Homeಚಳವಳಿಚೆನ್ನೈ: ಆರೆಸ್ಸೆಸ್‌‌ ವಿರುದ್ಧ ವಿವಿಧ ರಾಜಕೀಯ ಪಕ್ಷದ ಕಾರ್ಯಕರ್ತರಿಂದ ಮಾನವ ಸರಪಳಿ ಪ್ರತಿಭಟನೆ

ಚೆನ್ನೈ: ಆರೆಸ್ಸೆಸ್‌‌ ವಿರುದ್ಧ ವಿವಿಧ ರಾಜಕೀಯ ಪಕ್ಷದ ಕಾರ್ಯಕರ್ತರಿಂದ ಮಾನವ ಸರಪಳಿ ಪ್ರತಿಭಟನೆ

- Advertisement -
- Advertisement -

ಆರೆಸ್ಸೆಸ್ಸ್‌‌ ಮತ್ತು ಸಂಘ ಪರಿವಾರದ ಗುಂಪುಗಳ ವಿಭಜಕ ರಾಜಕೀಯ ಅಜೆಂಡಾದ ವಿರುದ್ಧ ಅಕ್ಟೋಬರ್ 11 ರ ಮಂಗಳವಾರದಂದು ಚೆನ್ನೈನಲ್ಲಿ ವಿವಿಧ ರಾಜಕೀಯ ಮತ್ತು ಸಾಮಾಜಿಕ ಸಂಘಟನೆಗಳಿಗೆ ಸೇರಿದ ನೂರಾರು ಕಾರ್ಯಕರ್ತರು ‘ಕೋಮು ಸೌಹಾರ್ದ’ ಮಾನವ ಸರಪಳಿ ಪ್ರತಿಭಟನೆ ನಡೆಸಿದ್ದಾರೆ.

ವಿಡುದಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಮುಖ್ಯಸ್ಥ, ಸಂಸದ ತೋಲ್ ತಿರುಮಾವಲವನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ತಮಿಳುನಾಡು ಕಾಂಗ್ರೆಸ್, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ (ಸಿಪಿಐ-ಎಂ), ಮಣಿತನೇಯ ಮಕ್ಕಳ್ ಕಚ್ಚಿ (ಎಂಎಂಕೆ) ಮತ್ತು ತಮಿಳುಗಗ ವಜ್ವುರಿಮೈ ಕಚ್ಚಿ (TVK)  ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಿದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕೀಯೇತರ ಸಂಘಟನೆಗಳಾದ ದ್ರಾವಿಡರ್ ಕಳಗಂ (ಡಿಕೆ), ಡಿಸೆಂಬರ್ 3 ಮೂವ್‌ಮೆಂಟ್‌‌, ಮೇ 17 ಮೂವ್‌ಮೆಂಟ್‌‌ ಮತ್ತು ತಂಥೈ ಪೆರಿಯಾರ್ ದ್ರಾವಿಡರ್ ಕಳಗಂ ಕೂಡ ಮಾನವ ಸರಪಳಿ ಪ್ರತಿಭಟನೆಯ ಭಾಗವಾಗಿದ್ದವು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ಆರೆಸ್ಸೆಸ್‌‌ ಚಡ್ಡಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್; ಬಿಜೆಪಿ ಟೀಕೆ

ಜನನಿಬಿಡ ಮೌಂಟ್ ರೋಡ್ ಪೆರಿಯಾರ್ ಪ್ರತಿಮೆಯಿಂದ ಸಾವಿರ ದೀಪಗಳವರೆಗೆ ಮಾನವ ಸರಪಳಿ ನಡೆದಿದೆ. ಸರಪಳಿಯಲ್ಲಿ ಪಾಲ್ಗೊಂಡ ಪಕ್ಷದ ಕಾರ್ಯಕರ್ತರು ಮತ್ತು ಕಾರ್ಯಕರ್ತರು ಆರ್‌ಎಸ್‌ಎಸ್ ಮತ್ತು ಸಂಘಪರಿವಾರದ ರಾಜಕೀಯ ಮತ್ತು ಅವರ ಅಜೆಂಡಾದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಈ ವೇಳೆ ಮಾತನಾಡಿದ ವಿಸಿಕೆ ಮುಖ್ಯಸ್ಥ, ಸಂಸದ ತೊಲ್ ತಿರುಮಾವಳವನ್, “ತಮಿಳುನಾಡಿನಲ್ಲಿ ಆರ್‌ಎಸ್‌ಎಸ್‌ಗೆ ಸ್ಥಾನವಿಲ್ಲ. ಬಿಜೆಪಿ ರಾಜಕೀಯ ಮುಖವನ್ನು ಹೊಂದಿದೆ ಮತ್ತು ಅದಕ್ಕೆ ಅವಕಾಶ ನೀಡಬಹುದು. ಆದರೆ ಆರ್‌ಎಸ್‌ಎಸ್ ಮುಖರಹಿತ ಸಂಘಟನೆಯಾಗಿದ್ದು, ಇದು ಮಹಾತ್ಮ ಗಾಂಧಿಯವರ ಹತ್ಯೆ, ಗುಜರಾತ್ ಗಲಭೆ ಮತ್ತು ಬಾಂಬ್ ಸ್ಫೋಟಗಳಲ್ಲಿ ಭಾಗಿಯಾಗಿದೆ” ಎಂದು ಆರೋಪಿಸಿದ್ದಾರೆ.

“ತಮಿಳುನಾಡಿನಲ್ಲಿ ತಮ್ಮ ಕೋಮುವಾದಿ ರಾಜಕೀಯ ಮತ್ತು ವಿಭಜಕ ಅಜೆಂಡಾಕ್ಕೆ ಅವಕಾಶ ನೀಡುವುದಿಲ್ಲ ಎಂಬ ಬಲವಾದ ಸಂದೇಶವನ್ನು ಆರ್‌ಎಸ್‌ಎಸ್ ಮತ್ತು ಇತರ ಕೋಮುವಾದಿ ಶಕ್ತಿಗಳಿಗೆ ರವಾನಿಸಲು ಈ ರ್‍ಯಾಲಿಯನ್ನು ನಡೆಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

“ತಮಿಳುನಾಡಿನಲ್ಲಿ ಜಾತ್ಯತೀತತೆಯನ್ನು ರಕ್ಷಿಸಲಾಗಿದೆ ಮತ್ತು ಈ ಶಕ್ತಿಗಳು ತಲೆ ಎತ್ತಿದರೆ ಜಾತ್ಯತೀತತೆ ಮತ್ತು ಸಹೋದರತ್ವವು ಹಾಳಾಗುತ್ತದೆ. ಅದು ತಮಿಳುನಾಡಿಗೆ ದೊಡ್ಡ ಅಪಾಯವಾಗಿದ್ದು, ನಾವು ಅವುಗಳನ್ನು ವಿರೋಧಿಸುತ್ತೇವೆ” ಎಂದು ಎಂಡಿಎಂಕೆ ಮುಖ್ಯಸ್ಥ ವೈಕೊ ಹೇಳಿದ್ದಾರೆ.

ನವೆಂಬರ್ 6 ರಂದು ತಮಿಳುನಾಡಿನ 51 ಸ್ಥಳಗಳಲ್ಲಿ ಆಯೋಜಿಸಲಾಗಿರುವ ಆರೆಸ್ಸೆಸ್‌‌‌ ‘ರೂಟ್ ಮಾರ್ಚ್’ಗೆ ಅನುಮತಿ ನಿರಾಕರಿಸುವಂತೆ ನಾಯಕರು ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಅಕ್ಟೋಬರ್‌ 2 ರಂದು ಆರ್‌ಎಸ್‌ಎಸ್‌ ‘ರೂಟ್ ಮಾರ್ಚ್’ ನಡೆಸಲು ಯೋಜಿಸಿತ್ತು. ಇದರ ವಿರುದ್ಧ ಪ್ರತಿಭಟನೆಯಾಗಿ ‘ಕೋಮು ಸೌಹಾರ್ದ’ ಮಾನವ ಸರಪಳಿ ನಡೆಸುವುದಾಗಿ ವಿಪಕ್ಷಗಳು ಮತ್ತು ಜನಪರ ಸಂಘಟನೆಗಳು ಹೇಳಿಕೊಂಡಿತ್ತು. ಆದರೆ ತಮಿಳುನಾಡು ಸರ್ಕಾರವು ಪಿಎಫ್‌ಐ ನಿಷೇಧದ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆಗಳನ್ನು ಉಲ್ಲೇಖಿಸಿ ಎರಡೂ ರ್‍ಯಾಲಿಗಳಿಗೆ ಅನುಮತಿ ನಿರಾಕರಿಸಿತ್ತು.

ಇದನ್ನೂ ಓದಿ: ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ತಮಿಳುನಾಡು ಸರ್ಕಾರದ ಅನುಮತಿ ನಿರಾಕರಣೆಯ ವಿರುದ್ಧ ಆರ್‌ಎಸ್‌ಎಸ್ ಮತ್ತೊಮ್ಮೆ ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ನವೆಂಬರ್ 6 ರಂದು ತಮಿಳುನಾಡಿನಲ್ಲಿ ಆರ್‌ಎಸ್‌ಎಸ್ ಮೆರವಣಿಗೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...