Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಫ್ಯಾಕ್ಟ್‌ಚೆಕ್‌: ಬಬಿಯಾ ಮೊಸಳೆ ಸಸ್ಯಾಹಾರಿಯಲ್ಲ; ವೈರಲ್‌ ಫೋಟೋ ಬಬಿಯಾದ್ದಲ್ಲ

ಶೋಭಾ ಕರಂದ್ಲಾಜೆ ಮತ್ತು ಮತ್ತಿತರರು ಸಂತಾಪ ಸೂಚಿಸಿರುವ ಮೊಸಳೆಯ ಕುರಿತು ಆಸಕ್ತಿಕರ ಸಂಗತಿಗಳು ಇಲ್ಲಿವೆ...

- Advertisement -
- Advertisement -

“ಕಾಸರಗೋಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಸಸ್ಯಹಾರಿ ಮೊಸಳೆ ಬಬಿಯಾ ಭಾನುವಾರ ರಾತ್ರಿ ಮೃತಪಟ್ಟಿದೆ. 75 ವರ್ಷದ ಮೊಸಳೆಯು ಭಕ್ತರನ್ನು ಆಕರ್ಷಿಸುತ್ತಿತ್ತು. ದೇವಾಲಯದಿಂದ ನೀಡಲಾಗುತ್ತಿದ್ದ ಅಕ್ಕಿ ಮತ್ತು ಬೆಲ್ಲವನ್ನು ಮಾತ್ರ ಸೇವಿಸುತ್ತಿತ್ತು” ಎಂದು ‘ಎನ್‌ಡಿಟಿವಿ’ ವರದಿ ಮಾಡಿದೆ.

ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಭಕ್ತರು ದಿನಕ್ಕೆರಡು ಬಾರಿ ಪ್ರಸಾದವನ್ನು ಅರ್ಪಿಸುತ್ತಿದ್ದರು. 1945ರಲ್ಲಿ ಬ್ರಿಟಿಷ್ ಸೈನಿಕನೊಬ್ಬ ಈ ಲೇಕ್‌ ದೇವಾಲಯದಲ್ಲಿದ್ದ ಮೊಸಳೆಯ ಮೇಲೆ ಗುಂಡು ಹಾರಿಸಿದನು. ಕೆಲವೇ ದಿನಗಳಲ್ಲಿ ಬಬಿಯಾ ದೇವಾಲಯದ ಕೊಳದಲ್ಲಿ ಕಾಣಿಸಿಕೊಂಡಿತು ಎಂಬ ನಂಬಿಕೆಗಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊಸಳೆಗಳು ಮೂಲತಃ ಮಾಂಸಾಹಾರಿ ಪ್ರಾಣಿಗಳಾಗಿದ್ದು, ಎಂದಿಗೂ ಬಬಿಯಾ ಯಾರನ್ನೂ ಹೆದರಿಸಲಿಲ್ಲ. ಸಸ್ಯಾಹಾರಿ ಮೊಸಳೆ ಎಂಬ ಹೆಸರನ್ನೂ ಪಡೆಯಿತು. ಕಳೆದ ಕೆಲವು ದಿನಗಳಿಂದ ಈ ಮೊಸಳೆಯ ಆರೋಗ್ಯ ಸರಿಯಿಲ್ಲದ ಕಾರಣ ಪಶುವೈದ್ಯರಿಂದ ಚಿಕಿತ್ಸೆಯನ್ನೂ ಕೊಡಿಸಲಾಗಿತ್ತು ಎಂದು ದೇವಸ್ಥಾನದ ಧರ್ಮದರ್ಶಿ ಉದಯಕುಮಾರ್ ಆರ್ ಗಟ್ಟಿ ತಿಳಿಸಿದ್ದಾರೆ.

“ಕಳೆದ ಎರಡು ದಿನಗಳ ಹಿಂದೆ ಬಬಿಯಾ ಆಹಾರಕ್ಕಾಗಿ ಬಂದಿರಲಿಲ್ಲ. ನಾವು ಹುಡುಕಾಟ ನಡೆಸಿದೆವು. ಆದರೆ ಅದು ಪತ್ತೆಯಾಗಲಿಲ್ಲ. ಭಾನುವಾರ ರಾತ್ರಿ ಅದು ಕೆರೆಯಲ್ಲಿ ಸತ್ತಿರುವುದನ್ನು ನಾವು ನೋಡಿದೆವು” ಎಂದು ಅವರು ಹೇಳಿದ್ದಾರೆ.

ಬಬಿಯಾ ದೇವಾಲಯದ ಎಲ್ಲಾ ಸ್ಥಳಗಳಿಗೆ ಪ್ರವೇಶಿಸುತ್ತಿತ್ತು. ದೇವಾಲಯದ ಸುತ್ತಲಿನ ಕೊಳದಲ್ಲಿ ಅಥವಾ ದೇವಾಲಯದ ಮೆಟ್ಟಿಲುಗಳ ಮೇಲೆ ತಿರುಗಾಡುತ್ತಿತ್ತು. ಬಬಿಯಾ ಸಾವಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಜೊತೆಗೆ ಇದನ್ನು ಸಸ್ಯಾಹಾರಿ ಮೊಸಳೆಯೆಂದೇ ಬಿಂಬಿಸಿದ್ದಾರೆ. ಯಾವುದೋ ಮೊಸಳೆಯ ಚಿತ್ರವನ್ನು ಬಬಿಯಾ ಎಂದು ತೋರಿಸಿ ಹಂಚಿಕೊಳ್ಳುತ್ತಿದ್ದಾರೆ.

ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿ, “ಅನಂತಪುರ ಲೇಕ್‌ ದೇವಸ್ಥಾನದ ದೇವರ ಮೊಸಳೆ ಬಬಿಯಾ ವಿಷ್ಣು ಪಾದಕ್ಕೆ ಸೇರಿಕೊಂಡಿದೆ. ದೈವಿಕ ಮೊಸಳೆಯು ಅನಂತಪದ್ಮನಾಭ ಸ್ವಾಮಿಯ ಅನ್ನ ಮತ್ತು ಬೆಲ್ಲದ ಪ್ರಸಾದವನ್ನು ತಿನ್ನುವ ಮೂಲಕ 70 ವರ್ಷಗಳ ಕಾಲ ದೇವಾಲಯದ ಸರೋವರದಲ್ಲಿ ವಾಸಿಸುತ್ತಿತ್ತು ಮತ್ತು ದೇವಾಲಯವನ್ನು ಕಾಪಾಡಿತು. ಆಕೆಗೆ ಸದ್ಗತಿ ಸಿಗಲಿ, ಓಂ ಶಾಂತಿ” ಎಂದು ಬರೆದಿದ್ದಾರೆ.

ಮೊಸಳೆಗೆ ಬಾಗಿ ನಮಿಸುತ್ತಿರುವ ವ್ಯಕ್ತಿಯೊಬ್ಬರ ಫೋಟೋ ಸೇರಿದಂತೆ ಬಬಿಯಾ ಹಾಗೂ ದೇವಸ್ಥಾನದ ಚಿತ್ರಗಳನ್ನು ಅವರು ಹಂಚಿಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಯೊಂದಿಗೆ ಅನೇಕರು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಬಬಿಯಾ ಮೊಸಳೆ ಸಸ್ಯಾಹಾರಿಯಾಗಿತ್ತು ಎಂದೇ ಬಹುತೇಕ ಮಾಧ್ಯಮಗಳು ವರದಿ ಮಾಡಿವೆ.

ಮೊಸಳೆಗೆ ನಮಿಸುತ್ತಿರುವ ವ್ಯಕ್ತಿಯೊಬ್ಬರ ಚಿತ್ರ ಬಬಿಯಾ ಹೆಸರಲ್ಲಿ ವೈರಲ್ ಆಗುತ್ತಿದೆ. ಇದು ಬಬಿಯಾ ಮೊಸಳೆಗೆ ಸಂಬಂಧಿಸಿದ್ದಲ್ಲ ಎಂದು ‘ಫ್ಯಾಕ್ಟ್‌ಚೆಕ್’ ವೆಬ್‌ಸೈಟ್‌ ‘ಆಲ್ಟ್‌ ನ್ಯೂಸ್‌’ ಸಹಸಂಸ್ಥಾಪಕ ಜುಬೇರ್‌ ಟ್ವೀಟ್ ಮಾಡಿದ್ದಾರೆ.

ಶೋಭಾ ಕರಂದ್ಲಾಜೆಯವರಿಗೆ ವಿಡಿಯೊವೊಂದನ್ನು ಟ್ಯಾಗ್ ಮಾಡಿ ಪ್ರತಿಕ್ರಿಯೆ ನೀಡಿರುವ ಜುಬೇರ್‌, “ಎರಡನೇ ಚಿತ್ರವು ಬಬಿಯಾಗೆ ಸಂಬಂಧಿಸಿಲ್ಲ. ಇದು ಕೋಸ್ಟಾ ರಿಕನ್ ಮೊಸಳೆ ‘ಪೊಚೊ’ ಆಗಿದೆ. ಅದರ ಮಾಸ್ಟರ್ ‘ಗಿಲ್ಬರ್ಟೊ ಶೆಡ್ಡೆನ್’ ಜೊತೆಗಿದ್ದಾರೆ” ಎಂದು ಸ್ವಷ್ಟಪಡಿಸಿದ್ದಾರೆ.

ಎನ್‌ಡಿಟಿವಿ, ರಿಪಬ್ಲಿಕ್ ಟಿವಿ ಸೇರಿದಂತೆ ಕೆಲವು ಮಾಧ್ಯಮಗಳು ನಕಲಿ ಫೋಟೋವನ್ನು ವರದಿ ಮಾಡಿರುವ ಕುರಿತು ಅವರು ಗಮನ ಸೆಳೆದಿದ್ದಾರೆ.

‘ಇದು ಸಸ್ಯಾಹಾರಿ ಮೊಸಳೆಯೇ?’ ಎಂಬ ಪ್ರಶ್ನೆ ಎದ್ದಿದೆ. ಜುಬೇರ್‌ ಮತ್ತೊಂದು ಹಳೆಯ ವಿಡಿಯೊವನ್ನು ಟ್ವೀಟ್‌ ಮಾಡಿ ಕುತೂಹಲ ಹುಟ್ಟಿಸಿದ್ದಾರೆ. ಈ ವಿಡಿಯೊದಲ್ಲಿ ‘ಬಬಿಯಾ’ ಮೊಸಳೆಗೆ ‘ಕೋಳಿ’ಯನ್ನು ಆಹಾರವಾಗಿ ನೀಡುತ್ತಿರುವುದು ದಾಖಲಾಗಿದೆ.

ಫೆಬಿನ್‌ ಎಂಬವರು ಈ ಕುರಿತು ಟ್ವೀಟ್ ಮಾಡಿದ್ದು, “ಹಳೆಯ ಫೇಸ್‌ಬುಕ್ ಪೋಸ್ಟ್‌ವೊಂದರ ಲಿಂಕ್ ಲಗತ್ತಿಸಿದ್ದಾರೆ”. ಕಳೆದ ಜುಲೈ ವೇಳೆ ಇ.ಉನ್ನಿಕೃಷ್ಣನ್ ಅವರು ಮಲಯಾಳಂನಲ್ಲಿ ಬರೆದಿರುವ ಪೋಸ್ಟ್‌ ಬಬಿಯಾ ಕುರಿತು ಮತ್ತಷ್ಟು ಬೆಳಕು ಚೆಲ್ಲುತ್ತದೆ.

ಕಾಲು ಶತಮಾನದ ಮೊದಲು ಅಂದರೆ 1997ರಲ್ಲಿ ಮಾಧ್ಯಮ ಶಿಕ್ಷಣದ ಭಾಗವಾಗಿ ಪ್ರಾಣಿಗಳ ಕುರಿತು ತಯಾರಿಸಿದ ಡಾಕ್ಯುಮೆಂಟರಿಯನ್ನು ಅವರು ಪೋಸ್ಟ್‌ ಮಾಡಿರುವುದನ್ನು ಕಾಣಬಹುದು. “ಕೋಳಿ ತಿನ್ನುವ ಮೊಸಳೆಯನ್ನು ಶುದ್ಧ ಸಸ್ಯಾಹಾರಿಯಾಗಿ ದೇವಾಲಯದ ಜೀರ್ಣೋದ್ಧಾರದ ನಂತರ ಪರಿವರ್ತಿಸಲಾಗಿದೆ” ಎಂದು ಅವರು ಉಲ್ಲೇಖಿಸಿದ್ದಾರೆ. ಬಬಿಯಾ ಮೊಸಳೆಯು ಕೋಳಿ ತಿನ್ನುತ್ತಿರುವುದನ್ನು ಈ ಸಾಕ್ಷ್ಯಚಿತ್ರದ ಹತ್ತನೇ ನಿಮಿಷದ ನಂತರ ಗಮನಿಸಬಹುದು.

ಇದನ್ನೂ ಓದಿರಿ: ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಕುರಿತು ಸಾಲುಸಾಲು ಸುಳ್ಳುಸುದ್ದಿ ಹರಿಬಿಟ್ಟ ಬಿಜೆಪಿ

ಬಬಿಯಾ ಕುರಿತು ಕೃಷ್ಣಕುಮಾರ್‌ ಹೆಗ್ಡೆ ಎಂಬವರು ಫೇಸ್‌ಬುಕ್‌ ಪೋಸ್ಟ್‌ ಹಾಕಿದ್ದು ಕನ್ನಡದಲ್ಲಿಯೇ ಮಾಹಿತಿ ಒದಗಿಸಿದ್ದಾರೆ. “ತನ್ನ ಶಾಂತ ಸ್ವಭಾವದಿಂದ ಎಲ್ಲರ ಗಮನ ಸೆಳೆಯುತ್ತಿದ್ದ ಅನಂತಪುರ ಸರೋವರ ಕ್ಷೇತ್ರದ ಕೇಂದ್ರಬಿಂದು ಮೊಸಳೆ ಬಬಿಯಾ ವಯೋಸಹಜ ಕಾರಣಗಳಿಂದಾಗಿ ಮೃತಪಟ್ಟಿದೆ. ‘ದೇವರ ಮೊಸಳೆ’ ಎಂದೇ ಕರೆಯಲ್ಪಡುತ್ತಿದ್ದ ಬಬಿಯಾ ಜೀವಂತವಿದ್ದಾಗಲೇ ಅದರ ಬಗ್ಗೆ ಹಲವಾರು ದಂತಕಥೆಗಳಿದ್ದವು. ಅದರಲ್ಲಿ ಬಹಳಷ್ಟು ಸತ್ಯವೂ ಕೂಡ. ಆದರೆ ಅದು ಶುದ್ಧ ಸಸ್ಯಾಹಾರಿ ಎನ್ನುವ ವಿಚಿತ್ರ ಸುದ್ದಿ ಮಾತ್ರ ಶುದ್ದಸುಳ್ಳು” ಎಂದಿದ್ದಾರೆ.

“ಹಿಂದೆ ಭಕ್ತರ ವತಿಯಿಂದ ಬಬಿಯಾನಿಗೆ ಕೋಳಿಗಳನ್ನು ಅರ್ಪಿಸಲಾಗುತ್ತಿತ್ತು. ಅದನ್ನು ಶಾಕಾಹಾರಿಯಾಗಿ ಪರಿವರ್ತಿಸುವ ಹೆಣಗಾಟಗಳ ನಡುವೆ ಅದು ಸರೋವರಕ್ಕೆ ಬರುತ್ತಿದ್ದ ಚಿಕ್ಕ ಪುಟ್ಟ ಹಕ್ಕಿಗಳನ್ನು ಹಿಡಿಯುತ್ತಿದ್ದದ್ದನ್ನೂ ಕಂಡವರು ಧಾರಾಳ ಮಂದಿ ಇದ್ದಾರೆ. ಮಾಂಸಾಹಾರಿಯಾದೊಡನೆ ಅದರ ದಿವ್ಯತೆಯೋ ಭವ್ಯತೆಯೋ ಕಡಿಮೆಯಾಗಲಾರದು. ಮಾಂಸಾಹಾರಿಯಾಗಿಯೂ ಅದು ಅನಂತಪುರ ಕ್ಷೇತ್ರದ ಹೆಮ್ಮೆಯೂ ಹೌದು. ಹೆಗ್ಗುರುತೂ ಹೌದು.. ಅದನ್ನು ಮರೆಮಾಚಿ ನೈಜತೆಯನ್ನು ಬಚ್ಚಿಟ್ಟು ರೋಚಕವಾಗಿಸುವುದರಲ್ಲಿ ಅರ್ಥವಿಲ್ಲ. ಅದೂ ಒಂದು ರೀತಿಯ ವೈದಿಕಶಾಹಿ ಮಾನಸೀಕತೆಯ ಉದಾಹರಣೆಯಷ್ಟೇ” ಎಂದಿರುವ ಅವರು ಹಳೆಯ ಫೋಟೋವೊಂದನ್ನು ಲಗತ್ತಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...