Homeದಲಿತ್ ಫೈಲ್ಸ್ಚಿಕ್ಕಮಗಳೂರು: ಬಿಜೆಪಿ ಮುಖಂಡನ ದೌರ್ಜನ್ಯದಿಂದ ಮಗು ಕಳೆದುಕೊಂಡ ತಾಯಿಗೆ ಮಗು ಮರಳಿಸುವಿರೇ?- ಕಾಂಗ್ರೆಸ್

ಚಿಕ್ಕಮಗಳೂರು: ಬಿಜೆಪಿ ಮುಖಂಡನ ದೌರ್ಜನ್ಯದಿಂದ ಮಗು ಕಳೆದುಕೊಂಡ ತಾಯಿಗೆ ಮಗು ಮರಳಿಸುವಿರೇ?- ಕಾಂಗ್ರೆಸ್

- Advertisement -
- Advertisement -

“ಬಿಜೆಪಿ ಮುಖಂಡ ಮಾಡಿದ ದೌರ್ಜನ್ಯದಿಂದಾಗಿ ಮಗು ಕಳೆದುಕೊಂಡ ತಾಯಿಗೆ ಮತ್ತೆ ಮಗುವನ್ನು ಮರಳಿಸಲು ಸಾಧ್ಯವೇ?” ಎಂದು ಕಾಂಗ್ರೆಸ್‌ನ ಕರ್ನಾಟಕ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ, ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ತಾಲೂಕಿನಲ್ಲಿ ನಡೆದಿದೆ. ದೌರ್ಜನ್ಯ ಎಸಗಿರುವ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಭಾರತೀಯ ಜನತಾ ಪಕ್ಷದ ಸ್ಥಳೀಯ ಮುಖಂಡ ಎಂದು ಹೇಳಲಾಗಿದ್ದು, ಬಂಧನದ ಭೀತಿಯಲ್ಲಿ ತಲೆಮರಿಸಿಕೊಂಡಿದ್ದಾನೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚಿಕ್ಕಮಗಳೂರು ತಾಲ್ಲೂಕು ಠಾಣೆಯಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಹುಣಸೆಹಳ್ಳಿಪುರದಲ್ಲಿ ಘಟನೆ ನಡೆದಿದ್ದು, ಎಸ್ಟೇಟ್‌ ಮಾಲೀಕನಾದ ಜಗದೀಶಗೌಡ ಹಾಗೂ ಆತನ ಮಗ ತಿಲಕ್ ಎಂಬವರು ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಆಲ್ದೂರಿನ ಗಾಳಿಗಂಡಿಯಿಂದ ಬಂದು ಇಲ್ಲಿನ ಲೈನ್‌ಮನೆಯಲ್ಲಿ ವಾಸವಿದ್ದು ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕ ಮಹಿಳೆ ಅರ್ಪಿತಾ ಪೊಲೀಸರಿಗೆ ದೂರು ನೀಡಿದ್ದಾರೆ. ಅದರನ್ವಯ ಪ್ರಕರಣ ದಾಖಲಾಗಿದೆ.

ಅರ್ಪಿತಾ ಗರ್ಭಿಣಿಯಾಗಿದ್ದು, ಜಗದೀಶ್‌ ಗೌಡ ಹಲ್ಲೆ ನಡೆಸಿದ್ದರಿಂದ ಗರ್ಭಪಾತವಾಗಿದೆ. ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ದಲಿತರ ಮನೆಗಳಿಗೆ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭೇಟಿ ನೀಡಿ ಊಟ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಟ್ವೀಟ್‌ ಮಾಡಿದ್ದಾರ.ಎ

“ಬೊಮ್ಮಾಯಿಯವರೇ, ಬಹುಸಂಖ್ಯಾತ ದಲಿತರು ಮತ್ತು ಬಡವರ ಬೇಡಿಕೆಗೆ ಉತ್ತರಿಸಿ. ಬಿಜೆಪಿ ನಾಯಕರಿಂದ ದಲಿತರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಮೌನವಾಗಿರುವುದೇಕೆ? ಮೌನ ಎಂದರೆ ಸಮ್ಮತಿಯಲ್ಲವೇ?” ಎಂದು ಸುರ್ಜೇವಾಲ ಪ್ರಶ್ನಿಸಿದ್ದಾರೆ.

“ದೌರ್ಜನ್ಯ ನಡೆದ ಗ್ರಾಮಕ್ಕೆ ನೀವೇಕೆ ಭೇಟಿ ನೀಡಿಲ್ಲ? ಕಳೆದುಹೋದ ಮಗುವನ್ನು ನೀವು ಮರಳಿ ತರಬಹುದೇ?” ಎಂದು ಕೇಳಿದ್ದಾರೆ.

“ದಲಿತ ದೌರ್ಜನ್ಯಗಳು ಕಳೆದ ವರ್ಷಕ್ಕಿಂತ 54% ರಷ್ಟು ಏಕೆ ಹೆಚ್ಚಿವೆ? ಇದು ಎಸ್‌ಸಿ/ಎಸ್‌ಟಿಗಳನ್ನು ಟಾರ್ಗೆಟ್ ಮಾಡಲು ರೂಪಿಸಿರುವ ವಿನ್ಯಾಸವಲ್ಲವೇ? ನಿಮ್ಮ ಸರ್ಕಾರವು ₹ 6,500 ಕೋಟಿ ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಕಸಿದಿರುವುದು ಏತಕ್ಕೆ? ಸಬಲೀಕರಣವನ್ನು ದುರ್ಬಲಗೊಳಿಸುವ ವಿನ್ಯಾಸವಿದಲ್ಲವೇ?” ಎಂದು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: ಚಿಕ್ಕಮಗಳೂರು: ಗರ್ಭಿಣಿ ಸೇರಿದಂತೆ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ; ಎಸ್ಟೇಟ್ ಮಾಲೀಕನ ವಿರುದ್ಧ ಎಫ್‌ಐಆರ್‌

ಚಿಕ್ಕಮಗಳೂರು ಘಟನೆಯ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಯುವ ನಾಯಕ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. “ಗಂಗಾ ಕಲ್ಯಾಣದಲ್ಲಿ ₹430 ಕೋಟಿ ಅಕ್ರಮ, SCP/TSP ಹಣ ಬೇರೆಡೆ ವರ್ಗ, ಭೋವಿ ನಿಗಮದಲ್ಲಿ ₹150 ಕೋಟಿ ಅಕ್ರಮ, ನಾಗಮೋಹನ್ ದಾಸ್ ವರದಿ ಜಾರಿ ಮಾಡಿ SC/ST ಮೀಸಲಾತಿ ಹೆಚ್ಚಿಸಿದ್ದೇವೆಂದು ಸುಳ್ಳು ಪ್ರಚಾರ, BJP ನಾಯಕರಿಂದ ದಲಿತರ ಮೇಲೆ ಅಮಾನವೀಯ ದೌರ್ಜನ್ಯ, ದಲಿತರ ದಮನವೇ RSSನ ನೈಜ ಮನಸ್ಥಿತಿ” ಎಂದು ತಿಳಿಸಿದ್ದಾರೆ.

ಗರ್ಭಿಣಿಯ ಮೇಲೆ ಹಲ್ಲೆ ನಡೆಸಿದವರು ಪರಾರಿಯಾಗಿದ್ದಾರೆ. ಇದರ ಜೊತೆಗೆ ಆರೋಪಿಗಳು ದಲಿತ ಕಾರ್ಮಿಕ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಸಂಗತಿ ಬಯಲಾಗಿದೆ. ಲೈಂಗಿಕ ಕಿರುಕುಳ ಅನುಭವಿಸಿದ ಮಹಿಳೆಯೂ ಬಾಳೇಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ನಾಳೆ ಬಾಳೇಹೊನ್ನೂರು ಚಲೋ

ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟವು ಅಕ್ಟೋಬರ್‌ 14ರಂದು ‘ಬಾಳೇಹೊನ್ನೂರು ಚಲೋ’ ಹಮ್ಮಿಕೊಂಡಿದೆ.

“ದಲಿತ ಮಹಿಳೆಯರನ್ನು ಗೃಹಬಂಧನದಲ್ಲಿಟ್ಟು ದೌರ್ಜನ್ಯ ನಡೆಸಿದ ಭೂ ಮಾಲೀಕನನ್ನು ಕೂಡಲೇ ಬಂಧಿಸಬೇಕು” ಎಂದು ಸಂಘಟಕರು ಆಗ್ರಹಿಸಿದ್ದು, ಗುರುವಾರ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...