Homeದಲಿತ್ ಫೈಲ್ಸ್ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಗರ್ಭಿಣಿ ಸೇರಿ 14 ದಲಿತ ಕಾರ್ಮಿಕರ ಮೇಲೆ ದೌರ್ಜನ್ಯ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

- Advertisement -
- Advertisement -

ಮಹಿಳೆಯರೂ ಸೇರಿದಂತೆ ಸುಮಾರು 14 ಮಂದಿ ದಲಿತ ಕಾರ್ಮಿಕರನ್ನು ಕೂಡಿ ಹಾಕಿ ದೌರ್ಜನ್ಯ ಎಸಗಿರುವ ಸವರ್ಣೀಯ ಜಾತಿಯ ಎಸ್ಟೇಟ್ ಮಾಲೀಕ ಜಗದೀಶ್ ಗೌಡ ಹಾಗೂ ಆತನ ಮಗ ತಿಲಕ್‌ಗೌಡನನ್ನು ಬಂಧಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು, ಬಾಳೆಹೊನ್ನೂರು ಮತ್ತು ಆಲ್ದೂರಿನಲ್ಲಿ ಇಂದು ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿವೆ.

ಬಾಳೆಹೊನ್ನೂರು ಪಟ್ಟಣದ ಅರಣ್ಯ ಇಲಾಖೆ ಕಚೇರಿ ಬಳಿಯಿಂದ ನೀಲಿ ಬಾವುಟ ಹಿಡಿದು ಮೆರವಣಿಗೆ ಹೊರಟ ಪ್ರತಿಭಟನಾಕಾರರು ತಿಲಕ್‌ಗೌಡ ಮತ್ತು ಜಗದೀಶ್‌ಗೌಡ ವಿರುದ್ಧ ಘೋಷಣೆ ಕೂಗಿದ್ದಾರೆ.

ಮಾಗುಂಡಿ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಬಿರುಸಾದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಗಮಿಸಿ ತಪ್ಪಿತಸ್ಥರನ್ನು ಬಂಧಿಸುವ ಭರವಸೆ ನೀಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಸಂಘಟನೆಗಳ ಮುಖಂಡರು ಪಟ್ಟು ಹಿಡಿದರು.

ಪ್ರತಿಭಟನೆಯ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂತ್ರಸ್ತ ಮಹಿಳೆ ರೂಪಾ, ತಮಗಾಗಿರುವ ದೌರ್ಜನ್ಯವನ್ನು ವಿವರಿಸಿದರು.

“ನಾವು ಹುಣಸೇಹಳ್ಳಿಪುರ ಎಸ್ಟೇಟ್‌ಗೆ ಕೆಲಸಕ್ಕೆ ಹೋಗಿ ಮೂರೂವರೆ ತಿಂಗಳಾಗಿತ್ತು. ಸಣ್ಣ ಕಾರಣಕ್ಕೆ ಮಾಲೀಕರ ಜತೆಗೆ ಜಗಳ ಆಯಿತು. ಆಗ ಎಸ್ಟೇಟ್ ಮಾಲೀಕರು ನಮ್ಮ ಮನೆಯವರಿಗೆ ಕೋಲಿನಿಂದ ಹೊಡೆದರು. ಆಮೇಲೆ ನಾವು ಇಲ್ಲಿ ಇರೋದಿಲ್ಲ, ಬೇರೆ ಎಸ್ಟೇಟ್‌ಗೆ ಹೋಗುತ್ತೇವೆ ಎಂದು ಮೈದುನ, ತಮ್ಮ, ತಂಗಿ ಮಗ, ನನ್ನ ಗಂಡ ಬೇರೆ ಎಸ್ಟೇಟ್‌ಗಳಲ್ಲಿ ಕೆಲಸ ಹುಡುಕಲು ಹೋದರು. ನಾಲ್ಕು ದಿನ ಕೆಲಸ ಹುಡುಕುವುದೇ ಆಯಿತು. ಆದರೂ ಕೆಲಸ ಸಿಗಲಿಲ್ಲ…”

“ಬಳಿಕ ಸೆ. 7 ರಂದು ಜಗದೀಶ್ ಗೌಡ ಕರೆ ಮಾಡಿದರು. ಸೆ. 8ರಂದು ಜಗದೀಶ್ ಗೌಡ ಮತ್ತು ತಿಲಕ್ ಗೌಡ ನಮ್ಮ ಲೈನ್ ಮನೆ ಬಳಿ ಬಂದು ನಿನ್ನ ತಮ್ಮ ಅವರೆಲ್ಲ ಎಲ್ಲಿಗೆ ಹೋಗಿದ್ದಾರೆ ಎಂದು ಕೇಳಿದರು. ಜಗದೀಶ್‌ ಗೌಡ ಕರೆ ಮಾಡಲು ಹೇಳಿದರು. ಆದರೆ, ಅವರು ಸ್ವೀಕರಿಸಲಿಲ್ಲ. ಆಗ ನಮ್ಮ ಮೊಬೈಲ್ ಕಿತ್ತುಕೊಳ್ಳಲು ಬಂದರು. ನನ್ನ ತಮ್ಮನ ಹೆಂಡತಿ ಗರ್ಭಿಣಿ, ಅವಳು ಮೊಬೈಲ್ ಹಿಡಿದುಕೊಂಡು ವಿಡಿಯೋ ಮಾಡುತ್ತಿದ್ದರಿಂದ ಮೊಬೈಲ್ ಕಿತ್ತುಕೊಳ್ಳಲು ಬಂದು ಕಪಾಳಕ್ಕೆ ಹೊಡೆದರು. ಬಳಿಕ ತಿಲಕ್ ಗೌಡ ಮತ್ತು ಜಗದೀಶ್ ಗೌಡ ನಮ್ಮನ್ನ ಹೊಡೆದರು. ನೀವು ಅನ್ನ ನೀರು ಇಲ್ಲದೆ ಅಲ್ಲೇ ಸಾಯಬೇಕು. ನಾನು ನಿಮ್ಮುನ್ನು ಬಂದೂಕಿನಿಂದ ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದರು” ಎಂದು ತಮಗಾದ ನೋವನ್ನು ತೆರೆದಿಟ್ಟಿದರು.

ಇದನ್ನೂ ಓದಿರಿ: ವಿಶ್ಲೇಷಣೆ: ದಲಿತ ಮತಗಳೇ ಮುಂದಿನ ಚುನಾವಣೆಯಲ್ಲಿ ನಿರ್ಣಾಯಕ; ಒಡೆದು ಆಳುವ ತಂತ್ರವೇ ಪ್ರಧಾನ

“ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಗರ್ಭಿಣಿಯಾಗಿದ್ದ ತಮ್ಮನ ಹೆಂಡತಿಗೆ ಹೊಟ್ಟೆ ನೋವು ಶುರುವಾಯ್ತು. ಆಕೆಯನ್ನು ಒಳಗೆ ಕರೆದೊಯ್ದು ಮಲಗಿಸುವಾಗ ನಮ್ಮನ್ನು ಒಳಗೆ ಕೂಡಿ ಬಾಗಿಲು ಹಾಕಿದರು. ಎಷ್ಟೇ ಕೇಳಿಕೊಂಡರೂ ಬಿಡಲಿಲ್ಲ. ನಂತರ ನಮ್ಮ ಸಂಬಂಧಿಕರು ಬಂದು ಬೀಗ ಒಡೆದು ಬಾಗಿಲು ತೆಗೆದರು” ಎಂದು ತಿಳಿಸಿದರು.

“ನಾವು ಬಾಳೆಹೊನ್ನೂರು ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ, ನಿಮ್ಮ ಮೇಲೆ ಚೀಟಿಂಗ್ ಕೇಸ್ ಹಾಕಿದ್ದಾರೆ ಏನು ಮಾಡುತ್ತೀರ? ಎಂದು ಎಸ್ಐ ನಿತ್ಯಾನಂದ ಕೇಳಿದರು. ಬಳಿಕ ತಮ್ಮನ ಹೆಂಡತಿಯ ಆಸ್ಪತ್ರೆ ಖರ್ಚು ವೆಚ್ಚ ತಿಲಕ್‌ಗೌಡ ಅವರೆ ನೋಡಿಕೊಳ್ಳುತ್ತಾರೆ. ದೂರು ಕೊಡುವುದು ಬೇಡ ಎಂದು ಸಂಧಾನ ಮಾಡಲು ಮುಂದಾದರು. ನಂತರ ತಿಲಕ್ ಗೌಡ, ಜೀಪ್‌ನಲ್ಲಿ ತಮ್ಮನ ಹೆಂಡತಿಯನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಹೊಟ್ಟೆಗೆ ಪೆಟ್ಟು ಬಿದ್ದಿದ್ದರಿಂದ ಹೊಟ್ಟೆಯಲ್ಲಿ ಮಗು ಮೃತಪಟ್ಟಿತ್ತು” ಎಂದು ನೋವು ತೋಡಿಕೊಂಡರು.

ಇದನ್ನೂ ಓದಿರಿ: ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

ದಲಿತ ಸಂಘರ್ಷ ಸಮಿತಿ ಚಿಕ್ಕಮಗಳೂರು ಜಿಲ್ಲಾ ಒಕ್ಕೂಟದ ಅಧ್ಯಕ್ಷ ಹೊನ್ನಪ್ಪ ಮಾತನಾಡಿ, “ನಾವು ಮಳೆಯನ್ನೂ ಲೆಕ್ಕಿಸದೆ ಹೋರಾಟ ಮಾಡುತ್ತಿದ್ದೇವೆ. ಎಸ್ಪಿ ಬರುತ್ತಾರೆ ಎಂದು ಬೆಳಿಗ್ಗೆಯಿಂದ ಸುಳ್ಳು ಆಶ್ವಾಸನೆ ನೀಡಿದರು. ಆದರೆ ಯಾರೂ ಬರಲಿಲ್ಲ. ಎರಡು ದಿನದಲ್ಲಿ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಎರಡು ದಿನದಲ್ಲಿ ಬಂಧಿಸದಿದ್ದರೆ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಭೀಮ್ ಆರ್ಮಿ ತಾಲೂಕು ಘಟಕದ ಅಧ್ಯಕ್ಷ ನಾಗರಾಜ್, “ದಲಿತ ಕೂಲಿ ಕಾರ್ಮಿಕ ಮಹಿಳೆಯರನ್ನು ಗೃಹಬಂಧನದಲ್ಲಿರಿಸಿ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಎಸ್ಟೇಟ್ ಮಾಲೀಕರಾದ ಜಗದೀಶ್ ಗೌಡ ಮತ್ತು ತಿಲಕ್‌ಗೌಡ ವಿರುದ್ಧ ಎಸ್ಸಿ ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾದರೂ ಪೊಲೀಸರು ಇನ್ನೂ ಅವರನ್ನು ಬಂಧಿಸಿಲ್ಲ. ಕಾರ್ಮಿಕ ಇಲಾಖೆ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾರೇ ಆಗಲಿ ದ್ವೇಷ ಸರಿಯಲ್ಲ… ಪ್ರೀತಿಯಿಂದ ಎಲ್ಲವೂ ಸಾದ್ಯ…. ದೌರ್ಜನ್ಯ ಮಾಡೋದು ದೊಡ್ಡ ತಪ್ಪು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...