Homeಮುಖಪುಟವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮಹಿಳೆಯರನ್ನು ವಾಮಾಚಾರಕ್ಕಾಗಿ ನರಬಲಿ ನೀಡಲಾಗಿದೆ ಎಂಬ ವರದಿಗೆ ರಾಜ್ಯದ ಜನರು ಬೆಚ್ಚಿ ಬಿದ್ದಿದ್ದಾರೆ. ಪ್ರಕರಣಗಳ ಬಗ್ಗೆ ಅಘಾತ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್‌ ನ್ಯಾಯಮೂರ್ತಿ ದೇವನ್ ರಾಮಚಂದ್ರನ್ ಅವರು, ರಾಜ್ಯ ಎಲ್ಲಿಗೆ ಹೋಗುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದು, “ರಾಜ್ಯವು ವಿಚಲಿತವಾಗುತ್ತಿದೆ ಮತ್ತು ಜನರು ವಿಚಿತ್ರವಾಗಿ ವರ್ತಿಸಲು ಪ್ರಾರಂಭಿಸಿದ್ದಾರೆ” ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಸೇರಿದಂತೆ ಒಟ್ಟು ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಾಮಾಚಾರಕ್ಕೆ ಬಲಿ ನೀಡಲಾಗಿದ್ದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರ ಅವಶೇಷಗಳನ್ನು ಪತ್ತೆ ಹಚ್ಚಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಗಳನ್ನು ಮಂತ್ರವಾದಿ ಮೊಹಮ್ಮದ್ ಶಫಿ ಅಲಿಯಾಸ್ ರಶೀದ್‌ ಮತ್ತು ಬಗವಾಲ್ ಸಿಂಗ್ ಹಾಗೂ ಅವನ ಪತ್ನಿ ಲೈಲಾ ಎಂದು ಗುರುತಿಸಲಾಗಿದೆ. ನರಬಲಿಯು ಸಮೃದ್ಧಿಯನ್ನು ತರುತ್ತದೆ ಎಂದು ಮಂತ್ರವಾದಿಯು ದಂಪತಿಗೆ ನಂಬಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ವಾಮಾಚಾರ ಶಂಕೆ: ಮಂತ್ರವಾದಿಯ ಮಾತು ಕೇಳಿ ಮೂವರು ಮಹಿಳೆಯರ ಗುಂಪು ಹತ್ಯೆ

ಹೀಗಾಗಿ 50 ಮತ್ತು 52 ವರ್ಷ ವಯಸ್ಸಿನ ಇಬ್ಬರು ಮಹಿಳೆಯರನ್ನು ಅಪಹರಿಸಿ, ಕೊಂದು, ಅವರ ದೇಹಗಳನ್ನು ತುಂಡರಿಸಿ ಅದನ್ನು ದಂಪತಿಯ ಮನೆಯ ಆವರಣದಲ್ಲಿ ಹೂತುಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ ಮತ್ತು ಸೆಪ್ಟೆಂಬರ್‌ನಲ್ಲಿ ಕೊಚ್ಚಿಯ ಬೇರೆ ಬೇರೆ ಪ್ರದೇಶಗಳಿಂದ ಇಬ್ಬರು ಮಹಿಳೆಯರು ನಾಪತ್ತೆಯಾಗಿದ್ದರು. ಅವರ ಸಂಬಂಧಿಕರು ನೀಡಿದ ದೂರಿನನ್ವಯ ಪೊಲೀಸರು ತನಿಖೆ ಆರಂಭಿಸಿದ್ದರು. ಈ ತನಿಖೆಯಲ್ಲಿ ಪತ್ತನಂತಿಟ್ಟ ಜಿಲ್ಲೆಯ ಎಳಂತೂರ್‌ನಲ್ಲಿ ದಂಪತಿಗಳು ಹಣಕ್ಕಾಗಿ ವಾಮಾಚಾರದ ಮೂಲಕ ಇಬ್ಬರನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದೆ.

ಹತ್ಯೆಯಾದ ಮಹಿಳೆಯಿಬ್ಬರನ್ನು ತ್ರಿಶೂರ್ ಮೂಲದ ರೋಸ್ಲಿ ಮತ್ತು ತಮಿಳುನಾಡಿನ ಧರ್ಮಪುರಿ ಮೂಲದ ಪದ್ಮಮ್‌ ಎಂದು ಗುರುತಿಸಲಾಗಿದೆ. 52 ವರ್ಷದ ರೋಸ್ಲಿ ಜೂನ್‌ನಿಂದ ಕೊಚ್ಚಿ ಸಮೀಪದ ಕಾಲಡಿಯಿಂದ ನಾಪತ್ತೆಯಾಗಿದ್ದರು. ಹಾಗೆಯೇ 50 ವರ್ಷದ ಪದ್ಮಮ್ ಸೆಪ್ಟೆಂಬರ್ 26ರಿಂದ ಕೊಚ್ಚಿಯ ಕಡವಂತರಾದಿಂದ ನಾಪತ್ತೆಯಾಗಿದ್ದರು. ಅವರ ಸಂಬಂಧಿಕರು ಸ್ಥಳೀಯ ಪೊಲೀಸ್‌ ಠಾಣೆಗಳಲ್ಲಿ ದೂರು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

ಪೊಲೀಸ್ ಮೂಲಗಳ ಮಾಹಿತಿಯ ಪ್ರಕಾರ, ಕೊಚ್ಚಿ ಬಳಿಯ ಪೆರುಂಬವೂರ್ ಮೂಲದವನಾದ ಶಫಿ ತನ್ನನ್ನು ಮಾಂತ್ರಿಕನೆಂದು ಪರಿಚಯಿಸಿಕೊಂಡು, ಸಾಮಾಜಿಕ ಜಾಲತಾಣದ ಮೂಲಕ ದಂಪತಿಗಳನ್ನು ಸಂಪರ್ಕಿಸಿದ್ದಾನೆ. ಮಾಟಮಂತ್ರ ಮೂಲಕ ಅವರಿಗೆ ಸುಖ ಸಮೃದ್ಧಿ ದೊರೆಯುತ್ತದೆ ಎಂದು ಅವರಿಗೆ ಭರವಸೆ ನೀಡಿದ್ದನು. ಜೊತೆಗೆ ಹತ್ಯೆಗೀಡಾದ ಇಬ್ಬರು ಮಹಿಳೆಯರಿಗೆ, ಅಶ್ಲೀಲ ಚಿತ್ರದಲ್ಲಿ ನಟಿಸಿದರೆ ಆಕರ್ಷಕ ಸಂಭಾವನೆ ನೀಡುವ ಆಮಿಷವೊಡ್ಡಿ, ಆರ್ಥಿಕವಾಗಿ ದುರ್ಬಲರಾಗಿದ್ದ ಮಹಿಳೆಯರನ್ನು ಪ್ರಭಾವಿಸಿದ್ದನು.

ಆಗಸ್ಟ್‌ನಲ್ಲಿ ರೋಸ್ಲಿಯನ್ನು ದಂಪತಿಯ ಮನೆಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಿ, ಅವರ ರಕ್ತವನ್ನು ಮನೆಯ ಆವರಣದಲ್ಲಿ ಚಿಮುಕಿಸಿ ಶವವನ್ನು ಹೂಳಲಾಯಿತು. ನಂತರ, ಸೆಪ್ಟೆಂಬರ್‌ನಲ್ಲಿ ಪದ್ಮಂ ಅವರನ್ನು ಕರೆದೊಯ್ದು ಅದೇ ರೀತಿಯಲ್ಲಿ ಕೊಲೆ ಮಾಡಲಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...