Homeಮುಖಪುಟಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

ಮಾನವ ಹಕ್ಕು ಹೋರಾಟಗಾರರಾದ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತ: ಕೂಡಲೇ ಬಿಡುಗಡೆಗೆ ಕೋರ್ಟ್ ಆದೇಶ

- Advertisement -
- Advertisement -

ಮಾವೋವಾದಿಗಳೊಂದಿಗೆ ಸಂಬಂಧದ ಆರೋಪದ ಮೇಲೆ ಶಿಕ್ಷೆಗೊಳಗಾಗಿದ್ದ ಮಾನವ ಹಕ್ಕು ಹೋರಾಟಗಾರ ಪ್ರೊ. ಜಿ. ಎನ್. ಸಾಯಿಬಾಬಾ ದೋಷಮುಕ್ತರಾಗಿದ್ದಾರೆ. ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಅವರನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆದೇಶಿಸಿದೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇಲೆ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿರಲಿಲ್ಲ.

2017ರ ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಜಿ.ಎನ್ ಸಾಯಿಬಾಬಾ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ರೋಹಿತ್ ಡಿಯೊ ಮತ್ತು ಅನಿಲ್ ಪನ್ಸಾರೆ ಅವರ ವಿಭಾಗೀಯ ಪೀಠವು ಪುರಸ್ಕರಿಸಿ ಆದೇಶ ನೀಡಿದೆ.

ಪ್ರಕರಣದ ಇತರ ಐವರು ಆರೋಪಿಗಳನ್ನು ಸಹ ಪೀಠ ಖುಲಾಸೆಗೊಳಿಸಿದೆ. ಆದರೆ ಅವರಲ್ಲಿ ಒಬ್ಬರು ಜೈಲಿನಲ್ಲಿಯೇ ಮೃತಪಟ್ಟಿದ್ದರು. ಉಳಿದವರು ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳಾಗಿರದಿದ್ದರೆ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಪೀಠವು ಸೂಚಿಸಿದೆ.

ನಾಗ್ಪುರದ ಕೇಂದ್ರ ಕಾರಾಗೃಹದಲ್ಲಿ ಪಾಶ್ವವಾಯು ಪೀಡಿತರಾಗಿ ಗಾಲಿಕುರ್ಚಿಯಲ್ಲೇ ಇರುವ ಸಾಯಿಬಾಬಾರವರು ನಡೆಸಿದ ಧೀರ್ಘ ಕಾನೂನು ಹೋರಾಟಕ್ಕೆ ಕೊನೆಗೂ ಜಯ ಸಂದಿದೆ.

ದಿಲ್ಲಿ ವಿಶ್ವವಿದ್ಯಾಲಯದ ರಾಮ್‌ಲಾಲ್ ಆನಂದ್ ಕಾಲೇಜಿನ ಪ್ರಾಧ್ಯಾಪಕರಾದ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಅವರು ಆಂಧ್ರಪ್ರದೇಶ ಕರಾವಳಿಯ ಚಿಕ್ಕ ಜಿಲ್ಲೆಯಿಂದ ಬಂದವರು. ನಿತ್ಯ ಜೀವನ ನಡೆಸಲೂ ಕಷ್ಟವಾಗುವ ಚಿಕ್ಕ ಜಮೀನು ಹೊಂದಿದ್ದ ಬಡ ಕುಟುಂಬವೊಂದರಲ್ಲಿ ಅವರು ಜನಿಸಿದ್ದು. ಹೀಗೆ ಜೀವನ ನಡೆಸಲೇ ಕಷ್ಟವಾಗುತ್ತಿರುವಾಗ ಮತ್ತು ಇದ್ದ ಚಿಕ್ಕ ಜಮೀನೂ ಕರಗುತ್ತಿರುವಾಗ ಐದು ವರ್ಷಗಳ ಬಾಲಕನಾಗಿದ್ದ ಸಾಯಿಬಾಬ ಅವರಿಗೆ ಪೋಲಿಯೋಗೆ ತುತ್ತಾಗಿ ಅವರು ಕಾಲುಗಳನ್ನು ಬಳಸಲು ಸಾಧ್ಯವಾಗದಂತಹ ಸ್ಥಿತಿಗೆ ತಲುಪಿದರು.

ಈ ದೈಹಿಕ ಅಡೆತಡೆಗಳ ಹೊರತಾಗಿಯೂ ಅದಮ್ಯ ಚೈತನ್ಯದಿಂದ ಮತ್ತು ಉದಾರ ಮನೋಭಾವದ ಕೆಲವು ಶಿಕ್ಷಕರ ಸಹಾಯದಿಂದ ಅವರೊಂದು ಶಾಲೆಯನ್ನು ಕಂಡುಕೊಂಡರು. ಅಲ್ಲಿ ಅವರ ಮನಸ್ಸು ವಿಕಸಿತಗೊಳ್ಳುತ್ತಾ ಹೋಯಿತು. ಮತ್ತೆ ಪೂರ್ವ ಗೋದಾವರಿಯ ಅಮಲಾಪುರಂ ಜಿಲ್ಲಾ ಪದವಿ ಕಾಲೇಜಿನಲ್ಲಿ ಕಲಿಯುತ್ತಿದ್ದಾಗ ಅವರ ಬುದ್ಧಿಮತ್ತೆ ಮತ್ತಷ್ಟು ವಿಕಸನಗೊಂಡು ಸಾಹಿತ್ಯದ ಕುರಿತು ಅವರಿಗಿದ್ದ ಒಲವು ಅರಳಿತು. ಸಾಹಿತ್ಯ ಅವರ ತೀವ್ರ ಆಸಕ್ತಿಯ ವಿಷಯವಾಗಿತ್ತು.

ತೊಂಬತ್ತರ ದಶಕದ ಆರಂಭದಲ್ಲಿ ತನ್ನ ಕಾಲೇಜು ದಿನಗಳಲ್ಲಿ ವರ್ಷವರ್ಷಗಳಿಂದ ನಡೆದುಕೊಂಡುಬರುತ್ತಿದ್ದ ಸಂಪ್ರದಾಯ ಮತ್ತು ಶೋಷಣೆಯ ಸಾಧನಗಳ ವಿರುದ್ಧ ಜನರು ನಡೆಸುತ್ತಿದ್ದ ಹೋರಾಟದ ವಾತಾವರಣದ ಕುರಿತು ಹೆಚ್ಚುಹೆಚ್ಚು ಅರಿವು ಅವರಿಗೆ ಉಂಟಾಯಿತು. ಕ್ರಾಂತಿಗೀತೆಗಳ ಲಾವಣಿಕಾರ ಜನ ನಾಟ್ಯ ಮಂಡಳಿಯ ಗದ್ದರ್ ಅವರು ಕವಿಗಳು, ಬುದ್ಧಿಜೀವಿಗಳು, ರಾಜಕೀಯ ಕಾರ್ಯಕರ್ತರನ್ನು ಒಳಗೊಂಡು ಸಾವಿರಾರು ಯುವಕರನ್ನು ಪ್ರೇರೇಪಿಸುತ್ತಿದ್ದ ಸಂದರ್ಭದಲ್ಲಿಯೇ ಅವರು ಆಲ್ ಇಂಡಿಯಾ ಪೀಪಲ್ಸ್ ರೆಸಿಸ್ಟೆನ್ಸ್ ಫೋರಂ (ಎಐಪಿಓಆರ್‌ಇ – ಅಖಿಲ ಭಾರತ ಜನಪ್ರತಿರೋಧ ವೇದಿಕೆ) ಸಂಘಟನೆಯನ್ನು ಸೇರಿದರು.

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದಾಗಲೇ, 1992ರಲ್ಲಿ ಅವರು ಅದರ ಆಂಧ್ರಪ್ರದೇಶ ರಾಜ್ಯ ಕಾರ್ಯದರ್ಶಿಯಾದರು. 1995ರ ಹೊತ್ತಿಗೆ ಅವರು ಅದರ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಇಂಗ್ಲಿಷ್ ಎಂಡ್ ಫಾರಿನ್ ಲ್ಯಾಂಗ್ವೇಜಸ್ (ಸಿಐಇಎಫ್‌ಎಲ್) (ಈಗ ಇಎಫ್‌ಎಲ್‌ಯು ಎಂದು ಕರೆಯಲ್ಪಡುತ್ತಿದೆ)ನಲ್ಲಿಯೂ ಅಧ್ಯಯನ ಮಾಡುತ್ತಿದ್ದು, ತನ್ನ ಜೀವನ ಸಂಗಾತಿ ಮತ್ತು ಗೆಳೆಯರಾದ ವಸಂತಾ ಮತ್ತು ಮಗಳು ಮಂಜೀರಾ ಅವರನ್ನು ಹೈದರಾಬಾದಿನಲ್ಲಿಯೇ ಬಿಟ್ಟು ದಿಲ್ಲಿಗೆ ಹೋಗಬೇಕಾಯಿತು.

ಡಾ. ಸಾಯಿಬಾಬಾ ಅವರು ಸಾಮ್ರಾಜ್ಯಶಾಹಿ ಜಾಗತೀಕರಣದ ವಿರುದ್ಧ ರಾಷ್ಟ್ರೀಯವಾದಿ ಹೋರಾಟಗಳ ಪರವಾಗಿ ಬರೆಯುತ್ತಾ, ಉಪನ್ಯಾಸಗಳನ್ನು ನೀಡುತ್ತಾ, ಪ್ರತಿಭಟನಾ ಸಭೆಗಳನ್ನು ಆಯೋಜಿಸುತ್ತಾ ಇದ್ದರು. ಅವರು ದಲಿತರು ಮತ್ತು ಆದಿವಾಸಿಗಳ ಸಮಸ್ಯೆಗಳನ್ನು ಮುನ್ನೆಲೆಗೆ ತರುತ್ತಲೇ ಇದ್ದರು. 1997 ಹೊತ್ತಿಗೆ ಅವರು ರಾಷ್ಟ್ರೀಯತೆಯ ಪ್ರಶ್ನೆ ಮತ್ತು ಪ್ರತ್ಯೇಕತೆಯ ಹಕ್ಕು ಸೇರಿದಂತೆ ಜನರ ಸ್ವಾಯತ್ತತೆಯ ಕುರಿತು ಅಂತಾರಾಷ್ಟ್ರೀಯ ಸಮಾವೇಶವೊಂದನ್ನು ಆಯೋಜಿಸಿದರು. ಅವರು ರೈತಾಪಿ ವರ್ಗ, ಕಾರ್ಮಿಕರು ಹಾಗೂ ಇತರ ದಮನಿತ ವರ್ಗಗಳನ್ನು ಜೊತೆಸೇರಿಸಿ, 2001ರಲ್ಲಿ ಫೋರಂ ಎಗೇನ್ಸ್ಟ್ ಇಂಪೀರಿಯಲಿಸ್ಟ್ ಗ್ಲೋಬಲಿಸೈಸೇಶನ್ (ಎಫ್‌ಎಐಜಿ – ಸಾಮ್ರಾಜ್ಯಶಾಹಿ ಜಾಗತೀಕರಣ ವಿರೋಧಿ ವೇದಿಕೆ) ಎಂಬ ಸಂಘಟನೆಯನ್ನು ಕಟ್ಟಲೂ ನೆರವಾದರು.

ಇದನ್ನೂ ಓದಿ; ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....