Homeಮುಖಪುಟ‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

‘ವೇದಗಣಿತ’ ಯೋಜನೆ ಹಿಂಪಡೆದ ಸರ್ಕಾರ; ದಲಿತರ ಹೋರಾಟಕ್ಕೆ ಗೆಲುವು

“ಎಸ್‌ಸಿ, ಎಸ್‌ಟಿ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿಯ ಸುಮಾರು 70 ಕೋಟಿ ಹಣವನ್ನು ಉಳಿಸಿದ್ದೇವೆ” ಎಂದು ಹೋರಾಟಗಾರ ಹ.ರಾ.ಮಹೇಶ್‌ ತಿಳಿಸಿದ್ದಾರೆ.

- Advertisement -
- Advertisement -

ದಲಿತ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಯನ್ನು ರೂಪಿಸಿದ್ದ ಸರ್ಕಾರ, ತೀವ್ರ ವಿರೋಧದ ಬಳಿಕ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಹೀಗಾಗಿ ದಲಿತರಿಗೆ ಮೀಸಲಾಗಿದ್ದ ಕೋಟ್ಯಂತರ ಹಣ ದುರುಪಯೋಗ ಆಗುವುದು ತಪ್ಪಿದೆ.

ವೇದಗಣಿತ ನೆಪದಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ದೂರುಗಳು ಬಂದಿದ್ದವು. ದಲಿತ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ದಲಿತರಿಗೆ ಮೀಸಲಾದ ಹಣವನ್ನು ಖಾಸಗಿ ಸಂಸ್ಥೆಗಳು ದುರುಪಯೋಗ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ‘ನಾನುಗೌರಿ.ಕಾಂ’ ಸರಣಿಯಾಗಿ ವರದಿ ಮಾಡಿತ್ತು. ವೇದಗಣಿತದಿಂದ ದಲಿತ ಮಕ್ಕಳ ಮೇಲೆ ಬೀರುವ ದೂರಗಾಮಿ ಪರಿಣಾಮಗಳ ಕುರಿತು ಬೆಳಕು ಚೆಲ್ಲಲಾಗಿತ್ತು. ಶಿಕ್ಷಣ ಇಲಾಖೆ ವ್ಯಾಪ್ತಿಯ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಡುತ್ತಿರುವುದು ಕೂಡ ಅನುಮಾನಗಳಿಗೆ ಆಸ್ಪದ ನೀಡಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಹಕ್ಕುಗಳ ಸಂರಕ್ಷಣಾ ಪರಿಷತ್ ಈ ಕುರಿತು ಸರ್ಕಾರದ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ದೂರು ಸಲ್ಲಿಸಿತ್ತು. ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯನ್ನು ಉಲ್ಲಂಘಿಸಿ ವೇದಗಣಿತ ಯೋಜನೆಗೆ ಆದೇಶವನ್ನು ಹೊರಡಿಸಲಾಗಿದೆ. ಸದರಿ ಆದೇಶವು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಕ್ರಿಯಾ ಯೋಜನೆ ಅನುಮೋದನೆಗೊಂಡಿರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಅನಧಿಕೃತ ಟಿಪ್ಪಣಿ ಉಲ್ಲೇಖಿಸಿತ್ತು.

ಆ ನಂತರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ಅಪರ ಮುಖ್ಯನಿರ್ದೇಶಕರು ತಮ್ಮ ನಿರ್ದೇಶನಗಳನ್ನು ಹಿಂಪಡೆದಿರುವುದಾಗಿ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ತಿಳಿಸಿದ್ದಾರೆ.

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿರುವ ಶೇ. 25ರ ಅನುದಾನದಲ್ಲಿ 5ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸೂಕ್ತ ಸಮವಸ್ತ್ರ ಸಹಿತ ವೇದಗಣಿತ ತರಬೇತಿ ನೀಡಲು ಎವಿಎಂ ಅಕಾಡೆಮಿಗೆ (ಹಿರಿಯೂರು) ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ನಿಯಮಾನುಸಾರ ಮಾರ್ಗಸೂಚಿಗಳನ್ವಯ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಉಲ್ಲೇಖಿತ ಪತ್ರದಲ್ಲಿ ನಿರ್ದೇಶನ ನೀಡಲಾಗಿತ್ತು. ಪ್ರಸ್ತುತ ಸದರಿ ವಿಷಯದ ಕುರಿತು ಪುನರ್‌ ಪರಿಶೀಲಿಸಲಾಗಿದ್ದು, ಶಾಲೆಗಳಿಗೆ ಬೋಧಿಸುವ ವಿಷಯಗಳ ಪಠ್ಯಕ್ರಮದ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ನಿರ್ಧರಿಸಬೇಕಾಗಿರುತ್ತದೆ. ಆದರೆ ಈ ಕುರಿತು  ಸದರಿ ಇಲಾಖೆಯೊಂದಿಗೆ ಸಮಾಲೋಚಿಸದೆ ನಿರ್ದೇಶನ ನೀಡಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಉಲ್ಲೇಖಿತ ಸರ್ಕಾರದ ಪತ್ರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ದಲಿತರ 70 ಕೋಟಿ ರೂ. ಉಳಿಸಿದ್ದೇವೆ: ಹ.ರಾ.ಮಹೇಶ್‌

“ಎಸ್‌ಸಿ, ಎಸ್‌ಟಿ ಸಮುದಾಯದ ಎಸ್‌ಸಿಎಸ್‌ಪಿ/ಟಿಎಸ್‌ಪಿಯ ಸುಮಾರು 70 ಕೋಟಿ ಹಣವನ್ನು ಉಳಿಸಿದ್ದೇವೆ” ಎಂದು  ಡಾ.ಬಿ.ಆರ್‌.ಅಂಬೇಡ್ಕರ್‌ ಸಂವಿಧಾನ ಹಕ್ಕುಗಳ ಸಂರಕ್ಷಣಾ ಪರಿಷತ್‌ನ ಹ.ರಾ.ಮಹೇಶ್‌ ತಿಳಿಸಿದ್ದಾರೆ.

“ವೇದ ಗಣಿತದ ನೆಪದಲ್ಲಿ ನಾಡಿನ ಸುಮಾರು ಒಂದೂವರೆ ಲಕ್ಷ ಮುಗ್ದ ಎಸ್‌ಸಿಎಸ್‌ಟಿ ವಿದ್ಯಾರ್ಥಿಗಳು ಅನರ್ಥ ವೇದೀಕರಣಗೊಳ್ಳುವುದನ್ನು ತಪ್ಪಿಸಿದ್ದೇವೆ. ಈ ಹೋರಾಟಕ್ಕೆ ನಮ್ಮೊಡನೆ ನೇರವಾಗಿ ಭಾಗವಹಿಸಿದ ಚಳವಳಿಯ ಒಡನಾಡಿಗಳಿಗೆ, ಎಸ್‌ಸಿಎಸ್‌ಪಿ/ ಟಿಎಸ್‌ಪಿ ಪರಿಣಿತ ಹೋರಾಟಗಾರರಿಗೆ, ವಕೀಲ ಬಂಧುಗಳಿಗೆ, ಕೆಲ ಪತ್ರಕರ್ತ ಮಿತ್ರರಿಗೆ ಹಾಗೂ ದೂರದಿಂದಲೇ ನೈತಿಕ ಬೆಂಬಲ ಸೂಚಿಸಿದ ನಾಡಿನ ಎಲ್ಲಾ ಪ್ರಜ್ಞಾವಂತ ಬಂಧುಗಳಿಗೆ ಭೀಮನಮನಗಳನ್ನು ಸಲ್ಲಿಸುತ್ತೇವೆ” ಎಂದಿದ್ದಾರೆ.

ಇವುಗಳನ್ನು ಓದಿರಿ: ‘ವೇದಗಣಿತ’ ಕುರಿತು ‘ನಾನುಗೌರಿ.ಕಾಂ’ ಮಾಡಿರುವ ಸರಣಿ ವರದಿಗಳನ್ನು ಓದಲು ‘ಇಲ್ಲಿ ಕ್ಲಿಕ್‌ ಮಾಡಿ’

“ಆದರೆ, ಇದು ನಮ್ಮ ಸಂಪೂರ್ಣ ಗೆಲುವಲ್ಲ. ಈ ಕೆಟ್ಟ ಐಡಿಯಾವನ್ನು ಕೊಟ್ಟವರು, ಎಸ್‌ಸಿಎಸ್‌ಟಿ ಹಣವನ್ನು ದುರ್ಬಳಕೆಗೆ ಮುಂದಾಗಿ ಏಕಾಏಕಿ ಸುತ್ತೋಲೆ ಕಳಿಸಿದ ಸರ್ಕಾರದ ಅಧಿಕಾರಿಗಳುಮತ್ತು ನಮ್ಮ ಹಣವನ್ನು ಅನೀತಿ ಹಾಗೂ ಅನ್ಯಾಯವಾಗಿ ಕಬಳಿಸಲು ಸಜ್ಜಾಗಿದ್ದ ಎವಿಎಂ ಎಂಬ ಮನುವಾದಿ ಖಾಸಗಿಸಂಸ್ಥೆ ವಿರುದ್ಧ ಕ್ರಮ ಜರುಗಿಸಬೇಕಾಗಿದೆ. ಇವರೆಲ್ಲರ ಮೇಲೂ ಕಾನೂನಿನ ಕ್ರಮ ಜರುಗಿಸುವವರೆಗೂ ಹೋರಾಟ ಮುಂದುವರಿಸುತ್ತೇವೆ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...