Homeದಲಿತ್ ಫೈಲ್ಸ್ಚಿಕ್ಕಮಗಳೂರು: ಬಿಜೆಪಿ ಮುಖಂಡನ ದೌರ್ಜನ್ಯದಿಂದ ಮಗು ಕಳೆದುಕೊಂಡ ತಾಯಿಗೆ ಮಗು ಮರಳಿಸುವಿರೇ?- ಕಾಂಗ್ರೆಸ್

ಚಿಕ್ಕಮಗಳೂರು: ಬಿಜೆಪಿ ಮುಖಂಡನ ದೌರ್ಜನ್ಯದಿಂದ ಮಗು ಕಳೆದುಕೊಂಡ ತಾಯಿಗೆ ಮಗು ಮರಳಿಸುವಿರೇ?- ಕಾಂಗ್ರೆಸ್

- Advertisement -
- Advertisement -

“ಬಿಜೆಪಿ ಮುಖಂಡ ಮಾಡಿದ ದೌರ್ಜನ್ಯದಿಂದಾಗಿ ಮಗು ಕಳೆದುಕೊಂಡ ತಾಯಿಗೆ ಮತ್ತೆ ಮಗುವನ್ನು ಮರಳಿಸಲು ಸಾಧ್ಯವೇ?” ಎಂದು ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ, ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ದೌರ್ಜನ್ಯ ಎಸಗಿರುವ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಭಾರತೀಯ ಜನತಾ ಪಕ್ಷದ ಸ್ಥಳೀಯ ಮುಖಂಡ ಎಂದು ಹೇಳಲಾಗಿದ್ದು, ಬಂಧನದ ಭೀತಿಯಲ್ಲಿ ತಲೆಮರಿಸಿಕೊಂಡಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿದ್ದು, ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ಆತನ ಮಗ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದಾರೆ. ಅದರನ್ವಯ ಪ್ರಕರಣ ದಾಖಲಾಗಿದೆ.

ಅರ್ಪಿತಾ ಗರ್ಭಿಣಿಯಾಗಿದ್ದು, ಜಗದೀಶ್‌ ಗೌಡ ಹಲ್ಲೆ ನಡೆಸಿದ್ದರಿಂದ ಗರ್ಭಪಾತವಾಗಿದೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ದಲಿತರ ಮನೆಗಳಿಗೆ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿ ಊಟ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಟ್ವೀಟ್‌ ಮಾಡಿದ್ದಾರ.ಎ

“ಬೊಮ್ಮಾಯಿಯವರೇ, ಬಹುಸಂಖ್ಯಾತ ದಲಿತರು ಮತ್ತು ಬಡವರ ಬೇಡಿಕೆಗೆ ಉತ್ತರಿಸಿ. ಬಿಜೆಪಿ ನಾಯಕರಿಂದ ದಲಿತರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಮೌನವಾಗಿರುವುದೇಕೆ? ಮೌನ ಎಂದರೆ ಸಮ್ಮತಿಯಲ್ಲವೇ?” ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

“ದೌರ್ಜನ್ಯ ನಡೆದ ಗ್ರಾಮಕ್ಕೆ ನೀವೇಕೆ ಭೇಟಿ ನೀಡಿಲ್ಲ? ಕಳೆದುಹೋದ ಮಗುವನ್ನು ನೀವು ಮರಳಿ ತರಬಹುದೇ?” ಎಂದು ಕೇಳಿದ್ದಾರೆ.

“ದಲಿತ ದೌರ್ಜನ್ಯಗಳು ಕಳೆದ ವರ್ಷಕ್ಕಿಂತ 54% ರಷ್ಟು ಏಕೆ ಹೆಚ್ಚಿವೆ? ಇದು ಎಸ್‌ಸಿ/ಎಸ್‌ಟಿಗಳನ್ನು ಟಾರ್ಗೆಟ್ ಮಾಡಲು ರೂಪಿಸಿರುವ ವಿನ್ಯಾಸವಲ್ಲವೇ? ನಿಮ್ಮ ಸರ್ಕಾರವು ₹ 6,500 ಕೋಟಿ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಕಸಿದಿರುವುದು ಏತಕ್ಕೆ? ಸಬಲೀಕರಣವನ್ನು ದುರ್ಬಲಗೊಳಿಸುವ ವಿನ್ಯಾಸವಿದಲ್ಲವೇ?” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಚಿಕ್ಕಮಗಳೂರು: ಗರ್ಭಿಣಿ ಸೇರಿದಂತೆ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ; ಎಸ್ಟೇಟ್ ಮಾಲೀಕನ ವಿರುದ್ಧ ಎಫ್‌ಐಆರ್‌

ಚಿಕ್ಕಮಗಳೂರು ಘಟನೆಯ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಯುವ ನಾಯಕ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. “ಗಂಗಾ ಕಲ್ಯಾಣದಲ್ಲಿ ₹430 ಕೋಟಿ ಅಕ್ರಮ, SCP/TSP ಹಣ ಬೇರೆಡೆ ವರ್ಗ, ಭೋವಿ ನಿಗಮದಲ್ಲಿ ₹150 ಕೋಟಿ ಅಕ್ರಮ, ನಾಗಮೋಹನ್ ದಾಸ್ ವರದಿ ಜಾರಿ ಮಾಡಿ SC/ST ಮೀಸಲಾತಿ ಹೆಚ್ಚಿಸಿದ್ದೇವೆಂದು ಸುಳ್ಳು ಪ್ರಚಾರ, BJP ನಾಯಕರಿಂದ ದಲಿತರ ಮೇಲೆ ಅಮಾನವೀಯ ದೌರ್ಜನ್ಯ, ದಲಿತರ ದಮನವೇ RSSನ ನೈಜ ಮನಸ್ಥಿತಿ” ಎಂದು ತಿಳಿಸಿದ್ದಾರೆ.

ಗರ್ಭಿಣಿಯ ಮೇಲೆ ಹಲ್ಲೆ ನಡೆಸಿದವರು ಪರಾರಿಯಾಗಿದ್ದಾರೆ. ಇದರ ಜೊತೆಗೆ ಆರೋಪಿಗಳು ದಲಿತ ಕಾರ್ಮಿಕ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಸಂಗತಿ ಬಯಲಾಗಿದೆ. ಲೈಂಗಿಕ ಕಿರುಕುಳ ಅನುಭವಿಸಿದ ಮಹಿಳೆಯೂ ಬಾಳೇಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಾಳೆ ಬಾಳೇಹೊನ್ನೂರು ಚಲೋ

ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟವು ಅಕ್ಟೋಬರ್‌ 14ರಂದು ‘ಬಾಳೇಹೊನ್ನೂರು ಚಲೋ’ ಹಮ್ಮಿಕೊಂಡಿದೆ.

“ದಲಿತ ಮಹಿಳೆಯರನ್ನು ಗೃಹಬಂಧನದಲ್ಲಿಟ್ಟು ದೌರ್ಜನ್ಯ ನಡೆಸಿದ ಭೂ ಮಾಲೀಕನನ್ನು ಕೂಡಲೇ ಬಂಧಿಸಬೇಕು” ಎಂದು ಸಂಘಟಕರು ಆಗ್ರಹಿಸಿದ್ದು, ಗುರುವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...