Homeಕರ್ನಾಟಕಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

ಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

- Advertisement -
- Advertisement -

ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯೊಬ್ಬರು ನಿರ್ಮಾಣ ಹಂತದ ಮನೆಯ ಮುಂಭಾಗದಲ್ಲಿದ್ದ ನೀರಿನ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆಗೆ ತಿರುವು ಲಭಿಸಿದ್ದು, ಟ್ಯೂಷನ್‌ ನೀಡುತ್ತಿದ್ದ ಶಿಕ್ಷಕ ಕಾಂತರಾಜು ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ‘ನುಡಿ ಕರ್ನಾಟಕ’ ಸುದ್ದಿ ಪೋರ್ಟಲ್ ಬುಧವಾರ ವರದಿ ಮಾಡಿದೆ.

ಆರೋಪಿ ಕಾಂತರಾಜು ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದು, ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ. ಬಾಲಕಿಯನ್ನು ಆರೋಪಿಯು ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು, ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾಗಿ ತಿಳಿದು ಬಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಳವಳ್ಳಿ ಪಟ್ಟಣದಲ್ಲಿ ಟ್ಯೂಷನ್ ಸೆಂಟರ್‌ ನಲ್ಲಿ ಕೆಲಸಕ್ಕಿದ್ದ ಕಾಂತರಾಜು ನಿನ್ನೆ ಮಂಗಳವಾರ ಬಾಲಕಿಗೆ ಕರೆ ಮಾಡಿ ಬೆಳಿಗ್ಗೆ 11 ಗಂಟೆ ಸುಮಾರಿಗೆ ಟ್ಯೂಷನ್ ಗೆ ಬರುವಂತೆ ತಿಳಿಸಿದ್ದ. ಬಾಲಕಿ  ಟ್ಯೂಷನ್ ಗೆ ಬಂದ ಸಂದರ್ಭದಲ್ಲಿ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಅಲ್ಲಿದ್ದ ಗಲ್ಲಿಯಲ್ಲಿ ಅತ್ಯಾಚಾರ ನಡೆಸಿ, ಕೊಲೆ ಮಾಡಿ ಶವವನ್ನು ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆಯ ಕಟ್ಟಡದ ನೀರಿನ ಸಂಪಿಗೆ ಹಾಕಿದ್ದ ಎನ್ನಲಾಗಿದೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

ಬಾಲಕಿಯನ್ನು ಹುಡುಕಾಟ ನಡೆಸಿ ನಾಟಕವಾಡಿದ ಆರೋಪಿ

ತಮ್ಮ ಮಗಳು ಬೆಳಿಗ್ಗೆ 11 ಗಂಟೆಗೆ ಟ್ಯೂಷನ್‌ಗೆ ಎಂದು ಮನೆಯಿಂದ ಹೋದವಳು, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಗಾಬರಿಯಾದ ಪೋಷಕರು ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದರೂ ಬಾಲಕಿ ಪತ್ತೆಯಾಗಿರಲಿಲ್ಲ.

ಟ್ಯೂಷನ್ ಸೆಂಟರ್ ನೋಡಿಕೊಂಡಿದ್ದ ಕಾಂತರಾಜು ಕೂಡ ನನಗೆ ಬಾಲಕಿ ಬಗ್ಗೆ ತನಗೆ ಏನೂ ಗೊತ್ತಿಲ್ಲ ಎಂದು ಹೇಳಿ, ಆತನೂ ಬಾಲಕಿಯ ಪಾಲಕರೊಂದಿಗೆ ಹುಡುಕಾಟ ನಡೆಸಿದ್ದ. ಕೊನೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬುವವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ನೀರಿನ ಸಂಪ್‌ನಲ್ಲಿ ಬಿದ್ದಿರುವ ಮಾಹಿತಿ ಮೇರೆಗೆ ಪೋಲಿಸರು ನೀರಿನ ಸಂಪ್‌ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿತ್ತು.

ಈ ವೇಳೆಗಾಗಲೆ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದವು. ಸ್ಥಳಕ್ಕೆ ಡಿವೈಎಸ್ ಪಿ‌ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆ ಪರಿಶೀಲನೆ ಕೂಡ ನಡೆಸಿದ್ದರು.

ಇದನ್ನೂ ಓದಿ: ಬೆಂಗಳೂರು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಮುಂದಾದ ದಂಪತಿ ರಕ್ಷಿಸಿದ ಅಗ್ನಿಶಾಮಕ ದಳ

ಮಧ್ಯರಾತ್ರಿ ಸೆರೆಯಾದ ಆರೋಪಿ

ಎಸ್ಐಗಳಾದ ಶೇಷಾದ್ರಿ ಕುಮಾರ್, ಶ್ರೀಧರ್, ಅಶೋಕ್ ಅವರು ಟ್ಯೂಷನ್ ಸೆಂಟರ್‌ ನೋಡಿಕೊಳ್ಳುತ್ತಿದ್ದ ಕಾಂತರಾಜು ಹೇಳಿಕೆಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಅವನನ್ನು ಕರೆತಂದು ವಿಚಾರಣೆ ಮಾಡಿದ ಸಂದರ್ಭದಲ್ಲಿ ಆತನೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿ‌, ನೀರಿನ ಸಂಪಿಗೆ ಹಾಕಿದ್ದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...