Homeಕರ್ನಾಟಕಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

ಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

‘ಹೊಯ್ಸಳ ಸಾಹಿತ್ಯೋತ್ಸವ’ ಎಂದು ಹೆಸರಿರುವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯವರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಆರೋಪ ಬಂದಿದೆ. ‘ಶುದ್ಧ ಸಾಹಿತ್ಯ’ದ ಕಮಟು ಕೂಡ ಬರಲಾರಂಭಿಸಿದೆ.

- Advertisement -
- Advertisement -

ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್‌ 22, 23ರಂದು ಹಾಸನದಲ್ಲಿ ಆಯೋಜಿಸಲಾಗಿರುವ ‘ಹೊಯ್ಸಳ ಸಾಹಿತ್ಯೋತ್ಸವ’ ಪ್ರವೇಶಕ್ಕೆ 250 ರೂ. ಶುಲ್ಕವನ್ನು ವಿಧಿಸಲಾಗಿದೆ. ಜನಸಾಮಾನ್ಯರ ಪರವಾಗಿರಬೇಕಿದ್ದ ಕಸಾಪ, ಖಾಸಗಿ ಸಂಸ್ಥೆಯಂತೆ ಶುಲ್ಕ ವಿಧಿಸಿದೆ ಎಂಬ ಟೀಕೆಗಳು ಬಂದಿವೆ. ಜೊತೆಗೆ ಸ್ಥಳೀಯ ಪ್ರಾತಿನಿಧ್ಯವನ್ನು ಕಡೆಗಣಿಸಿ ಕಾರ್ಯಕ್ರಮ ಆಯೋಜಿಸಿರುವ ಕುರಿತು ಆಕ್ಷೇಪಗಳು ವ್ಯಕ್ತವಾಗುತ್ತಿವೆ.

ಶುಲ್ಕ ವಿಧಿಸಿರುವುದಷ್ಟೇ ಅಲ್ಲದೇ ತೀರಿ ಹೋಗಿರುವ ರಂಗಕರ್ಮಿ, ಮೈಸೂರು ರಂಗಾಯಣದ ಮಾಜಿ ನಿರ್ದೇಶಕರಾದ ಲಿಂಗದೇವರು ಹಳೆಮನೆಯವರ ಹೆಸರನ್ನೂ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಸೇರಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಸಂದೇಶಗಳಲ್ಲಿ ‘ಶುದ್ಧ ಸಾಹಿತ್ಯ’ ಎಂಬ ಪದವೂ ಸೇರಿರುವುದು ಗೊಂದಲ ಮೂಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಹಿತ್ಯ ಪರಿಷತ್‌ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ವಹಿಸಲಿದ್ದಾರೆ. ಸಾಹಿತ್ಯಲೋಕದ ಪ್ರಮುಖ ಹಿರಿಯ, ಕಿರಿಯ ದಿಗ್ಗಜ ಕವಿಗಳು, ಸಾಹಿತಿಗಳು, ವಿಮರ್ಶಕರು ಹಾಗೂ ವಿದ್ವಾಂಸರು ಈ ಸಾಹಿತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಐತಿಹಾಸಿಕವಾದ ಸಾಹಿತ್ಯೋತ್ಸವಕ್ಕೆ ಕೇವಲ 500 ಜನರಿಗೆ ಮಾತ್ರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಜಿಲ್ಲೆಯ ಆಸಕ್ತ ಸಾಹಿತ್ಯ ಮನಸ್ಸುಗಳು ಕೆಳಗೆ ನೀಡಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ದಿನಾಂಕ 15-10-2022 ರೊಳಗೆ ನೋಂದಣಿಯಾಗಬಹುದು” ಎಂದು ಕೆಲವರು ಸಂಪರ್ಕ ಸಂಖ್ಯೆಯನ್ನು ನೀಡಲಾಗಿದೆ.

ಮುಖ್ಯವಾಗಿ ಸ್ಥಳೀಯರಲ್ಲದವರು ಸ್ವಾಗತ ಸಮಿತಿಯಲ್ಲಿದ್ದಾರೆ. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಸಂಚಾಲಕರಾಗಿ ಕವಿ ಬಿ.ಆರ್.ಲಕ್ಷ್ಮಣರಾವ್, ಪತ್ರಕರ್ತ ಜೋಗಿ, ಕಾರ್ಯದರ್ಶಿಯಾಗಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್.ಎಲ್.ಮಲ್ಲೇಶಗೌಡ ಇದ್ದಾರೆ.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ‘ಜೇನುಗಿರಿ’ ಪತ್ರಿಕೆ ಸಂಪಾದಕರಾದ ಚಲಂ ಹಾಡ್ಲಹಳ್ಳಿ, “ಹಾಸನ ಜಿಲ್ಲೆಯನ್ನು ಪ್ರತಿನಿಧಿಸುವಂತೆ ಪ್ರತಿವರ್ಷ ಹೊಯ್ಸಳ ಉತ್ಸವ ನಡೆಯುತ್ತಿತ್ತು. ಆದರೆ ಕೆಲವು ವರ್ಷಗಳಿಂದ ಈ ಕಾರ್ಯಕ್ರಮ ಆಯೋಜನೆಯಾಗಿಲ್ಲ. ಹೊಯ್ಸಳ ಸಾಹಿತ್ಯೋತ್ಸವವು ಹೊಯ್ಸಳ ಉತ್ಸವದ ನೆರಳಿನಂತೆ ಕಾಣುತ್ತಿದೆ. ಅಥವಾ ಹೊಯ್ಸಳ ಉತ್ಸವವನ್ನು ನಡೆಸದಿದ್ದರೂ ಆಗುತ್ತದೆ. ಇದನ್ನೇ ತೋರಿಸಿ ಸರ್ಕಾರ ನುಣುಚಿಕೊಳ್ಳಲೂ ಸಾಧ್ಯವಿದೆ. ಹೀಗಿರುವಾಗ ಸ್ಥಳೀಯರಿಗೆ ಅವಕಾಶ ನೀಡಬೇಕಿತ್ತು. ಸ್ವಾಗತ ಸಮಿತಿಯಲ್ಲೂ ಹೊರಗಿನವರೇ ಇದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಹೊಯ್ಸಳ ಎಂಬುದೇ ಒಂದು ಪ್ರಾದೇಶಿಕತೆಯನ್ನು ಬಿಂಬಿಸುತ್ತದೆ. ಕರಾವಳಿ ಉತ್ಸವ, ಹಂಪಿ ಉತ್ಸವ, ಹೊಯ್ಸಳ ಉತ್ಸವ- ಇವುಗಳಿಗೆಲ್ಲ ವ್ಯತ್ಯಾಸಗಳಿರುತ್ತವೆ. ಈ ನಿಟ್ಟಿನಲ್ಲಿ ಪ್ರಾತಿನಿಧಿಕತೆಯ ಪ್ರಶ್ನೆ ಬರುತ್ತದೆ. ಎಚ್.ಎಸ್.ವೆಂಕಟೇಶಮೂರ್ತಿ, ಬಿ.ಆರ್‌.ಲಕ್ಷ್ಮಣರಾವ್, ಜೋಗಿ ಇವರೆಲ್ಲ ಹಾಸನವನ್ನು ಹೇಗೆ ಪ್ರತಿನಿಧಿಸಬಲ್ಲರು? ಅತಿಥಿಗಳಾಗಿ ಬಂದಿದ್ದರೆ ಪ್ರಶ್ನೆ ಉದ್ಭವಿಸುತ್ತಿರಲಿಲ್ಲ. ಕಾರ್ಯಕ್ರಮ ಹೇಗಿರಬೇಕೆಂದು ನಿರ್ಧರಿಸುವವರೇ ಹೊರಗಿನವರಾಗಿರುವುದು ಎಷ್ಟು ಸರಿ? ಸಕಲೇಶಪುರ ಭಾಗದ ಕಾಡಿನ ಸಮಸ್ಯೆ ಇವರಿಗೆ ಗೊತ್ತಿದೆಯೇ? ಚನ್ನರಾಯಪಟ್ಟಣ ಭಾಗದ ತೆಂಗಿನ ಸಮಸ್ಯೆ ಗೊತ್ತಿದೆಯೇ? ಅರಕಲಗೂಡು ಭಾಗದ ತಂಬಾಕಿನ ಸಮಸ್ಯೆ ಗೊತ್ತಿದೆಯೇ? ಈ ಅಂಶಗಳನ್ನು ತಿರಸ್ಕರಿಸಿ ‘ಇದು ಶುದ್ಧಸಾಹಿತ್ಯ ಸಮ್ಮೇಳನ’ ಎಂದು ಕರೆಯುತ್ತಿದ್ದಾರೆಂದು ತಿಳಿದುಬಂದಿದೆ” ಎಂದು ವಿಷಾದಿಸಿದರು.

“ಹಾಸನ ಜಿಲ್ಲಾ ಕಸಾಪವು ಖಾಸಗಿ ಸಂಸ್ಥೆಯಂತೆ ವರ್ತಿಸುತ್ತಿದೆ” ಎಂದು ಸ್ಥಳೀಯ ನಿವಾಸಿ, ಲೇಖಕ ಕೊಟ್ರೇಶ್ ತಂಬ್ರಳ್ಳಿ ಆಕ್ಷೇಪ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. “ಕನ್ನಡ ಸಾಹಿತ್ಯ ಪರಿಷತ್ತನ್ನು ಹುಟ್ಟುಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಅನೇಕ ಕನಸುಗಳಿದ್ಧವು. ಶ್ರೀಸಾಮಾನ್ಯನೂ ಸಾಹಿತ್ಯ ಕೈಂಕರ್ಯದಲ್ಲಿ ಭಾಗವಹಿಸಬೇಕು ಎಂಬ ಆಶಯ ಇತ್ತು. ಜಿಲ್ಲಾ ಮತ್ತು ತಾಲೂಕು ಘಟಕಗಳು ಇರುವುದೇ ಸ್ಥಳೀಯವಾಗಿಯೂ ಕೂಡ ಪರಿಷತ್ತು ಕಾರ್ಯೋನ್ಮುಖವಾಗಿ ಇರಬೇಕೆಂದು. ಹೊಯ್ಸಳ ಸಾಹಿತ್ಯೋತ್ಸವದಲ್ಲಿ ಹಾಸನದ ಕವಿ, ಲೇಖಕ, ಕಲಾವಿದರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

“ಕಾರ್ಯಕ್ರಮದಲ್ಲಿ ಭಾಗವಹಿಸಲು ಕಡ್ಡಾಯವಾಗಿ ನೋಂದಣಿಯಾಗಿರಬೇಕೆಂದು ಸೂಚಿಸಲಾಗಿದೆ. 250 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಹಾಗಾದರೆ ಖಾಸಗಿ ಸಂಸ್ಥೆಗಳಿಗೂ ಕನ್ನಡ ನಾಡಿನ ಜನರ ಧ್ವನಿಯಾಗಿರುವ ಪರಿಷತ್ತಿಗೂ ಏನು ವ್ಯತ್ಯಾಸ? ನೋಂದಣಿ ಮಾಡಿಕೊಳ್ಳುವುದು ಸರಿ. ಆದರೆ 500-550 ಜನರ ಮಿತಿ ಏತಕ್ಕೆ?” ಎಂದು ಪ್ರಶ್ನಿಸಿದ್ದಾರೆ.

“ಈವೆಂಟ್ ಮ್ಯಾನ್ಮೇಜ್ಮೆಂಟ್‌ಗಳ ಕೈಯಲ್ಲಿ ಇವತ್ತು ಪರಿಷತ್ತು ಸಿಲುಕಿದೆ. ಜನಸಾಮಾನ್ಯರಿಂದ ದೂರ ಇರುವ ಸಾಹಿತ್ಯ ಪರಿಷತ್ತು ನಮ್ಮ ಜನಗಳಿಗೆ ಅವಶ್ಯ ಇದೆಯಾ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

ಈಗ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾ’ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್‌.ಎಲ್.ಮಲ್ಲೇಶ್‌ಗೌಡ, “ಕಾರ್ಯಕ್ರಮದಲ್ಲಿ ಸುಮಾರು 750 ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 250 ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶವಿರುತ್ತದೆ. ಆಸಕ್ತರು ಮಾತ್ರ ಪಾಲ್ಗೊಳ್ಳಲಿ ಎಂದು ನೋಂದಣಿ ಹಾಗೂ ಪ್ರವೇಶ ಶುಲ್ಕ ವಿಧಿಸಿದ್ದೇವೆ. ಕಾರ್ಯಕ್ರಮಕ್ಕೆ ಬಂದು ಮಧ್ಯೆದಲ್ಲೇ ಎದ್ದುಹೋಗುವವರು ಇರುತ್ತಾರೆ. ಇದನ್ನು ತಪ್ಪಿಸಲೆಂದು ಶುಲ್ಕ ವಿಧಿಸುತ್ತಿದ್ದೇವೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇಳೆಯೂ ಹೀಗೆಯೇ ನೋಂದಣಿ ನಡೆಯುತ್ತದೆ” ಎಂದು ಸಮರ್ಥಿಸಿಕೊಂಡರು.

“ಇದು ರಾಜ್ಯಮಟ್ಟದ ಕಾರ್ಯಕ್ರಮವಾಗಿದ್ದು, ಹೀಗಾಗಿ ಸ್ಥಳೀಯ ಸಾಹಿತಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಲ್ಲ. ಹೊಯ್ಸಳ ಸಾಹಿತ್ಯೋತ್ಸವವಲ್ಲದೆ ಜಿಲ್ಲಾ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ. ಅಲ್ಲಿ ಸ್ಥಳೀಯರಿಗೆ ಅವಕಾಶಗಳನ್ನು ಕಲ್ಪಿಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

“ಲಿಂಗದೇವರು ಹಳೆಮನೆಯವರ ಹೆಸರು ಕಣ್ತಪ್ಪಿನಿಂದ ಸೇರಿದೆ. ಚಲನಚಿತ್ರ ನಿರ್ದೇಶಕ ‘ಬಿ.ಎಸ್.ಲಿಂಗದೇವರು’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ಎಸ್‌.ಲಿಂಗದೇವರು ಎಂಬುದು ‘ಲಿಂಗದೇವರು ಹಳೆಮನೆ’ ಎಂದಾಗಿದೆ. ಅಧಿಕೃತವಲ್ಲದ ಪಿಡಿಎಫ್‌ ಪ್ರತಿ ಹರಿದಾಡಿದೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಬಿ.ಎಸ್.ಲಿಂಗದೇವರು ಎಂದು ತಿದ್ದಲಾಗಿದೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...