Homeಅಂತರಾಷ್ಟ್ರೀಯರಷ್ಯಾವನ್ನು ಖಂಡಿಸುವ ನಿರ್ಣಯದಿಂದ ಮತ್ತೆ ದೂರ ಉಳಿದ ಭಾರತ

ರಷ್ಯಾವನ್ನು ಖಂಡಿಸುವ ನಿರ್ಣಯದಿಂದ ಮತ್ತೆ ದೂರ ಉಳಿದ ಭಾರತ

- Advertisement -
- Advertisement -

ಉಕ್ರೇನ್‌ನಲ್ಲಿನ ಸಂಘರ್ಷದ ತೀವ್ರತೆಯ ಬಗ್ಗೆ ಆಳವಾದ ಕಳವಳವನ್ನು ಪುನರುಚ್ಚರಿಸಿದರೂ ಸಹ, ರಷ್ಯಾ ನಡೆಯನ್ನು ಖಂಡಿಸುವ ನಿರ್ಣಯದ ಮತದಾನದಿಂದ ಭಾರತವು ದೂರ ಉಳಿಯಿತು. ನಾಲ್ಕು ಉಕ್ರೇನಿಯನ್‌ ಪ್ರದೇಶಗಳಲ್ಲಿ ರಷ್ಯಾ ಆಯೋಜಿಸಿದ “ಅಕ್ರಮ ಜನಮತಗಣನೆ”ಯನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸುವ ಮತದಾನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಗುರುವಾರ ನಡೆಯಿತು.

ಉಕ್ರೇನ್‌ನ ಡೊನೆಟ್ಸ್ಕ್, ಖೆರ್ಸನ್, ಲುಹಾನ್ಸ್ಕ್ ಮತ್ತು ಝಪೊರಿಝಿಯಾ ಪ್ರದೇಶಗಳ ‘‘ಅಕ್ರಮ ಸ್ವಾಧೀನಕ್ಕೆ ಪ್ರಯತ್ನಿಸಲಾಗಿದ್ದು’’ ಇದಕ್ಕೆ ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ಯಾವುದೇ ಮಾನ್ಯತೆ ಇಲ್ಲ ಎಂದು ಘೋಷಿಸಿದ ನಿರ್ಣಯವನ್ನು 193 ಸದಸ್ಯರ ಸಾಮಾನ್ಯ ಸಭೆಯಲ್ಲಿ 143-5 ಮತಗಳಿಂದ ಅಂಗೀಕರಿಸಲಾಯಿತು. ಆದರೆ ಭಾರತ ಸೇರಿದಂತೆ ಮೂವತ್ತೈದು ರಾಷ್ಟ್ರಗಳು ಮತದಾನದಿಂದ ದೂರ ಉಳಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮತದಾನದಿಂದ ದೂರ ಉಳಿಯುವ ಬಗ್ಗೆ ವಿವರಣೆ ನೀಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್,“ನಮ್ಮ ಉತ್ತಮ ಚಿಂತನೆ ರಾಷ್ಟ್ರೀಯ ಸ್ಥಾನಕ್ಕೆ ಅನುಗುಣವಾಗಿದೆ. ನಿರ್ಣಯದಲ್ಲಿ ಇತರ ಸಮಸ್ಯೆಗಳಿವೆ, ಅವುಗಳಲ್ಲಿ ಕೆಲವನ್ನು ನಿರ್ಣಯದಲ್ಲಿ ಸಮರ್ಪಕವಾಗಿ ತಿಳಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

“ಇದು ಯುದ್ಧದ ಯುಗವಾಗಲು ಸಾಧ್ಯವಿಲ್ಲ ಎಂದು ನನ್ನ ಪ್ರಧಾನಿ ನಿಸ್ಸಂದಿಗ್ಧವಾಗಿ ಹೇಳಿದ್ದಾರೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಶಾಂತಿಯುತ ಪರಿಹಾರಕ್ಕಾಗಿ ಶ್ರಮಿಸುವ ಈ ದೃಢ ಸಂಕಲ್ಪದೊಂದಿಗೆ, ಭಾರತವು ದೂರವಿರಲು ನಿರ್ಧರಿಸಿದೆ” ಎಂದು ಸೆಪ್ಟೆಂಬರ್ 16 ರಂದು ಸಮರ್‌ಖಂಡ್‌ನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ನೀಡಿದ ಸಂದೇಶವನ್ನು ಉಲ್ಲೇಖಿಸಿ ರುಚಿರಾ ಕಾಂಬೋಜ್ ಹೇಳಿದ್ದಾರೆ.

“ನಾಗರಿಕ ಮೂಲಸೌಕರ್ಯ ಮತ್ತು ನಾಗರಿಕರ ಸಾವುಗಳನ್ನು ಗುರಿಯಾಗಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ಸಂಘರ್ಷದ ಉಲ್ಬಣಕ್ಕೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದೆ. ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಇತ್ಯರ್ಥಪಡಿಸಲು ಮಾತುಕತೆಯು ಏಕೈಕ ಉತ್ತರವಾಗಿದೆ. ಜೊತೆಗೆ ಶಾಂತಿಯ ಮಾರ್ಗಕ್ಕಾಗಿ ರಾಜತಾಂತ್ರಿಕತೆಯ ಎಲ್ಲಾ ದಾರಿಗಳನ್ನು ಮುಕ್ತವಾಗಿಡಲು ನಮಗೆ ಅಗತ್ಯವಿದೆ” ಎಂದು ಕಾಂಬೋಜ್ ಹೇಳಿದ್ದಾರೆ.

ಉಕ್ರೇನ್ ಸಂಘರ್ಷವು ಆಹಾರ ಮತ್ತು ಇಂಧನ ಭದ್ರತೆಯ ಮೇಲೆ, ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೇಗೆ ವ್ಯಾಪಕವಾದ ಪರಿಣಾಮಗಳನ್ನು ಬೀರಿದೆ ಎಂಬುದನ್ನು ಸಹ ಕಾಂಬೋಜ್ ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ‘ಮತ್ತೊಂದು ದೊಡ್ಡ ತಪ್ಪು’: ನ್ಯಾಟೊ ಸೇರುತ್ತಿರುವ ಫಿನ್‌ಲ್ಯಾಂಡ್‌ & ಸ್ವೀಡನ್‌ಗೆ ರಷ್ಯಾ ಎಚ್ಚರಿಕೆ

ಸೆಪ್ಟೆಂಬರ್‌ನಲ್ಲಿ ನಡೆದ ಸಾಮಾನ್ಯ ಸಭೆಯ ವಾರ್ಷಿಕ ಅಧಿವೇಶನದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಇತ್ತೀಚೆಗೆ ಮಾಡಿದ ಭಾಷಣವನ್ನು ಕಾಂಬೋಜ್ ಪುನರುಚ್ಚರಿಸಿ, ಭಾರತವು ಶಾಂತಿಯ ಕಡೆಯಲ್ಲಿದ್ದು, ಅಲ್ಲಿಯೆ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು, ರಷ್ಯಾದ ಜನಾಭಿಪ್ರಾಯ ಮತ್ತು ನಾಲ್ಕು ಉಕ್ರೇನಿಯನ್ ಪ್ರದೇಶಗಳನ್ನು ಅಮಾನ್ಯವೆಂದು ಖಂಡಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕರಡು ನಿರ್ಣಯದಿಂದ ಭಾರತ ದೂರವಿತ್ತು. ರಷ್ಯಾ, ಬೆಲಾರಸ್, ಉತ್ತರ ಕೊರಿಯಾ, ಸಿರಿಯಾ ಮತ್ತು ನಿಕರಾಗುವಾ ಮಾತ್ರ ನಿರ್ಣಯದ ವಿರುದ್ಧ ಮತ ಚಲಾಯಿಸಿದವು.

ಭಾರತವಲ್ಲದೆ, ಏಷ್ಯಾದ ಹೆಚ್ಚಿನ ಸಂಖ್ಯೆಯ ದೇಶಗಳು ದೂರವಿದ್ದವು. ಅವುಗಳಲ್ಲಿ ಚೀನಾ, ಪಾಕಿಸ್ತಾನ, ಶ್ರೀಲಂಕಾ, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಸೇರಿದ್ದವು. ಬ್ರಿಕ್ಸ್‌ನ ಯಾವುದೇ ಸದಸ್ಯರು ಪಾಶ್ಚಾತ್ಯ ದೇಶದ ಜೊತೆಗೆ ಮತ ಚಲಾಯಿಸಲಿಲ್ಲ.

ಇದನ್ನೂ ಓದಿ: ದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

ಜನಾಭಿಪ್ರಾಯ ಸಂಗ್ರಹಣೆ ಮತ್ತು ಸ್ವಾಧೀನವನ್ನು ಕಾನೂನುಬಾಹಿರವೆಂದು ಘೋಷಿಸುವುದರ ಜೊತೆಗೆ, ರಷ್ಯಾವು ತಕ್ಷಣವೇ ಉಕ್ರೇನ್‌ನ ಎಲ್ಲಾ ಭಾಗಗಳಿಂದ ತನ್ನ ಮಿಲಿಟರಿಯನ್ನು ಹಿಂತೆಗೆದುಕೊಳ್ಳಬೇಕೆಂದು ನಿರ್ಣಯವು ಒತ್ತಾಯಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...