Homeಅಂತರಾಷ್ಟ್ರೀಯರಷ್ಯಾವನ್ನು ಖಂಡಿಸುವ ನಿರ್ಣಯದಿಂದ ಮತ್ತೆ ದೂರ ಉಳಿದ ಭಾರತ

ರಷ್ಯಾವನ್ನು ಖಂಡಿಸುವ ನಿರ್ಣಯದಿಂದ ಮತ್ತೆ ದೂರ ಉಳಿದ ಭಾರತ

- Advertisement -
- Advertisement -

ಉಕ್ರೇನ್‌ನಲ್ಲಿನ ಸಂಘರ್ಷದ ತೀವ್ರತೆಯ ಬಗ್ಗೆ ಆಳವಾದ ಕಳವಳವನ್ನು ಪುನರುಚ್ಚರಿಸಿದರೂ ಸಹ, ರಷ್ಯಾ ನಡೆಯನ್ನು ಖಂಡಿಸುವ ನಿರ್ಣಯದ ಮತದಾನದಿಂದ ಭಾರತವು ದೂರ ಉಳಿಯಿತು. ನಾಲ್ಕು ಉಕ್ರೇನಿಯನ್‌ ಪ್ರದೇಶಗಳಲ್ಲಿ ರಷ್ಯಾ ಆಯೋಜಿಸಿದ “ಅಕ್ರಮ ಜನಮತಗಣನೆ”ಯನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸುವ ಮತದಾನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಗುರುವಾರ ನಡೆಯಿತು.

ಉಕ್ರೇನ್‌ನ ಡೊನೆಟ್ಸ್ಕ್, ಖೆರ್ಸನ್, ಲುಹಾನ್ಸ್ಕ್ ಮತ್ತು ಝಪೊರಿಝಿಯಾ ಪ್ರದೇಶಗಳ ‘‘ಅಕ್ರಮ ಸ್ವಾಧೀನಕ್ಕೆ ಪ್ರಯತ್ನಿಸಲಾಗಿದ್ದು’’ ಇದಕ್ಕೆ ಅಂತರಾಷ್ಟ್ರೀಯ ಕಾನೂನಿನಡಿಯಲ್ಲಿ ಯಾವುದೇ ಮಾನ್ಯತೆ ಇಲ್ಲ ಎಂದು ಘೋಷಿಸಿದ ನಿರ್ಣಯವನ್ನು 193 ಸದಸ್ಯರ ಸಾಮಾನ್ಯ ಸಭೆಯಲ್ಲಿ 143-5 ಮತಗಳಿಂದ ಅಂಗೀಕರಿಸಲಾಯಿತು. ಆದರೆ ಭಾರತ ಸೇರಿದಂತೆ ಮೂವತ್ತೈದು ರಾಷ್ಟ್ರಗಳು ಮತದಾನದಿಂದ ದೂರ ಉಳಿದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮತದಾನದಿಂದ ದೂರ ಉಳಿಯುವ ಬಗ್ಗೆ ವಿವರಣೆ ನೀಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ರುಚಿರಾ ಕಾಂಬೋಜ್,“ನಮ್ಮ ಉತ್ತಮ ಚಿಂತನೆ ರಾಷ್ಟ್ರೀಯ ಸ್ಥಾನಕ್ಕೆ ಅನುಗುಣವಾಗಿದೆ. ನಿರ್ಣಯದಲ್ಲಿ ಇತರ ಸಮಸ್ಯೆಗಳಿವೆ, ಅವುಗಳಲ್ಲಿ ಕೆಲವನ್ನು ನಿರ್ಣಯದಲ್ಲಿ ಸಮರ್ಪಕವಾಗಿ ತಿಳಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್ ನಿರಾಶ್ರಿತ ಮಕ್ಕಳ ನೆರವಿಗೆ ನೊಬೆಲ್ ಪ್ರಶಸ್ತಿ ಹರಾಜಿಗಿಟ್ಟ ರಷ್ಯಾ ಪತ್ರಕರ್ತ

“ಇದು ಯುದ್ಧದ ಯುಗವಾಗಲು ಸಾಧ್ಯವಿಲ್ಲ ಎಂದು ನನ್ನ ಪ್ರಧಾನಿ ನಿಸ್ಸಂದಿಗ್ಧವಾಗಿ ಹೇಳಿದ್ದಾರೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಶಾಂತಿಯುತ ಪರಿಹಾರಕ್ಕಾಗಿ ಶ್ರಮಿಸುವ ಈ ದೃಢ ಸಂಕಲ್ಪದೊಂದಿಗೆ, ಭಾರತವು ದೂರವಿರಲು ನಿರ್ಧರಿಸಿದೆ” ಎಂದು ಸೆಪ್ಟೆಂಬರ್ 16 ರಂದು ಸಮರ್‌ಖಂಡ್‌ನಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ನೀಡಿದ ಸಂದೇಶವನ್ನು ಉಲ್ಲೇಖಿಸಿ ರುಚಿರಾ ಕಾಂಬೋಜ್ ಹೇಳಿದ್ದಾರೆ.

“ನಾಗರಿಕ ಮೂಲಸೌಕರ್ಯ ಮತ್ತು ನಾಗರಿಕರ ಸಾವುಗಳನ್ನು ಗುರಿಯಾಗಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ಸಂಘರ್ಷದ ಉಲ್ಬಣಕ್ಕೆ ಭಾರತವು ತೀವ್ರ ಕಳವಳ ವ್ಯಕ್ತಪಡಿಸಿದೆ. ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಇತ್ಯರ್ಥಪಡಿಸಲು ಮಾತುಕತೆಯು ಏಕೈಕ ಉತ್ತರವಾಗಿದೆ. ಜೊತೆಗೆ ಶಾಂತಿಯ ಮಾರ್ಗಕ್ಕಾಗಿ ರಾಜತಾಂತ್ರಿಕತೆಯ ಎಲ್ಲಾ ದಾರಿಗಳನ್ನು ಮುಕ್ತವಾಗಿಡಲು ನಮಗೆ ಅಗತ್ಯವಿದೆ” ಎಂದು ಕಾಂಬೋಜ್ ಹೇಳಿದ್ದಾರೆ.

ಉಕ್ರೇನ್ ಸಂಘರ್ಷವು ಆಹಾರ ಮತ್ತು ಇಂಧನ ಭದ್ರತೆಯ ಮೇಲೆ, ವಿಶೇಷವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೇಗೆ ವ್ಯಾಪಕವಾದ ಪರಿಣಾಮಗಳನ್ನು ಬೀರಿದೆ ಎಂಬುದನ್ನು ಸಹ ಕಾಂಬೋಜ್ ಎತ್ತಿ ತೋರಿಸಿದ್ದಾರೆ.

ಇದನ್ನೂ ಓದಿ: ‘ಮತ್ತೊಂದು ದೊಡ್ಡ ತಪ್ಪು’: ನ್ಯಾಟೊ ಸೇರುತ್ತಿರುವ ಫಿನ್‌ಲ್ಯಾಂಡ್‌ & ಸ್ವೀಡನ್‌ಗೆ ರಷ್ಯಾ ಎಚ್ಚರಿಕೆ

ಸೆಪ್ಟೆಂಬರ್‌ನಲ್ಲಿ ನಡೆದ ಸಾಮಾನ್ಯ ಸಭೆಯ ವಾರ್ಷಿಕ ಅಧಿವೇಶನದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಇತ್ತೀಚೆಗೆ ಮಾಡಿದ ಭಾಷಣವನ್ನು ಕಾಂಬೋಜ್ ಪುನರುಚ್ಚರಿಸಿ, ಭಾರತವು ಶಾಂತಿಯ ಕಡೆಯಲ್ಲಿದ್ದು, ಅಲ್ಲಿಯೆ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಕಳೆದ ತಿಂಗಳು, ರಷ್ಯಾದ ಜನಾಭಿಪ್ರಾಯ ಮತ್ತು ನಾಲ್ಕು ಉಕ್ರೇನಿಯನ್ ಪ್ರದೇಶಗಳನ್ನು ಅಮಾನ್ಯವೆಂದು ಖಂಡಿಸುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕರಡು ನಿರ್ಣಯದಿಂದ ಭಾರತ ದೂರವಿತ್ತು. ರಷ್ಯಾ, ಬೆಲಾರಸ್, ಉತ್ತರ ಕೊರಿಯಾ, ಸಿರಿಯಾ ಮತ್ತು ನಿಕರಾಗುವಾ ಮಾತ್ರ ನಿರ್ಣಯದ ವಿರುದ್ಧ ಮತ ಚಲಾಯಿಸಿದವು.

ಭಾರತವಲ್ಲದೆ, ಏಷ್ಯಾದ ಹೆಚ್ಚಿನ ಸಂಖ್ಯೆಯ ದೇಶಗಳು ದೂರವಿದ್ದವು. ಅವುಗಳಲ್ಲಿ ಚೀನಾ, ಪಾಕಿಸ್ತಾನ, ಶ್ರೀಲಂಕಾ, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಸೇರಿದ್ದವು. ಬ್ರಿಕ್ಸ್‌ನ ಯಾವುದೇ ಸದಸ್ಯರು ಪಾಶ್ಚಾತ್ಯ ದೇಶದ ಜೊತೆಗೆ ಮತ ಚಲಾಯಿಸಲಿಲ್ಲ.

ಇದನ್ನೂ ಓದಿ: ದೇಶದ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ ಆರೋಪ: ಇನ್‌ಸ್ಟಾಗ್ರಾಮ್‌‌ಗೆ ನಿರ್ಬಂಧ ಹೇರಿದ ರಷ್ಯಾ

ಜನಾಭಿಪ್ರಾಯ ಸಂಗ್ರಹಣೆ ಮತ್ತು ಸ್ವಾಧೀನವನ್ನು ಕಾನೂನುಬಾಹಿರವೆಂದು ಘೋಷಿಸುವುದರ ಜೊತೆಗೆ, ರಷ್ಯಾವು ತಕ್ಷಣವೇ ಉಕ್ರೇನ್‌ನ ಎಲ್ಲಾ ಭಾಗಗಳಿಂದ ತನ್ನ ಮಿಲಿಟರಿಯನ್ನು ಹಿಂತೆಗೆದುಕೊಳ್ಳಬೇಕೆಂದು ನಿರ್ಣಯವು ಒತ್ತಾಯಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....