Homeಕರ್ನಾಟಕಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದ್ದು, ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳನ್ನು ಅಂತರ್ಜಾಲದ ಮೂಲಕ ಮನೆ-ಮನಗಳಿಗೆ ತಲುಪಿಸುವ ಭಾಗವಾಗಿ ಬರಹಗಾರ, ಪ್ರಾಧ್ಯಾಪಕ ಅರುಣ್ ಜೋಳದಕೂಡ್ಲಿಗಿ ಅವರ ಸಂಪಾದಕತ್ವದಲ್ಲಿ  ನಡೆಯುತ್ತಿರುವ ‘ಅಂಬೇಡ್ಕರ್‌ ಓದು’ ಯೂಟ್ಯೂಬ್‌ ಸರಣಿ ಕಾರ್ಯಕ್ರಮ ತನ್ನ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಸೆಪ್ಟಂಬರ್ 7, 2020 ರಂದು ಖ್ಯಾತ ಲೇಖಕಿ ಹೆಚ್.ಎಸ್.ಅನುಪಮಾ ಮೊದಲ ಸಂಚಿಕೆ ಓದುವ ಮೂಲಕ ‘ಅಂಬೇಡ್ಕರ್‌ ಓದು’ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಈ ಓದು ಸರಣಿಯು ತನ್ನ 525 ನೇ ಸಂಚಿಕೆ ತಲುಪಿದ್ದು, ಅಂಬೇಡ್ಕರ್ ಬೌದ್ಧ ದಮ್ಮ ಸ್ವೀಕರಿಸಿದ ದಿನದ ಅಕ್ಟೋಬರ್-14 ರ ವಿಶೇಷ ಸಂಚಿಕೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ.ಭಾಸ್ಕರ್ ಅವರು ಓದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಣಿ ಓದು ಕಾರ್ಯಕ್ರಮದಲ್ಲಿ ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದೆ. ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಓದಿನ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ. ಈತನಕ 167 ಮಹಿಳೆಯರು 300 ಕ್ಕಿಂತ ಹೆಚ್ಚಿನ ಸರಣಿಗಳನ್ನು ಓದಿರುವುದು ಈ ಓದು ಸರಣಿಯ ವಿಶೇಷವಾಗಿದೆ.

ಇದನ್ನೂ ಓದಿ: ಹುಲಿ ಜಾನಪದ; ಕನ್ನಡ ಜಾನಪದ ಪರಂಪರೆಯಲ್ಲಿ ಹುಲಿಯ ಜತೆಗಿನ ಮುಖಾಮುಖಿ- ಅರುಣ್ ಜೋಳದಕೂಡ್ಲಿಗಿ

ವಿಶೇಷವಾಗಿ ಓದಿನ 500 ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಓದಿದ್ದರು. ಈ ಹಿಂದೆ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ಸಂಗೀತ ನಿರ್ದೇಶಕ ಹಂಸಲೇಖ, ನಟರಾದ ರಮೇಶ್ ಅರವಿಂದ, ಕಿಶೋರ್, ರಂಗಾಯಣ ರಘು, ಅಚ್ಯುತ ಕುಮಾರ್, ಸಿನೆಮಾ ನಿರ್ದೇಶಕರಾದ ಬಿ.ಸುರೇಶ್, ಬಿ.ಎಂ ಗಿರಿರಾಜ, ಮಾಜಿ ಸಚಿವೆ ಮೋಟಮ್ಮ ಓದಿದ್ದರು.

ಅಲ್ಲದೆ ಬಿಜಾಪುರದ ಮಹಿಳಾ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡ, ಹಿರಿಯ ಲೇಖಕರಾ ದೇವನೂರು ಮಹಾದೇವ, ಅಮರೇಶ ನುಗಡೋಣಿ, ನಟರಾಜ ಹುಳಿಯಾರ, ಹೆಚ್.ಎಸ್.ರಾಘವೇಂದ್ರರಾವ್, ಜಾನಪದ ಅಕಾಡೆಮಿ ಅಧ್ಯಕ್ಷರಾದ ಪದ್ಮಶ್ರೀ ಮಂಜಮ್ಮ ಜೋಗತಿ ಪತ್ರಕರ್ತರಾದ ದಿನೇಶ ಅಮಿನಮಟ್ಟು, ರವೀಂದ್ರ ಭಟ್, ವೈ.ಗ ಜಗದೀಶ, ರಶ್ಮಿ ಎಸ್. ಸೇರಿದಂತೆ ಸಾಹಿತಿಗಳು, ಪತ್ರಕರ್ತರು, ನಟರು, ಶಿಕ್ಷರು, ವಿದ್ಯಾರ್ಥಿಗಳು, ರೈತರು ಎಲ್ಲಾ ಹಿನ್ನೆಲೆಯವರೂ ಓದಿನ ಭಾಗವಾಗಿದ್ದಾರೆ.

ಅರುಣ್ ಜೋಳದಕೂಡ್ಲಿಗಿ ಅವರು 2019 ರ ಏಪ್ರಿಲ್ 14 ರಂದು ತಮ್ಮ ಪೇಸ್‌ಬುಕ್ ಪೇಜ್‌ನಲ್ಲಿ ಅಂಬೇಡ್ಕರ್ ಓದನ್ನು ಲೈವ್ ಮಾಡಿದ್ದರು. “ಈ ಓದಿಗೆ ಸಿಕ್ಕ ಪ್ರತಿಕ್ರಿಯೆ ಓದನ್ನು ನಿರಂತರವಾಗಿ ನಡೆಸುವ ಕನಸೊಂದನ್ನು ಹುಟ್ಟಿಸಿತ್ತು” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ದಮನಿತರ ಸಿಟ್ಟಿನ ಏಕೀಕರಣ – ಅರುಣ್ ಜೋಳದಕೂಡ್ಲಿಗಿ

“ಖಾಸಗಿ ವಾಹಿನಿಯಲ್ಲಿ ಮಹಾನಾಯಕ ದಾರವಾಹಿ ಶುರುವಾದ ನಂತರ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಹುಡುಕಾಟ ಹೆಚ್ಚಾಯಿತು. ಆದರೆ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಅರಿವು ಹೆಚ್ಚಾಗಿ ಇರಲಿಲ್ಲ. ಆಗ ಅಂತರ್ಜಾಲದಲ್ಲಿ ಅಂಬೇಡ್ಕರ್ ಚಿಂತನೆಗಳು ಸಿಗುವಂತಾಗಬೇಕು ಎಂದು ಅಂಬೇಡ್ಕರ್ ಓದು ಪ್ರಾರಂಭಿಸಲಾಯಿತು” ಎಂದು ಅರುಣ್ ನೆನಪಿಸಿಕೊಳ್ಳುತ್ತಾರೆ.

“ನಾನು ನೆಪಮಾತ್ರನಾಗಿದ್ದು ‘ಇದು ಸಹಭಾಗಿತ್ವದ ಯಶಸ್ಸು’. ‘ಎಲ್ಲರ ಅಂಬೇಡ್ಕರ್’ ಎನ್ನುವ ತತ್ವದಡಿ ಎಲ್ಲರೂ ಅಂಬೇಡ್ಕರ್ ಅವರನ್ನು ಓದುವಂತಾಗಬೇಕು, ಎಲ್ಲರೂ ಕೇಳುವಂತಾಗಬೇಕು. ಅಂಬೇಡ್ಕರ್ ಚಿಂತನೆ ಕನ್ನಡದಲ್ಲಿ ಕೇಳಲು ಅಂತರ್ಜಾಲದಲ್ಲಿ ಸಿಗುವಂತಾಗಬೇಕು ಎನ್ನುವ ಕನಸು ಈ ಸರಣಿಯ ಹಿಂದಿದೆ” ಎಂದು ಅವರು ತಿಳಿಸಿದ್ದಾರೆ.

“ಈ ತರಹದ ಅಂಬೇಡ್ಕರ್ ಆಡಿಯೋ ಆರ್ಖೈವ್ ರೂಪುಗೊಂಡಿರುವುದು ಭಾರತದ ದೇಸಿ ಭಾಷೆಗಳಲ್ಲಿ ಇದು ಮೊದಲ ಪ್ರಯತ್ನ. ಇದು ಇತರೆ ಭಾಷಿಕರಿಗೆ ಮಾದರಿಯಾಗಬೇಕು ಎನ್ನುವುದು ನನ್ನ ಕನಸಾಗಿದೆ. ಈ ತನಕ ಯೂಟೂಬ್ ಚಾನಲ್ಲಿನಲ್ಲಿ ಒಂಬತ್ತು ಲಕ್ಷದಷ್ಟು ಕೇಳುವಿಕೆ ಸಾಧ್ಯವಾಗಿದೆ”

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ಅನೇಕರು ಈ ಓದಿನಿಂದ ಪ್ರೇರಿತರಾಗಿದ್ದಾರೆ. ಇದೀಗ ಅನೇಕರು ಅಂಬೇಡ್ಕರ್ ಓದಿನ ಅವಕಾಶಕ್ಕಾಗಿ ಕೇಳುತ್ತಿದ್ದಾರೆ. ಇದು ಈ ಸರಣಿಯ ರೂಪಾಂತರವಾಗಿದೆ. ಅಂಬೇಡ್ಕರ್ ಅವರ ಸಮಕಾಲೀನವೆನಿಸುವ ಎಲ್ಲಾ ಬರಹಗಳನ್ನು ಓದಿಸುವ ಗುರಿ ಈ ಸರಣಿಗಿದೆ. ಹಾಗಾಗಿ ಅಂಬೇಡ್ಕರ್ ಓದು ಇನ್ನೂ ಮುಂದುವರಿಯಲಿದೆ. ಅಂಬೇಡ್ಕರ್ ಓದಿನ ಸಹಭಾಗಿಗಳಾದ ಎಲ್ಲರಿಗೂ ಮತ್ತೊಮ್ಮೆ ಜೈಭೀಮ್ ನಮನಗಳನ್ನು ಸಲ್ಲಿಸುವೆ” ಎಂದು ಅವರು ಹೇಳಿದ್ದಾರೆ.

ಅರುಣ್ ಜೋಳದಕುಡ್ಲಿಗಿ ಅವರ ಬ್ಲಾಗ್‌ಪೋಸ್ಟ್‌‌‌‌ ಕನ್ನಡ ಜಾನಪದ
ಅರುಣ್ ಜೋಳದಕುಡ್ಲಿಗಿ ಅವರ ಯೂಟ್ಯೂಬ್‌‌ ಚಾನೆಲ್‌ Arun jolad Kudligi

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...