Homeದಲಿತ್ ಫೈಲ್ಸ್ಚಿಕ್ಕಮಗಳೂರು: ಗರ್ಭಿಣಿ ಸೇರಿದಂತೆ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ; ಎಸ್ಟೇಟ್ ಮಾಲೀಕನ ವಿರುದ್ಧ ಎಫ್‌ಐಆರ್‌

ಚಿಕ್ಕಮಗಳೂರು: ಗರ್ಭಿಣಿ ಸೇರಿದಂತೆ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ; ಎಸ್ಟೇಟ್ ಮಾಲೀಕನ ವಿರುದ್ಧ ಎಫ್‌ಐಆರ್‌

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ, ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ.

- Advertisement -
- Advertisement -

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ, ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಪತ್ರಕರ್ತ ಇಮ್ರಾನ್ ಖಾನ್ ಟ್ವಿಟರ್‌ನಲ್ಲಿ ವೀಡಿಯೋಗಳನ್ನು ಪೋಸ್ಟ್ ಮಾಡಿದ್ದಾರೆ. ಬೀಗ ಹಾಕಿದ ಮನೆಯೊಂದರೊಳಗೆ ಕಾರ್ಮಿಕರು ಇರುವ ದೃಶ್ಯಗಳು ಕಂಡುಬಂದಿವೆ. ಅಲ್ಲದೆ ಗರ್ಭಿಣಿ ಮಹಿಳೆಯೊಬ್ಬರ ಮೇಲೆ ಹಲ್ಲೆಮಾಡುವ ದೃಶ್ಯಗಳು ಸೆರೆಯಾಗಿವೆ.

ದೌರ್ಜನ್ಯ ಎಸಗಿರುವ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಭಾರತೀಯ ಜನತಾ ಪಕ್ಷದ ಸ್ಥಳೀಯ ಮುಖಂಡ ಎಂದು ಹೇಳಲಾಗಿದೆ.

ದೌರ್ಜನ್ಯಕ್ಕೆ ಒಳಗಾದ ಎಲ್ಲಾ ದಲಿತ ಕಾರ್ಮಿಕರನ್ನು ರಕ್ಷಿಸಲಾಗಿದ್ದು ಎಲ್ಲರನ್ನೂ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಳೇಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿದ್ದು, ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದಾರೆ.

ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನಲ್ಲಿ ಹೇಳಿದ್ದೇನು?

“ಸುಮಾರು 03 ತಿಂಗಳುಗಳಿಂದ ಹುಣಸೆಹಳ್ಳಿಪುರದಲ್ಲಿ ಜಗದೀಶಗೌಡ ಅವರ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡು ಲೈನ್‌ಮನೆಯಲ್ಲಿ ವಾಸವಾಗಿದ್ದೇವೆ. ಸುಮಾರು 15 ದಿನಗಳ ಹಿಂದೆ ನಮ್ಮ ಗಂಡನ ಸಂಬಂಧಿಯಾದ ಸತೀಶ, ಮಂಜು ಅವರಿಗೂ ಹಾಗೂ ಅಲ್ಲಿಯೇ ಪಕ್ಕದ ಮನೆಯವರಿಗೂ ಮಕ್ಕಳ ವಿಚಾರದಲ್ಲಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಎಸ್ಟೇಟ್ ಮಾಲೀಕರಾದ ಜಗದೀಶಗೌಡರು ಮಂಜು ಅವರಿಗೆ ಬೈಯ್ದು ಹೊಡೆದಿದ್ದರು. ಹೀಗಾಗಿ ಮಂಜು ಮತ್ತು ನಮ್ಮ ಕಡೆಯವರು ಬೇರೆಡೆ ಹೋಗಲು ನಿರ್ಧರಿಸಿದೆವು. ನಾವು ಇನ್ನು ಮುಂದೆ ಇಲ್ಲಿ ಕೆಲಸ ಮಾಡುವುದಿಲ್ಲ, ಬೇರೆ ಕಡೆಗೆ ಕೆಲಸಕ್ಕೆ ಹೋಗುವುದಾಗಿ ಹೇಳಿದ್ದೆವು. ಆನಂತರದಲ್ಲಿ ಜಗದೀಶ ಸಿಟ್ಟಾಗಿದ್ದರು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ನಮ್ಮಿಂದ ಪಡೆದ ಸಾಲದ ಹಣವನ್ನು ಕೊಟ್ಟು ಬೇರೆ ಕಡೆಗೆ ಕೆಲಸಕ್ಕೆ ಹೋಗಿ ಎಂದು ಜಗದೀಶಗೌಡ ಹೇಳಿದ್ದರಿಂದ ಹಣವನ್ನು ಹೊಂಚಿಕೊಂಡು ಬರಲು ಮಂಜು ಮತ್ತು ಸತೀಶ ಅವರು ಬೇರೆ ಎಸ್ಟೇಟ್‌ಗೆ ಹೋಗಿದ್ದರು. ಹೀಗಿದ್ದಾಗ ಅಕ್ಟೋಬರ್‌ 08ರಂದು ಬೆಳಿಗ್ಗೆ 10.30ಗಂಟೆ ಸಮಯದಲ್ಲಿ ಹಲ್ಲೆ ಘಟನೆ ನಡೆದಿದೆ. ನಾನು ಮತ್ತು ನನ್ನ ಗಂಡ ವಿಜಯ ಅವರು ಲೈನ್‌ಮನೆಯಲ್ಲಿ ಇರುವಾಗ, ಎಸ್ಟೇಟ್ ಮಾಲೀಕರಾದ ಜಗದೀಶ ಮತ್ತು ಅವರ ಮಗ ತಿಲಕ್ ಮನೆಯ ಹತ್ತಿರ ಬಂದು ಗಲಾಟೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಹಣ ತರಲು ಹೋದವರು ಇನ್ನೂ ಬಂದಿಲ್ಲವೆಂದು ನಮಗೆ ಬಾಯಿಗೆ ಬಂದಂತೆ ಕೆಟ್ಟದಾಗಿ ಬೈಯ್ದಿದ್ದಾರೆ. ಮೊಬೈಲ್ ಕಿತ್ತುಕೊಂಡಿದ್ದಾರೆ. ನಾನು ಮೊಬೈಲ್ ಕೊಡುವುದಿಲ್ಲವೆಂದು ಹೇಳಿದಾಗ ಜಗದೀಶ ಗೌಡ ನನ್ನ ಕೆನ್ನೆಗೆ ಹೊಡೆದಿದ್ದಾರೆ. ಗಲಾಟೆ ಬಿಡಿಸಲು ಬಂದ ನನ್ನ ಗಂಡ ವಿಜಯ ಅವರಿಗೂ ಜಗದೀಶ ಮತ್ತು ತಿಲಕ್  ಹಲ್ಲೆ ನಡೆಸಿದ್ದಾರೆ. ಗಲಾಟೆಯನ್ನು ಬಿಡಿಸಲು ಬಂದ ರೂಪಾ ಮತ್ತು ಕವಿತಾ ಎಂಬರಿಗೂ ಬೈಯ್ದು ಹಲ್ಲೆ ನಡೆಸಿದ್ದಾರೆ” ಎಂದು ‘ನಾನುಗೌರಿ.ಕಾಂ’ ಜೊತೆ ಹಂಚಿಕೊಂಡಿದ್ದಾರೆ.

“ಘಟನೆಯ ನಂತರ ನಮ್ಮನ್ನು ಲೈನ್‌ಮನೆಯಲ್ಲಿ ಕೂಡಿ ಹಾಕಿದ್ದರು. ನನಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆಗಾಗಿ ಕಡಬಗೆರೆ ಖಾಸಗಿ ಆಸ್ಪತ್ರೆಗೆ ಜಗದೀಶ ರವರ ಜೀಪಿನಲ್ಲಿಯೇ ಕರೆದೊಯ್ಯಲಾಯಿತು. ನಾನು ಮೂಡಿಗೆರೆಗೆ ಹೋಗಿ ಆಸ್ಪತ್ರೆಯಲ್ಲಿ ತೋರಿಸಿ ನಂತರ ಅಕ್ಟೋಬರ್‌ 9ರಂದು ಮಧ್ಯಾಹ್ನ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ಬಂದು ಚಿಕಿತ್ಸೆಗೆ ದಾಖಲಾಗಿದ್ದೆನು” ಎಂದು ಹೇಳಿದ್ದಾರೆ.

ಐಪಿಸಿ ಕಲಂ 504, 323, 342 ಸೇರಿದಂತೆ ವಿವಿಧ ಕಲಂಗಳು ಹಾಗೂ ಎಸ್‌ಸಿ ಎಸ್‌ಟಿ ಸಮುದಾಯಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲಾಗುವುದು ಎಂದು ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಇವುಗಳನ್ನು ಓದಿರಿ: ಜಾತಿ ದೌರ್ಜನ್ಯ ಸಂಬಂಧಿತ ಸುದ್ದಿಗಳನ್ನು ‘ದಲಿತ್‌ ಫೈಲ್ಸ್‌’ ಕ್ಯಾಟಗರಿಯಲ್ಲಿ ‌ಓದಬಹುದು- ಕ್ಲಿಕ್‌ ಮಾಡಿರಿ

ಹಲ್ಲೆಗೊಳಗಾದ ಮಹಿಳೆಗೆ ಗರ್ಭಪಾತ

ಹಲ್ಲೆಗೊಳಗಾದ ಗರ್ಭಿಣಿ ಅರ್ಪಿತಾ ಅವರಿಗೆ ಗರ್ಭಪಾತವಾಗಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಜಗದೀಶ್‌ ಅವರು ಹೊಡೆದಿರುವುದೇ ಕಾರಣ ಎಂಬ ಆರೋಪವೂ ಕೇಳಿಬರುತ್ತಿದೆ.

ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದ ಬಳಿಕ ಎಸ್ಟೇಟ್‌ ಮಾಲೀಕ ಜಗದೀಶ್ ಮೇಲೆ ವಿವಿಧ ಆರೋಪಗಳು ಬರುತ್ತಿವೆ. “ಕೂಲಿ ಕಾರ್ಮಿಕ ದಲಿತ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಈ ಹಿಂದೆ ಜಗದೀಶ್‌ ಯತ್ನಿಸಿದ್ದ” ಎಂದು ಸಂತ್ರಸ್ತ ಮಹಿಳೆಯೊಬ್ಬರು ಕಣ್ಣೀರು ಹಾಕಿದ್ದಾರೆ. ಈ ಕುರಿತೂ ದೂರು ದಾಖಲಿಸಲು ದಲಿತ ಮುಖಂಡರು ಮುಂದಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....