Homeಮುಖಪುಟಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

ಜ್ಞಾನವಾಪಿ ಮಸೀದಿ | ‘ಆಪಾದಿತ ‘ಶಿವಲಿಂಗ’ದ ವೈಜ್ಞಾನಿಕ ತನಿಖೆ ಇಲ್ಲ’; ವಾರಣಾಸಿ ನ್ಯಾಯಾಲಯ ತೀರ್ಪು

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಇರುವ ಕಾರಂಜಿ ಎನ್ನಲಾಗಿರುವ ರಚನೆಯನ್ನು ‘ಶಿವಲಿಂಗ’ ಎಂದು ಪ್ರತಿಪಾದಿಸಿ ಅದರ ಕಾರ್ಬನ್ ಡೇಟಿಂಗ್ ಮಾಡುವಂತೆ ಕೋರಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯವು ಶುಕ್ರವಾರ ತಿರಸ್ಕರಿಸಿದೆ.

ವಾರಣಾಸಿ ಸ್ಥಳೀಯ ನ್ಯಾಯಾಲಯದ ಆದೇಶದ ಪ್ರಕಾರ ನಡೆದ ವೀಡಿಯೊಗ್ರಫಿ ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿಯ ಕೊಳದಲ್ಲಿ ಕಂಡುಬಂದಿದೆ ಎಂದು ಹೇಳಲಾದ ‘ಶಿವಲಿಂಗ’ದ ಕಾರ್ಬನ್-ಡೇಟಿಂಗ್ ಅನ್ನು ಐವರು ಅರ್ಜಿದಾರರ ಪೈಕಿ ನಾಲ್ವರು ಕೋರಿದ್ದರು. ಮಸೀದಿಯ ಸಂಕೀರ್ಣದ ಒಳಗೆ ವರ್ಷಪೂರ್ತಿ ಪ್ರಾರ್ಥನೆಗೆ ಅವಕಾಶವನ್ನು ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ್ದರು. ಆ ಪ್ರಕರಣ ಇನ್ನೂ ವಿಚಾರಣೆಯಲ್ಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಬನ್ ಡೇಟಿಂಗ್‌ನಂತಹ ಯಾವುದೇ ಸಮೀಕ್ಷೆಯು ಮಸೀದಿಯೊಳಗಿನ “ಶಿವಲಿಂಗ” ಸ್ಥಳವನ್ನು ಸೀಲ್ ಮಾಡಲು ಹೇಳಿರುವ ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆಯಾಗುತ್ತದೆ ಎಂದು ವಾರಣಾಸಿ ನ್ಯಾಯಾಲಯ ಹೇಳಿದೆ. ಆಪಾದಿತ ರಚನೆಗೆ ಮಾಡಲಾಗುವ ಯಾವುದೇ ಹಾನಿಯು ‘ಶಿವಲಿಂಗ’ವನ್ನು ರಕ್ಷಿಸುವಂತೆ ಕೇಳಿರುವ ಸುಪ್ರೀಂಕೋರ್ಟ್ ಆದೇಶಗಳನ್ನು ಉಲ್ಲಂಘಿಸುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪು: ‘ಹೈಕೋರ್ಟ್‌‌ನಲ್ಲಿ ಪ್ರಶ್ನಿಸುತ್ತೇವೆ’ಎಂದ ಮುಸ್ಲಿಂ ಅರ್ಜಿದಾರರು

‘ಶಿವಲಿಂಗ’ಕ್ಕೆ ಯಾವುದೇ ಹಾನಿಯು ಧಾರ್ಮಿಕ ಭಾವನೆಗಳಿಗೆ ಹಾನಿ ಮಾಡುತ್ತದೆ ಮತ್ತು ವಿವಾದದ ಕಾನೂನು ಪರಿಹಾರದ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಮಸೀದಿ ಸಮಿತಿಯು ಇಂತಹ ತನಿಖೆಯನ್ನು ಆಕ್ಷೇಪಿಸಿದ್ದು, ಪ್ರಕರಣವು ಮಸೀದಿಯೊಳಗಿನ ದೇಗುಲದಲ್ಲಿ ಪೂಜೆ ಮಾಡುವ ಬಗ್ಗೆ ಮತ್ತು ಅದರ ಆಪಾದಿತ ರಚನೆಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ವಾದಿಸಿತ್ತು. ‘ಶಿವಲಿಂಗ’ ಎಂದು ಆಪಾದಿಸಲಾಗಿರುವ ವಸ್ತುವು ವಾಸ್ತವವಾಗಿ ‘ಕಾರಂಜಿ’ ಆಗಿದೆ ಎಂದು ನ್ಯಾಯಾಲಯದಲ್ಲಿ ವಾದಿಸಿತ್ತು.

ಸೆಪ್ಟೆಂಬರ್ 12 ರಂದು, ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಐವರು ಮಹಿಳೆಯರ ಪ್ರಕರಣಕ್ಕೆ ಯಾವುದೇ ಕಾನೂನು ಮಾನ್ಯತೆ ಇಲ್ಲ ಎಂದು ವಾದಿಸಿದ ಮಸೀದಿ ಸಮಿತಿಯ ಅರ್ಜಿಯನ್ನು ವಜಾಗೊಳಿಸಿ, ಮಹಿಳೆಯರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯಗೊಳಿಸಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಎಂದು ಹಳೆಯ ಚಿತ್ರಗಳು ವೈರಲ್‌!

ಈ ವರ್ಷದ ಆರಂಭದಲ್ಲಿ, ವಾರಣಾಸಿಯ ಕೆಳ ನ್ಯಾಯಾಲಯವು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಶತಮಾನಗಳಷ್ಟು ಹಳೆಯದಾದ ಮಸೀದಿಯ ಚಿತ್ರೀಕರಣಕ್ಕೆ ಆದೇಶ ನೀಡಿತ್ತು. ಈ ವೇಳೆ ಮಸೀದಿಯ ಕೊಳದಲ್ಲಿ ಶಿವಲಿಂಗ ಕಂಡು ಬಂದಿದೆ ಎಂದು ಆರೋಪಿಸಿ ಸಮೀಕ್ಷೆಯ ವಿಡಿಯೊ ಸೋರಿಕೆ ಮಾಡಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿಯವರ ಕ್ಷೇತ್ರವಾದ ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯು ದೇವಾಲಯಗಳ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ಬಲಪಂಥೀಯ ಹಿಂದೂಗಳು ಆರೋಪಿಸುತ್ತಿದ್ದಾರೆ. 1980- 90 ರ ದಶಕದಲ್ಲಿ ಬಿಜೆಪಿ ಬೆಳೆಸಿದ ಅಯೋಧ್ಯೆ ಮತ್ತು ಮಥುರಾ ಜೊತೆಗೆ ಇರುವ ಮಸೀದಿಗಳಲ್ಲಿ ಈ ಮಸೀದಿಯು ಒಂದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...