಟರ್ಸ್ ತಿಳಿಸಿದೆ. ಅಧಿಕಾರಿಗಳು ವಿಧಿಸಿದ ಇಂಟರ್ನೆಟ್ ನಿರ್ಬಂಧಗಳ ಕಾರಣದಿಂದಾಗಿ ಸಾವುನೋವುಗಳ ವಿವರಗಳು ನಿಧಾನವಾಗಿ ಹೊರಬರುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...