Homeಕರ್ನಾಟಕಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

ಹಾಸನ: ಹೊಯ್ಸಳ ಸಾಹಿತ್ಯೋತ್ಸವ ಪ್ರವೇಶಕ್ಕೆ 250 ರೂ. ಶುಲ್ಕ; ತೀರಿಹೋಗಿರುವ ರಂಗಕರ್ಮಿ ವಿಶೇಷ ಅತಿಥಿ!

‘ಹೊಯ್ಸಳ ಸಾಹಿತ್ಯೋತ್ಸವ’ ಎಂದು ಹೆಸರಿರುವ ಕಾರ್ಯಕ್ರಮದಲ್ಲಿ ಹಾಸನ ಜಿಲ್ಲೆಯವರಿಗೆ ಪ್ರಾತಿನಿಧ್ಯ ಸಿಕ್ಕಿಲ್ಲ ಎಂಬ ಆರೋಪ ಬಂದಿದೆ. ‘ಶುದ್ಧ ಸಾಹಿತ್ಯ’ದ ಕಮಟು ಕೂಡ ಬರಲಾರಂಭಿಸಿದೆ.

- Advertisement -
- Advertisement -

ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಕ್ಟೋಬರ್‌ 22, 23ರಂದು ಹಾಸನದಲ್ಲಿ ಆಯೋಜಿಸಲಾಗಿರುವ ‘ಹೊಯ್ಸಳ ಸಾಹಿತ್ಯೋತ್ಸವ’ ಪ್ರವೇಶಕ್ಕೆ 250 ರೂ. ಶುಲ್ಕವನ್ನು ವಿಧಿಸಲಾಗಿದೆ. ಜನಸಾಮಾನ್ಯರ ಪರವಾಗಿರಬೇಕಿದ್ದ ಕಸಾಪ, ಖಾಸಗಿ ಸಂಸ್ಥೆಯಂತೆ ಶುಲ್ಕ ವಿಧಿಸಿದೆ ಎಂಬ ಟೀಕೆಗಳು ಬಂದಿವೆ. ಜೊತೆಗೆ ಸ್ಥಳೀಯ ಪ್ರಾತಿನಿಧ್ಯವನ್ನು ಕಡೆಗಣಿಸಿ ಕಾರ್ಯಕ್ರಮ ಆಯೋಜಿಸಿರುವ ಕುರಿತು ಆಕ್ಷೇಪಗಳು ವ್ಯಕ್ತವಾಗುತ್ತಿವೆ.

ಶುಲ್ಕ ವಿಧಿಸಿರುವುದಷ್ಟೇ ಅಲ್ಲದೇ ತೀರಿ ಹೋಗಿರುವ ರಂಗಕರ್ಮಿ, ಮೈಸೂರು ರಂಗಾಯಣದ ಮಾಜಿ ನಿರ್ದೇಶಕರಾದ ಲಿಂಗದೇವರು ಹಳೆಮನೆಯವರ ಹೆಸರನ್ನೂ ವಿಶೇಷ ಆಹ್ವಾನಿತರ ಪಟ್ಟಿಯಲ್ಲಿ ಸೇರಿಸಲಾಗಿದೆ. ವಾಟ್ಸ್‌ಅಪ್‌ನಲ್ಲಿ ಹರಿದಾಡಿರುವ ಸಂದೇಶಗಳಲ್ಲಿ ‘ಶುದ್ಧ ಸಾಹಿತ್ಯ’ ಎಂಬ ಪದವೂ ಸೇರಿರುವುದು ಗೊಂದಲ ಮೂಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಹಿತ್ಯ ಪರಿಷತ್‌ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ, “ಹಾಸನ ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ವಹಿಸಲಿದ್ದಾರೆ. ಸಾಹಿತ್ಯಲೋಕದ ಪ್ರಮುಖ ಹಿರಿಯ, ಕಿರಿಯ ದಿಗ್ಗಜ ಕವಿಗಳು, ಸಾಹಿತಿಗಳು, ವಿಮರ್ಶಕರು ಹಾಗೂ ವಿದ್ವಾಂಸರು ಈ ಸಾಹಿತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಐತಿಹಾಸಿಕವಾದ ಸಾಹಿತ್ಯೋತ್ಸವಕ್ಕೆ ಕೇವಲ 500 ಜನರಿಗೆ ಮಾತ್ರ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಜಿಲ್ಲೆಯ ಆಸಕ್ತ ಸಾಹಿತ್ಯ ಮನಸ್ಸುಗಳು ಕೆಳಗೆ ನೀಡಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ದಿನಾಂಕ 15-10-2022 ರೊಳಗೆ ನೋಂದಣಿಯಾಗಬಹುದು” ಎಂದು ಕೆಲವರು ಸಂಪರ್ಕ ಸಂಖ್ಯೆಯನ್ನು ನೀಡಲಾಗಿದೆ.

ಮುಖ್ಯವಾಗಿ ಸ್ಥಳೀಯರಲ್ಲದವರು ಸ್ವಾಗತ ಸಮಿತಿಯಲ್ಲಿದ್ದಾರೆ. ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಸಾಹಿತಿ ಡಾ.ಎಚ್.ಎಸ್.ವೆಂಕಟೇಶಮೂರ್ತಿ, ಸಂಚಾಲಕರಾಗಿ ಕವಿ ಬಿ.ಆರ್.ಲಕ್ಷ್ಮಣರಾವ್, ಪತ್ರಕರ್ತ ಜೋಗಿ, ಕಾರ್ಯದರ್ಶಿಯಾಗಿ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್.ಎಲ್.ಮಲ್ಲೇಶಗೌಡ ಇದ್ದಾರೆ.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ‘ಜೇನುಗಿರಿ’ ಪತ್ರಿಕೆ ಸಂಪಾದಕರಾದ ಚಲಂ ಹಾಡ್ಲಹಳ್ಳಿ, “ಹಾಸನ ಜಿಲ್ಲೆಯನ್ನು ಪ್ರತಿನಿಧಿಸುವಂತೆ ಪ್ರತಿವರ್ಷ ಹೊಯ್ಸಳ ಉತ್ಸವ ನಡೆಯುತ್ತಿತ್ತು. ಆದರೆ ಕೆಲವು ವರ್ಷಗಳಿಂದ ಈ ಕಾರ್ಯಕ್ರಮ ಆಯೋಜನೆಯಾಗಿಲ್ಲ. ಹೊಯ್ಸಳ ಸಾಹಿತ್ಯೋತ್ಸವವು ಹೊಯ್ಸಳ ಉತ್ಸವದ ನೆರಳಿನಂತೆ ಕಾಣುತ್ತಿದೆ. ಅಥವಾ ಹೊಯ್ಸಳ ಉತ್ಸವವನ್ನು ನಡೆಸದಿದ್ದರೂ ಆಗುತ್ತದೆ. ಇದನ್ನೇ ತೋರಿಸಿ ಸರ್ಕಾರ ನುಣುಚಿಕೊಳ್ಳಲೂ ಸಾಧ್ಯವಿದೆ. ಹೀಗಿರುವಾಗ ಸ್ಥಳೀಯರಿಗೆ ಅವಕಾಶ ನೀಡಬೇಕಿತ್ತು. ಸ್ವಾಗತ ಸಮಿತಿಯಲ್ಲೂ ಹೊರಗಿನವರೇ ಇದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ಹೊಯ್ಸಳ ಎಂಬುದೇ ಒಂದು ಪ್ರಾದೇಶಿಕತೆಯನ್ನು ಬಿಂಬಿಸುತ್ತದೆ. ಕರಾವಳಿ ಉತ್ಸವ, ಹಂಪಿ ಉತ್ಸವ, ಹೊಯ್ಸಳ ಉತ್ಸವ- ಇವುಗಳಿಗೆಲ್ಲ ವ್ಯತ್ಯಾಸಗಳಿರುತ್ತವೆ. ಈ ನಿಟ್ಟಿನಲ್ಲಿ ಪ್ರಾತಿನಿಧಿಕತೆಯ ಪ್ರಶ್ನೆ ಬರುತ್ತದೆ. ಎಚ್.ಎಸ್.ವೆಂಕಟೇಶಮೂರ್ತಿ, ಬಿ.ಆರ್‌.ಲಕ್ಷ್ಮಣರಾವ್, ಜೋಗಿ ಇವರೆಲ್ಲ ಹಾಸನವನ್ನು ಹೇಗೆ ಪ್ರತಿನಿಧಿಸಬಲ್ಲರು? ಅತಿಥಿಗಳಾಗಿ ಬಂದಿದ್ದರೆ ಪ್ರಶ್ನೆ ಉದ್ಭವಿಸುತ್ತಿರಲಿಲ್ಲ. ಕಾರ್ಯಕ್ರಮ ಹೇಗಿರಬೇಕೆಂದು ನಿರ್ಧರಿಸುವವರೇ ಹೊರಗಿನವರಾಗಿರುವುದು ಎಷ್ಟು ಸರಿ? ಸಕಲೇಶಪುರ ಭಾಗದ ಕಾಡಿನ ಸಮಸ್ಯೆ ಇವರಿಗೆ ಗೊತ್ತಿದೆಯೇ? ಚನ್ನರಾಯಪಟ್ಟಣ ಭಾಗದ ತೆಂಗಿನ ಸಮಸ್ಯೆ ಗೊತ್ತಿದೆಯೇ? ಅರಕಲಗೂಡು ಭಾಗದ ತಂಬಾಕಿನ ಸಮಸ್ಯೆ ಗೊತ್ತಿದೆಯೇ? ಈ ಅಂಶಗಳನ್ನು ತಿರಸ್ಕರಿಸಿ ‘ಇದು ಶುದ್ಧಸಾಹಿತ್ಯ ಸಮ್ಮೇಳನ’ ಎಂದು ಕರೆಯುತ್ತಿದ್ದಾರೆಂದು ತಿಳಿದುಬಂದಿದೆ” ಎಂದು ವಿಷಾದಿಸಿದರು.

“ಹಾಸನ ಜಿಲ್ಲಾ ಕಸಾಪವು ಖಾಸಗಿ ಸಂಸ್ಥೆಯಂತೆ ವರ್ತಿಸುತ್ತಿದೆ” ಎಂದು ಸ್ಥಳೀಯ ನಿವಾಸಿ, ಲೇಖಕ ಕೊಟ್ರೇಶ್ ತಂಬ್ರಳ್ಳಿ ಆಕ್ಷೇಪ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. “ಕನ್ನಡ ಸಾಹಿತ್ಯ ಪರಿಷತ್ತನ್ನು ಹುಟ್ಟುಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಅನೇಕ ಕನಸುಗಳಿದ್ಧವು. ಶ್ರೀಸಾಮಾನ್ಯನೂ ಸಾಹಿತ್ಯ ಕೈಂಕರ್ಯದಲ್ಲಿ ಭಾಗವಹಿಸಬೇಕು ಎಂಬ ಆಶಯ ಇತ್ತು. ಜಿಲ್ಲಾ ಮತ್ತು ತಾಲೂಕು ಘಟಕಗಳು ಇರುವುದೇ ಸ್ಥಳೀಯವಾಗಿಯೂ ಕೂಡ ಪರಿಷತ್ತು ಕಾರ್ಯೋನ್ಮುಖವಾಗಿ ಇರಬೇಕೆಂದು. ಹೊಯ್ಸಳ ಸಾಹಿತ್ಯೋತ್ಸವದಲ್ಲಿ ಹಾಸನದ ಕವಿ, ಲೇಖಕ, ಕಲಾವಿದರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿಲ್ಲ” ಎಂದು ಆರೋಪಿಸಿದ್ದಾರೆ.

“ಕಾರ್ಯಕ್ರಮದಲ್ಲಿ ಭಾಗವಹಿಸಲು ಕಡ್ಡಾಯವಾಗಿ ನೋಂದಣಿಯಾಗಿರಬೇಕೆಂದು ಸೂಚಿಸಲಾಗಿದೆ. 250 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಹಾಗಾದರೆ ಖಾಸಗಿ ಸಂಸ್ಥೆಗಳಿಗೂ ಕನ್ನಡ ನಾಡಿನ ಜನರ ಧ್ವನಿಯಾಗಿರುವ ಪರಿಷತ್ತಿಗೂ ಏನು ವ್ಯತ್ಯಾಸ? ನೋಂದಣಿ ಮಾಡಿಕೊಳ್ಳುವುದು ಸರಿ. ಆದರೆ 500-550 ಜನರ ಮಿತಿ ಏತಕ್ಕೆ?” ಎಂದು ಪ್ರಶ್ನಿಸಿದ್ದಾರೆ.

“ಈವೆಂಟ್ ಮ್ಯಾನ್ಮೇಜ್ಮೆಂಟ್‌ಗಳ ಕೈಯಲ್ಲಿ ಇವತ್ತು ಪರಿಷತ್ತು ಸಿಲುಕಿದೆ. ಜನಸಾಮಾನ್ಯರಿಂದ ದೂರ ಇರುವ ಸಾಹಿತ್ಯ ಪರಿಷತ್ತು ನಮ್ಮ ಜನಗಳಿಗೆ ಅವಶ್ಯ ಇದೆಯಾ?” ಎಂದು ಕೇಳಿದ್ದಾರೆ.

ಇದನ್ನೂ ಓದಿರಿ: ‘ಪಂಪ ಮಹಾಕವಿ ರಸ್ತೆ’ ಹೆಸರು ಬದಲಿಸಲ್ಲ: ಜನಾಕ್ರೋಶದ ಬಳಿಕ ಹಿಂದೆ ಸರಿದ ಕಸಾಪ

ಈಗ ಉಂಟಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾ’ಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಕಸಾಪ ಅಧ್ಯಕ್ಷರಾದ ಡಾ.ಎಚ್‌.ಎಲ್.ಮಲ್ಲೇಶ್‌ಗೌಡ, “ಕಾರ್ಯಕ್ರಮದಲ್ಲಿ ಸುಮಾರು 750 ಜನರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 250 ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶವಿರುತ್ತದೆ. ಆಸಕ್ತರು ಮಾತ್ರ ಪಾಲ್ಗೊಳ್ಳಲಿ ಎಂದು ನೋಂದಣಿ ಹಾಗೂ ಪ್ರವೇಶ ಶುಲ್ಕ ವಿಧಿಸಿದ್ದೇವೆ. ಕಾರ್ಯಕ್ರಮಕ್ಕೆ ಬಂದು ಮಧ್ಯೆದಲ್ಲೇ ಎದ್ದುಹೋಗುವವರು ಇರುತ್ತಾರೆ. ಇದನ್ನು ತಪ್ಪಿಸಲೆಂದು ಶುಲ್ಕ ವಿಧಿಸುತ್ತಿದ್ದೇವೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇಳೆಯೂ ಹೀಗೆಯೇ ನೋಂದಣಿ ನಡೆಯುತ್ತದೆ” ಎಂದು ಸಮರ್ಥಿಸಿಕೊಂಡರು.

“ಇದು ರಾಜ್ಯಮಟ್ಟದ ಕಾರ್ಯಕ್ರಮವಾಗಿದ್ದು, ಹೀಗಾಗಿ ಸ್ಥಳೀಯ ಸಾಹಿತಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಿಲ್ಲ. ಹೊಯ್ಸಳ ಸಾಹಿತ್ಯೋತ್ಸವವಲ್ಲದೆ ಜಿಲ್ಲಾ ಸಾಹಿತ್ಯ ಸಮ್ಮೇಳನವೂ ನಡೆಯಲಿದೆ. ಅಲ್ಲಿ ಸ್ಥಳೀಯರಿಗೆ ಅವಕಾಶಗಳನ್ನು ಕಲ್ಪಿಸಲಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

“ಲಿಂಗದೇವರು ಹಳೆಮನೆಯವರ ಹೆಸರು ಕಣ್ತಪ್ಪಿನಿಂದ ಸೇರಿದೆ. ಚಲನಚಿತ್ರ ನಿರ್ದೇಶಕ ‘ಬಿ.ಎಸ್.ಲಿಂಗದೇವರು’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿ.ಎಸ್‌.ಲಿಂಗದೇವರು ಎಂಬುದು ‘ಲಿಂಗದೇವರು ಹಳೆಮನೆ’ ಎಂದಾಗಿದೆ. ಅಧಿಕೃತವಲ್ಲದ ಪಿಡಿಎಫ್‌ ಪ್ರತಿ ಹರಿದಾಡಿದೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಬಿ.ಎಸ್.ಲಿಂಗದೇವರು ಎಂದು ತಿದ್ದಲಾಗಿದೆ” ಎಂದು ಸ್ಪಷ್ಟಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...