Homeಚಳವಳಿಗಣಿ ಕಾರ್ಮಿಕರ ಪುನರ್ವಸತಿಗಾಗಿ ಪಾದಯಾತ್ರೆ ಆರಂಭ: ಮೇಧಾ ಪಾಟ್ಕರ್ ಭಾಗಿ

ಗಣಿ ಕಾರ್ಮಿಕರ ಪುನರ್ವಸತಿಗಾಗಿ ಪಾದಯಾತ್ರೆ ಆರಂಭ: ಮೇಧಾ ಪಾಟ್ಕರ್ ಭಾಗಿ

- Advertisement -
- Advertisement -

ಸ್ವಾತಂತ್ರ್ಯಕ್ಕೂ ಮುಂಚೆ ನಾವು ಈಸ್ಟ್ ಇಂಡಿಯಾ ಕಂಪನಿಯ ಗುಲಾಮರಾಗಿದ್ದೆವು, ಆದರೆ ಸ್ವಾತಂತ್ರ್ಯ ನಂತರವೂ ಸಹ ಅಂಬಾನಿ ಅದಾನಿಯಂತಹ ಬಂಡವಾಳಶಾಹಿಗಳ ಗುಲಾಮರಾಗಿರಬೇಕೆಂದು ಸರ್ಕಾರ ಬಯಸುತ್ತಿದೆ. ಅದನ್ನು ತಪ್ಪಿಸುವುದಕ್ಕಾಗಿ ಹೋರಾಡುತ್ತಿರುವ ಗಣಿ ಕಾರ್ಮಿಕರಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದರು.

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಭೂರಹಿತ ಸಂತ್ರಸ್ತ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಎಕರೆ ಭೂಮಿ ನೀಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘವು ಸಂಡೂರಿನಿಂದ ಬಳ್ಳಾರಿವರೆಗೆ ನಡೆಸುತ್ತಿರುವ 70 ಕಿ.ಮೀಗಳ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಿಮ್ಮ ಹೋರಾಟವು ನರ್ಮದಾ ಉಳಿಸಿ ಹೋರಾಟದಂತೆಯೆ ಬಹಳ ಕಷ್ಟದಿಂದ ಕೂಡಿದೆ. ಆದರೆ ಅಷ್ಟೇ ಪ್ರಮುಖವಾದ ಹೋರಾಟವಾಗಿದೆ. ಇದು ನಮ್ಮ ದುಡಿಮೆಯ ಪಾಲನ್ನು ಕೇಳುವ ಹೋರಾಟವಾಗಿದೆ. ಇಡೀ ದೇಶದಲ್ಲಿ ನೀರು, ಕಾಡು, ಜಮೀನನ್ನು ಖಾಸಗೀಕರಣ ಮಾಡಲಾಗುತ್ತಿದೆ. ಇದಕ್ಕೆ ಗಣಿ ಮಾಫಿಯಾದ ಅನ್ಯಾಯವೂ ಕೂಡ ಕಾರಣವಾಗಿದೆ. ಸಂತೋಷ್ ಹೆಗ್ಡೆಯಂತಹ ನ್ಯಾಯಮೂರ್ತಿಗಳು ಈ ಕುರಿತು ವಿಸ್ತೃತ ವರದಿ ಮಾಡಿದ್ದರೆ. ಹಾಗಾಗಿ ಬಳ್ಳಾರಿಯಂತಹ ಜಿಲ್ಲೆಯಲ್ಲಿ ಇಂತಹ ಹೋರಾಟಗಳ ಅಗತ್ಯವಿದೆ ಎಂದು ಮೇಧಾ ಪಾಟ್ಕರ್ ಹೇಳಿದರು.

ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಕ್ಲಿಫ್ಟನ್ ರೊಜಾರಿಯೋರವರು ಮಾತನಾಡಿ, “ಪ್ರಾಣವನ್ನೇ ಒತ್ತೆಯಿಟ್ಟು, ರಕ್ತಸುರಿಸಿ ದುಡಿಯುತ್ತಿರುವ ಬಳ್ಳಾರಿ ಗಣಿ ಕಾರ್ಮಿಕರ ಸ್ಥಿತಿ ಪ್ರಾರಂಭದ ದಿನಗಳಿಂದಲೂ ಶೋಚನೀಯವಾಗಿದೆ. ಈ ಕಾರ್ಮಿಕರು ಅತ್ಯಂತ ದುರ್ಬಲ ಮತ್ತು ತಳ ಸಮುದಾಯಗಳಿಂದ ಬಂದಿದ್ದು, ಇವರಿಗೆ ಕನಿಷ್ಠ ವೇತನವೂ ದೊರೆಯುತ್ತಿಲ್ಲ. ಅಲ್ಲದೇ, ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದೇ ಮತ್ತು ಸರಿಯಾದ ಸುರಕ್ಷತಾ ಸಾಧನಗಳನ್ನು ನೀಡದೇ ಜೀವಕ್ಕೆ ಅಪಾಯವಿರುವಂತಹ ಕೆಲಸವನ್ನು ಮಾಡಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

2011 ರ ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದೊಂದಿಗೆ, ಬಳ್ಳಾರಿ ಜಿಲ್ಲೆಯ ಹಲವಾರು ಗಣಿಗಳಲ್ಲಿ ಕಾರ್ಮಿಕರ ರಿಟ್ರೇಂಚ್‌ಮೆಂಟ್‌ಗೆ ಸಂಬಂಧಿಸಿದ ಕಾರ್ಮಿಕ ಕಾನೂನಿನ ನಿಯಮಗಳನ್ನು ಪಾಲಿಸದೇ ಎಲ್ಲ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲಾಯಿತು. ಇದರಿಂದಾಗಿ 25,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಂಡರು ಮತ್ತು ಇವರಿಗೆ ಯಾವುದೇ ಪರಿಹಾರ ಅಥವಾ ಪುನರ್ವಸತಿಯನ್ನು ನೀಡದೇ ಬೀದಿಪಾಲು ಮಾಡಲಾಯಿತು. ಗಣಿ ಮಾಲೀಕರು ಸುಪ್ರೀಂ ಕೋರ್ಟ್ ಆದೇಶವನ್ನೇ ನೆಪವನ್ನಾಗಿ ಮಾಡಿಕೊಂಡು ಕಾರ್ಮಿಕರಿಗೆ ನೀಡಬೇಕಾಗಿದ್ದ ರೀಟ್ರೆಂಚ್‌ಮೆಂಟ್ ಪರಿಹಾರ ಸೇರಿದಂತೆ ಇತರೆ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದರು.

ಎಲ್ಲ ಗಣಿ ಕಾರ್ಮಿಕರಿಗೆ ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಪುನರ್ವಸತಿ, ಉದ್ಯೋಗ ಕಲ್ಪಿಸಬೇಕು. ಎಲ್ಲಾ ಗಣಿ ಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು. ನಿವೃತ್ತಿ ವಯಸ್ಸು ತಲುಪಿದ ಗಣಿ ಕಾರ್ಮಿಕರಿಗೆ ಮಾಸಿಕ 5000 ರೂ ಪಿಂಚಣಿ ನೀಡಬೇಕು. ಗಣಿ ಕಾರ್ಮಿಕರು ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಂಗನವಾಡಿ, ಸಮುದಾಯ ಭವನ, ಗ್ರಂಥಾಲಯ, ಕಾರ್ಮಿಕರ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಗಣಿ ಕಾರ್ಮಿಕರಿಗೆ ಆಸ್ಪತ್ರೆ ನಿರ್ಮಿಸಿ, ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು. ಗಣಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಸಹಾಯಧನ ಹಾಗೂ ಮದುವೆಗೆ ಹಣಕಾಸಿನ ನೆರವು ಒದಗಿಸಬೇಕು ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಪಾದಯಾತ್ರೆ ನಡೆಯುತ್ತಿದೆ.

ವಕೀಲರಾದ ಮೈತ್ರೇಯಿ ಕೃಷ್ಣನ್, ಐಟಿಐ ಕಾರ್ಮಿಕರ ಒಕ್ಕೂಟದ ಹೇಮಂತ್, ಆದಿವಾಸಿ ಸಂಘರ್ಷ ಮೋರ್ಚಾದ ಮೋಹನ್ ಸೇರಿದಂತೆ ಹೋರಾಟಕ್ಕೆ ನಟ ಚೇತನ್ ಕೂಡ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಎಐಸಿಸಿಟಿಯು ಸಂಘಟನೆಯ ಬೆಂಬಲದೊಂದಿಗೆ ಸಂಡೂರಿನ ಎಪಿಎಂಸಿ ಮಾರುಕಟ್ಟೆಯಿಂದ ಆರಂಭವಾದ ಪಾದಯಾತ್ರೆಯು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ವಡ್ಡುವಿನಿಂದ ಇಂದು ಕಾರ್ಮಿಕರು ಹೆಜ್ಜೆ ಹಾಕಲಿದ್ದು ನಾಳೆ ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವ ಹೋರಾಟ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....