Homeಕರ್ನಾಟಕಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಎರಡು ವರ್ಷ ಪೂರೈಸಿದ ಅರುಣ್ ಜೋಳದಕೂಡ್ಲಿಗಿ ಸಂಪಾದಕತ್ವದ ‘ಅಂಬೇಡ್ಕರ್ ಓದು’

ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದ್ದು, ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ

- Advertisement -
- Advertisement -

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರಗಳನ್ನು ಅಂತರ್ಜಾಲದ ಮೂಲಕ ಮನೆ-ಮನಗಳಿಗೆ ತಲುಪಿಸುವ ಭಾಗವಾಗಿ ಬರಹಗಾರ, ಪ್ರಾಧ್ಯಾಪಕ ಅರುಣ್ ಜೋಳದಕೂಡ್ಲಿಗಿ ಅವರ ಸಂಪಾದಕತ್ವದಲ್ಲಿ  ನಡೆಯುತ್ತಿರುವ ‘ಅಂಬೇಡ್ಕರ್‌ ಓದು’ ಯೂಟ್ಯೂಬ್‌ ಸರಣಿ ಕಾರ್ಯಕ್ರಮ ತನ್ನ ಎರಡು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ.

ಸೆಪ್ಟಂಬರ್ 7, 2020 ರಂದು ಖ್ಯಾತ ಲೇಖಕಿ ಹೆಚ್.ಎಸ್.ಅನುಪಮಾ ಮೊದಲ ಸಂಚಿಕೆ ಓದುವ ಮೂಲಕ ‘ಅಂಬೇಡ್ಕರ್‌ ಓದು’ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಈ ಓದು ಸರಣಿಯು ತನ್ನ 525 ನೇ ಸಂಚಿಕೆ ತಲುಪಿದ್ದು, ಅಂಬೇಡ್ಕರ್ ಬೌದ್ಧ ದಮ್ಮ ಸ್ವೀಕರಿಸಿದ ದಿನದ ಅಕ್ಟೋಬರ್-14 ರ ವಿಶೇಷ ಸಂಚಿಕೆಯನ್ನು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ.ಎಂ.ಭಾಸ್ಕರ್ ಅವರು ಓದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರಣಿ ಓದು ಕಾರ್ಯಕ್ರಮದಲ್ಲಿ ಈ ತನಕ 351 ಜನರಿಂದ 525 ಸರಣಿಗಳನ್ನು ಓದಿಸಲಾಗಿದೆ. ಯೂಟ್ಯೂಬ್‌ನಲ್ಲಿ ಲಭ್ಯವಿರುವ ಈ ಓದಿನ ಸರಣಿಯನ್ನು ಕನ್ನಡದಲ್ಲಿ 120 ಗಂಟೆಗಳ ಕಾಲ ಕೇಳಬಹುದಾಗಿದೆ. ಈತನಕ 167 ಮಹಿಳೆಯರು 300 ಕ್ಕಿಂತ ಹೆಚ್ಚಿನ ಸರಣಿಗಳನ್ನು ಓದಿರುವುದು ಈ ಓದು ಸರಣಿಯ ವಿಶೇಷವಾಗಿದೆ.

ಇದನ್ನೂ ಓದಿ: ಹುಲಿ ಜಾನಪದ; ಕನ್ನಡ ಜಾನಪದ ಪರಂಪರೆಯಲ್ಲಿ ಹುಲಿಯ ಜತೆಗಿನ ಮುಖಾಮುಖಿ- ಅರುಣ್ ಜೋಳದಕೂಡ್ಲಿಗಿ

ವಿಶೇಷವಾಗಿ ಓದಿನ 500 ನೇ ಸಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಓದಿದ್ದರು. ಈ ಹಿಂದೆ ರಾಜ್ಯಸಭಾ ಸದಸ್ಯರಾದ ಎಲ್.ಹನುಮಂತಯ್ಯ, ಸಂಗೀತ ನಿರ್ದೇಶಕ ಹಂಸಲೇಖ, ನಟರಾದ ರಮೇಶ್ ಅರವಿಂದ, ಕಿಶೋರ್, ರಂಗಾಯಣ ರಘು, ಅಚ್ಯುತ ಕುಮಾರ್, ಸಿನೆಮಾ ನಿರ್ದೇಶಕರಾದ ಬಿ.ಸುರೇಶ್, ಬಿ.ಎಂ ಗಿರಿರಾಜ, ಮಾಜಿ ಸಚಿವೆ ಮೋಟಮ್ಮ ಓದಿದ್ದರು.

ಅಲ್ಲದೆ ಬಿಜಾಪುರದ ಮಹಿಳಾ ವಿವಿಯ ವಿಶ್ರಾಂತ ಕುಲಪತಿಗಳಾದ ಪ್ರೊ. ಸಬೀಹಾ ಭೂಮಿಗೌಡ, ಹಿರಿಯ ಲೇಖಕರಾ ದೇವನೂರು ಮಹಾದೇವ, ಅಮರೇಶ ನುಗಡೋಣಿ, ನಟರಾಜ ಹುಳಿಯಾರ, ಹೆಚ್.ಎಸ್.ರಾಘವೇಂದ್ರರಾವ್, ಜಾನಪದ ಅಕಾಡೆಮಿ ಅಧ್ಯಕ್ಷರಾದ ಪದ್ಮಶ್ರೀ ಮಂಜಮ್ಮ ಜೋಗತಿ ಪತ್ರಕರ್ತರಾದ ದಿನೇಶ ಅಮಿನಮಟ್ಟು, ರವೀಂದ್ರ ಭಟ್, ವೈ.ಗ ಜಗದೀಶ, ರಶ್ಮಿ ಎಸ್. ಸೇರಿದಂತೆ ಸಾಹಿತಿಗಳು, ಪತ್ರಕರ್ತರು, ನಟರು, ಶಿಕ್ಷರು, ವಿದ್ಯಾರ್ಥಿಗಳು, ರೈತರು ಎಲ್ಲಾ ಹಿನ್ನೆಲೆಯವರೂ ಓದಿನ ಭಾಗವಾಗಿದ್ದಾರೆ.

ಅರುಣ್ ಜೋಳದಕೂಡ್ಲಿಗಿ ಅವರು 2019 ರ ಏಪ್ರಿಲ್ 14 ರಂದು ತಮ್ಮ ಪೇಸ್‌ಬುಕ್ ಪೇಜ್‌ನಲ್ಲಿ ಅಂಬೇಡ್ಕರ್ ಓದನ್ನು ಲೈವ್ ಮಾಡಿದ್ದರು. “ಈ ಓದಿಗೆ ಸಿಕ್ಕ ಪ್ರತಿಕ್ರಿಯೆ ಓದನ್ನು ನಿರಂತರವಾಗಿ ನಡೆಸುವ ಕನಸೊಂದನ್ನು ಹುಟ್ಟಿಸಿತ್ತು” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ದಮನಿತರ ಸಿಟ್ಟಿನ ಏಕೀಕರಣ – ಅರುಣ್ ಜೋಳದಕೂಡ್ಲಿಗಿ

“ಖಾಸಗಿ ವಾಹಿನಿಯಲ್ಲಿ ಮಹಾನಾಯಕ ದಾರವಾಹಿ ಶುರುವಾದ ನಂತರ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಹುಡುಕಾಟ ಹೆಚ್ಚಾಯಿತು. ಆದರೆ ಅಂತರ್ಜಾಲದಲ್ಲಿ ಕನ್ನಡದಲ್ಲಿ ಅಂಬೇಡ್ಕರ್ ಅರಿವು ಹೆಚ್ಚಾಗಿ ಇರಲಿಲ್ಲ. ಆಗ ಅಂತರ್ಜಾಲದಲ್ಲಿ ಅಂಬೇಡ್ಕರ್ ಚಿಂತನೆಗಳು ಸಿಗುವಂತಾಗಬೇಕು ಎಂದು ಅಂಬೇಡ್ಕರ್ ಓದು ಪ್ರಾರಂಭಿಸಲಾಯಿತು” ಎಂದು ಅರುಣ್ ನೆನಪಿಸಿಕೊಳ್ಳುತ್ತಾರೆ.

“ನಾನು ನೆಪಮಾತ್ರನಾಗಿದ್ದು ‘ಇದು ಸಹಭಾಗಿತ್ವದ ಯಶಸ್ಸು’. ‘ಎಲ್ಲರ ಅಂಬೇಡ್ಕರ್’ ಎನ್ನುವ ತತ್ವದಡಿ ಎಲ್ಲರೂ ಅಂಬೇಡ್ಕರ್ ಅವರನ್ನು ಓದುವಂತಾಗಬೇಕು, ಎಲ್ಲರೂ ಕೇಳುವಂತಾಗಬೇಕು. ಅಂಬೇಡ್ಕರ್ ಚಿಂತನೆ ಕನ್ನಡದಲ್ಲಿ ಕೇಳಲು ಅಂತರ್ಜಾಲದಲ್ಲಿ ಸಿಗುವಂತಾಗಬೇಕು ಎನ್ನುವ ಕನಸು ಈ ಸರಣಿಯ ಹಿಂದಿದೆ” ಎಂದು ಅವರು ತಿಳಿಸಿದ್ದಾರೆ.

“ಈ ತರಹದ ಅಂಬೇಡ್ಕರ್ ಆಡಿಯೋ ಆರ್ಖೈವ್ ರೂಪುಗೊಂಡಿರುವುದು ಭಾರತದ ದೇಸಿ ಭಾಷೆಗಳಲ್ಲಿ ಇದು ಮೊದಲ ಪ್ರಯತ್ನ. ಇದು ಇತರೆ ಭಾಷಿಕರಿಗೆ ಮಾದರಿಯಾಗಬೇಕು ಎನ್ನುವುದು ನನ್ನ ಕನಸಾಗಿದೆ. ಈ ತನಕ ಯೂಟೂಬ್ ಚಾನಲ್ಲಿನಲ್ಲಿ ಒಂಬತ್ತು ಲಕ್ಷದಷ್ಟು ಕೇಳುವಿಕೆ ಸಾಧ್ಯವಾಗಿದೆ”

ಇದನ್ನೂ ಓದಿ: ’ಮಹಾನಾಯಕ’ನಿಗೆ ಒಂದು ವರ್ಷ: ಧಾರಾವಾಹಿಯನ್ನು ಜನ ಅಪ್ಪಿಕೊಂಡ ಬಗೆ…

“ಅನೇಕರು ಈ ಓದಿನಿಂದ ಪ್ರೇರಿತರಾಗಿದ್ದಾರೆ. ಇದೀಗ ಅನೇಕರು ಅಂಬೇಡ್ಕರ್ ಓದಿನ ಅವಕಾಶಕ್ಕಾಗಿ ಕೇಳುತ್ತಿದ್ದಾರೆ. ಇದು ಈ ಸರಣಿಯ ರೂಪಾಂತರವಾಗಿದೆ. ಅಂಬೇಡ್ಕರ್ ಅವರ ಸಮಕಾಲೀನವೆನಿಸುವ ಎಲ್ಲಾ ಬರಹಗಳನ್ನು ಓದಿಸುವ ಗುರಿ ಈ ಸರಣಿಗಿದೆ. ಹಾಗಾಗಿ ಅಂಬೇಡ್ಕರ್ ಓದು ಇನ್ನೂ ಮುಂದುವರಿಯಲಿದೆ. ಅಂಬೇಡ್ಕರ್ ಓದಿನ ಸಹಭಾಗಿಗಳಾದ ಎಲ್ಲರಿಗೂ ಮತ್ತೊಮ್ಮೆ ಜೈಭೀಮ್ ನಮನಗಳನ್ನು ಸಲ್ಲಿಸುವೆ” ಎಂದು ಅವರು ಹೇಳಿದ್ದಾರೆ.

ಅರುಣ್ ಜೋಳದಕುಡ್ಲಿಗಿ ಅವರ ಬ್ಲಾಗ್‌ಪೋಸ್ಟ್‌‌‌‌ ಕನ್ನಡ ಜಾನಪದ
ಅರುಣ್ ಜೋಳದಕುಡ್ಲಿಗಿ ಅವರ ಯೂಟ್ಯೂಬ್‌‌ ಚಾನೆಲ್‌ Arun jolad Kudligi

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...