Homeಕರ್ನಾಟಕಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಋತುಮತಿಯಾಗದ ಬಾಲಕಿ ಮೇಲೆ ಅತ್ಯಾಚಾರ; ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶರಣರ ಮತ್ತಷ್ಟು ವಿಕೃತಿ ಬಯಲು

ಇಬ್ಬರು ಬಾಲಕಿಯರು ನೀಡಿದ ದೂರಿನ ಅನ್ವಯ ಪೋಕ್ಸೋ ಅಡಿ ಎಫ್‌ಐಆರ್‌ ದಾಖಲಾಗಿದೆ. ಮತ್ತಷ್ಟು ಆಘಾತಕಾರಿ ಅಂಶಗಳು ಬಯಲಾಗಿವೆ.

- Advertisement -
- Advertisement -

“ಋತುಮತಿಯಾಗದ ಅಪ್ರಾಪ್ತ ಬಾಲಕಿಯ ಮೇಲೆ ಚಿತ್ರದುರ್ಗದ ಮರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಅತ್ಯಾಚಾರ ಎಸಗಿದ್ದಾರೆ” ಎಂದು ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ.

ಈಗಾಗಲೇ ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠಾಧೀಶರ ವಿರುದ್ಧ ಮತ್ತಷ್ಟು ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಕೋವಿಡ್ ಮೊದಲ ಅಲೆ ಸಂದರ್ಭದಲ್ಲಿಯೇ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ” ಎಂದು ದೂರು ನೀಡಲಾಗಿದ್ದು, ವಾರ್ಡನ್ ರಶ್ಮಿ ಸೇರಿದಂತೆ ಒಟ್ಟು 7 ಮಂದಿ ವಿರುದ್ಧ ಮೈಸೂರಿನ ನಜರಾಬಾದ್‌ ಪೊಲೀಸ್ ಠಾಣೆಯಲ್ಲಿ ತಡರಾತ್ರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಶಿವಮೂರ್ತಿ ಮುರುಘಾ ಶರಣರು ಮೊದಲನೇ ಆರೋಪಿಯಾಗಿದ್ದಾರೆ. ವಾರ್ಡನ್ ರಶ್ಮಿ (2ನೇ ಆರೋಪಿ), ಬಸವಾದಿತ್ಯ (ಮೂರನೇ ಆರೋಪಿ), ಪರಮಶಿವಯ್ಯ (4ನೇ ಆರೋಪಿ) ಗಂಗಾಧರಯ್ಯ (5ನೇ ಆರೋಪಿ), ಮಹಾಲಿಂಗ (6ನೇ ಆರೋಪಿ), ಕರಿಬಸಪ್ಪ (7ನೇ ಆರೋಪಿ) ಇತರ ಆರೋಪಿಗಳಾಗಿದ್ದಾರೆ.

ಎಫ್‌ಐಆರ್‌ನಲ್ಲಿ ಇರುವುದೇನು?

ಲೈಂಗಿಕ ದೌರ್ಜನ್ಯಕ್ಕೊಳಗಾದ ಬಾಲಕಿಯರಿಬ್ಬರ ಪೈಕಿ ಒಬ್ಬ ಬಾಲಕಿಯು ಋತುಮತಿಯಾಗುವ ತನಕವೂ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಮುರುಘಾ ಮಠಾಧೀಶರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿದ್ದಾರೆ.

ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದಾರೆ ಎಂದು ಹೇಳಲಾಗಿರುವ ಬಾಲಕಿಯರಿಬ್ಬರ ತಾಯಿಯು ಆರ್ಥಿಕವಾಗಿ ಶಕ್ತರಲ್ಲದ ಕಾರಣ ತನ್ನಿಬ್ಬರು ಮಕ್ಕಳನ್ನೂ ಮಠದಲ್ಲಿನ ವಸತಿ ನಿಲಯಕ್ಕೆ ಸೇರಿಸಿದ್ದರು. ಈ ಮಕ್ಕಳಿಬ್ಬರು ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಬಾಲಕಿಯರನ್ನು ಒತ್ತಾಯಪೂರ್ವಕವಾಗಿ ಶರಣರ ಖಾಸಗಿ ಕೊಠಡಿಗೆ ಕಳಿಸಲಾಗುತ್ತಿತ್ತು. ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳಲಾಗುತ್ತಿತ್ತು. ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಅವರನ್ನು ಮುರುಘಾ ಶರಣರ ಸಹಾಯಕರು ಹೆದರಿಸುತ್ತಿದ್ದರು.

ಸಂತ್ರಸ್ತ ಮಕ್ಕಳ ತಾಯಿ ಘಟನೆಗಳನ್ನು ಹೀಗೆ ವಿವರಿಸಿದ್ದಾರೆ:

“ನನಗೆ ಗಂಡನ ಆಸರೆ ಸಿಗದ ಕಾರಣ ನಾನು, ನನ್ನಮಕ್ಕಳು ನನ್ನ ಪೋಷಕರ ಆಶ್ರಯದಲ್ಲಿದ್ದೇವೆ. ನನ್ನ ಪೋಷಕರು ಆರ್ಥಿಕ ಹಿಂದುಳಿದವರಾಗಿದ್ದು ಹಣ್ಣಿನ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ನಾವು ಹಿಂದುಳಿದ ಜಾತಿಗೆ ಸೇರಿದವರಾಗಿರುತ್ತೇವೆ.”

“ನನ್ನ ಗಂಡ ತೊರೆದ ನಂತರ ನನಗೆ ಮಕ್ಕಳನ್ನು ಸಾಕಲು ತೊಂದರೆಯಾಗಿದ್ದರಿಂದ ನನ್ನಮಕ್ಕಳನ್ನು ಮುರುಘಾ ಮಠದ ಆಡಳಿತದಲ್ಲಿರುವ ಎಸ್‌ಜೆಎಂ ಕನ್ನಡ ಮಾಧ್ಯಮ ಶಾಲೆಗೆ 2016ರಲ್ಲಿ 3ನೇ ತರಗತಿ ಮತ್ತು 1ನೇ ತರಗತಿಗೆ ಸೇರಿಸಿ ಮಠದ ಆಶ್ರಯದಲ್ಲಿರುವ ಅಕ್ಕಮಹಾದೇವಿ ವಸತಿ ನಿಲಯದಲ್ಲಿರುವ ಬಸವ ಮಕ್ಕಳ ವಸತಿ ನಿಲಯದಲ್ಲಿ ಆಶ್ರಯಕ್ಕಾಗಿ ದಾಖಲಿಸಿರುತ್ತೇನೆ. ನನ್ನ ಮಕ್ಕಳು ಹಾಸ್ಟೆಲ್‌ನಲ್ಲಿರುತ್ತಿದ್ದರು.”

“ನನ್ನ ಮೊದಲನೇ ಮಗಳು 7ನೇ ತರಗತಿ ಓದುತ್ತಿರುವಾಗ ಅಂದರೆ 2019ರಿಂದ ಹಾಗೂ 2ನೇ ಮಗಳು ಸಹ ಓದುತ್ತಿರುವಾಗ ಕೋವಿಡ್ ರಜೆಯಲ್ಲಿದ್ದಾಗ 2020ರಲ್ಲಿ ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ವಾರ್ಡನ್ ರಶ್ಮಿ ಮುಖಾಂತರ ತಮ್ಮ ಖಾಸಗಿ ಕೋಣೆಗೆ ಕರೆಸಿಕೊಂಡು ಪ್ರಥಮವಾಗಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ನನ್ನ ಮಕ್ಕಳು ನನಗೆ ತಿಳಿಸಿರುತ್ತಾರೆ.”

ಇದನ್ನೂ ಓದಿರಿ: ಚೆಕ್‌ಗಳಿಗೆ ಜೈಲಿನಿಂದಲೇ ಸಹಿಹಾಕಲು ಅತ್ಯಾಚಾರ ಆರೋಪಿ ಮುರುಘಾ ಶರಣರಿಗೆ ಹೈಕೋರ್ಟ್ ಅನುಮತಿ

“ಶಿವಮೂರ್ತಿ ಮುರುಘ ಶರಣ ಸ್ವಾಮೀಜಿಯವರು ಅಂದಿನಿಂದಲೂ ಋತುಮತಿಯಾಗುವ ತನಕ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತವಾಗಿ ಲೈಂಗಿಕ ದೌರ್ಜನ್ಯ ಮಾಡಿರುತ್ತಾರೆ.”

“ವಾರ್ಡನ್ ರಶ್ಮಿ ಮಕ್ಕಳ ಮೇಲೆ ಒತ್ತಡ ತಂದು ಮಕ್ಕಳಿಗೆ ಇಷ್ಟವಿಲ್ಲದಿದ್ದರೂ ಹೆದರಿಸಿ ಅವರುಗಳನ್ನು ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಯಾವುದಾದರೊಂದು ಕಾರಣ ನೀಡಿ ಕಳಿಸುತ್ತಿದ್ದಳು ಎಂದು ಮಕ್ಕಳು ನನಗೆ ತಿಳಿಸಿರುತ್ತಾರೆ. ಸ್ವಾಮೀಜಿಯವರ ಖಾಸಗಿ ಕೊಠಡಿಗೆ ಮಕ್ಕಳು ಹೋಗಲು ಒಪ್ಪದಿದ್ದ ಪಕ್ಷದಲ್ಲಿ ಮುರುಘಾ ಮಠದ ಸಾಧಕರಾದ ಬಸವಾದಿತ್ಯ, ಪರಮಶಿವಯ್ಯ, ಗಂಗಾಧರಯ್ಯ ಇವರುಗಳು ಮಕ್ಕಳನ್ನು ಹೆದರಿಸಿ ಒತ್ತಾಯ ಮಾಡಿ ಕಳಿಸುತ್ತಿದ್ದರು.”

“ಸ್ವಾಮೀಜಿಯ ಅಸಿಸ್ಟೆಂಟ್ ಆಗಿರುವ ಮಹಾಲಿಂಗ ಹಾಗೂ ಅಡುಗೆ ಭಟ್ಟ ಕರಿಬಸಪ್ಪ ಇವರುಗಳು ಮಕ್ಕಳನ್ನು ಸ್ವಾಮೀಜಿಯ ಖಾಸಗಿ ಕೊಠಡಿಗೆ ಕರೆದುಕೊಂಡು ಹೋಗಿ ಬಿಡುವುದು ಹಾಗೂ ಬಾಗಿಲಲ್ಲಿ ನಿಂತು ಬೇರೆ ಯಾರೂ ಹೋಗದಂತೆ ಕಾಯ್ದುಕೊಳ್ಳುವುದು ಮತ್ತು ಮಕ್ಕಳು ಕೊಠಡಿಗೆ ಹೋಗಲು ಹಿಂಜರಿದಾಗ ಹೆದರಿಸುವುದು ಮಾಡುತ್ತಿದ್ದರು” ಎಂದು ಬಾಲಕಿಯರ ತಾಯಿ ದೂರಿನಲ್ಲಿ ವಿವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...